ಬೆಂಗಳೂರು ಬಿಟ್ಟು ಹೋಗಬೇಡಿ, ಕಾರ್ಮಿಕರಿಗೆ ಎಲ್ಲಾ ಸೌಲಭ್ಯ ಕಲ್ಪಿಸುತ್ತೇವೆ -BSY

ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್ ಭೀತಿಯಿಂದ ವಲಸೆ ಕಾರ್ಮಿಕರು ತಮ್ಮ ತಮ್ಮ ಊರುಗಳಿಗೆ ವಾಪಸ್ ತೆರಳುತ್ತಿದ್ದಾರೆ. ಹಾಗಾಗಿ ಬಿಲ್ಡರ್​ಗಳ ಜೊತೆ ಸಭೆ ನಡೆಸಿ ವಲಸೆ ಕಾರ್ಮಿಕರ ಬಗ್ಗೆ ಚರ್ಚೆ ನಡೆಸಲಾಗಿದೆ. ಕಾರ್ಮಿಕರು ಗಾಳಿ ಸುದ್ದಿಗೆ ಕಿವಿಗೊಡಬಾರದು. ತಪ್ಪುಗ್ರಹಿಕೆಯಿಂದ ಬೆಂಗಳೂರು ತೊರೆಯಬೇಡಿ. ಕಾರ್ಮಿಕರಿಗೆ ಎಲ್ಲ ಸೌಲಭ್ಯವನ್ನು ಕಲ್ಪಿಸುತ್ತೇವೆ ಎಂದು ಗೃಹಕಚೇರಿ ಕೃಷ್ಣಾದಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದರು. ರಾಜ್ಯದಲ್ಲಿ ಕೆಂಪು ವಲಯವನ್ನು ಹೊರತುಪಡಿಸಿ ಉಳಿದೆಡೆ ವ್ಯಾಪಾರ, ಕೈಗಾರಿಕೆಗಳು ಆರಂಭಿಸಬೇಕು. ಕಾರ್ಮಿಕರ ವಲಸೆ ತಪ್ಪಿಸಲು ಊಟ, ವಸತಿ ಸೌಲಭ್ಯ ನೀಡಲಾಗುತ್ತದೆ. […]

ಬೆಂಗಳೂರು ಬಿಟ್ಟು ಹೋಗಬೇಡಿ, ಕಾರ್ಮಿಕರಿಗೆ ಎಲ್ಲಾ ಸೌಲಭ್ಯ ಕಲ್ಪಿಸುತ್ತೇವೆ -BSY
ಸಿಎಂ ಬಿ.ಎಸ್.ಯಡಿಯೂರಪ್ಪ (ಸಂಗ್ರಹ ಚಿತ್ರ)
ಸಾಧು ಶ್ರೀನಾಥ್​

Updated on: May 05, 2020 | 2:08 PM

ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್ ಭೀತಿಯಿಂದ ವಲಸೆ ಕಾರ್ಮಿಕರು ತಮ್ಮ ತಮ್ಮ ಊರುಗಳಿಗೆ ವಾಪಸ್ ತೆರಳುತ್ತಿದ್ದಾರೆ. ಹಾಗಾಗಿ ಬಿಲ್ಡರ್​ಗಳ ಜೊತೆ ಸಭೆ ನಡೆಸಿ ವಲಸೆ ಕಾರ್ಮಿಕರ ಬಗ್ಗೆ ಚರ್ಚೆ ನಡೆಸಲಾಗಿದೆ. ಕಾರ್ಮಿಕರು ಗಾಳಿ ಸುದ್ದಿಗೆ ಕಿವಿಗೊಡಬಾರದು. ತಪ್ಪುಗ್ರಹಿಕೆಯಿಂದ ಬೆಂಗಳೂರು ತೊರೆಯಬೇಡಿ. ಕಾರ್ಮಿಕರಿಗೆ ಎಲ್ಲ ಸೌಲಭ್ಯವನ್ನು ಕಲ್ಪಿಸುತ್ತೇವೆ ಎಂದು ಗೃಹಕಚೇರಿ ಕೃಷ್ಣಾದಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದರು.

ರಾಜ್ಯದಲ್ಲಿ ಕೆಂಪು ವಲಯವನ್ನು ಹೊರತುಪಡಿಸಿ ಉಳಿದೆಡೆ ವ್ಯಾಪಾರ, ಕೈಗಾರಿಕೆಗಳು ಆರಂಭಿಸಬೇಕು. ಕಾರ್ಮಿಕರ ವಲಸೆ ತಪ್ಪಿಸಲು ಊಟ, ವಸತಿ ಸೌಲಭ್ಯ ನೀಡಲಾಗುತ್ತದೆ. ಇನ್ನು ಮುಂದೆಯೇ ಇದೇ ರೀತಿ ಸೌಲಭ್ಯ ನೀಡುತ್ತೇವೆ. ವಾಪಸ್ ಹೋಗುವ ಮನಸ್ಥಿತಿಯನ್ನು ಬದಲಾಯಿಸಿಕೊಳ್ಳಿ. ಕಾರ್ಮಿಕರಿಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳುವ ಭರವಸೆ ಬಿಲ್ಡರ್​ಗಳು ನೀಡಿದ್ದಾರೆ. ಇಲ್ಲೇ ಇದ್ದು ಅಗತ್ಯ ಸೌಲಭ್ಯವನ್ನು ಪಡೆದುಕೊಳ್ಳಿ ಎಂದು ಬಿಎಸ್​ವೈ ಮನವಿ ಮಾಡಿದರು.

ರಿಯಾಯಿತಿ ದರದಲ್ಲಿ ಖಾಸಗಿ ಸಂಸ್ಥೆಗಳಿಗೆ ಬಸ್ ಸೇವೆಯನ್ನು ಒದಗಿಸಲು ಬಿಎಂಟಿಸಿ ಸಂಸ್ಥೆ ಮುಂದಾಗಿದೆ. ರೈತರಿಗೆ ಅಗತ್ಯ ಸವಲತ್ತು ಒದಗಿಸುವ ಸಂಬಂಧ ಹಣಕಾಸು ಇಲಾಖೆ ಅಧಿಕಾರಿಗಳ ಜತೆ ಚರ್ಚಿಸುತ್ತಿದ್ದೇನೆ ಎಂದು ಇದೇ ವೇಳೆ ಸಿಎಂ ಯಡಿಯೂರಪ್ಪ ತಿಳಿಸಿದರು.

Published On - 1:56 pm, Tue, 5 May 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us