AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವೇಗೌಡ ಕುಟುಂಬಕ್ಕೆ ಮುಡಾದಿಂದ 48 ಸೈಟ್‌ ಹಂಚಿಕೆ ಆರೋಪ: ದಾಖಲೆ ನೀಡಲು ವಿಜಯೇಂದ್ರ ಮನೆಗೆ ಕಾಂಗ್ರೆಸ್​ ನಾಯಕರು

ಬೆಂಗಳೂರಿನಲ್ಲಿ ಶನಿವಾರ ಸುದ್ದಿಗೋಷ್ಠಿ ಮಾಡಿದ್ದ ವಿಧಾನಪರಿಷತ್​ ಮಾಜಿ ಸದಸ್ಯ ಹಾಗೂ ಕೆಪಿಸಿಸಿ ವಕ್ತಾರ ರಮೇಶ್​ ಬಾಬು, ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರ ಕುಟುಂಬಕ್ಕೆ ಮುಡಾದಿಂದ 48 ಸೈಟ್‌ ಹಂಚಿಕೆ ಆರೋಪ ಮಾಡಿದ್ದರು. ಈ ಬಗ್ಗೆ ದಾಖಲೆ ಕೊಡಲು ಬಿವೈ ವಿಜಯೇಂದ್ರ ನಿವಾಸಕ್ಕೆ ಆಗಮಿಸಿದ್ದಾಗ ಪೊಲೀಸರು ತಡೆದಿದ್ದಾರೆ.

ದೇವೇಗೌಡ ಕುಟುಂಬಕ್ಕೆ ಮುಡಾದಿಂದ 48 ಸೈಟ್‌ ಹಂಚಿಕೆ ಆರೋಪ: ದಾಖಲೆ ನೀಡಲು ವಿಜಯೇಂದ್ರ ಮನೆಗೆ ಕಾಂಗ್ರೆಸ್​ ನಾಯಕರು
ದೇವೇಗೌಡ ಕುಟುಂಬಕ್ಕೆ ಮುಡಾದಿಂದ 48 ಸೈಟ್‌ ಹಂಚಿಕೆ ಆರೋಪ: ದಾಖಲೆ ನೀಡಲು ವಿಜಯೇಂದ್ರ ಮನೆಗೆ ಕಾಂಗ್ರೆಸ್​ ನಾಯಕರು
Sunil MH
| Edited By: |

Updated on: Jul 14, 2024 | 5:24 PM

Share

ಬೆಂಗಳೂರು, ಜುಲೈ 14: ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರ (HD Deve Gowda) ಕುಟುಂಬಕ್ಕೆ ಮುಡಾದಿಂದ 48 ಸೈಟ್‌ ಹಂಚಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲೆ ಕೊಡಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (BY Vijayendra) ನಿವಾಸಕ್ಕೆ ಕಾಂಗ್ರೆಸ್ ಮುಖಂಡರು ಭೇಟಿ ನೀಡಿದ್ದು, ಆದರೆ ರಸ್ತೆಯಲ್ಲೇ ತಡೆದ ಪೊಲೀಸರು ವಾಪಸ್ ಕಳಿಸಿದ್ದಾರೆ. 48 ಸೈಟ್‌ ಹಂಚಿಕೆ ಆರೋಪ್​ ಕೇಸ್​​ ಬಗ್ಗೆ ತನಿಖೆಗೆ ಕೋರಿ 2011ರಲ್ಲಿ ಸಭಾಪತಿಗೆ ಬಿಎಸ್​ ಯಡಿಯೂರಪ್ಪ ದಾಖಲೆ ಸಲ್ಲಿಸಿದ್ದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸುದ್ದಿಗೋಷ್ಠಿ ನಡೆಸಿದ್ದ ಕಾಂಗ್ರೆಸ್ ಮುಖಂಡರು ಇದರ ಚರ್ಚೆಯನ್ನು ಮುಂದಿವರೆಸಲು ವಿಜಯೇಂದ್ರಗೆ ಆಗ್ರಹಿಸಿದ್ದರು. ಈ‌ ಹಿನ್ನೆಲೆಯಲ್ಲಿ ಈ ಆರೋಪಕ್ಕೆ ಸಂಬಂಧಿಸಿದ ದಾಖಲೆ ಕೊಡಲು ವಿಜಯೇಂದ್ರ ನಿವಾಸಕ್ಕೆ ಮಾಜಿ ಪರಿಷತ್ ಸದಸ್ಯ ರಮೇಶ್ ಬಾಬು ಮತ್ತು ಯುವ ಕಾಂಗ್ರೆಸ್ ಮುಖಂಡ ಮನೋಹರ್​​ ಆಗಮಿಸಿದ್ದರು. ಆದರೆ ನಿವಾಸದ ಬಳಿ ಕಾಂಗ್ರೆಸ್ ಮುಖಂಡರನ್ನು ಪೊಲೀಸರು ತಡೆದಿದ್ದಾರೆ.

ಬಿಜೆಪಿಗೆ ರಮೇಶ್​ ಬಾಬು ಪ್ರಶ್ನೆ 

ಶನಿವಾರ ಸುದ್ದಿಗೋಷ್ಠಿ ಮಾಡಿದ್ದ ವಿಧಾನಪರಿಷತ್​ ಮಾಜಿ ಸದಸ್ಯ ಹಾಗೂ ಕೆಪಿಸಿಸಿ ವಕ್ತಾರ ರಮೇಶ್​ ಬಾಬು ಮುಡಾ ಸೈಟ್​ ಹಂಚಿಕೆಯಲ್ಲಿ, ಮಾಜಿ ಪ್ರಧಾನಿ ಹೆಚ್​ಡೆ ದೇವೆಗೌಡರು ತಮ್ಮ ಕುಟುಂಬ ಸದಸ್ಯರಿಗೆ 48 ನಿವೇಶನಗಳನ್ನು ಹಂಚಿಕೆ ಆರೋಪ ಮಾಡಿದ್ದು, ಬಿಜೆಪಿ ಈ ಪ್ರಕರಣವನ್ನು ಸಿಬಿಐ ತನಿಖೆಗೆ ಒತ್ತಾಯಿಸುತ್ತದೆಯೇ? ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಇಡಿ ಬಂಧನದ ಭೀತಿಯಿಂದ ಖಾಸಗಿ ಕಾರಿನಲ್ಲಿ ದದ್ದಲ್ ಪರಾರಿ, ಎಕ್ಸ್ ಕ್ಲೂಸಿವ್ ವಿಡಿಯೋ ಇಲ್ಲಿದೆ

ಬಿಎಸ್​ ಯಡಿಯೂರಪ್ಪ 2011ರಲ್ಲಿ ಸಭಾಪತಿಗೆ ಸಲ್ಲಿಸದ ದಾಖಲೆಗಳ ಪ್ರಕಾರ ಹೆಚ್​ಡಿ ಕುಮಾರಸ್ವಾಮಿ ಅವರಿಗೆ 300\200 ಹಂಚಿಕೆ ಬಗ್ಗೆ ತಿಳಿಸಿದ್ದಾರೆ. ಇದನ್ನು ಪರಿಷತ್ತಿನ ಕಲಾಪದಲ್ಲಿ ಕೂಡ ಪ್ರಸ್ತಾಪಿಸಲಾಗಿದೆ. ಈ ಬಗ್ಗೆ ಬಿಜೆಪಿ ಅವರ ನಿಲುವೇನು ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ‘ಮುಡಾ ಸೈಟ್ ಹಂಚಿಕೆಯಲ್ಲಿ ಯಾವುದೇ ಹಗರಣ ಆಗಿಲ್ಲ’: ಸಿಎಂ ಸಿದ್ದರಾಮಯ್ಯ

ಮುಡಾ ಹಗರಣದಲ್ಲಿ ಯಾರೆಲ್ಲಾ ಬಿಜೆಪಿ ನಾಯಕರು ಎಷ್ಟು ನಿವೇಶಗಳನ್ನು ಪಡೆದುಕೊಂಡಿದ್ದಾರೆ ಎಂದು ತಿಳಿಸಲಿ. ಏಕೆಂದರೆ ಬಿಜೆಪಿ ಅಧಿಕಾರಿದಲ್ಲಿ ಇದ್ದಾಗಲೇ ಮೈಸೂರಿನ ಮುಡಾದಲ್ಲಿ ಹೆಚ್ಚು ಹೆಚ್ಚು ಹಗರಣಗಳು ನಡೆದಿವೆ ಎಂದು ಆರೋಪಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Sunil MH
Sunil MH
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ