AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಿಯಾಂಕ್​ ವಿರುದ್ಧ ಸಿಎ ನಿವೇಶನ ಮಂಜೂರು ಆರೋಪ: ಸರ್ಕಾರಕ್ಕೆ ವಿವರಣೆ ಕೇಳಿದ ರಾಜ್ಯಪಾಲರು

ಪ್ರಭಾವ ಬಳಸಿ ಕೆಐಎಡಿಬಿಯಿಂದ ಸಿದ್ದಾರ್ಥ ಟ್ರಸ್ಟ್​​ಗೆ ಸಿಎ ನಿವೇಶನ ಮಂಜೂರು ಮಾಡಿದ್ದಾರೆ ಎಂದು ಸಚಿವ ಪ್ರಿಯಾಂಕ್​ ಖರ್ಗೆ ವಿರುದ್ಧ ಆರೋಪ ಕೇಳಿಬಂದಿದ್ದು, ಈ ಸಂಬಂಧ ವಿವರಣೆ ಕೇಳಿ ರಾಜ್ಯಪಾಲ ಥಾವರ್​ ಚಂದ್​ ಗೆಹ್ಲೋಟ್​ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

ಪ್ರಿಯಾಂಕ್​ ವಿರುದ್ಧ ಸಿಎ ನಿವೇಶನ ಮಂಜೂರು ಆರೋಪ: ಸರ್ಕಾರಕ್ಕೆ ವಿವರಣೆ ಕೇಳಿದ ರಾಜ್ಯಪಾಲರು
ರಾಜ್ಯಪಾಲ ಥಾವರ್​ ಚಂದ್​​​ ಗೆಹ್ಲೋಟ್, ಪ್ರಿಯಾಂಕ್​ ಖರ್ಗೆ
ಪ್ರಸನ್ನ ಗಾಂವ್ಕರ್​
| Edited By: ವಿವೇಕ ಬಿರಾದಾರ|

Updated on:Sep 02, 2024 | 2:59 PM

Share

ಬೆಂಗಳೂರು, ಸೆಪ್ಟೆಂಬರ್​ 02: ಪ್ರಭಾವ ಬಳಸಿ ಕೆಐಎಡಿಬಿಯಿಂದ (KIADB) ಸಿದ್ದಾರ್ಥ ಟ್ರಸ್ಟ್​​ಗೆ ಸಿಎ ನಿವೇಶನ (CA Site) ಮಂಜೂರು ಮಾಡಿದ್ದಾರೆ ಎಂದು ಸಚಿವ ಪ್ರಿಯಾಂಕ್​ ಖರ್ಗೆ (Priyank Kharge) ಅವರ ವಿರುದ್ಧ ಆರೋಪ ಕೇಳಿಬಂದಿದೆ. ಈ ಬಗ್ಗೆ ವಿವರಣೆ ನೀಡುವಂತೆ ರಾಜ್ಯಪಾಲ ಥಾವರ್​ ಚಂದ್​​​ ಗೆಹ್ಲೋಟ್​ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಪತ್ರ ಬರೆದಿದ್ದಾರೆ.

ಸಚಿವ ಎಂ.ಬಿ.ಪಾಟೀಲ್​ ವಿರುದ್ಧ ಪ್ರಾಸಿಕ್ಯೂಷನ್​ಗೆ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಅವರು ರಾಜ್ಯಪಾಲರಿಗೆ ದೂರು ನೀಡಿದ್ದರು. ಈ ವಿಚಾರವಾಗಿ ವಿವರಣೆ ನೀಡುವಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಪತ್ರ ಬರೆದಿದ್ದಾರೆ. ಎಂಬಿ ಪಾಟೀಲ್​ ಅವರ ವಿರುದ್ಧ ಸಿಎ ನಿವೇಶನ ಹಂಚಿಕೆ ವಿಚಾರದಲ್ಲಿ ಭ್ರಷ್ಟಾಚಾರ ಎಸಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಏನಿದು ಆರೋಪ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕುಟುಂಬದವರು ಟ್ರಸ್ಟಿಗಳಾಗಿರವ ಸಿದ್ಧಾರ್ಥ ವಿಹಾರ ಟ್ರಸ್ಟ್​​ಗೆ ನಿಯಮ ಉಲ್ಲಂಘನೆಯ ಜೊತೆಗೆ ತರಾತುರಿಯಲ್ಲಿ ಕೆಐಎಡಿಬಿಯಿಂದ ಐದು ಎಕರೆ ಸಿ.ಎ ನಿವೇಶನ ಮಂಜೂರು ಮಾಡಲಾಗಿದೆ. ಪ್ರಿಯಾಂಕ್​ ಖರ್ಗೆ ಸಚಿವರಾಗಿದ್ದುಕೊಂಡು ಹೀಗೆ ಸರ್ಕಾರಿ ಸೌಲಭ್ಯ ಪಡೆದಿದ್ದು ಸರಿಯೇ ಎಂದು ವಿಧಾನ ಪರಿಷತ್​ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ರಾಜ್ಯಪಾಲರಿಗೆ ದೂರು ನೀಡಿದ್ದಾರೆ.

ಇದನ್ನೂ ಓದಿ: ಪ್ರಿಯಾಂಕ್​ ಖರ್ಗೆಯನ್ನ ಸಚಿವ ಸಂಪುಟದಿಂದ ವಜಾ ಮಾಡಿ: ಛಲವಾದಿ ನಾರಾಯಣಸ್ವಾಮಿ

ರಾಜ್ಯಪಾಲರಿಗೆ ಎರಡು ಸಂವಿಧಾನ ಇದೆ: ಪ್ರಿಯಾಂಕ್​

ರಾಜ್ಯಪಾಲರಿಗೆ ಎರಡು ಸಂವಿಧಾನ ಇದೆ. ಬಿಜೆಪಿ, ಜೆಡಿಎಸ್​ದು ಒಂದು ಸಂವಿಧಾನ, ಕಾಂಗ್ರೆಸ್​​ಗೊಂದು ಸಂವಿಧಾನ. ನಮ್ಮ ವಿಚಾರದಲ್ಲಿ ಬಿಜೆಪಿ ಮೊದಲು 10 ಆರೋಪ ಮಾಡುತ್ತಿತ್ತು. ಎರಡನೇ ದಿನ ಐದು ಆರೋಪಗಳನ್ನು ಮಾಡಿದ್ದರು, ಈಗ ಸುಮ್ಮನಿದ್ದಾರೆ. ಛಲವಾದಿ ನಾರಾಯಣಸ್ವಾಮಿ ಬಿಟ್ಟು ಬೇರೆ ಯಾರೂ ಏಕೆ ಮಾತನಾಡುತ್ತಿಲ್ಲ ಎಂದು ಸಚಿವ ಪ್ರಿಯಾಂಕ್​ ಖರ್ಗೆ ಪ್ರಶ್ನಿಸಿದರು.

ಬಿವೈ ವಿಜಯೇಂದ್ರ, ಆರ್​.ಅಶೋಕ್ ಅವರು ನನ್ನ ವಿಚಾರದಲ್ಲಿ ಮಾತನಾಡುತ್ತಿಲ್ಲ. ನಾನು ಕೆಳಮನೆ ಸದಸ್ಯ ಅಲ್ವಾ, ಹಾಗಾದರೆ ಏಕೆ ಮಾತನಾಡುತ್ತಿಲ್ಲ. ದಲಿತರ ಜೊತೆ ಬಡಿದಾಡಿಸುವುದು ಕೋಮುವಾದ ಸೃಷ್ಟಿಸುವುದು, ಇದೆಲ್ಲ ಆರ್​​ಎಸ್​​ಎಸ್, ಬಿಜೆಪಿ ಸಂಚು ಎಂದು ವಾಗ್ದಾಳಿ ಮಾಡಿದರು. ಕಾನೂನಿನಲ್ಲಿ ಸರಿ ಇದೆ ಅಂತಾ ಗೊತ್ತಾದ್ಮೇಲೆ ಸುಮ್ಮನಾದರು ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:25 pm, Mon, 2 September 24

Follow Us
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್