AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಿಯಾಂಕ್​ ವಿರುದ್ಧ ಸಿಎ ನಿವೇಶನ ಮಂಜೂರು ಆರೋಪ: ಸರ್ಕಾರಕ್ಕೆ ವಿವರಣೆ ಕೇಳಿದ ರಾಜ್ಯಪಾಲರು

ಪ್ರಭಾವ ಬಳಸಿ ಕೆಐಎಡಿಬಿಯಿಂದ ಸಿದ್ದಾರ್ಥ ಟ್ರಸ್ಟ್​​ಗೆ ಸಿಎ ನಿವೇಶನ ಮಂಜೂರು ಮಾಡಿದ್ದಾರೆ ಎಂದು ಸಚಿವ ಪ್ರಿಯಾಂಕ್​ ಖರ್ಗೆ ವಿರುದ್ಧ ಆರೋಪ ಕೇಳಿಬಂದಿದ್ದು, ಈ ಸಂಬಂಧ ವಿವರಣೆ ಕೇಳಿ ರಾಜ್ಯಪಾಲ ಥಾವರ್​ ಚಂದ್​ ಗೆಹ್ಲೋಟ್​ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

ಪ್ರಿಯಾಂಕ್​ ವಿರುದ್ಧ ಸಿಎ ನಿವೇಶನ ಮಂಜೂರು ಆರೋಪ: ಸರ್ಕಾರಕ್ಕೆ ವಿವರಣೆ ಕೇಳಿದ ರಾಜ್ಯಪಾಲರು
ರಾಜ್ಯಪಾಲ ಥಾವರ್​ ಚಂದ್​​​ ಗೆಹ್ಲೋಟ್, ಪ್ರಿಯಾಂಕ್​ ಖರ್ಗೆ
ಪ್ರಸನ್ನ ಗಾಂವ್ಕರ್​
| Edited By: ವಿವೇಕ ಬಿರಾದಾರ|

Updated on:Sep 02, 2024 | 2:59 PM

Share

ಬೆಂಗಳೂರು, ಸೆಪ್ಟೆಂಬರ್​ 02: ಪ್ರಭಾವ ಬಳಸಿ ಕೆಐಎಡಿಬಿಯಿಂದ (KIADB) ಸಿದ್ದಾರ್ಥ ಟ್ರಸ್ಟ್​​ಗೆ ಸಿಎ ನಿವೇಶನ (CA Site) ಮಂಜೂರು ಮಾಡಿದ್ದಾರೆ ಎಂದು ಸಚಿವ ಪ್ರಿಯಾಂಕ್​ ಖರ್ಗೆ (Priyank Kharge) ಅವರ ವಿರುದ್ಧ ಆರೋಪ ಕೇಳಿಬಂದಿದೆ. ಈ ಬಗ್ಗೆ ವಿವರಣೆ ನೀಡುವಂತೆ ರಾಜ್ಯಪಾಲ ಥಾವರ್​ ಚಂದ್​​​ ಗೆಹ್ಲೋಟ್​ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಪತ್ರ ಬರೆದಿದ್ದಾರೆ.

ಸಚಿವ ಎಂ.ಬಿ.ಪಾಟೀಲ್​ ವಿರುದ್ಧ ಪ್ರಾಸಿಕ್ಯೂಷನ್​ಗೆ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಅವರು ರಾಜ್ಯಪಾಲರಿಗೆ ದೂರು ನೀಡಿದ್ದರು. ಈ ವಿಚಾರವಾಗಿ ವಿವರಣೆ ನೀಡುವಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಪತ್ರ ಬರೆದಿದ್ದಾರೆ. ಎಂಬಿ ಪಾಟೀಲ್​ ಅವರ ವಿರುದ್ಧ ಸಿಎ ನಿವೇಶನ ಹಂಚಿಕೆ ವಿಚಾರದಲ್ಲಿ ಭ್ರಷ್ಟಾಚಾರ ಎಸಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಏನಿದು ಆರೋಪ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕುಟುಂಬದವರು ಟ್ರಸ್ಟಿಗಳಾಗಿರವ ಸಿದ್ಧಾರ್ಥ ವಿಹಾರ ಟ್ರಸ್ಟ್​​ಗೆ ನಿಯಮ ಉಲ್ಲಂಘನೆಯ ಜೊತೆಗೆ ತರಾತುರಿಯಲ್ಲಿ ಕೆಐಎಡಿಬಿಯಿಂದ ಐದು ಎಕರೆ ಸಿ.ಎ ನಿವೇಶನ ಮಂಜೂರು ಮಾಡಲಾಗಿದೆ. ಪ್ರಿಯಾಂಕ್​ ಖರ್ಗೆ ಸಚಿವರಾಗಿದ್ದುಕೊಂಡು ಹೀಗೆ ಸರ್ಕಾರಿ ಸೌಲಭ್ಯ ಪಡೆದಿದ್ದು ಸರಿಯೇ ಎಂದು ವಿಧಾನ ಪರಿಷತ್​ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ರಾಜ್ಯಪಾಲರಿಗೆ ದೂರು ನೀಡಿದ್ದಾರೆ.

ಇದನ್ನೂ ಓದಿ: ಪ್ರಿಯಾಂಕ್​ ಖರ್ಗೆಯನ್ನ ಸಚಿವ ಸಂಪುಟದಿಂದ ವಜಾ ಮಾಡಿ: ಛಲವಾದಿ ನಾರಾಯಣಸ್ವಾಮಿ

ರಾಜ್ಯಪಾಲರಿಗೆ ಎರಡು ಸಂವಿಧಾನ ಇದೆ: ಪ್ರಿಯಾಂಕ್​

ರಾಜ್ಯಪಾಲರಿಗೆ ಎರಡು ಸಂವಿಧಾನ ಇದೆ. ಬಿಜೆಪಿ, ಜೆಡಿಎಸ್​ದು ಒಂದು ಸಂವಿಧಾನ, ಕಾಂಗ್ರೆಸ್​​ಗೊಂದು ಸಂವಿಧಾನ. ನಮ್ಮ ವಿಚಾರದಲ್ಲಿ ಬಿಜೆಪಿ ಮೊದಲು 10 ಆರೋಪ ಮಾಡುತ್ತಿತ್ತು. ಎರಡನೇ ದಿನ ಐದು ಆರೋಪಗಳನ್ನು ಮಾಡಿದ್ದರು, ಈಗ ಸುಮ್ಮನಿದ್ದಾರೆ. ಛಲವಾದಿ ನಾರಾಯಣಸ್ವಾಮಿ ಬಿಟ್ಟು ಬೇರೆ ಯಾರೂ ಏಕೆ ಮಾತನಾಡುತ್ತಿಲ್ಲ ಎಂದು ಸಚಿವ ಪ್ರಿಯಾಂಕ್​ ಖರ್ಗೆ ಪ್ರಶ್ನಿಸಿದರು.

ಬಿವೈ ವಿಜಯೇಂದ್ರ, ಆರ್​.ಅಶೋಕ್ ಅವರು ನನ್ನ ವಿಚಾರದಲ್ಲಿ ಮಾತನಾಡುತ್ತಿಲ್ಲ. ನಾನು ಕೆಳಮನೆ ಸದಸ್ಯ ಅಲ್ವಾ, ಹಾಗಾದರೆ ಏಕೆ ಮಾತನಾಡುತ್ತಿಲ್ಲ. ದಲಿತರ ಜೊತೆ ಬಡಿದಾಡಿಸುವುದು ಕೋಮುವಾದ ಸೃಷ್ಟಿಸುವುದು, ಇದೆಲ್ಲ ಆರ್​​ಎಸ್​​ಎಸ್, ಬಿಜೆಪಿ ಸಂಚು ಎಂದು ವಾಗ್ದಾಳಿ ಮಾಡಿದರು. ಕಾನೂನಿನಲ್ಲಿ ಸರಿ ಇದೆ ಅಂತಾ ಗೊತ್ತಾದ್ಮೇಲೆ ಸುಮ್ಮನಾದರು ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:25 pm, Mon, 2 September 24

Follow Us
Prasanna Gaonkar
Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು