AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರ್ಮಿಕ ಕೇಂದ್ರದಲ್ಲಿ ಚುನಾವಣಾ ಪ್ರಚಾರ ಆರೋಪ: ಕೆಎಸ್​ ಈಶ್ವರಪ್ಪ ವಿರುದ್ಧ ಕೇಸ್ ದಾಖಲು

ಧಾರ್ಮಿಕ ಕೇಂದ್ರದಲ್ಲಿ ಚುನಾವಣಾ ಪ್ರಚಾರ ಆರೋಪ ಹಿನ್ನೆಲೆ ಬಿಜೆಪಿ ಬಂಡಾಯ ನಾಯಕ ಕೆ.ಎಸ್​​ ಈಶ್ವರಪ್ಪ ವಿರುದ್ದ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಿಸಲಾಗಿದೆ. ಶಿವಮೊಗ್ಗದ ಗೋಪಾಳದ ರಂಗನಾಥಸ್ವಾಮಿ ದೇವಾಲಯಕ್ಕೆ ತೆರಳಿದ್ದ ಈಶ್ವರಪ್ಪ ಈ ವೇಳೆ ಮತಪ್ರಚಾರ ಮಾಡಿದ್ದಾರೆ. ಹಾಗಾಗಿ ತುಂಗಾನಗರ ಠಾಣೆಯಲ್ಲಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಿಸಲಾಗಿದೆ. 

ಧಾರ್ಮಿಕ ಕೇಂದ್ರದಲ್ಲಿ ಚುನಾವಣಾ ಪ್ರಚಾರ ಆರೋಪ: ಕೆಎಸ್​ ಈಶ್ವರಪ್ಪ ವಿರುದ್ಧ ಕೇಸ್ ದಾಖಲು
ಈಶ್ವರಪ್ಪ
Basavaraj Yaraganavi
| Edited By: |

Updated on:Mar 31, 2024 | 3:21 PM

Share

ಶಿವಮೊಗ್ಗ, ಮಾರ್ಚ್​ 31: ಧಾರ್ಮಿಕ ಕೇಂದ್ರದಲ್ಲಿ ಚುನಾವಣಾ ಪ್ರಚಾರ ಆರೋಪ ಹಿನ್ನೆಲೆ ಬಿಜೆಪಿ ಬಂಡಾಯ ನಾಯಕ ಕೆ.ಎಸ್​​ ಈಶ್ವರಪ್ಪ (KS Eshwarappa) ವಿರುದ್ದ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಿಸಲಾಗಿದೆ. ಶಿವಮೊಗ್ಗದ ಗೋಪಾಳದ ರಂಗನಾಥಸ್ವಾಮಿ ದೇವಾಲಯಕ್ಕೆ ತೆರಳಿದ್ದ ಈಶ್ವರಪ್ಪ ಈ ವೇಳೆ ಮತಪ್ರಚಾರ ಮಾಡಿದ್ದಾರೆ. ಧಾರ್ಮಿಕ ಕೇಂದ್ರದಲ್ಲಿ ಪ್ರಚಾರ ಮಾಡಿದ್ದಕ್ಕೆ ಚುನಾವಣಾ ಅಧಿಕಾರಿಗಳಿಂದ ತುಂಗಾನಗರ ಠಾಣೆಗೆ ದೂರು ಸಲ್ಲಿಸಲಾಗಿದೆ. ಹಾಗಾಗಿ ತುಂಗಾನಗರ ಠಾಣೆಯಲ್ಲಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಿಸಲಾಗಿದೆ.

ಈಶ್ವರಪ್ಪ ಪುತ್ರ ಕಾಂತೇಶ್​ಗೆ ಹಾವೇರಿ ಟಿಕೆಟ್ ಕೈತಪ್ಪಿಸಿದ್ದು ಬಿಎಸ್ ಯಡಿಯೂರಪ್ಪ. ಯಡಿಯೂರಪ್ಪ ತಮ್ಮ ಮಕ್ಕಳ ಮೇಲೆ ಮಾತ್ರ ವ್ಯಾಮೋಹ. ಮತ್ತೊಬ್ಬರ ಮಕ್ಕಳು ರಾಜಕೀಯವಾಗಿ ಬೆಳೆಯಬಾರದು. ಬಿಜೆಪಿಯು ಒಂದೇ ಕುಟುಂಬದ ಕೈಯಲ್ಲಿ ಸಿಕ್ಕು ಒದ್ದಾಡುತ್ತಿದೆ. ರಾಜ್ಯದ ಕಾರ್ಯಕರ್ತರು ಈ ವ್ಯವಸ್ಥೆ ನೋಡಿ ನೊಂದುಕೊಂಡಿದ್ಧಾರೆ. ಈ ನಡುವೆ ಹಿಂದುತ್ವದ ಹಿನ್ನಲೆ ಇರುವ ಕಟೀಲು, ಪ್ರತಾಪ್ ಸಿಂಹ, ಸದಾನಂದ ಗೌಡ, ಸಿಟಿ ರವಿ ಇವರಿಗೆ ಟಿಕೆಟ್ ಕೊಟ್ಟಿಲ್ಲ. ಕೇವಲ ಬಿಎಸ್ ವೈ ಶೋಭಾಗೆ ಮತ್ತು ಬಸವರಾಜ್ ಬೊಮ್ಮಾಯಿಗೆ ಮಾತ್ರ ಹಠ ಹಿಡಿದು ಟಿಕೆಟ್ ಕೊಡಿಸಿದ್ದಾರೆ ಎಂದು ಇತ್ತೀಚೆಗೆ ಈಶ್ವರಪ್ಪ ಹೇಳಿದ್ದರು.

ಇದನ್ನೂ ಓದಿ: ಬಂಡಾಯ ಸ್ಪರ್ಧೆಗೆ ಪ್ರಧಾನಿ ಮೋದಿ, ಅಮಿತ್ ಶಾ ಕಾರಣವೇ? ಈಶ್ವರಪ್ಪ ಸ್ಫೋಟಕ ಹೇಳಿಕೆ

ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಪಕ್ಷ ಉಳಿಸಲು ಮತ್ತು ಕುಟುಂಬ ರಾಜಕೀಯಕ್ಕೆ ಪಾಠ ಕಲಿಸಲು ನಾನು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಸ್ಪರ್ಧೆಗೆ ಧುಮುಕಿರುವುದಾಗಿ ಈಶ್ವರಪ್ಪ ಅವರು ಸಾವಿರಾರು ತಮ್ಮ ಅಭಿಮಾನಿಗಳು ಮತ್ತು ಬೆಂಬಲಿಗರ ಮುಂದೆ ಘೋಷಣೆ ಮಾಡಿದ್ದಾರೆ. ಈಶ್ವರಪ್ಪ ಅವರಿಗೆ ನಗರದ ಬಂಜಾರ್ ಕನ್ವೇಕ್ಷನ್ ಹಾಲ್ ನಲ್ಲಿ ಅಭಿಮಾನಿಗಳ ಮುಖಂಡರ ಸಭೆಯಲ್ಲಿ ಈಶ್ವಪರಪ್ಪ ಪರ ಘೋಷಣೆ ಮೊಳಗಿವೆ. ಈಶ್ವರಪ್ಪ ಶಿವಮೊಗ್ಗದಿಂದ ಸ್ಪರ್ಧೆ ಮಾಡಬೇಕೆಂದು ಎಲ್ಲರೂ ಬೆಂಬಲ ಸೂಚಿಸಿದ್ದಾರೆ. ಈಶ್ವರಪ್ಪ ಆರಂಭದಿಂದ ಕೊನೆಯ ವರೆಗೂ ತಮ್ಮ ಭಾಷಣದಲ್ಲಿ ಬಿಎಸ್ ವೈ ವಿರುದ್ದ ವಾಗ್ದಾಳಿ ಮಾಡಿದ್ದರು.

ಆಯೋಗಕ್ಕೆ ಬಿಜೆಪಿ ಶಾಸಕ ಸುರೇಶ್ ಕುಮಾರ್ ದೂರು

ವಿಧಾನಸೌಧದಲ್ಲಿ ಪಕ್ಷ ಸೇರ್ಪಡೆ ಮಾಡಿಕೊಂಡಿದ್ದಕ್ಕೆ ಆಯೋಗಕ್ಕೆ ಬಿಜೆಪಿ ಶಾಸಕ ಸುರೇಶ್ ಕುಮಾರ್ ದೂರು ನೀಡಿದ್ದಾರೆ. ಬಳಿಕ ಮಾತನಾಡಿದ ಅವರು, ಮಾರ್ಚ್ 15ರಿಂದ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದೆ. ಸಚಿವರು ಕಟ್ಟುನಿಟ್ಟಾಗಿ ಚುನಾವಣಾ ನೀತಿ ಸಂಹಿತೆ ಪಾಲಿಸಬೇಕು. ನೀತಿ ಸಂಹಿತೆ ಜಾರಿ ನಂತರ ವಿಧಾನಸೌಧದ ಕಚೇರಿ ಬಳಸುವಂತಿಲ್ಲ. ನಿನ್ನೆ ಡಿಸಿಎಂ ಡಿಕೆ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡಿದ್ದಾರೆ. ವಿಧಾನಸೌಧವನ್ನ ಅಟ್ಟಹಾಸವಾಗಿ ಬಳಕೆ ಮಾಡಿಕೊಂಡಂತಾಗಿದೆ. ಕ್ರಮ ಕೈಗೊಳ್ಳುವುದಾಗಿ ಆಯೋಗದವರು ಭರವಸೆ ನೀಡಿದ್ದಾರೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:20 pm, Sun, 31 March 24

Follow Us
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?