AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾರದ್ದೋ ಜಾಗಕ್ಕೆ ಇನ್ಯಾರಿಗೋ ಸಾಲ: ಯಲಹಂಕದಲ್ಲಿ ಬಡ ದಂಪತಿ ಬೀದಿಗೆ

ಯಾರೋ ಮಾಡಿರುವ ಮೋಸದ ಕೆಲಸಕ್ಕೆ ಬಡ ದಂಪತಿ ಸಂಕಷ್ಟಕ್ಕೆ ಸಿಲುಕಿರುವ ಘಟನೆ ಬೆಂಗಳೂರಿನ ಯಲಹಂಕದ ಮಾರುತಿ ನಗರದಲ್ಲಿ ನಡೆದಿದೆ. ಜಾಗದ ಮೇಲೆ ಪಡೆದ ಸಾಲ ಕಟ್ಟಿಲ್ಲ ಎಂದು ಖಾಸಗಿ ಫೈನಾನ್ಸ್​ ನವರು ಮನೆ ಸೀಜ್​ ಮಾಡಿದ್ದು, ಯಾವುದೇ ಲೋನ್​ ಮಾಡದೆ ಜೀವನ ನಡೆಸುತ್ತಿದ್ದ ದಂಪತಿ ಕಂಗೆಟ್ಟಿದ್ದಾರೆ. ಪೊಲೀಸರೂ ನಮ್ಮ ನೆರವಿಗೆ ಬರುತ್ತಿಲ್ಲ ಎಂದು ಅಲವತ್ತುಕೊಂಡಿದ್ದಾರೆ.

ಯಾರದ್ದೋ ಜಾಗಕ್ಕೆ ಇನ್ಯಾರಿಗೋ ಸಾಲ: ಯಲಹಂಕದಲ್ಲಿ ಬಡ ದಂಪತಿ ಬೀದಿಗೆ
ದಂಪತಿ ಕಂಗಾಲು
ನವೀನ್ ಕುಮಾರ್ ಟಿ
| Edited By: |

Updated on: Oct 09, 2025 | 7:44 PM

Share

ಬೆಂಗಳೂರು, ಅಕ್ಟೋಬರ್​ 09: ತಮ್ಮ ಹೆಸರಿನಲ್ಲಿರುವ ಜಾಗದ ಮೇಲೆ ಇನ್ಯಾರೋ ಸಾಲ ಮಾಡಿದ ಪರಿಣಾಮ ಬಡ ದಂಪತಿ ಸಂಕಷ್ಟಕ್ಕೆ ಸಿಲುಕಿರುವ ಘಟನೆ ಯಲಹಂಕ ಮಾರುತಿ ನಗರದ 15ನೇ ಕ್ರಾಸ್​ ನಲ್ಲಿ ನಡೆದಿದೆ. 40 ಲಕ್ಷ ಲೋನ್ (Loan) ಕಟ್ಟಿಲ್ಲ ಎಂದು ಖಾಸಗಿ ಫೈನಾನ್ಸ್​ ಸಿಬಂದಿ ಮನೆ ಸೀಜ್​ ಮಾಡಿರುವ ಕಾರಣ ಕೂಲಿ ಮಾಡಿ ಜೀವನ ನಡೆಸುತ್ತಿದ್ದ ದಂಪತಿ ಕಂಗಾಲಾಗಿದ್ದಾರೆ. ನ್ಯಾಯಕ್ಕೆ ಆಗ್ರಹಿಸಿ ಮನೆ ಮುಂದೆ ಪಾತ್ರೆಗಳನ್ನು ಇಟ್ಟು ಕಣ್ಣೀರು ಹಾಕುತ್ತಿದ್ದಾರೆ.

ತಂದೆಯಿಂದ ದಾನಪತ್ರದ ಮೂಲಕ ಬಂದಿದ್ದ 40×45 ಅಳತೆಯ ಸೈಟ್​ ನಲ್ಲಿ ಸಣ್ಣ ಮನೆ ಕಟ್ಟಿಕೊಂಡು ಕಳೆದ 30 ವರ್ಷಗಳಿಂದ ರತ್ನಮ್ಮ ಮತ್ತು ವೆಂಕಟೇಶ್ ದಂಪತಿ ವಾಸವಿದ್ದರು. ಆದರೆ ಕಳೆದ ಎರಡು ದಿನಗಳ ಹಿಂದೆ ಮನೆ ಬಳಿಗೆ ಬಂದ ಖಾಸಗಿ ಫೈನಾನ್ಸ್ ಸಿಬ್ಬಂದಿ, ಈ ಸೈಟ್ ಮೇಲೆ 40 ಲಕ್ಷ ಲೋನ್ ತೆಗೆದುಕೊಂಡು ವಾಪಸ್ ಕಟ್ಟಿಲ್ಲ ಅಂತ ಮನೆಗೆ ನೋಟಿಸ್ ಅಂಟಿಸಿದ್ದಾರೆ. ಜೊತೆಗೆ ಲೋನ್ ಕಟ್ಟದ ಕಾರಣ ಮನೆ ಸೀಜ್ ಮಾಡುವುದಾಗಿ ಹೇಳಿ ಮನೆಯಲ್ಲಿದ್ದ ಪಾತ್ರೆ ಸಾಮಾನುಗಳನ್ನ ಹೊರಗಡೆ ಹಾಕಿ ಮನೆಗೆ ಬೀಗ ಹಾಕಿದ್ದಾರೆ. ಇದರಿಂದ ಯಾವುದೇ ಲೋನ್​ ಮಾಡದೆ ಜೀವನ ನಡೆಸುತ್ತಿದ್ದ ಈ ದಂಪತಿ ಕಂಗೆಟ್ಟಿದ್ದಾರೆ.

ಇದನ್ನೂ ಓದಿ: ಚಡಚಣ SBI ದರೋಡೆ ಕೇಸ್​: 3 ಆರೋಪಿಗಳ ಬಂಧನ; 9 ಕೆ.ಜಿ. ಚಿನ್ನ, 86 ಲಕ್ಷ ರೂ. ನಗದು ರಿಕವರಿ

‘ಪೊಲೀಸರು ಸ್ಪಂದಿಸುತ್ತಿಲ್ಲ’

ಎಲ್ಲ ದಾಖಲೆಗಳು ರತ್ನಮ್ಮ ಹೆಸರಿನಲ್ಲೇ ಇದ್ದರೂ ಖಾಸಗಿ ಫೈನಾನ್ಸ್​ ಸಂಸ್ಥೆಯವರು ಜಯಪ್ರಕಾಶ್ ಎಂಬುವವರ ಹೆಸರಲ್ಲಿ 40 ಲಕ್ಷ ಲೋನ್ ನೀಡಿದ್ದಾರೆ. ಅವರು ಯಾರು ಎಂಬುದೇ ನಮಗೆ ಗೊತ್ತಿಲ್ಲ. ನಮ್ಮ ಗಮನಕ್ಕೂ ತರದೆ ಲೋನ್ ನೀಡಿದ್ದು ಇದೀಗ ಮನೆ ಸೀಜ್​ ಮಾಡಿ ನಮ್ಮ ಮೇಲೆ ದಬ್ಬಾಳಿಕೆ ಮಾಡುತ್ತಿದ್ದಾರೆ. ಮನೆ ದಾಖಲೆಗಳ ಸಮೇತ ಪೊಲೀಸ್ ಠಾಣೆಗೆ ನ್ಯಾಯ ಕೇಳಲು ಹೋದರೂ ಯಾರೊಬ್ಬರು ಸ್ವಂದಿಸುತ್ತಿಲ್ಲ ಎನ್ನುವುದು ದಂಪತಿ ಆರೋಪ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ನವೀನ್ ಕುಮಾರ್ ಟಿ
ನವೀನ್ ಕುಮಾರ್ ಟಿ

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More
ಪ್ರಕಾಶ್ ರಾಜ್ ವಿರುದ್ಧ ಬೆಳಗಾವಿಯಲ್ಲಿ ಶ್ರೀರಾಮ ಸೇನೆ ಪ್ರತಿಭಟನೆ
ಪ್ರಕಾಶ್ ರಾಜ್ ವಿರುದ್ಧ ಬೆಳಗಾವಿಯಲ್ಲಿ ಶ್ರೀರಾಮ ಸೇನೆ ಪ್ರತಿಭಟನೆ
ವಿಜಯ್ ನೋಡಲು ಟಿವಿಕೆ ಬಾವುಟ ಹಿಡಿದು ಕಾಯುತ್ತಿರುವ ಫ್ಯಾನ್ಸ್
ವಿಜಯ್ ನೋಡಲು ಟಿವಿಕೆ ಬಾವುಟ ಹಿಡಿದು ಕಾಯುತ್ತಿರುವ ಫ್ಯಾನ್ಸ್
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು
ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ
ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?