AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುತ್ತಿಗೆದಾರರಿಗೆ ಹಣ ನೀಡಲು ನಿವೇಶನ ಒತ್ತೆ ಆರೋಪ: ಬಿಡಿಎ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

ರಾಜಾಜಿನಗರ ಬಿಜೆಪಿ ಶಾಸಕ ಸುರೇಶ್​ ಕುಮಾರ್​ ಸುದ್ಧಿಗೋಷ್ಠಿಯಲ್ಲಿ ಮಾತನಾಡಿ, ಶಿವರಾಮ ಕಾರಂತ ಬಡಾವಣೆಯ ಗುತ್ತಿಗೆದಾರರಿಗೆ ಹಣ ನೀಡಲು ನಾಡಪ್ರಭು‌ ಕೆಂಪೇಗೌಡ ಬಡಾವಣೆಯ 2,500 ಮೂಲೆ ನಿವೇಶನ ಒತ್ತೆ‌ ಇಡಲಾಗಿದೆ. ಆ ಮೂಲಕ ಗುತ್ತಿಗೆದಾರರಿಗೆ ಹಣ‌ ನೀಡಲು ಮೂಲೆ ನಿವೇಶನ ‌ಮಾರಲು ಮುಂದಾಗಿದೆ. ಬಿಡಿಎ ಈ ನಡೆ ಅನುಮಾನಕ್ಕೆ ಕಾರಣವಾಗಿದೆ. ಈ ಪ್ರಕ್ರಿಯೆಗೆ ತಡೆ ನೀಡುವಂತೆ ಕೋರಿ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದೆ ಎಂದು ಹೇಳಿದ್ದಾರೆ. 

ಗುತ್ತಿಗೆದಾರರಿಗೆ ಹಣ ನೀಡಲು ನಿವೇಶನ ಒತ್ತೆ ಆರೋಪ: ಬಿಡಿಎ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು
ಬಿಡಿಎ
TV9 Web
| Edited By: |

Updated on: Apr 07, 2024 | 2:52 PM

Share

ಬೆಂಗಳೂರು, ಏಪ್ರಿಲ್​ 07: ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ ಖಾಲಿ ಇರುವ 2,500 ಮೂಲೆ ನಿವೇಶನಗಳನ್ನು ಅಡಮಾನವಿಟ್ಟು ರಾಷ್ಟ್ರೀಕೃತ ಬ್ಯಾಂಕ್‌ಗಳಿಂದ 1,000 ಕೋಟಿ ರೂ. ಸಾಲ ಪಡೆಯಲು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ಮುಂದಾಗಿದೆ. ಹೀಗಾಗಿ ಚುನಾವಣೆಯ ಮಾದರಿ ನೀತಿ ಸಂಹಿತೆ ಸಮಯದಲ್ಲಿ ಶಿವರಾಮ ಕಾರಂತ ಬಡಾವಣೆಯ ಗುತ್ತಿಗೆದಾರರ ಪಾವತಿಗಾಗಿ 1000 ರಿಂದ 2000 ಕೋಟಿ ರೂ. ನಾಡಪ್ರಭು ಕೆಂಪೇಗೌಡ ಬಡಾವಣೆಯ ಮೂಲೆ ನಿವೇಶಗಳನ್ನು ಒತ್ತೆ ಇಟ್ಟು ಪಡೆಯುತ್ತಿದ್ದು ಚುನಾವಣೆ ಮುಗಿಯುವವರೆಗೆ ಯಾವುದೇ ರೀತಿಯ ಪಾವತಿಗಳು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ಆಗದಂತೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದೆ.

ಬಿಡಿಎ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಸುರೇಶ್​ ಕುಮಾರ್

ನಗರದ ಜಿ.ಎಂ. ರಿಜಾಯ್ಸ್​ನಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ರಾಜಾಜಿನಗರ ಬಿಜೆಪಿ ಶಾಸಕ ಸುರೇಶ್​ ಕುಮಾರ್, ಗುತ್ತಿಗೆದಾರರಿಗೆ ಹಣ ನೀಡಲು ಬಿಡಿಎ ಮೂಲೆ ನಿವೇಶನ ಒತ್ತೆ ಆರೋಪ ಹಿನ್ನಲೆ ಬಿಡಿಎ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದೇವೆ. ಬಿಡಿಎ ಮೂಲೆ ನಿವೇಶನಗಳನ್ನು ಬ್ಯಾಂಕ್​ನಲ್ಲಿ ಅಡಮಾನ ಇಟ್ಟಿದೆ. ನೀತಿ ಸಂಹಿತೆ ಜಾರಿಯಲ್ಲಿರುವಾಗ ಮೂಲೆ ನಿವೇಶನ ‌ಒತ್ತೆ ಇಟ್ಟಿದೆ.

ಇದನ್ನೂ ಓದಿ: ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಚುನಾವಣಾಧಿಕಾರಿಗೆ ಬಿಜೆಪಿ ದೂರು

ಶಿವರಾಮ ಕಾರಂತ ಬಡಾವಣೆಯ ಗುತ್ತಿಗೆದಾರರಿಗೆ ಹಣ ನೀಡಲು ನಾಡಪ್ರಭು‌ ಕೆಂಪೇಗೌಡ ಬಡಾವಣೆಯ 2,500 ಮೂಲೆ ನಿವೇಶನ ಒತ್ತೆ‌ ಇಡಲಾಗಿದೆ. ಆ ಮೂಲಕ ಗುತ್ತಿಗೆದಾರರಿಗೆ ಹಣ‌ ನೀಡಲು ಮೂಲೆ ನಿವೇಶನ ‌ಮಾರಲು ಮುಂದಾಗಿದೆ. ಬಿಡಿಎ ಈ ನಡೆ ಅನುಮಾನಕ್ಕೆ ಕಾರಣವಾಗಿದೆ. ಈ ಪ್ರಕ್ರಿಯೆಗೆ ತಡೆ ನೀಡುವಂತೆ ಕೋರಿ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದೆ ಎಂದು ಹೇಳಿದ್ದಾರೆ.

ವೈಯಕ್ತಿಕ ಅಜೆಂಡಾ ಇಟ್ಕೊಂಡು ಬೇರೆ ಆಗಿದ್ದಾರೆ

ಎಸ್​ಟಿ ಸೋಮಶೇಖರ್ ವಿಚಾರವಾಗಿ ಮಾತನಾಡಿದ ಅವರು, ಪಕ್ಷದ ಶಾಸಕರು. ಆದರೆ ಈಗ ದೂರವಾಗಿದ್ದಾರೆ. ಪಕ್ಷದ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿಲ್ಲ. ವೈಯಕ್ತಿಕ ಅಜೆಂಡಾ ಇಟ್ಕೊಂಡು ಬೇರೆ ಆಗಿದ್ದಾರೆ. ಅವರಿಗೆ ಪಕ್ಷದ ಕಾರ್ಯಕರ್ತರು ಎಲ್ಲ ರೀತಿ ಸಹಾಯ ಮಾಡಿದ್ದರು. ಆದರೆ ನನಗೆ ವಿಷ ಕೊಟ್ಟಿದ್ದಾರೆ ಎನ್ನುತ್ತಿದ್ದಾರೆ ಎಂದರು.

ಇದನ್ನೂ ಓದಿ: ಕರ್ನಾಟಕದಲ್ಲಿ ಹೆಚ್ಚು ಸ್ಥಾನ ಗೆಲ್ಲಲು ಕಾಂಗ್ರೆಸ್ ಸರಣಿ ಸಭೆ: ಮುಖಂಡರಿಗೆ ಸಿಎಂ-ಡಿಸಿಎಂ ಹೇಳಿದ್ದೇನು? ಇಲ್ಲಿದೆ ಇನ್​​ಸೈಡ್​ ಡಿಟೇಲ್ಸ್

ಕೆಎಸ್​ ಈಶ್ವರಪ್ಪರಿಂದ ಮೋದಿ ಫೋಟೋ ಬಳಕೆ ವಿಚಾರವಾಗಿ ಪ್ರತಿಕ್ರಿಯಿಸಿದ್ದು, ಮೋದಿ ಅವರು ನಮ್ಮ ನಾಯಕ ಅಂತ ಹೇಳುತ್ತಿದ್ದಾರೆ. ನಮ್ಮ ಪಕ್ಷದ ನಾಯಕರು ಎಲ್ಲವನ್ನ ತೀರ್ಮಾನ ಮಾಡುತ್ತಾರೆ. ದೊಡ್ಡವರು ಅವತ ಜೊತೆ ಮಾತಾಡುತ್ತಾರೆ ಎಂದು ಹೇಳಿದ್ದಾರೆ.

ವರದಿ: ಈರಣ್ಣ ಬಸವ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಮದುವೆ ಸಮಾರಂಭದ ವೇಳೆ ಬ್ಯಾಂಕ್ವೆಟ್​ ಹಾಲ್​ನಲ್ಲಿ ಭಾರಿ ಅಗ್ನಿ ಅವಘಡ
ಮದುವೆ ಸಮಾರಂಭದ ವೇಳೆ ಬ್ಯಾಂಕ್ವೆಟ್​ ಹಾಲ್​ನಲ್ಲಿ ಭಾರಿ ಅಗ್ನಿ ಅವಘಡ
ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ?
ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ?
ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ