ಅಕ್ರಮವಾಗಿ ಬೆಂಗಾವಲು ವಾಹನ, ಗನ್​ ಮ್ಯಾನ್​ ಪಡೆದ್ರಾ ಎಂಟಿಬಿ?

ಬೆಂಗಳೂರು ಗ್ರಾಮಾಂತರ: ಹೊಸಕೋಟೆ ಉಪಚುನಾವಣಾ ಕಣ ರಂಗೇರಿದ್ದು, ನೀತಿ ಸಂಹಿತಿ ಉಲ್ಲಂಘನೆ ಆರೋಪ ಸಂಬಂಧ ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್ ವಿರುದ್ಧ ಚುನಾವಣಾ ಅಧಿಕಾರಿಗಳಿಗೆ ದೂರು ನೀಡಿದ್ದಾರೆ. ಎಂಟಿಬಿ ನಾಗರಾಜ್ ಎದುರಾಳಿ ಶರತ್ ಬಚ್ಚೇಗೌಡ ಬೆಂಬಲಿತ ಮುಖಂಡರಾದ ತಿಮ್ಮೇಗೌಡ ಮತ್ತು ಸುಬ್ಬಣ್ಣ ಎಂಬುವವರು ದೂರು ನೀಡಿದ್ದಾರೆ. ನೀತಿ ಸಂಹಿತೆ ಉಲ್ಲಂಘನೆ ಆರೋಪ: ನೀತಿ ಸಂಹಿತೆ ಉಲ್ಲಂಘಿಸಿ ಎಂಟಿಬಿ ನಾಗರಾಜ್ ಬೆಂಗಾವಲು ವಾಹನ ಮತ್ತು ಗನ್ ಮ್ಯಾನ್​ಗಳನ್ನ ಪಡೆದ ಆರೋಪವಿದೆ. ಅಲ್ಲದೆ ಚುನಾವಣಾ ಅಧಿಕಾರಿಗಳ ಕಚೇರಿಯ 200 ಮೀಟರ್ […]

ಅಕ್ರಮವಾಗಿ ಬೆಂಗಾವಲು ವಾಹನ, ಗನ್​ ಮ್ಯಾನ್​ ಪಡೆದ್ರಾ ಎಂಟಿಬಿ?
ಸಾಧು ಶ್ರೀನಾಥ್​

Updated on: Nov 19, 2019 | 6:07 PM

ಬೆಂಗಳೂರು ಗ್ರಾಮಾಂತರ: ಹೊಸಕೋಟೆ ಉಪಚುನಾವಣಾ ಕಣ ರಂಗೇರಿದ್ದು, ನೀತಿ ಸಂಹಿತಿ ಉಲ್ಲಂಘನೆ ಆರೋಪ ಸಂಬಂಧ ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್ ವಿರುದ್ಧ ಚುನಾವಣಾ ಅಧಿಕಾರಿಗಳಿಗೆ ದೂರು ನೀಡಿದ್ದಾರೆ.

ಎಂಟಿಬಿ ನಾಗರಾಜ್ ಎದುರಾಳಿ ಶರತ್ ಬಚ್ಚೇಗೌಡ ಬೆಂಬಲಿತ ಮುಖಂಡರಾದ ತಿಮ್ಮೇಗೌಡ ಮತ್ತು ಸುಬ್ಬಣ್ಣ ಎಂಬುವವರು ದೂರು ನೀಡಿದ್ದಾರೆ.

ನೀತಿ ಸಂಹಿತೆ ಉಲ್ಲಂಘನೆ ಆರೋಪ:
ನೀತಿ ಸಂಹಿತೆ ಉಲ್ಲಂಘಿಸಿ ಎಂಟಿಬಿ ನಾಗರಾಜ್ ಬೆಂಗಾವಲು ವಾಹನ ಮತ್ತು ಗನ್ ಮ್ಯಾನ್​ಗಳನ್ನ ಪಡೆದ ಆರೋಪವಿದೆ. ಅಲ್ಲದೆ ಚುನಾವಣಾ ಅಧಿಕಾರಿಗಳ ಕಚೇರಿಯ 200 ಮೀಟರ್ ಅಂತರದಲ್ಲಿ ಯಾರೂ ಪ್ರಚಾರ ಮಾಡಬಾರದೆಂಬ ನಿಯಮವಿದೆ. ಆದ್ರೂ ನಿಯಮ ಮೀರಿ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಹಲವು ಸಚಿವರು ಚುನಾವಣಾಧಿಕರಿಗಳ ಕಚೇರಿ ಸಮೀಪವೇ ಭಾಷಣ ಮಾಡಿದ್ದಾರೆ. ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಚುನಾವಣಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us