AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘₹2 ಲಕ್ಷ ಪಾವತಿಸಿ, ಇಲ್ಲದಿದ್ದರೆ ರೂಮಿನಲ್ಲಿ ಕೂಡಿಹಾಕುತ್ತೇವೆ’ ಆಕಾಶ್ ಆಸ್ಪತ್ರೆ ವಿರುದ್ಧ ಆರೋಪ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಖಾಸಗಿ ಆಸ್ಪತ್ರೆಗಳ ಕರ್ಮಕಾಂಡ ಮುಂದುವರೆದಿದೆ. ಕೊರೊನಾ ಸೋಂಕಿತರೇ ಖಾಸಗಿ ಆಸ್ಪತ್ರೆಗಳಿಗೆ ಬಂಡವಾಳ ಆಗ್ತಿದ್ದಾರೆ. ದೇವನಹಳ್ಳಿಯ ಆಕಾಶ್ ಆಸ್ಪತ್ರೆ ಸೋಂಕಿತರ ಬಳಿ ಹಣ ಪೀಕುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ರೋಗಿ ಸಂಬಂಧಿ ಆಕಾಶ್ ಆಸ್ಪತ್ರೆಯ ಕರ್ಮಕಾಂಡ ಬಯಲಿಗೆಳೆದಿದ್ದಾರೆ. ಸೋಂಕಿತರು ಗುಣಮುಖರಾದರೂ ಡಿಸ್ಚಾರ್ಜ್‌ಗೆ ಹಿಂದೇಟು ಹಾಕಲಾಗುತ್ತಿದೆಯಂತೆ. ಡಿಸ್ಚಾರ್ಜ್ ಮಾಡದೆ ಬೆದರಿಕೆ ಹಾಕಿರುವುದಾಗಿ ಆಕಾಶ್ ಆಸ್ಪತ್ರೆಯ ವಿರುದ್ಧ ಆರೋಪ ಮಾಡಿದ್ದಾರೆ. ಬಿಬಿಎಂಪಿ ಸೂಚನೆಯ ಮೇರೆಗೆ 15 ದಿನದ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದ ದಂಪತಿ ಕೊರೊನಾದಿಂದ […]

'₹2 ಲಕ್ಷ ಪಾವತಿಸಿ, ಇಲ್ಲದಿದ್ದರೆ ರೂಮಿನಲ್ಲಿ ಕೂಡಿಹಾಕುತ್ತೇವೆ' ಆಕಾಶ್ ಆಸ್ಪತ್ರೆ ವಿರುದ್ಧ ಆರೋಪ
ಆಯೇಷಾ ಬಾನು
| Edited By: |

Updated on:Jul 09, 2020 | 12:36 PM

Share

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಖಾಸಗಿ ಆಸ್ಪತ್ರೆಗಳ ಕರ್ಮಕಾಂಡ ಮುಂದುವರೆದಿದೆ. ಕೊರೊನಾ ಸೋಂಕಿತರೇ ಖಾಸಗಿ ಆಸ್ಪತ್ರೆಗಳಿಗೆ ಬಂಡವಾಳ ಆಗ್ತಿದ್ದಾರೆ. ದೇವನಹಳ್ಳಿಯ ಆಕಾಶ್ ಆಸ್ಪತ್ರೆ ಸೋಂಕಿತರ ಬಳಿ ಹಣ ಪೀಕುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ರೋಗಿ ಸಂಬಂಧಿ ಆಕಾಶ್ ಆಸ್ಪತ್ರೆಯ ಕರ್ಮಕಾಂಡ ಬಯಲಿಗೆಳೆದಿದ್ದಾರೆ.

ಸೋಂಕಿತರು ಗುಣಮುಖರಾದರೂ ಡಿಸ್ಚಾರ್ಜ್‌ಗೆ ಹಿಂದೇಟು ಹಾಕಲಾಗುತ್ತಿದೆಯಂತೆ. ಡಿಸ್ಚಾರ್ಜ್ ಮಾಡದೆ ಬೆದರಿಕೆ ಹಾಕಿರುವುದಾಗಿ ಆಕಾಶ್ ಆಸ್ಪತ್ರೆಯ ವಿರುದ್ಧ ಆರೋಪ ಮಾಡಿದ್ದಾರೆ. ಬಿಬಿಎಂಪಿ ಸೂಚನೆಯ ಮೇರೆಗೆ 15 ದಿನದ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದ ದಂಪತಿ ಕೊರೊನಾದಿಂದ ಗುಣಮುಖರಾಗಿದ್ದರು. ಅವರನ್ನ ಡಿಸ್ಚಾರ್ಜ್ ಮಾಡಬೇಕಾದ್ರೆ ₹2 ಲಕ್ಷ ಪಾವತಿಸಲು ಆಸ್ಪತ್ರೆ ಮಂಡಳಿ ಸೂಚಿಸಿದೆ.

ಹಣ ಪಾವತಿಸದಿದ್ದರೆ ರೂಮಿನಲ್ಲಿ ಕೂಡಿಹಾಕುವ ಬೆದರಿಕೆ ಹಾಕಿದೆ. ಕೊರೊನಾ ಸೋಂಕಿತ ಚಿಕಿತ್ಸೆಗೆ ಸರ್ಕಾರವೇ ಹಣ ಪಾವತಿಸುವುದಾಗಿ ದಂಪತಿ ಹೇಳಿದರೂ ಕೇಳಿಲ್ಲ. 2 ದಿನ ಆಸ್ಪತ್ರೆಯಲ್ಲೇ ಇಟ್ಟುಕೊಂಡು ಸತಾಯಿಸಲಾಗಿತ್ತು. ಬಳಿಕ ಡಿಹೆಚ್‌ಒಗೆ ಕರೆ ಮಾಡಿದ್ದಾರೆ. ಆಗ ಡಿಹೆಚ್‌ಒ ಸೂಚನೆ ಬಳಿಕ ಬೆಂಗಳೂರಿನ ದಂಪತಿಯನ್ನು ಡಿಸ್ಚಾರ್ಜ್ ಮಾಡಲಾಗಿದೆ.

ಆದ್ರೆ ಆಸ್ಪತ್ರೆಯ ಸಿಬ್ಬಂದಿ ಮಧ್ಯರಾತ್ರಿ ಅವರನ್ನು ಡಿಸ್ಚಾರ್ಜ್ ಮಾಡಿದ್ದಾರೆ. ಆ ಸಮಯದಲ್ಲಿ ವಾಹನ ವ್ಯವಸ್ಥೆ ಇಲ್ಲದೆ ದಂಪತಿ ತೀವ್ರ ಪರದಾಡಿದ್ದಾರೆ. ಆಸ್ಪತ್ರೆಯಿಂದ 4 ಕಿ.ಮೀ. ನಡೆದುಕೊಂಡು ಬಂದಿದ್ದಾರೆ. ಬಳಿಕ ಅಲ್ಲಿಂದ ವಾಹನದಲ್ಲಿ ಮನೆಗೆ ತೆರಳಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪಟ್ಟಣದ ಆಕಾಶ್ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ ಈಗ ಕೇಳಿ ಬಂದಿದೆ.

Published On - 8:24 am, Thu, 9 July 20

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ