AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘₹2 ಲಕ್ಷ ಪಾವತಿಸಿ, ಇಲ್ಲದಿದ್ದರೆ ರೂಮಿನಲ್ಲಿ ಕೂಡಿಹಾಕುತ್ತೇವೆ’ ಆಕಾಶ್ ಆಸ್ಪತ್ರೆ ವಿರುದ್ಧ ಆರೋಪ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಖಾಸಗಿ ಆಸ್ಪತ್ರೆಗಳ ಕರ್ಮಕಾಂಡ ಮುಂದುವರೆದಿದೆ. ಕೊರೊನಾ ಸೋಂಕಿತರೇ ಖಾಸಗಿ ಆಸ್ಪತ್ರೆಗಳಿಗೆ ಬಂಡವಾಳ ಆಗ್ತಿದ್ದಾರೆ. ದೇವನಹಳ್ಳಿಯ ಆಕಾಶ್ ಆಸ್ಪತ್ರೆ ಸೋಂಕಿತರ ಬಳಿ ಹಣ ಪೀಕುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ರೋಗಿ ಸಂಬಂಧಿ ಆಕಾಶ್ ಆಸ್ಪತ್ರೆಯ ಕರ್ಮಕಾಂಡ ಬಯಲಿಗೆಳೆದಿದ್ದಾರೆ. ಸೋಂಕಿತರು ಗುಣಮುಖರಾದರೂ ಡಿಸ್ಚಾರ್ಜ್‌ಗೆ ಹಿಂದೇಟು ಹಾಕಲಾಗುತ್ತಿದೆಯಂತೆ. ಡಿಸ್ಚಾರ್ಜ್ ಮಾಡದೆ ಬೆದರಿಕೆ ಹಾಕಿರುವುದಾಗಿ ಆಕಾಶ್ ಆಸ್ಪತ್ರೆಯ ವಿರುದ್ಧ ಆರೋಪ ಮಾಡಿದ್ದಾರೆ. ಬಿಬಿಎಂಪಿ ಸೂಚನೆಯ ಮೇರೆಗೆ 15 ದಿನದ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದ ದಂಪತಿ ಕೊರೊನಾದಿಂದ […]

'₹2 ಲಕ್ಷ ಪಾವತಿಸಿ, ಇಲ್ಲದಿದ್ದರೆ ರೂಮಿನಲ್ಲಿ ಕೂಡಿಹಾಕುತ್ತೇವೆ' ಆಕಾಶ್ ಆಸ್ಪತ್ರೆ ವಿರುದ್ಧ ಆರೋಪ
ಆಯೇಷಾ ಬಾನು
| Edited By: |

Updated on:Jul 09, 2020 | 12:36 PM

Share

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಖಾಸಗಿ ಆಸ್ಪತ್ರೆಗಳ ಕರ್ಮಕಾಂಡ ಮುಂದುವರೆದಿದೆ. ಕೊರೊನಾ ಸೋಂಕಿತರೇ ಖಾಸಗಿ ಆಸ್ಪತ್ರೆಗಳಿಗೆ ಬಂಡವಾಳ ಆಗ್ತಿದ್ದಾರೆ. ದೇವನಹಳ್ಳಿಯ ಆಕಾಶ್ ಆಸ್ಪತ್ರೆ ಸೋಂಕಿತರ ಬಳಿ ಹಣ ಪೀಕುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ರೋಗಿ ಸಂಬಂಧಿ ಆಕಾಶ್ ಆಸ್ಪತ್ರೆಯ ಕರ್ಮಕಾಂಡ ಬಯಲಿಗೆಳೆದಿದ್ದಾರೆ.

ಸೋಂಕಿತರು ಗುಣಮುಖರಾದರೂ ಡಿಸ್ಚಾರ್ಜ್‌ಗೆ ಹಿಂದೇಟು ಹಾಕಲಾಗುತ್ತಿದೆಯಂತೆ. ಡಿಸ್ಚಾರ್ಜ್ ಮಾಡದೆ ಬೆದರಿಕೆ ಹಾಕಿರುವುದಾಗಿ ಆಕಾಶ್ ಆಸ್ಪತ್ರೆಯ ವಿರುದ್ಧ ಆರೋಪ ಮಾಡಿದ್ದಾರೆ. ಬಿಬಿಎಂಪಿ ಸೂಚನೆಯ ಮೇರೆಗೆ 15 ದಿನದ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದ ದಂಪತಿ ಕೊರೊನಾದಿಂದ ಗುಣಮುಖರಾಗಿದ್ದರು. ಅವರನ್ನ ಡಿಸ್ಚಾರ್ಜ್ ಮಾಡಬೇಕಾದ್ರೆ ₹2 ಲಕ್ಷ ಪಾವತಿಸಲು ಆಸ್ಪತ್ರೆ ಮಂಡಳಿ ಸೂಚಿಸಿದೆ.

ಹಣ ಪಾವತಿಸದಿದ್ದರೆ ರೂಮಿನಲ್ಲಿ ಕೂಡಿಹಾಕುವ ಬೆದರಿಕೆ ಹಾಕಿದೆ. ಕೊರೊನಾ ಸೋಂಕಿತ ಚಿಕಿತ್ಸೆಗೆ ಸರ್ಕಾರವೇ ಹಣ ಪಾವತಿಸುವುದಾಗಿ ದಂಪತಿ ಹೇಳಿದರೂ ಕೇಳಿಲ್ಲ. 2 ದಿನ ಆಸ್ಪತ್ರೆಯಲ್ಲೇ ಇಟ್ಟುಕೊಂಡು ಸತಾಯಿಸಲಾಗಿತ್ತು. ಬಳಿಕ ಡಿಹೆಚ್‌ಒಗೆ ಕರೆ ಮಾಡಿದ್ದಾರೆ. ಆಗ ಡಿಹೆಚ್‌ಒ ಸೂಚನೆ ಬಳಿಕ ಬೆಂಗಳೂರಿನ ದಂಪತಿಯನ್ನು ಡಿಸ್ಚಾರ್ಜ್ ಮಾಡಲಾಗಿದೆ.

ಆದ್ರೆ ಆಸ್ಪತ್ರೆಯ ಸಿಬ್ಬಂದಿ ಮಧ್ಯರಾತ್ರಿ ಅವರನ್ನು ಡಿಸ್ಚಾರ್ಜ್ ಮಾಡಿದ್ದಾರೆ. ಆ ಸಮಯದಲ್ಲಿ ವಾಹನ ವ್ಯವಸ್ಥೆ ಇಲ್ಲದೆ ದಂಪತಿ ತೀವ್ರ ಪರದಾಡಿದ್ದಾರೆ. ಆಸ್ಪತ್ರೆಯಿಂದ 4 ಕಿ.ಮೀ. ನಡೆದುಕೊಂಡು ಬಂದಿದ್ದಾರೆ. ಬಳಿಕ ಅಲ್ಲಿಂದ ವಾಹನದಲ್ಲಿ ಮನೆಗೆ ತೆರಳಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪಟ್ಟಣದ ಆಕಾಶ್ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ ಈಗ ಕೇಳಿ ಬಂದಿದೆ.

Published On - 8:24 am, Thu, 9 July 20

ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ