AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘₹2 ಲಕ್ಷ ಪಾವತಿಸಿ, ಇಲ್ಲದಿದ್ದರೆ ರೂಮಿನಲ್ಲಿ ಕೂಡಿಹಾಕುತ್ತೇವೆ’ ಆಕಾಶ್ ಆಸ್ಪತ್ರೆ ವಿರುದ್ಧ ಆರೋಪ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಖಾಸಗಿ ಆಸ್ಪತ್ರೆಗಳ ಕರ್ಮಕಾಂಡ ಮುಂದುವರೆದಿದೆ. ಕೊರೊನಾ ಸೋಂಕಿತರೇ ಖಾಸಗಿ ಆಸ್ಪತ್ರೆಗಳಿಗೆ ಬಂಡವಾಳ ಆಗ್ತಿದ್ದಾರೆ. ದೇವನಹಳ್ಳಿಯ ಆಕಾಶ್ ಆಸ್ಪತ್ರೆ ಸೋಂಕಿತರ ಬಳಿ ಹಣ ಪೀಕುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ರೋಗಿ ಸಂಬಂಧಿ ಆಕಾಶ್ ಆಸ್ಪತ್ರೆಯ ಕರ್ಮಕಾಂಡ ಬಯಲಿಗೆಳೆದಿದ್ದಾರೆ. ಸೋಂಕಿತರು ಗುಣಮುಖರಾದರೂ ಡಿಸ್ಚಾರ್ಜ್‌ಗೆ ಹಿಂದೇಟು ಹಾಕಲಾಗುತ್ತಿದೆಯಂತೆ. ಡಿಸ್ಚಾರ್ಜ್ ಮಾಡದೆ ಬೆದರಿಕೆ ಹಾಕಿರುವುದಾಗಿ ಆಕಾಶ್ ಆಸ್ಪತ್ರೆಯ ವಿರುದ್ಧ ಆರೋಪ ಮಾಡಿದ್ದಾರೆ. ಬಿಬಿಎಂಪಿ ಸೂಚನೆಯ ಮೇರೆಗೆ 15 ದಿನದ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದ ದಂಪತಿ ಕೊರೊನಾದಿಂದ […]

'₹2 ಲಕ್ಷ ಪಾವತಿಸಿ, ಇಲ್ಲದಿದ್ದರೆ ರೂಮಿನಲ್ಲಿ ಕೂಡಿಹಾಕುತ್ತೇವೆ' ಆಕಾಶ್ ಆಸ್ಪತ್ರೆ ವಿರುದ್ಧ ಆರೋಪ
ಆಯೇಷಾ ಬಾನು
| Edited By: |

Updated on:Jul 09, 2020 | 12:36 PM

Share

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಖಾಸಗಿ ಆಸ್ಪತ್ರೆಗಳ ಕರ್ಮಕಾಂಡ ಮುಂದುವರೆದಿದೆ. ಕೊರೊನಾ ಸೋಂಕಿತರೇ ಖಾಸಗಿ ಆಸ್ಪತ್ರೆಗಳಿಗೆ ಬಂಡವಾಳ ಆಗ್ತಿದ್ದಾರೆ. ದೇವನಹಳ್ಳಿಯ ಆಕಾಶ್ ಆಸ್ಪತ್ರೆ ಸೋಂಕಿತರ ಬಳಿ ಹಣ ಪೀಕುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ರೋಗಿ ಸಂಬಂಧಿ ಆಕಾಶ್ ಆಸ್ಪತ್ರೆಯ ಕರ್ಮಕಾಂಡ ಬಯಲಿಗೆಳೆದಿದ್ದಾರೆ.

ಸೋಂಕಿತರು ಗುಣಮುಖರಾದರೂ ಡಿಸ್ಚಾರ್ಜ್‌ಗೆ ಹಿಂದೇಟು ಹಾಕಲಾಗುತ್ತಿದೆಯಂತೆ. ಡಿಸ್ಚಾರ್ಜ್ ಮಾಡದೆ ಬೆದರಿಕೆ ಹಾಕಿರುವುದಾಗಿ ಆಕಾಶ್ ಆಸ್ಪತ್ರೆಯ ವಿರುದ್ಧ ಆರೋಪ ಮಾಡಿದ್ದಾರೆ. ಬಿಬಿಎಂಪಿ ಸೂಚನೆಯ ಮೇರೆಗೆ 15 ದಿನದ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದ ದಂಪತಿ ಕೊರೊನಾದಿಂದ ಗುಣಮುಖರಾಗಿದ್ದರು. ಅವರನ್ನ ಡಿಸ್ಚಾರ್ಜ್ ಮಾಡಬೇಕಾದ್ರೆ ₹2 ಲಕ್ಷ ಪಾವತಿಸಲು ಆಸ್ಪತ್ರೆ ಮಂಡಳಿ ಸೂಚಿಸಿದೆ.

ಹಣ ಪಾವತಿಸದಿದ್ದರೆ ರೂಮಿನಲ್ಲಿ ಕೂಡಿಹಾಕುವ ಬೆದರಿಕೆ ಹಾಕಿದೆ. ಕೊರೊನಾ ಸೋಂಕಿತ ಚಿಕಿತ್ಸೆಗೆ ಸರ್ಕಾರವೇ ಹಣ ಪಾವತಿಸುವುದಾಗಿ ದಂಪತಿ ಹೇಳಿದರೂ ಕೇಳಿಲ್ಲ. 2 ದಿನ ಆಸ್ಪತ್ರೆಯಲ್ಲೇ ಇಟ್ಟುಕೊಂಡು ಸತಾಯಿಸಲಾಗಿತ್ತು. ಬಳಿಕ ಡಿಹೆಚ್‌ಒಗೆ ಕರೆ ಮಾಡಿದ್ದಾರೆ. ಆಗ ಡಿಹೆಚ್‌ಒ ಸೂಚನೆ ಬಳಿಕ ಬೆಂಗಳೂರಿನ ದಂಪತಿಯನ್ನು ಡಿಸ್ಚಾರ್ಜ್ ಮಾಡಲಾಗಿದೆ.

ಆದ್ರೆ ಆಸ್ಪತ್ರೆಯ ಸಿಬ್ಬಂದಿ ಮಧ್ಯರಾತ್ರಿ ಅವರನ್ನು ಡಿಸ್ಚಾರ್ಜ್ ಮಾಡಿದ್ದಾರೆ. ಆ ಸಮಯದಲ್ಲಿ ವಾಹನ ವ್ಯವಸ್ಥೆ ಇಲ್ಲದೆ ದಂಪತಿ ತೀವ್ರ ಪರದಾಡಿದ್ದಾರೆ. ಆಸ್ಪತ್ರೆಯಿಂದ 4 ಕಿ.ಮೀ. ನಡೆದುಕೊಂಡು ಬಂದಿದ್ದಾರೆ. ಬಳಿಕ ಅಲ್ಲಿಂದ ವಾಹನದಲ್ಲಿ ಮನೆಗೆ ತೆರಳಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪಟ್ಟಣದ ಆಕಾಶ್ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ ಈಗ ಕೇಳಿ ಬಂದಿದೆ.

Published On - 8:24 am, Thu, 9 July 20

ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’