AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಲಹಂಕ ಬಳಿ ಭೂಕಬಳಿಕೆ ಆರೋಪ: ಪೇಚಿಗೆ ಸಿಲುಕಿದ ಕಾಂಗ್ರೆಸ್ ಮುಖಂಡ

ದೇವನಹಳ್ಳಿ: ಯಲಹಂಕ ಬಿಜೆಪಿ ಶಾಸಕ ವಿಶ್ವನಾಥ್ ಹಾಗೂ ನಟ ಪುನೀತ್ ರಾಜ್‌ಕುಮಾರ್ ವಿರುದ್ಧ ಭೂಕಬಳಿಕೆ ಆರೋಪ ಕೇಳಿ ಬಂದಿದೆ. ಅಧಿಕಾರ ಬಳಸಿ ಸರ್ಕಾರಿ ಜಮೀನು ಕಬಳಿಕೆ ಮಾಡಿದ್ದಾರೆ ಎಂದು ಯಲಹಂಕ ಕಾಂಗ್ರೆಸ್ ಮುಖಂಡರು ಮತ್ತು ರೈತಸಂಘ ಕಾರ್ಯಕರ್ತರು ಆರೋಪ ಮಾಡಿದ್ದಾರೆ. ಕಳೆದ ಸೋಮವಾರ ಶಾಸಕ ಮತ್ತು ನಟನ ವಿರುದ್ಧ ಆರೋಪಿಸಿ ಯಲಹಂಕ ಬಳಿಯ ಲಿಂಗರಾಜಪುರದಲ್ಲಿ ಪ್ರತಿಭಟನೆ ನಡೆಸಿದ್ದರು. ಲಿಂಗರಾಜಪುರ ಸರ್ವೆ ನಂ. 5ರ 8 ಎಕರೆ, ಮೈಲನಹಳ್ಳಿ ಸರ್ವೆ ನಂ. 25ರಲ್ಲಿ 10 ಎಕರೆ ಗೋಮಾಳ ಕಬಳಿಕೆ […]

ಯಲಹಂಕ ಬಳಿ ಭೂಕಬಳಿಕೆ ಆರೋಪ: ಪೇಚಿಗೆ ಸಿಲುಕಿದ ಕಾಂಗ್ರೆಸ್ ಮುಖಂಡ
Follow us
ಆಯೇಷಾ ಬಾನು
|

Updated on: Aug 13, 2020 | 11:05 AM

ದೇವನಹಳ್ಳಿ: ಯಲಹಂಕ ಬಿಜೆಪಿ ಶಾಸಕ ವಿಶ್ವನಾಥ್ ಹಾಗೂ ನಟ ಪುನೀತ್ ರಾಜ್‌ಕುಮಾರ್ ವಿರುದ್ಧ ಭೂಕಬಳಿಕೆ ಆರೋಪ ಕೇಳಿ ಬಂದಿದೆ. ಅಧಿಕಾರ ಬಳಸಿ ಸರ್ಕಾರಿ ಜಮೀನು ಕಬಳಿಕೆ ಮಾಡಿದ್ದಾರೆ ಎಂದು ಯಲಹಂಕ ಕಾಂಗ್ರೆಸ್ ಮುಖಂಡರು ಮತ್ತು ರೈತಸಂಘ ಕಾರ್ಯಕರ್ತರು ಆರೋಪ ಮಾಡಿದ್ದಾರೆ.

ಕಳೆದ ಸೋಮವಾರ ಶಾಸಕ ಮತ್ತು ನಟನ ವಿರುದ್ಧ ಆರೋಪಿಸಿ ಯಲಹಂಕ ಬಳಿಯ ಲಿಂಗರಾಜಪುರದಲ್ಲಿ ಪ್ರತಿಭಟನೆ ನಡೆಸಿದ್ದರು. ಲಿಂಗರಾಜಪುರ ಸರ್ವೆ ನಂ. 5ರ 8 ಎಕರೆ, ಮೈಲನಹಳ್ಳಿ ಸರ್ವೆ ನಂ. 25ರಲ್ಲಿ 10 ಎಕರೆ ಗೋಮಾಳ ಕಬಳಿಕೆ ಮಾಡಲಾಗಿದೆಯಂತೆ.

ನಕಲಿ ದಾಖಲೆ ಸೃಷ್ಟಿಸಿ ಶಾಸಕರ ಪತ್ನಿ ಹೆಸರಲ್ಲಿ 5 ಎಕರೆ, ನಟ ಪುನಿತ್ ರಾಜಕುಮಾರ್ ಪತ್ನಿ ಹೆಸರಲ್ಲಿ 5 ಎಕರೆ ಭೂಕಬಳಿಕೆ ಮಾಡಿರೋದಾಗಿ ಹೇಳಲಾಗುತ್ತಿದೆ. ಈ ಬಗ್ಗೆ ಸೂಕ್ತ ತನಿಖೆ ನಡೆಸಿ ಅಕ್ರಮ ಬಯಲಿಗೆಳೆಯುವಂತೆ ಕೈ ಮುಖಂಡರು ಮತ್ತು ರೈತಸಂಘ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು.

ಪೇಚಿಗೆ ಸಿಲುಕಿದ ಕಾಂಗ್ರೆಸ್ ಮುಖಂಡ ಆದರೆ ಜಮೀನಿನ ಖಾತೆದಾರರು ಆರೋಪವನ್ನ ತಳ್ಳಿ ಹಾಕಿದ್ದಾರೆ. ಜಮೀನನ್ನ ಕಡಿಮೆ ಬೆಲೆಗೆ ಕೊಡುವಂತೆ ಕೆಲವರು ಕಿರುಕುಳ ನೀಡಿದ್ರು ಜಮೀನು ಕೊಡದಿದ್ದಕ್ಕೆ ಸರ್ಕಾರಿ ಭೂಮಿ ಕಬಳಿಕೆ ಎಂದು ಆರೋಪ ಮಾಡಿದ್ದಾರೆ. ಇಲ್ಲಿ ಯಾವುದೇ ಅಕ್ರಮವಾಗಿಲ್ಲ ಎಂದು ಮೂಲ ರೈತರು ಸ್ಪಷ್ಟ ಪಡಿಸಿದ್ದಾರೆ. ಇತ್ತ ದಾಖಲೆ ಬಿಡುಗಡೆ ಮಾಡದೆ ರೈತಸಂಘ ಕಾರ್ಯಕರ್ತರು, ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ಪೇಚಿಗೆ ಸಿಲುಕಿದ್ದಾರೆ.

ಜಮೀನನ್ನ ಯಾರು ಬೇಕಾದ್ರೂ ಖರೀದಿ ಮಾಡಬಹುದು. ಹಿಡುವಳಿ ಜಮೀನಿಗೆ ಸೂಕ್ತ ದಾಖಲೆ ಕೊಟ್ಟು ಖರೀದಿಸಿದ್ದೇವೆ ಕಾಂಗ್ರೆಸ್ ಮುಖಂಡರು ಅರ್ಥವಿಲ್ಲದೆ ಆರೋಪ ಮಾಡ್ತಿದ್ದಾರೆ. ನಕಲಿ ದಾಖಲೆ ಸೃಷ್ಟಿಸಿ ಜಮೀನು ಕಬಳಿಸಿದ್ರೆ ತನಿಖೆ ಮಾಡಿಸಲಿ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಸ್. ಆರ್ ವಿಶ್ವನಾಥ್ ಸವಾಲು ಹಾಕಿದ್ದಾರೆ.

ರಚಿತಾ ರಾಮ್ ಮೇಲೆ ವಾಣಿಜ್ಯ ಮಂಡಳಿ ಅಧ್ಯಕ್ಷರು ಗರಂ; ಕಾರಣ ಏನು?
ರಚಿತಾ ರಾಮ್ ಮೇಲೆ ವಾಣಿಜ್ಯ ಮಂಡಳಿ ಅಧ್ಯಕ್ಷರು ಗರಂ; ಕಾರಣ ಏನು?
ಇಸ್ರೇಲ್‌ನಲ್ಲಿ ಇರಾನಿನ ಕ್ಷಿಪಣಿ ದಾಳಿಯ ಭೀಕರ ದೃಶ್ಯ ಇಲ್ಲಿದೆ
ಇಸ್ರೇಲ್‌ನಲ್ಲಿ ಇರಾನಿನ ಕ್ಷಿಪಣಿ ದಾಳಿಯ ಭೀಕರ ದೃಶ್ಯ ಇಲ್ಲಿದೆ
ಗವಾಸ್ಕರ್ ಎಷ್ಟೇ ಕೇಳಿಕೊಂಡರು ಜಗ್ಗದ ರಿಷಭ್ ಪಂತ್
ಗವಾಸ್ಕರ್ ಎಷ್ಟೇ ಕೇಳಿಕೊಂಡರು ಜಗ್ಗದ ರಿಷಭ್ ಪಂತ್
ಕೃಷ್ಣ ಭೈರೇಗೌಡ, ಹೆಚ್ ಕೆ ಪಾಟೀಲರನ್ನೂ ತರಾಟೆಗೆ ತೆಗೆದುಕೊಂಡ ಕುಮಾರಸ್ವಾಮಿ
ಕೃಷ್ಣ ಭೈರೇಗೌಡ, ಹೆಚ್ ಕೆ ಪಾಟೀಲರನ್ನೂ ತರಾಟೆಗೆ ತೆಗೆದುಕೊಂಡ ಕುಮಾರಸ್ವಾಮಿ
ರಾಜಕೀಯ ಪಿತೂರಿ, ಉಳಿದ ಸಂಗತಿಗಳ ಬಗ್ಗೆ ಈಗ್ಲೇ ಮಾತಾಡಲ್ಲ: ಡಿಕೆ ಸುರೇಶ್
ರಾಜಕೀಯ ಪಿತೂರಿ, ಉಳಿದ ಸಂಗತಿಗಳ ಬಗ್ಗೆ ಈಗ್ಲೇ ಮಾತಾಡಲ್ಲ: ಡಿಕೆ ಸುರೇಶ್
22 ಲಕ್ಷ ರೂ. ವಂಚನೆ: ನಿರ್ದೇಶಕ ನಂದ ಕಿಶೋರ್ ವಿರುದ್ಧ ದೂರು ನೀಡಿದ ಶಬರೀಶ್
22 ಲಕ್ಷ ರೂ. ವಂಚನೆ: ನಿರ್ದೇಶಕ ನಂದ ಕಿಶೋರ್ ವಿರುದ್ಧ ದೂರು ನೀಡಿದ ಶಬರೀಶ್
ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ ಮತ್ತೋರ್ವ ಕೈ ಶಾಸಕ
ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ ಮತ್ತೋರ್ವ ಕೈ ಶಾಸಕ
ವ್ಯಕ್ತಿ ಆರೋಪಿಸುತ್ತಿರೋದು ನಿಜವೇ ಆಗಿದ್ದರೆ ಅಧಿಕಾರಿಯಿಂದ ಅಪರಾಧ ನಡೆದಿದೆ
ವ್ಯಕ್ತಿ ಆರೋಪಿಸುತ್ತಿರೋದು ನಿಜವೇ ಆಗಿದ್ದರೆ ಅಧಿಕಾರಿಯಿಂದ ಅಪರಾಧ ನಡೆದಿದೆ
ಜಮೀರ್ ಜೊತೆ ಸಿಎಂ ಸಹ ನೈತಿಕ ಹೊಣೆಹೊತ್ತು ರಾಜೀನಾಮೆ ಸಲ್ಲಿಸಲಿ: ಅಶೋಕ
ಜಮೀರ್ ಜೊತೆ ಸಿಎಂ ಸಹ ನೈತಿಕ ಹೊಣೆಹೊತ್ತು ರಾಜೀನಾಮೆ ಸಲ್ಲಿಸಲಿ: ಅಶೋಕ
ಮೈ ಕೈ ಮುಟ್ಟಿ ಎಳೆದಾಡಿದ ಗಾಂಜಾ ಗ್ಯಾಂಗ್​, ಭಯಾನಕ ಸಂಗತಿ ಬಿಚ್ಚಿಟ್ಟ ಯುವತಿ
ಮೈ ಕೈ ಮುಟ್ಟಿ ಎಳೆದಾಡಿದ ಗಾಂಜಾ ಗ್ಯಾಂಗ್​, ಭಯಾನಕ ಸಂಗತಿ ಬಿಚ್ಚಿಟ್ಟ ಯುವತಿ