AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಲಹಂಕ ಬಳಿ ಭೂಕಬಳಿಕೆ ಆರೋಪ: ಪೇಚಿಗೆ ಸಿಲುಕಿದ ಕಾಂಗ್ರೆಸ್ ಮುಖಂಡ

ದೇವನಹಳ್ಳಿ: ಯಲಹಂಕ ಬಿಜೆಪಿ ಶಾಸಕ ವಿಶ್ವನಾಥ್ ಹಾಗೂ ನಟ ಪುನೀತ್ ರಾಜ್‌ಕುಮಾರ್ ವಿರುದ್ಧ ಭೂಕಬಳಿಕೆ ಆರೋಪ ಕೇಳಿ ಬಂದಿದೆ. ಅಧಿಕಾರ ಬಳಸಿ ಸರ್ಕಾರಿ ಜಮೀನು ಕಬಳಿಕೆ ಮಾಡಿದ್ದಾರೆ ಎಂದು ಯಲಹಂಕ ಕಾಂಗ್ರೆಸ್ ಮುಖಂಡರು ಮತ್ತು ರೈತಸಂಘ ಕಾರ್ಯಕರ್ತರು ಆರೋಪ ಮಾಡಿದ್ದಾರೆ. ಕಳೆದ ಸೋಮವಾರ ಶಾಸಕ ಮತ್ತು ನಟನ ವಿರುದ್ಧ ಆರೋಪಿಸಿ ಯಲಹಂಕ ಬಳಿಯ ಲಿಂಗರಾಜಪುರದಲ್ಲಿ ಪ್ರತಿಭಟನೆ ನಡೆಸಿದ್ದರು. ಲಿಂಗರಾಜಪುರ ಸರ್ವೆ ನಂ. 5ರ 8 ಎಕರೆ, ಮೈಲನಹಳ್ಳಿ ಸರ್ವೆ ನಂ. 25ರಲ್ಲಿ 10 ಎಕರೆ ಗೋಮಾಳ ಕಬಳಿಕೆ […]

ಯಲಹಂಕ ಬಳಿ ಭೂಕಬಳಿಕೆ ಆರೋಪ: ಪೇಚಿಗೆ ಸಿಲುಕಿದ ಕಾಂಗ್ರೆಸ್ ಮುಖಂಡ
ಆಯೇಷಾ ಬಾನು
|

Updated on: Aug 13, 2020 | 11:05 AM

Share

ದೇವನಹಳ್ಳಿ: ಯಲಹಂಕ ಬಿಜೆಪಿ ಶಾಸಕ ವಿಶ್ವನಾಥ್ ಹಾಗೂ ನಟ ಪುನೀತ್ ರಾಜ್‌ಕುಮಾರ್ ವಿರುದ್ಧ ಭೂಕಬಳಿಕೆ ಆರೋಪ ಕೇಳಿ ಬಂದಿದೆ. ಅಧಿಕಾರ ಬಳಸಿ ಸರ್ಕಾರಿ ಜಮೀನು ಕಬಳಿಕೆ ಮಾಡಿದ್ದಾರೆ ಎಂದು ಯಲಹಂಕ ಕಾಂಗ್ರೆಸ್ ಮುಖಂಡರು ಮತ್ತು ರೈತಸಂಘ ಕಾರ್ಯಕರ್ತರು ಆರೋಪ ಮಾಡಿದ್ದಾರೆ.

ಕಳೆದ ಸೋಮವಾರ ಶಾಸಕ ಮತ್ತು ನಟನ ವಿರುದ್ಧ ಆರೋಪಿಸಿ ಯಲಹಂಕ ಬಳಿಯ ಲಿಂಗರಾಜಪುರದಲ್ಲಿ ಪ್ರತಿಭಟನೆ ನಡೆಸಿದ್ದರು. ಲಿಂಗರಾಜಪುರ ಸರ್ವೆ ನಂ. 5ರ 8 ಎಕರೆ, ಮೈಲನಹಳ್ಳಿ ಸರ್ವೆ ನಂ. 25ರಲ್ಲಿ 10 ಎಕರೆ ಗೋಮಾಳ ಕಬಳಿಕೆ ಮಾಡಲಾಗಿದೆಯಂತೆ.

ನಕಲಿ ದಾಖಲೆ ಸೃಷ್ಟಿಸಿ ಶಾಸಕರ ಪತ್ನಿ ಹೆಸರಲ್ಲಿ 5 ಎಕರೆ, ನಟ ಪುನಿತ್ ರಾಜಕುಮಾರ್ ಪತ್ನಿ ಹೆಸರಲ್ಲಿ 5 ಎಕರೆ ಭೂಕಬಳಿಕೆ ಮಾಡಿರೋದಾಗಿ ಹೇಳಲಾಗುತ್ತಿದೆ. ಈ ಬಗ್ಗೆ ಸೂಕ್ತ ತನಿಖೆ ನಡೆಸಿ ಅಕ್ರಮ ಬಯಲಿಗೆಳೆಯುವಂತೆ ಕೈ ಮುಖಂಡರು ಮತ್ತು ರೈತಸಂಘ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು.

ಪೇಚಿಗೆ ಸಿಲುಕಿದ ಕಾಂಗ್ರೆಸ್ ಮುಖಂಡ ಆದರೆ ಜಮೀನಿನ ಖಾತೆದಾರರು ಆರೋಪವನ್ನ ತಳ್ಳಿ ಹಾಕಿದ್ದಾರೆ. ಜಮೀನನ್ನ ಕಡಿಮೆ ಬೆಲೆಗೆ ಕೊಡುವಂತೆ ಕೆಲವರು ಕಿರುಕುಳ ನೀಡಿದ್ರು ಜಮೀನು ಕೊಡದಿದ್ದಕ್ಕೆ ಸರ್ಕಾರಿ ಭೂಮಿ ಕಬಳಿಕೆ ಎಂದು ಆರೋಪ ಮಾಡಿದ್ದಾರೆ. ಇಲ್ಲಿ ಯಾವುದೇ ಅಕ್ರಮವಾಗಿಲ್ಲ ಎಂದು ಮೂಲ ರೈತರು ಸ್ಪಷ್ಟ ಪಡಿಸಿದ್ದಾರೆ. ಇತ್ತ ದಾಖಲೆ ಬಿಡುಗಡೆ ಮಾಡದೆ ರೈತಸಂಘ ಕಾರ್ಯಕರ್ತರು, ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ಪೇಚಿಗೆ ಸಿಲುಕಿದ್ದಾರೆ.

ಜಮೀನನ್ನ ಯಾರು ಬೇಕಾದ್ರೂ ಖರೀದಿ ಮಾಡಬಹುದು. ಹಿಡುವಳಿ ಜಮೀನಿಗೆ ಸೂಕ್ತ ದಾಖಲೆ ಕೊಟ್ಟು ಖರೀದಿಸಿದ್ದೇವೆ ಕಾಂಗ್ರೆಸ್ ಮುಖಂಡರು ಅರ್ಥವಿಲ್ಲದೆ ಆರೋಪ ಮಾಡ್ತಿದ್ದಾರೆ. ನಕಲಿ ದಾಖಲೆ ಸೃಷ್ಟಿಸಿ ಜಮೀನು ಕಬಳಿಸಿದ್ರೆ ತನಿಖೆ ಮಾಡಿಸಲಿ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಸ್. ಆರ್ ವಿಶ್ವನಾಥ್ ಸವಾಲು ಹಾಕಿದ್ದಾರೆ.

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ