AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರದಲ್ಲಿ ಮತ್ತೆ ಪ್ರತಿಧ್ವನಿಸಿದ ವರ್ಗಾವಣೆ ದಂಧೆ ಆರೋಪ; ಸಚಿವ ಆರ್.ಬಿ.ತಿಮ್ಮಾಪುರ ವಿರುದ್ಧ ಇಡಿಗೆ ದೂರು

ಸಚಿವ ತಿಮ್ಮಾಪುರ ಅವರು ಲೋಕಸಭಾ ಚುನಾವಣೆಗೆ ಹಣ ಹೊಂದಿಸಲು ಇಲಾಖಾಧಿಕಾರಿಗಳ ವರ್ಗಾವಣೆಗೆ ಲಂಚ ಸ್ವೀಕರಿಸಿದ್ದಾರೆ. ವರ್ಗಾವಣೆ ಹೆಸರಿನಲ್ಲಿ ದಂಧೆ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಅವರು ಜಾರಿ ನಿರ್ದೇಶನಾಲಯಕ್ಕೆ ದೂರು ಸಲ್ಲಿಸಿದ್ದಾರೆ.

ಸರ್ಕಾರದಲ್ಲಿ ಮತ್ತೆ ಪ್ರತಿಧ್ವನಿಸಿದ ವರ್ಗಾವಣೆ ದಂಧೆ ಆರೋಪ; ಸಚಿವ ಆರ್.ಬಿ.ತಿಮ್ಮಾಪುರ ವಿರುದ್ಧ ಇಡಿಗೆ ದೂರು
ಸಚಿವ ಆರ್.ಬಿ.ತಿಮ್ಮಾಪುರ
ಪ್ರಸನ್ನ ಗಾಂವ್ಕರ್​
| Edited By: |

Updated on:Jan 23, 2024 | 7:23 AM

Share

ಬೆಂಗಳೂರು, ಜ.23: ರಾಜ್ಯ ಸರ್ಕಾರದಲ್ಲಿ ಮತ್ತೆ ವರ್ಗಾವಣೆ ದಂಧೆ ಆರೋಪ ಪ್ರತಿಧ್ವನಿಸಿದೆ. ಅಬಕಾರಿ ಖಾತೆ ಸಚಿವ ಆರ್.ಬಿ.ತಿಮ್ಮಾಪುರ (RB Thimmapur) ವಿರುದ್ಧ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ (Dinesh Kallahalli) ಅವರು ಜಾರಿ ನಿರ್ದೇಶನಾಲಯಕ್ಕೆ (Enforcement Directorate) ದೂರು ಸಲ್ಲಿಸಿದ್ದಾರೆ. ಅಬಕಾರಿ ಇಲಾಖೆ ಡಿಸಿ, ಡಿವೈಎಸ್​ಪಿಗಳಿಂದ ಹಣ ಪಡೆದು ವರ್ಗಾವಣೆ ದಂಧೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ದೂರು ಸಲ್ಲಿಸಿದ್ದಾರೆ.

ಸಚಿವ ತಿಮ್ಮಾಪುರ ಅವರು ಲೋಕಸಭಾ ಚುನಾವಣೆಗೆ ಹಣ ಹೊಂದಿಸಲು ಇಲಾಖಾಧಿಕಾರಿಗಳ ವರ್ಗಾವಣೆಗೆ ಲಂಚ ಸ್ವೀಕರಿಸಿದ್ದಾರೆ. ವರ್ಗಾವಣೆ ಹೆಸರಿನಲ್ಲಿ ದಂಧೆ ನಡೆಸುತ್ತಿದ್ದಾರೆ. ಇಲ್ಲಿವರೆಗೆ 18 ಕೋಟಿ ಲಂಚ ಸ್ವೀಕರಿಸಿದ್ದಾರೆ. ಲಂಚದ ಹಣದಲ್ಲಿ ಸಚಿವರಿಗೆ ಸಿಂಹಪಾಲು ನೀಡಲಾಗಿದೆ. 18 ಕೋಟಿ ಹಣದಲ್ಲಿ 13 ಕೋಟಿ ಸಚಿವರ ಖಾತೆಗೆ ಬಿದ್ದಿದೆ. ಉಳಿದ ಹಣ ಸಹಾಯಕ ಕಾರ್ಯದರ್ಶಿ ಸೇರಿದಂತೆ ಕೋಲಾರ ಅಬಕಾರಿ ಡಿಸಿ ಬಸವರಾಜ ಸಂದಿಗ್ವಾಡ್, ರಂಗಪ್ಪ, ಬೆಂಗಳೂರು ದಕ್ಷಿಣ ಅಬಕಾರಿ ಡಿಸಿ ವಿವೇಕ್ ಖಾತೆಗೆ ತಲುಪಿದೆ ಎಂದು ದಿನೇಶ್ ಕಲ್ಲಹಳ್ಳಿ ಅವರು ದೂರಿನಲ್ಲಿ ಗಂಭೀರ ಆರೋಪ ಮಾಡಿದ್ದಾರೆ.

ಲಂಚದ ಹಣದಲ್ಲಿ ಅಧಿಕಾರಿಗಳು ಸಹ ಶಾಮೀಲಾಗಿದ್ದಾರೆ. ಅಬಕಾರಿ ಸಚಿವರ ಲಂಚಾವತಾರಕ್ಕೆ ಸರ್ಕಾರ ಕುಮ್ಮಕ್ಕು ನೀಡುತ್ತಿದೆ. ಜಾರಿ ನಿರ್ದೇಶನಾಲಯ ಅಧಿಕಾರಿಗಳು ಸೂಕ್ತ ತನಿಖೆ ನಡೆಸಬೇಕು. ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕೆಂದು ಇಡಿಗೆ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ದೂರು ನೀಡಿ ಕ್ರಮಕ್ಕೆ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಜೈ ಶ್ರೀರಾಮ್ ಎಂದ ಸಿದ್ದರಾಮಯ್ಯ; ಕೆಟ್ಟ ಮೇಲೆ ಬುದ್ಧಿ ಬಂದಂತಾಗಿದೆ ಎಂದ ಕೆಎಸ್ ಈಶ್ವರಪ್ಪ

ಲಂಚ ಸ್ವೀಕರಿಸುತ್ತಿದ್ದ ಜೆಸ್ಕಾಂ AEE ‘ಲೋಕಾ’ ಬಲೆಗೆ

ಐದು ಸಾವಿರ ರೂಪಾಯಿ ಲಂಚ ಸ್ವೀಕರಿಸುವಾಗ ಜೆಸ್ಕಾಂ AEE ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ರಾಯಚೂರು ಜಿಲ್ಲೆ ಲಿಂಗಸುಗೂರಿನ ಜೆಸ್ಕಾಂ ಕಚೇರಿ ಮೇಲೆ ಲೋಕಾಯುಕ್ತ ದಾಳಿ ನಡೆಸಿತ್ತು. ಜೆಸ್ಕಾಂ ಎಇಇ ಕೆಂಚಪ್ಪ ಅರೆಸ್ಟ್ ಆಗಿದ್ದು, ಜೆಸ್ಕಾಂ ಗುತ್ತಿಗೆದಾರ ನಾಯಕ್​ನಿಂದ 10 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದ. ಫೋನ್​ಪೇ ಮೂಲಕ 5 ಸಾವಿರ ರೂ. ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ರು.

ಇಂದು 545 ಪಿಎಸ್ಐ ನೇಮಕಾತಿ ಮರು ಪರೀಕ್ಷೆ

ಬೆಂಗಳೂರಿನಲ್ಲಿಂದು 545 ಪಿಎಸ್ಐ ನೇಮಕಾತಿ ಮರು ಪರೀಕ್ಷೆ ನಡೆಯಲಿದೆ. ಬೆಂಗಳೂರಿನಲ್ಲಿ 117 ಕೇಂದ್ರಗಳಲ್ಲಿ ಮರುಪರೀಕ್ಷೆ ನಿಗಧಿಯಾಗಿದ್ದು, ಪರೀಕ್ಷಾ ಕೇಂದ್ರಗಳ 200 ಮೀಟರ್ ಸುತ್ತಮುತ್ತ ನಿಷೇಧಾಜ್ಞೆ ಜಾರಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಬೆಳಗ್ಗೆ 7 ಗಂಟೆಯಿಂದ ಪರೀಕ್ಷೆ ಮುಗಿಯುವವರೆಗೆ ಜೆರಾಕ್ಸ್‌ ಅಂಗಡಿ ಬಂದ್ ಮಾಡುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಆದೇಶಿಸಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:20 am, Tue, 23 January 24

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ