AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಲ್ಕೈದು ಸರ್ವೆ ನಡೆದ್ರೂ ಆಂಧ್ರ-ಕರ್ನಾಟಕ ಗಡಿ ಗುರುತು ಸಿಕ್ಕಿಲ್ಲ.. ಅನುಮಾನಕ್ಕೆ ಕಾರಣವಾದ ಅಧಿಕಾರಿಗಳ ನಡೆ

ಕರ್ನಾಟಕ-ಆಂಧ್ರ ಪ್ರದೇಶದ ಗಡಿ ಗುರುತು ಒತ್ತುವರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಗಡಿ ಗುರುತು ಪತ್ತೆ ಹಚ್ಚುವ ದಶಕದಿಂದಲೂ ಕಗ್ಗಂಟ್ಟಾಗಿ ಉಳಿದಿದೆ. ಇದುವರೆಗೆ ನಾಲ್ಕೈದು ಸರ್ವೆಗಳು ನಡೆದ್ರೂ ಇದುವರೆಗೆ ಆಂಧ್ರ-ಕರ್ನಾಟಕ ಗಡಿ ಗುರುತು ಪತ್ತೆ ಹಚ್ಚಲು ಸಾಧ್ಯವಾಗದಿರುವುದು ಹಲವು ಅನುಮಾನಗಳನ್ನು ಹುಟ್ಟುಹಾಕಿದೆ.

ನಾಲ್ಕೈದು ಸರ್ವೆ ನಡೆದ್ರೂ ಆಂಧ್ರ-ಕರ್ನಾಟಕ ಗಡಿ ಗುರುತು ಸಿಕ್ಕಿಲ್ಲ.. ಅನುಮಾನಕ್ಕೆ ಕಾರಣವಾದ ಅಧಿಕಾರಿಗಳ ನಡೆ
ಆಯೇಷಾ ಬಾನು
|

Updated on: Dec 23, 2020 | 7:28 AM

Share

ಬಳ್ಳಾರಿ: ಗಣಿಗಾರಿಕೆ. ಆಂಧ್ರ-ಕರ್ನಾಟಕ ಭಾಗದ ಗಡಿ ಪ್ರದೇಶದಲ್ಲಿ ಎಗ್ಗಿಲ್ಲದೇ ನಡೆಯುತ್ತಿತ್ತು. ಹೀಗೆ ಅಕ್ರಮ ಗಣಿಗಾರಿಕೆ ಉತ್ತುಂಗದಲ್ಲಿ ನಡೆಯುತ್ತಿರುವಾಗ ಕೆಲ ಗಣಿ ಕಂಪನಿಗಳು ಕರ್ನಾಟಕ-ಆಂಧ್ರ ಗಡಿ ಒತ್ತುವರಿ ಮಾಡಿ ಗಣಿಗಾರಿಕೆ ನಡೆಸಿದ ಆರೋಪಗಳು ಕೇಳಿ ಬಂದಿದ್ದವು. ಹೀಗಾಗಿ ಗಡಿ ಒತ್ತುವರಿ ಮಾಡಿಕೊಂಡಿರುವುದನ್ನ ಪತ್ತೆ ಹಚ್ಚಿ ಗಡಿ ಗುರುತಿಸಬೇಕು ಅಂತಾ ಒಂದು ದಶಕದಿಂದಲೂ ಹೋರಾಟ ನಡೆಯುತ್ತಲೇ ಇತ್ತು.

ಈ ಹಿಂದೆ ಲೋಕಾಯುಕ್ತ ವರದಿಯಲ್ಲೂ ಕೆಲ ಗಣಿ ಕಂಪನಿಗಳು ಗಡಿ ಒತ್ತುವರಿ ಮಾಡಿಕೊಂಡಿರುವ ಬಗ್ಗೆ ಉಲ್ಲೇಖ ಮಾಡಲಾಗಿತ್ತು. ಜೊತೆಗೆ ಸಿಇಸಿ ಕೂಡ ಜಂಟಿ ಸರ್ವೆ ನಡೆಸಿತ್ತು. ಆದ್ರೆ ಗಡಿ ಗುರುತು ಪತ್ತೆ ಹಚ್ಚಿರಲಿಲ್ಲ. ಆಗ ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿದ ಸುಪ್ರೀಂಕೋರ್ಟ್ ಜಂಟಿ ಸರ್ವೆ ನಡೆಸುವಂತೆ ಎರಡು ರಾಜ್ಯದ ಅಧಿಕಾರಿಗಳಿಗೆ ಆದೇಶ ಮಾಡಿತ್ತು. ಈ ಹಿನ್ನೆಲೆಯಲ್ಲಿ ಡೆಹ್ರಾಡೂನ್‌ನಿಂದ 20 ಕ್ಕೂ ಹೆಚ್ಚು ಸರ್ವೆ ಅಧಿಕಾರಿಗಳು, ಎರಡು ರಾಜ್ಯಗಳಿಂದ ಸರ್ವೆ ಅಧಿಕಾರಿಗಳು, ಅರಣ್ಯಾಧಿಕಾರಿಗಳ ಜೊತೆಗೆ ಸ್ಥಳೀಯ ಅಧಿಕಾರಿಗಳು ಕೂಡ ಸರ್ವೆ ನಡೆಸಿ ವರದಿ ಸಲ್ಲಿಸಿದ್ರು.

ಅನುಮಾನಕ್ಕೆ ಎಡೆಯಾದ ಅಧಿಕಾರಿಗಳ ನಡೆ: ಆದರೂ ಕೂಡ ನಿಖರವಾಗಿ ಗಡಿ ಗುರುತು ಪತ್ತೆ ಹಚ್ಚಲು ಸಾಧ್ಯವಾಗಿರಲಿಲ್ಲ. ಈಗ ಮತ್ತೊಮ್ಮೆ ಸುಪ್ರೀಂಕೋರ್ಟ್ ಸರ್ವೆ ಆಫ್ ಇಂಡಿಯಾದ ಅಧಿಕಾರಿಗಳಿಗೆ ಗಡಿ ಗುರುತು ಪತ್ತೆ ಹಚ್ಚುವಂತೆ ನಿರ್ದೇಶನ ನೀಡಿದೆ. ಈಗಾಗಲೇ ಅಧಿಕಾರಿಗಳು 1896ರ ನಕ್ಷೆ ಪ್ರಕಾರ ಸರ್ವೆ ಮಾಡಿ ವಾಪಾಸ್ ಆಗಿದ್ದಾರೆ. ಆದ್ರೆ ಅಧಿಕಾರಿಗಳ ಸರ್ವೇಗೆ ಒಪ್ಪದ ದೂರುದಾರ ಟಪಾಲ್ ಗಣೇಶ್, 1887ರ ನಕ್ಷೆಯ ಪ್ರಕಾರವೇ ಗಡಿ ಗುರುತು ಗುರುತಿಸುವ ಕಾರ್ಯ ಆಗಬೇಕಿದೆ ಎಂದು ಒತ್ತಾಯಿಸಿದ್ದಾರೆ.

ಸರ್ವೆ ಆಫ್ ಇಂಡಿಯಾದ ಅಧಿಕಾರಿಗಳಿಗೆ ಬಳ್ಳಾರಿ ಜಿಲ್ಲಾಧಿಕಾರಿ ಐದು ಪತ್ರಗಳನ್ನ ಬರೆದಿದ್ದಾರೆ. ಯಾವ ಆಧಾರದ ಮೇಲೆ ಸರ್ವೆ ನಡೆಸಲಾಗುತ್ತಿದೆ. ಜೊತೆಗೆ ಹಿಂದಿನ ಸ್ಕೆಚ್ ಗಳನ್ನ ನೀಡುವಂತೆ ಪತ್ರ ಬರೆದಿದ್ದಾರೆ. ಆದ್ರೆ ಇದುವರೆಗೆ ಸರ್ವೆ ಆಫ್ ಇಂಡಿಯಾದ ಅಧಿಕಾರಿಗಳಿಂದ ಉತ್ತರ ಬಂದಿಲ್ಲವಂತೆ. ಕಳೆದ 10-12 ವರ್ಷಗಳಿಂದಲೂ ಸರ್ವೆ ಆಫ್ ಇಂಡಿಯಾದ ಅಧಿಕಾರಿಗಳು ಸಮರ್ಪಕವಾಗಿ ಸರ್ವೆ ನಡೆಸಿ ಆಂಧ್ರ-ಕರ್ನಾಟಕ ಗಡಿ ಗುರುತು ಪತ್ತೆ ಹಚ್ಚುವುದು ಬಿಟ್ಟು ಕೇವಲ ವಿಳಂಬ ಮಾಡುತ್ತಿದ್ದಾರೆ. ಹೀಗಾಗಿ ಸರ್ವೆ ಆಫ್ ಇಂಡಿಯಾದ ಅಧಿಕಾರಿಗಳು ಒತ್ತಡಕ್ಕೆ ಮಣಿದಿದ್ದಾರೆ ಅನ್ನೋ ಆರೋಪ ಕೇಳಿ ಬರುತ್ತಿದೆ.

ಕರ್ನಾಟಕ-ಆಂಧ್ರ ಗಡಿ ಗುರುತು ಸರ್ವೆ ಕಾರ್ಯ ಕಳೆದ ಒಂದು ದಶಕದಿಂದಲೂ ವಿಳಂಬ ಯಾಕೆ ಆಗುತ್ತಿದೆ ಅನ್ನೋದೇ ಯಕ್ಷ ಪ್ರಶ್ನೆಯಾಗಿದೆ. ಸುಪ್ರೀಂ ಆದೇಶದ ನಂತರವೂ ಅಧಿಕಾರಿಗಳು ಸರ್ವೆ ಪೂರ್ಣಗೊಳಿಸದೇ ವಾಪಾಸ್ ಹೋಗಿರುವುದು ಅಚ್ಚರಿ ತಂದಿದೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ