AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಲ್ಕೈದು ಸರ್ವೆ ನಡೆದ್ರೂ ಆಂಧ್ರ-ಕರ್ನಾಟಕ ಗಡಿ ಗುರುತು ಸಿಕ್ಕಿಲ್ಲ.. ಅನುಮಾನಕ್ಕೆ ಕಾರಣವಾದ ಅಧಿಕಾರಿಗಳ ನಡೆ

ಕರ್ನಾಟಕ-ಆಂಧ್ರ ಪ್ರದೇಶದ ಗಡಿ ಗುರುತು ಒತ್ತುವರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಗಡಿ ಗುರುತು ಪತ್ತೆ ಹಚ್ಚುವ ದಶಕದಿಂದಲೂ ಕಗ್ಗಂಟ್ಟಾಗಿ ಉಳಿದಿದೆ. ಇದುವರೆಗೆ ನಾಲ್ಕೈದು ಸರ್ವೆಗಳು ನಡೆದ್ರೂ ಇದುವರೆಗೆ ಆಂಧ್ರ-ಕರ್ನಾಟಕ ಗಡಿ ಗುರುತು ಪತ್ತೆ ಹಚ್ಚಲು ಸಾಧ್ಯವಾಗದಿರುವುದು ಹಲವು ಅನುಮಾನಗಳನ್ನು ಹುಟ್ಟುಹಾಕಿದೆ.

ನಾಲ್ಕೈದು ಸರ್ವೆ ನಡೆದ್ರೂ ಆಂಧ್ರ-ಕರ್ನಾಟಕ ಗಡಿ ಗುರುತು ಸಿಕ್ಕಿಲ್ಲ.. ಅನುಮಾನಕ್ಕೆ ಕಾರಣವಾದ ಅಧಿಕಾರಿಗಳ ನಡೆ
ಆಯೇಷಾ ಬಾನು
|

Updated on: Dec 23, 2020 | 7:28 AM

Share

ಬಳ್ಳಾರಿ: ಗಣಿಗಾರಿಕೆ. ಆಂಧ್ರ-ಕರ್ನಾಟಕ ಭಾಗದ ಗಡಿ ಪ್ರದೇಶದಲ್ಲಿ ಎಗ್ಗಿಲ್ಲದೇ ನಡೆಯುತ್ತಿತ್ತು. ಹೀಗೆ ಅಕ್ರಮ ಗಣಿಗಾರಿಕೆ ಉತ್ತುಂಗದಲ್ಲಿ ನಡೆಯುತ್ತಿರುವಾಗ ಕೆಲ ಗಣಿ ಕಂಪನಿಗಳು ಕರ್ನಾಟಕ-ಆಂಧ್ರ ಗಡಿ ಒತ್ತುವರಿ ಮಾಡಿ ಗಣಿಗಾರಿಕೆ ನಡೆಸಿದ ಆರೋಪಗಳು ಕೇಳಿ ಬಂದಿದ್ದವು. ಹೀಗಾಗಿ ಗಡಿ ಒತ್ತುವರಿ ಮಾಡಿಕೊಂಡಿರುವುದನ್ನ ಪತ್ತೆ ಹಚ್ಚಿ ಗಡಿ ಗುರುತಿಸಬೇಕು ಅಂತಾ ಒಂದು ದಶಕದಿಂದಲೂ ಹೋರಾಟ ನಡೆಯುತ್ತಲೇ ಇತ್ತು.

ಈ ಹಿಂದೆ ಲೋಕಾಯುಕ್ತ ವರದಿಯಲ್ಲೂ ಕೆಲ ಗಣಿ ಕಂಪನಿಗಳು ಗಡಿ ಒತ್ತುವರಿ ಮಾಡಿಕೊಂಡಿರುವ ಬಗ್ಗೆ ಉಲ್ಲೇಖ ಮಾಡಲಾಗಿತ್ತು. ಜೊತೆಗೆ ಸಿಇಸಿ ಕೂಡ ಜಂಟಿ ಸರ್ವೆ ನಡೆಸಿತ್ತು. ಆದ್ರೆ ಗಡಿ ಗುರುತು ಪತ್ತೆ ಹಚ್ಚಿರಲಿಲ್ಲ. ಆಗ ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿದ ಸುಪ್ರೀಂಕೋರ್ಟ್ ಜಂಟಿ ಸರ್ವೆ ನಡೆಸುವಂತೆ ಎರಡು ರಾಜ್ಯದ ಅಧಿಕಾರಿಗಳಿಗೆ ಆದೇಶ ಮಾಡಿತ್ತು. ಈ ಹಿನ್ನೆಲೆಯಲ್ಲಿ ಡೆಹ್ರಾಡೂನ್‌ನಿಂದ 20 ಕ್ಕೂ ಹೆಚ್ಚು ಸರ್ವೆ ಅಧಿಕಾರಿಗಳು, ಎರಡು ರಾಜ್ಯಗಳಿಂದ ಸರ್ವೆ ಅಧಿಕಾರಿಗಳು, ಅರಣ್ಯಾಧಿಕಾರಿಗಳ ಜೊತೆಗೆ ಸ್ಥಳೀಯ ಅಧಿಕಾರಿಗಳು ಕೂಡ ಸರ್ವೆ ನಡೆಸಿ ವರದಿ ಸಲ್ಲಿಸಿದ್ರು.

ಅನುಮಾನಕ್ಕೆ ಎಡೆಯಾದ ಅಧಿಕಾರಿಗಳ ನಡೆ: ಆದರೂ ಕೂಡ ನಿಖರವಾಗಿ ಗಡಿ ಗುರುತು ಪತ್ತೆ ಹಚ್ಚಲು ಸಾಧ್ಯವಾಗಿರಲಿಲ್ಲ. ಈಗ ಮತ್ತೊಮ್ಮೆ ಸುಪ್ರೀಂಕೋರ್ಟ್ ಸರ್ವೆ ಆಫ್ ಇಂಡಿಯಾದ ಅಧಿಕಾರಿಗಳಿಗೆ ಗಡಿ ಗುರುತು ಪತ್ತೆ ಹಚ್ಚುವಂತೆ ನಿರ್ದೇಶನ ನೀಡಿದೆ. ಈಗಾಗಲೇ ಅಧಿಕಾರಿಗಳು 1896ರ ನಕ್ಷೆ ಪ್ರಕಾರ ಸರ್ವೆ ಮಾಡಿ ವಾಪಾಸ್ ಆಗಿದ್ದಾರೆ. ಆದ್ರೆ ಅಧಿಕಾರಿಗಳ ಸರ್ವೇಗೆ ಒಪ್ಪದ ದೂರುದಾರ ಟಪಾಲ್ ಗಣೇಶ್, 1887ರ ನಕ್ಷೆಯ ಪ್ರಕಾರವೇ ಗಡಿ ಗುರುತು ಗುರುತಿಸುವ ಕಾರ್ಯ ಆಗಬೇಕಿದೆ ಎಂದು ಒತ್ತಾಯಿಸಿದ್ದಾರೆ.

ಸರ್ವೆ ಆಫ್ ಇಂಡಿಯಾದ ಅಧಿಕಾರಿಗಳಿಗೆ ಬಳ್ಳಾರಿ ಜಿಲ್ಲಾಧಿಕಾರಿ ಐದು ಪತ್ರಗಳನ್ನ ಬರೆದಿದ್ದಾರೆ. ಯಾವ ಆಧಾರದ ಮೇಲೆ ಸರ್ವೆ ನಡೆಸಲಾಗುತ್ತಿದೆ. ಜೊತೆಗೆ ಹಿಂದಿನ ಸ್ಕೆಚ್ ಗಳನ್ನ ನೀಡುವಂತೆ ಪತ್ರ ಬರೆದಿದ್ದಾರೆ. ಆದ್ರೆ ಇದುವರೆಗೆ ಸರ್ವೆ ಆಫ್ ಇಂಡಿಯಾದ ಅಧಿಕಾರಿಗಳಿಂದ ಉತ್ತರ ಬಂದಿಲ್ಲವಂತೆ. ಕಳೆದ 10-12 ವರ್ಷಗಳಿಂದಲೂ ಸರ್ವೆ ಆಫ್ ಇಂಡಿಯಾದ ಅಧಿಕಾರಿಗಳು ಸಮರ್ಪಕವಾಗಿ ಸರ್ವೆ ನಡೆಸಿ ಆಂಧ್ರ-ಕರ್ನಾಟಕ ಗಡಿ ಗುರುತು ಪತ್ತೆ ಹಚ್ಚುವುದು ಬಿಟ್ಟು ಕೇವಲ ವಿಳಂಬ ಮಾಡುತ್ತಿದ್ದಾರೆ. ಹೀಗಾಗಿ ಸರ್ವೆ ಆಫ್ ಇಂಡಿಯಾದ ಅಧಿಕಾರಿಗಳು ಒತ್ತಡಕ್ಕೆ ಮಣಿದಿದ್ದಾರೆ ಅನ್ನೋ ಆರೋಪ ಕೇಳಿ ಬರುತ್ತಿದೆ.

ಕರ್ನಾಟಕ-ಆಂಧ್ರ ಗಡಿ ಗುರುತು ಸರ್ವೆ ಕಾರ್ಯ ಕಳೆದ ಒಂದು ದಶಕದಿಂದಲೂ ವಿಳಂಬ ಯಾಕೆ ಆಗುತ್ತಿದೆ ಅನ್ನೋದೇ ಯಕ್ಷ ಪ್ರಶ್ನೆಯಾಗಿದೆ. ಸುಪ್ರೀಂ ಆದೇಶದ ನಂತರವೂ ಅಧಿಕಾರಿಗಳು ಸರ್ವೆ ಪೂರ್ಣಗೊಳಿಸದೇ ವಾಪಾಸ್ ಹೋಗಿರುವುದು ಅಚ್ಚರಿ ತಂದಿದೆ.

Follow Us
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ