AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಮಾನವ ಕಳ್ಳ ಸಾಗಣೆ ಆರೋಪ: ಎನ್​​ಸಿಪಿಸಿಆರ್​​ ಅಧಿಕಾರಿಗಳ ದಾಳಿ ವೇಳೆ 20 ಬಾಲಕಿಯರು ಪತ್ತೆ

ಬೆಂಗಳೂರಿನಲ್ಲಿ ಅಕ್ರಮ ಅನಾಥಾಶ್ರಮದ ಮೇಲೆ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ದಾಳಿ ಮಾಡಿದ್ದು, ಈ ವೇಳೆ ಆಘಾತಕಾರಿ ಮಾಹಿತಿ ಬೆಳಕಿಗೆ ಬಂದಿದೆ. ಮಾನವ ಕಳ್ಳ ಸಾಗಣೆ ಆರೋಪ ಕೇಳಿಬಂದಿದೆ. ಈ ಹಿನ್ನೆಲೆ ದಾಳಿ ಮಾಡಿದ್ದು, 20 ಬಾಲಕಿಯರು ಪತ್ತೆ ಆಗಿದ್ದಾರೆ. ಪತ್ತೆಯಾದವರನ್ನು ಗಲ್ಫ್​ ರಾಷ್ಟ್ರಗಳಿಗೆ ಸಾಗಿಸಲಾಗುತ್ತಿದೆ ಎಂದು ಆರೋಪಿಸಲಾಗಿದೆ.

ಬೆಂಗಳೂರಿನಲ್ಲಿ ಮಾನವ ಕಳ್ಳ ಸಾಗಣೆ ಆರೋಪ: ಎನ್​​ಸಿಪಿಸಿಆರ್​​ ಅಧಿಕಾರಿಗಳ ದಾಳಿ ವೇಳೆ 20 ಬಾಲಕಿಯರು ಪತ್ತೆ
ಪ್ರಿಯಾಂಕ್ ಕಂಗೂನ್ ನೇತೃತ್ವದಲ್ಲಿ ದಾಳಿ
Jagadisha B
| Edited By: |

Updated on: Mar 15, 2024 | 7:42 PM

Share

ಬೆಂಗಳೂರು, ಮಾರ್ಚ್​ 15: ನಗರದಲ್ಲಿ ಮಾನವ ಕಳ್ಳ ಸಾಗಣೆ ಆರೋಪ ಹಿನ್ನೆಲೆ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (NCPCR) ಅಧ್ಯಕ್ಷ ಹಾಗೂ ಸಿಬ್ಬಂದಿಗಳಿಂದ ದಾಳಿ ಮಾಡಿರುವಂತಹ ಘಟನೆ ನಡೆದಿದೆ. ಅಧ್ಯಕ್ಷ ಪ್ರಿಯಾಂಕ್ ಕಂಗೂನ್ ನೇತೃತ್ವದಲ್ಲಿ ದಾಳಿ ಮಾಡಿದ್ದು, ದಾಳಿ ವೇಳೆ 20 ಬಾಲಕಿಯರು ಪತ್ತೆ ಆಗಿದ್ದಾರೆ. ಪತ್ತೆಯಾದವರನ್ನು ಗಲ್ಫ್​ ರಾಷ್ಟ್ರಗಳಿಗೆ ಸಾಗಿಸಲಾಗುತ್ತಿದೆ ಎಂದು ಆರೋಪ ಕೇಳಿಬಂದಿದೆ. ದಕ್ಷಿಣ ಭಾರತದಲ್ಲಿ ಇಂತಹ ಪ್ರಕರಣಗಳು ಈಗಾಗಲೇ ವರದಿಯಾಗಿವೆ ಎನ್ನಲಾಗುತ್ತಿದೆ. ಸದ್ಯ ಎಫ್​​ಐಆರ್​ ದಾಖಲಿಸುವಂತೆ ಸಂಪಿಗೇಹಳ್ಳಿ ಠಾಣೆಯಲ್ಲಿ ಎನ್​​ಸಿಪಿಸಿಆರ್ ಅಧ್ಯಕ್ಷ ಹಾಗೂ ಸಿಬ್ಬಂದಿ ಆಗ್ರಹಿಸಿದ್ದಾರೆ.

ಸದ್ಯ ಎನ್​ಸಿಪಿಸಿಆರ್​ನಿಂದ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.  ಮದರಸದಲ್ಲಿ ಸುಮಾರು 10-20 ಮಕ್ಕಳು ಇದ್ದರು. ಮಕ್ಕಳಿಗೆ ಸರಿಯಾಗಿ ಶಿಕ್ಷಣವನ್ನು ನೀಡುತ್ತಿಲ್ಲ. ಜೊತೆಗೆ ಧಾರ್ಮಿಕ‌ ಶಿಕ್ಷಣವನ್ನು ನೀಡುತ್ತಿದ್ದಾರೆ. ಯಾವುದೇ ಲೈಸೆನ್ಸ್ ಇಲ್ಲದೆ ಮದರಸವನ್ನು ನಡೆಸುತ್ತಿದ್ದಾರೆ ಎಂದು ಆರೋಪಿಸಿ ದೂರು ನೀಡಲಾಗಿದೆ. ಸದ್ಯ ಎನ್​ಸಿಪಿಸಿಆರ್​ ದೂರು ಆಧರಿಸಿ ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಪೊಲೀಸರು ತನಿಖೆಗೆ ಮುಂದಾಗಿದ್ದಾರೆ.

ಪ್ರಿಯಾಂಕ್ ಕಂಗೂನ್ ಟ್ವೀಟ್​

ಈ ಬಗ್ಗೆ ಎಕ್ಸ್​​ನಲ್ಲಿ ಬರೆದುಕೊಂಡಿರುವ ಪ್ರಿಯಾಂಕ ಕಂಗೂನ್​, ತನಿಖೆಯ ವೇಳೆ ಬಾಲಕಿಯರನ್ನು ಸಿಡಬ್ಲ್ಯುಸಿ ಮುಂದೆ ಹಾಜರುಪಡಿಸಲು ಮುಂದಾದಾಗ ಸಲ್ಮಾ ಎಂಬು ಮಹಿಳೆ ಮತ್ತು ಆಕೆಯ ಬಾಸ್ ಶಮೀರ್ ಗೂಂಡಾಗಳನ್ನು ಕರೆಸಿ ಜಗಳಕ್ಕೆ ಯತ್ನಿಸಿದ್ದಾರೆ. ಪೊಲೀಸರ ಮಧ್ಯಸ್ಥಿಕೆಯಲ್ಲಿ ಗೂಂಡಾಗಳನ್ನು  ನಿಯಂತ್ರಿಸಲಾಗಿದೆ. ಪೊಲೀಸರ ಸಲಹೆ ಮೇರೆಗೆ ಮಹಿಳಾ ಅಧಿಕಾರಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಠಾಣೆಗೆ ಬರಲಾಗಿದೆ.

ಇದನ್ನೂ ಓದಿ: ಗರ್ಭಿಣಿ ಹೆಂಡ್ತಿಯನ್ನೇ ಹತ್ಯೆ ಮಾಡಿದನೇ ಗಂಡ, ಅಪ್ರಾಪ್ತ ಬಾಲಕಿ ಕುಟುಂಬಸ್ಥರ ಆರೋಪವೇನು?

ದಾಳಿ ವೇಳೆ ಕೆಲ ಹುಡುಗಿಯರು ಮಾತನಾಡಿದ್ದು, ಸಲ್ಮಾ ಎಂಬ ಮಹಿಳೆ ಕುವೈತ್‌ನಲ್ಲಿರುವ ಹುಡುಗಿಯರ ಸಂಬಂಧಗಳನ್ನು ಏರ್ಪಡಿಸುತ್ತಾಳೆ ಎಂದು ಆರೋಪ ಮಾಡಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್