AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಮಾನವ ಕಳ್ಳ ಸಾಗಣೆ ಆರೋಪ: ಎನ್​​ಸಿಪಿಸಿಆರ್​​ ಅಧಿಕಾರಿಗಳ ದಾಳಿ ವೇಳೆ 20 ಬಾಲಕಿಯರು ಪತ್ತೆ

ಬೆಂಗಳೂರಿನಲ್ಲಿ ಅಕ್ರಮ ಅನಾಥಾಶ್ರಮದ ಮೇಲೆ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ದಾಳಿ ಮಾಡಿದ್ದು, ಈ ವೇಳೆ ಆಘಾತಕಾರಿ ಮಾಹಿತಿ ಬೆಳಕಿಗೆ ಬಂದಿದೆ. ಮಾನವ ಕಳ್ಳ ಸಾಗಣೆ ಆರೋಪ ಕೇಳಿಬಂದಿದೆ. ಈ ಹಿನ್ನೆಲೆ ದಾಳಿ ಮಾಡಿದ್ದು, 20 ಬಾಲಕಿಯರು ಪತ್ತೆ ಆಗಿದ್ದಾರೆ. ಪತ್ತೆಯಾದವರನ್ನು ಗಲ್ಫ್​ ರಾಷ್ಟ್ರಗಳಿಗೆ ಸಾಗಿಸಲಾಗುತ್ತಿದೆ ಎಂದು ಆರೋಪಿಸಲಾಗಿದೆ.

ಬೆಂಗಳೂರಿನಲ್ಲಿ ಮಾನವ ಕಳ್ಳ ಸಾಗಣೆ ಆರೋಪ: ಎನ್​​ಸಿಪಿಸಿಆರ್​​ ಅಧಿಕಾರಿಗಳ ದಾಳಿ ವೇಳೆ 20 ಬಾಲಕಿಯರು ಪತ್ತೆ
ಪ್ರಿಯಾಂಕ್ ಕಂಗೂನ್ ನೇತೃತ್ವದಲ್ಲಿ ದಾಳಿ
ಜಗದೀಶ ಬಿ.
| Edited By: |

Updated on: Mar 15, 2024 | 7:42 PM

Share

ಬೆಂಗಳೂರು, ಮಾರ್ಚ್​ 15: ನಗರದಲ್ಲಿ ಮಾನವ ಕಳ್ಳ ಸಾಗಣೆ ಆರೋಪ ಹಿನ್ನೆಲೆ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (NCPCR) ಅಧ್ಯಕ್ಷ ಹಾಗೂ ಸಿಬ್ಬಂದಿಗಳಿಂದ ದಾಳಿ ಮಾಡಿರುವಂತಹ ಘಟನೆ ನಡೆದಿದೆ. ಅಧ್ಯಕ್ಷ ಪ್ರಿಯಾಂಕ್ ಕಂಗೂನ್ ನೇತೃತ್ವದಲ್ಲಿ ದಾಳಿ ಮಾಡಿದ್ದು, ದಾಳಿ ವೇಳೆ 20 ಬಾಲಕಿಯರು ಪತ್ತೆ ಆಗಿದ್ದಾರೆ. ಪತ್ತೆಯಾದವರನ್ನು ಗಲ್ಫ್​ ರಾಷ್ಟ್ರಗಳಿಗೆ ಸಾಗಿಸಲಾಗುತ್ತಿದೆ ಎಂದು ಆರೋಪ ಕೇಳಿಬಂದಿದೆ. ದಕ್ಷಿಣ ಭಾರತದಲ್ಲಿ ಇಂತಹ ಪ್ರಕರಣಗಳು ಈಗಾಗಲೇ ವರದಿಯಾಗಿವೆ ಎನ್ನಲಾಗುತ್ತಿದೆ. ಸದ್ಯ ಎಫ್​​ಐಆರ್​ ದಾಖಲಿಸುವಂತೆ ಸಂಪಿಗೇಹಳ್ಳಿ ಠಾಣೆಯಲ್ಲಿ ಎನ್​​ಸಿಪಿಸಿಆರ್ ಅಧ್ಯಕ್ಷ ಹಾಗೂ ಸಿಬ್ಬಂದಿ ಆಗ್ರಹಿಸಿದ್ದಾರೆ.

ಸದ್ಯ ಎನ್​ಸಿಪಿಸಿಆರ್​ನಿಂದ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.  ಮದರಸದಲ್ಲಿ ಸುಮಾರು 10-20 ಮಕ್ಕಳು ಇದ್ದರು. ಮಕ್ಕಳಿಗೆ ಸರಿಯಾಗಿ ಶಿಕ್ಷಣವನ್ನು ನೀಡುತ್ತಿಲ್ಲ. ಜೊತೆಗೆ ಧಾರ್ಮಿಕ‌ ಶಿಕ್ಷಣವನ್ನು ನೀಡುತ್ತಿದ್ದಾರೆ. ಯಾವುದೇ ಲೈಸೆನ್ಸ್ ಇಲ್ಲದೆ ಮದರಸವನ್ನು ನಡೆಸುತ್ತಿದ್ದಾರೆ ಎಂದು ಆರೋಪಿಸಿ ದೂರು ನೀಡಲಾಗಿದೆ. ಸದ್ಯ ಎನ್​ಸಿಪಿಸಿಆರ್​ ದೂರು ಆಧರಿಸಿ ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಪೊಲೀಸರು ತನಿಖೆಗೆ ಮುಂದಾಗಿದ್ದಾರೆ.

ಪ್ರಿಯಾಂಕ್ ಕಂಗೂನ್ ಟ್ವೀಟ್​

ಈ ಬಗ್ಗೆ ಎಕ್ಸ್​​ನಲ್ಲಿ ಬರೆದುಕೊಂಡಿರುವ ಪ್ರಿಯಾಂಕ ಕಂಗೂನ್​, ತನಿಖೆಯ ವೇಳೆ ಬಾಲಕಿಯರನ್ನು ಸಿಡಬ್ಲ್ಯುಸಿ ಮುಂದೆ ಹಾಜರುಪಡಿಸಲು ಮುಂದಾದಾಗ ಸಲ್ಮಾ ಎಂಬು ಮಹಿಳೆ ಮತ್ತು ಆಕೆಯ ಬಾಸ್ ಶಮೀರ್ ಗೂಂಡಾಗಳನ್ನು ಕರೆಸಿ ಜಗಳಕ್ಕೆ ಯತ್ನಿಸಿದ್ದಾರೆ. ಪೊಲೀಸರ ಮಧ್ಯಸ್ಥಿಕೆಯಲ್ಲಿ ಗೂಂಡಾಗಳನ್ನು  ನಿಯಂತ್ರಿಸಲಾಗಿದೆ. ಪೊಲೀಸರ ಸಲಹೆ ಮೇರೆಗೆ ಮಹಿಳಾ ಅಧಿಕಾರಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಠಾಣೆಗೆ ಬರಲಾಗಿದೆ.

ಇದನ್ನೂ ಓದಿ: ಗರ್ಭಿಣಿ ಹೆಂಡ್ತಿಯನ್ನೇ ಹತ್ಯೆ ಮಾಡಿದನೇ ಗಂಡ, ಅಪ್ರಾಪ್ತ ಬಾಲಕಿ ಕುಟುಂಬಸ್ಥರ ಆರೋಪವೇನು?

ದಾಳಿ ವೇಳೆ ಕೆಲ ಹುಡುಗಿಯರು ಮಾತನಾಡಿದ್ದು, ಸಲ್ಮಾ ಎಂಬ ಮಹಿಳೆ ಕುವೈತ್‌ನಲ್ಲಿರುವ ಹುಡುಗಿಯರ ಸಂಬಂಧಗಳನ್ನು ಏರ್ಪಡಿಸುತ್ತಾಳೆ ಎಂದು ಆರೋಪ ಮಾಡಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ನಾಡದೇವಿ ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವದ ಸಂಭ್ರಮ!
ನಾಡದೇವಿ ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವದ ಸಂಭ್ರಮ!
ಪೀಣ್ಯದಲ್ಲಿ ಪುಡಿ ರೌಡಿಗಳ ಪುಂಡಾಟ, ಕಲ್ಲು ತೂರಿ ಕಾರು ಧ್ವಂಸ!
ಪೀಣ್ಯದಲ್ಲಿ ಪುಡಿ ರೌಡಿಗಳ ಪುಂಡಾಟ, ಕಲ್ಲು ತೂರಿ ಕಾರು ಧ್ವಂಸ!
ಇಂದು ಚಾಮುಂಡೇಶ್ವರಿ ಅಮ್ಮನವರ ವರ್ಧಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಚಾಮುಂಡೇಶ್ವರಿ ಅಮ್ಮನವರ ವರ್ಧಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಕೇರಳದ ಪ್ರವಾಹದಲ್ಲಿ ಮಣಪ್ಪುರಂ ಶಿವ ದೇವಾಲಯ ಮುಳುಗಡೆ
ಕೇರಳದ ಪ್ರವಾಹದಲ್ಲಿ ಮಣಪ್ಪುರಂ ಶಿವ ದೇವಾಲಯ ಮುಳುಗಡೆ
ಸಂಪುಟ ವಿಸ್ತರಣೆ ಗೊಂದಲದ ನಡುವೆ ಡಿಕೆ ಶಿವಕುಮಾರ್ ಸ್ಪಷ್ಟನೆ
ಸಂಪುಟ ವಿಸ್ತರಣೆ ಗೊಂದಲದ ನಡುವೆ ಡಿಕೆ ಶಿವಕುಮಾರ್ ಸ್ಪಷ್ಟನೆ
ಖರ್ಗೆ, ಸಿದ್ದರಾಮಯ್ಯ, ಡಿಕೆಶಿ ಕೋಲಾರಕ್ಕೆ ಮೋಸ ಮಾಡಿದ್ದಾರೆ: ನಾರಾಯಣಸ್ವಾಮಿ
ಖರ್ಗೆ, ಸಿದ್ದರಾಮಯ್ಯ, ಡಿಕೆಶಿ ಕೋಲಾರಕ್ಕೆ ಮೋಸ ಮಾಡಿದ್ದಾರೆ: ನಾರಾಯಣಸ್ವಾಮಿ
‘ನಾನು ಬೇಗ ಮದುವೆ ಆದೆ; ಅನೇಕ ಹೀರೋಗಳ ಜತೆ ನಟಿಸೋಕೆ ಆಗಲಿಲ್ಲ’: ಪ್ರಿಯಾಂಕಾ
‘ನಾನು ಬೇಗ ಮದುವೆ ಆದೆ; ಅನೇಕ ಹೀರೋಗಳ ಜತೆ ನಟಿಸೋಕೆ ಆಗಲಿಲ್ಲ’: ಪ್ರಿಯಾಂಕಾ
ಇಂಗ್ಲಿಷ್‌ನಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಿದ ಸಚಿವ ಜಮೀರ್ ಅಹ್ಮದ್ ಖಾನ್
ಇಂಗ್ಲಿಷ್‌ನಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಿದ ಸಚಿವ ಜಮೀರ್ ಅಹ್ಮದ್ ಖಾನ್
ಪಂಚಪೀಠಾಧೀಶ್ವರ ಹೆಸರಲ್ಲಿ ಕಾಶಪ್ಪನವರ್ ಪ್ರಮಾಣವಚನ
ಪಂಚಪೀಠಾಧೀಶ್ವರ ಹೆಸರಲ್ಲಿ ಕಾಶಪ್ಪನವರ್ ಪ್ರಮಾಣವಚನ
ನೂತನ ಸಚಿವರ ಪದಗ್ರಹಣ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಗೈರು
ನೂತನ ಸಚಿವರ ಪದಗ್ರಹಣ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಗೈರು