AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

1494 ಕೋಟಿ ರೂ ಹಣ ದುರುಪಯೋಗ ಆರೋಪ: ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು

ಮೈಸೂರ್ ಸೈಟ್​, ಬೆಂಗಳೂರಲ್ಲಿ ಪ್ರಾಸಿಕ್ಯೂಷನ್‌ ಫೈಟ್, ಇದೇ ಜಟಾಪಟಿ ಈಗ ರಾಷ್ಟ್ರ ರಾಜಧಾನಿ ದೆಹಲಿಗೆ ಶಿಫ್ಟ್ ಆಗಿದೆ. ಮುಡಾ ದಾಖಲೆಯೊಂದಿಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಹೈಕಮಾಂಡ್ ನಾಯಕರ ಭೇಟಿಗೆ ತೆರಳಿದ್ದಾರೆ. ಇತ್ತ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು ದಾಖಲಾಗಿದೆ.

1494 ಕೋಟಿ ರೂ ಹಣ ದುರುಪಯೋಗ ಆರೋಪ: ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು
1494 ಕೋಟಿ ರೂ ಹಣ ದುರುಪಯೋಗ ಆರೋಪ: ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು
Sunil MH
| Edited By: |

Updated on:Aug 23, 2024 | 3:00 PM

Share

ಬೆಂಗಳೂರು, ಆಗಸ್ಟ್​​ 23: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ವಿರುದ್ಧ ತನಿಖೆಗೆ ಆದೇಶಿಸಿ ರಾಜ್ಯಪಾಲರು ಹೊರಡಿಸಿರೋ ಪ್ರಾಸಿಕ್ಯೂಷನ್ ಸರ್ಕಾರ ಮತ್ತು ಗವರ್ನರ್‌ ನಡುವಿನ ಸಂಘರ್ಷಕ್ಕೆ ಕಾರಣವಾಗಿದೆ. ಪ್ರಾಸಿಕ್ಯೂಷನ್ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದ ಸಿಎಂಗೆ, ಕೊಂಚ ರಿಲೀಫ್ ಸಿಕ್ಕಿದೆ. ಈ ಮಧ್ಯೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು ನೀಡಲಾಗಿದೆ. ಜಿಲ್ಲಾ​ ಮತ್ತು ತಾಲೂಕು ಪಂಚಾಯತ್​ನಲ್ಲಿ ಬಾಕಿ ಉಳಿದಿರುವ 1494 ಕೋಟಿ ರೂ. ಹಣ ದುರುಪಯೋಗದ ಬಗ್ಗೆ ವಿಧಾನಪರಿಷತ್ ಬಿಜೆಪಿ ಸದಸ್ಯ ಅರುಣ್​ ರಾಜ್ಯಪಾಲರಿಗೆ ಮನವಿ ಮಾಡಿದ್ದಾರೆ.

1494 ಕೋಟಿ ರೂ. ಹಣ ಎಲ್ಲಿದೆ, ರಾಜ್ಯ ಸರ್ಕಾರದ ಖಜಾನೆಯಲ್ಲೂ ಇಲ್ಲ. ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದರೂ ಯಾವುದೇ ಮಾಹಿತಿ ನೀಡಿಲ್ಲ. ಹೀಗಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಲಾಗಿದ್ದು, ಈ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಒತ್ತಾಯಿಸಲಾಗಿದೆ.

ಬಿಜೆಪಿ ಸದಸ್ಯ ಅರುಣ್ ಹೇಳಿದ್ದಿಷ್ಟು

ವಿಧಾನಸೌಧದಲ್ಲಿ ವಿಧಾನಪರಿಷತ್​ನ​ ಬಿಜೆಪಿ ಸದಸ್ಯ ಅರುಣ್​ ಪ್ರತಿಕ್ರಿಯಿಸಿದ್ದು, ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ್ದೇನೆ. 2022-23ರ ಅವಧಿಯಲ್ಲಿ ನಮ್ಮ ಸರ್ಕಾರದ ಅಧಿಕಾರದಲ್ಲಿ ಇತ್ತು. ಜಿಲ್ಲಾ ಮತ್ತು ತಾಲೂಕು ಪಂಚಾಯತ್​ಗಳಲ್ಲಿ ಎಷ್ಟು ಹಣ ಬಳಕೆ ಆಗಿದೆ. ಉಳಿದ ಮೊತ್ತ ಯಾವುದಕ್ಕೆ ಉಪಯೋಗ ಮಾಡಿದ್ದೆ ಅಂತಾ ಪ್ರಶ್ನೆ ಮಾಡಿದ್ದೇನೆ. 1953 ಕೋಟಿ ರೂ. ಹಣ ಇತ್ತು, ಸಂಚಿತ ನಿಧಿಗೆ ಉಳಿದ ಹಣ ಹೋಗಬೇಕು. ಹಣ ಬಳಕೆ ಮಾಡಬೇಕೆಂದ್ರೆ ಶಾಸಕರ ಒಪ್ಪಿಗೆಯನ್ನು ಪಡೆಯಬೇಕು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ರಾಜ್ಯಪಾಲರು ಸಂವಿಧಾನಕ್ಕೆ ಧಕ್ಕೆಯಾಗುವಂತೆ ವರ್ತಿಸಿದರೆ ರಾಷ್ಟ್ರಪತಿ ಮಧ್ಯಪ್ರವೇಶಿಸಬೇಕಾಗುತ್ತದೆ: ತನ್ವೀರ್ ಸೇಟ್

ಪ್ರಾಸಿಕ್ಯೂಷನ್ ಸಮರ ನಿಲ್ಲಿಸದ ಸಿಎಂ, ಕ್ಯಾಬಿನೆಟ್ ಮೀಟಿಂಗ್‌ನಲ್ಲಿ ರಾಜಕೀಯ ವಿರೋಧಿಗಳಿಗೆ ಪ್ರಾಸಿಕ್ಯೂಷನ್ ಬಲೆ ಹಾಕಿದ್ದರು. ಇದಾದ ನಂತರ ಶಾಸಕಾಂಗ ಸಭೆ ನಡೆಸಿ ಬೆಂಬಲ ಪಡೆದಿದ್ದರು. ರಾಜ್ಯಪಾಲರ ವಿರುದ್ಧ ಅಸಮಾಧಾನ ಹೊರಹಾಕಿದ ಶಾಸಕರು, ರಾಷ್ಟ್ರಪತಿಗಳಿಗೆ ದೂರು ನೀಡುವ ಬಗ್ಗೆ ಸಲಹೆ ನೀಡಿದ್ದರು. ಅವಶ್ಯಕತೆ ಬಿದ್ದರೆ ಪರೇಡ್ ನಡೆಸೋದಾಗಿಯೂ ಚರ್ಚೆಸಿದ್ದರು. ಹೀಗೆ ಎಲ್ಲರ ಬೆಂಬಲ, ಎಲ್ಲರ ಅಭಿಪ್ರಾಯ ಪಡೆದ ಸಿಎಂ, ಇದೀಗ ದೆಹಲಿಗೆ ತೆರಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 2:49 pm, Fri, 23 August 24

ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!