ಮೈತ್ರಿ ಪಕ್ಷದ ವಿರೋಧಿಯನ್ನು ಜೆಡಿಎಸ್​​​ಗೆ ಸೇರಿಸಿಕೊಂಡ ಕುಮಾರಣ್ಣ: ಭುಗಿಲೆದ್ದ ಅಸಮಾಧಾನ

ಭಾರೀ ವಿರೋಧದ ನಡುವೆಯೂ ಸ್ವಾಭಿಮಾನ ಜನತಾ ಪಕ್ಷದ ಮುಖಂಡ ಇದೀಗ ಮಿತ್ರ ಪಕ್ಷ ಜೆಡಿಎಸ್ (JDS)​ ಸರ್ಪಡೆಯಾಗಿದ್ದಾರೆ. 2023ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಬಂಡಾಯವಾಗಿ ಸ್ಪರ್ಧೆ ಮಾಡಿದ್ದ ನಾಯಕ ಇದೀಗ ಜೆಡಿಎಸ್ ಸೇರ್ಪಡೆಯಾಗಿದ್ದಾರೆ. ಬಿಜೆಪಿಯೊಂದಿಗೆ ಮೈತ್ರಿ ಇದ್ದರೂ ಸಹ ಬಂಡಾಯ ನಾಯಕ, ಕೇಂದ್ರ ಸಚಿವ ಎಚ್​​​ಡಿ ಕುಮಾರಸ್ವಾಮಿ ಸಮ್ಮುಖದಲ್ಲಿ ಜೆಡಿಎಸ್ ಸೇರ್ಪಡೆಗೊಂಡಿದ್ದಾರೆ.

ಮೈತ್ರಿ ಪಕ್ಷದ ವಿರೋಧಿಯನ್ನು ಜೆಡಿಎಸ್​​​ಗೆ ಸೇರಿಸಿಕೊಂಡ ಕುಮಾರಣ್ಣ: ಭುಗಿಲೆದ್ದ ಅಸಮಾಧಾನ
Hoodi Vijaykumar

Updated on: Mar 05, 2026 | 6:27 PM

ಬೆಂಗಳೂರು, (ಮಾರ್ಚ್ 05): ಕೋಲಾರ (Kolar) ಜಿಲ್ಲೆಯ ಮಾಲೂರು ವಿಧಾನಸಭಾ ಕ್ಷೇತ್ರದಲ್ಲಿ ಮಹತ್ವದ ರಾಜಕೀಯ ಬೆಳವಣಿಗೆ ನಡೆದಿದೆ. 2023ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಬಂಡಾಯದಿಂದ ಸ್ಪರ್ಧಿಸಿ ಸೋತಿದ್ದ ಹೂಡಿ ವಿಜಯ್ ಕುಮಾರ್ ( hoodi Vijaykumar) ಇಂದು (ಮಾರ್ಚ್ 05) ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಬಿಜೆಪಿಯಿಂದ ಬಂಡಾಯವೆದ್ದು ಮಾಲೂರು ಸ್ವಾಭಿಮಾನಿ‌ ಜನತಾ ಪಕ್ಷದಿಂದ ನಿಂತು ಸೋತಿದ್ದ ವಿಜಯ್ ಕುಮಾರ್ ಬೆಂಗಳೂರಿನ (Bengaluru) ಜೆಪಿ ಭವನದಲ್ಲಿಂದು ಕೇಂದ್ರ‌ ಸಚಿವ ಮತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್​​ಡಿ ಕುಮಾರಸ್ವಾಮಿ ಹಾಗೂ ಜೆಡಿಎಸ್ ವರಿಷ್ಠ ಎಚ್​​ಡಿ ದೇವೇಗೌಡ, ನಿಖಿಲ್​ ಕುಮಾರಸ್ವಾಮಿ ಸಮ್ಮುಖದಲ್ಲಿ ಜೆಡಿಎಸ್ ಸೇರ್ಪಡೆಯಾದರು.

ಪಕ್ಷಕ್ಕೆ ಸೇರ್ಪಡೆಗೊಳಿಸಿಕೊಂಡ ಬಳಿಕ ಮಾತನಾಡಿದ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ನಾನು ವಿಜಯ್ ಕುಮಾರ್ ಜೊತೆ ನಿರಂತರವಾಗಿ ಸಂಪರ್ಕದಲ್ಲಿದ್ದೆನೆ. ಮುಂದೆ ಒಂದು ದಿನ ಪಕ್ಷ ಸೇರುವ ಸಮಯ ಬರುತ್ತೆ ಎಂದು ಹೇಳಿದ್ದೆ. ದುಡಿಕೆ ರಾಜಕೀಯ ಜೀವನವನ್ನ ಹಾಳು ಮಾಡಬಾರದು.ಒಳ್ಳೆಯ ಉದ್ದೇಶಕ್ಕೆ ನಾವು ಕೈ ಜೋಡಿಸೊದ್ದೇವೆ. ಮಾಲೂರು ಅಭಿವೃದ್ಧಿಗೆ ಹೊಸ ಚೈತನ್ಯ ತುಂಬಬೇಕು. ವಿಧಾನಸಭಾ ಚುನಾವಣೆ ಇನ್ನೂ ದೂರ ಇದೆ. ಅದಕ್ಕೂ ಮೊದಲು ಸ್ಥಳೀಯ ಸಂಸ್ಥೆ ಚುನಾವಣೆ ಇದೆ. ಅದು ಕಾರ್ಯಕರ್ತರ ಚುನಾವಣೆಯಾಗಿದೆ. ಮಾಲೂರು ಕ್ಷೇತ್ರದ ಕೆಲವರು ಕಾರಣಾಂತರದಿಂದ ಪಕ್ಷವನ್ನ ಬಿಟ್ಟು ಹೋಗಿದ್ರು. ಇವತ್ತು ಎಲ್ಲರು ಮತ್ತೆ ಪಕ್ಷ ಸೇರಿದ್ದಾರೆ. ಎಲ್ಲರಿಗೂ ಸ್ವಾಗತ ಕೋರುತ್ತೇನೆ ಎಂದರು.

ಇದನ್ನೂ ಓದಿ: ಮಾಲೂರು ಶಾಸಕರಾಗಿ ನಂಜೇಗೌಡ ಮುಂದುವರಿಕೆ: ಮರು ಎಣಿಕೆಯಲ್ಲೂ ‘ಕೈ’ ನಾಯಕನದ್ದೇ ಮೇಲುಗೈ

ಬಿಜೆಪಿ ವಿರುದ್ಧ ಬಂಡಾಯವಾಗಿ ಸ್ಪರ್ಧಿಸಿದ್ದ ವಿಜಯಕುಮಾರ್​!

2023ರ ವಿಧಾನಸಭಾ ಚುನಾವಣೆಯಲ್ಲಿ ಮಾಲೂರು ಕ್ಷೆತ್ರದ ಬಿಜೆಪಿ ಟಿಕೆಟ್​ ಹೂಡಿ ವಿಜಯ್ ಕುಮಾರ್ ಅವರ ಬದಲಿಗೆ ಕೆ.ಎಸ್. ಮಂಜುನಾಥ್ ಗೌಡ ಅವರಿಗೆ ನೀಡಲಾಗಿತ್ತು. ಇದರಿಂದ ಅಸಮಾಧಾನಗೊಂಡು ಹೂಡಿ ವಿಜಯ್ ಕುಮಾರ್ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಇದರಿಂದ ಬಿಜೆಪಿ ಅಭ್ಯರ್ಥಿ ಮಂಜುನಾಥ್ ಗೌಡ ಅವರ ಸೋಲಿಸುವಲ್ಲಿ ಯಶಸ್ವಿಯಾಗಿದ್ದರು. ಯಾಕಂದ್ರೆ, ಕಾಂಗ್ರೆಸ್​​​ನ ನಂಜೇಗೌಡ ಅವರು ಕೇವಲ 250 ಮತಗಳಿಂದ ಮಾತ್ರ ಗೆದ್ದಿದ್ದರು. ಒಂದು ವೇಳೆ ಹೂಡಿ ವಿಜಯ್ ಕುಮಾರ್ ಬಂಡಾಯವಾಗಿ ಸ್ಪರ್ಧೆ ಮಾಡದಿದ್ದರೆ ಬಿಜೆಪಿ ಗೆಲ್ಲುತ್ತಿತ್ತು.

ಮೈತ್ರಿಯಲ್ಲಿ ಬಿರುಕು!

ಹೂಡಿ ವಿಜಯ್​​ ಕುಮಾರ್​​ ಜೆಡಿಎಸ್​​ ಸೇರ್ಪಡೆಗೆ ಸ್ಥಳೀಯ ಬಿಜೆಪಿ ನಾಯಕರು, ಮಂಜುನಾಥ್ ಗೌಡ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಮಂಜುನಾಥ್ ಗೌಡ ಆಕ್ರೋಶ ವ್ಯಕ್ತಪಡಿಸಿ, ಜೆಡಿಎಸ್ ವರಿಷ್ಠರು ಮೈತ್ರಿ ಧರ್ಮವನ್ನು ಮುರಿಯುತ್ತಿದ್ದಾರೆ ಆರೋಪಿಸಿದ್ದಾರೆ. ಹೀಗಾಗಿ ಬಿಜೆಪಿ-ಜೆಡಿಎಸ್ ಮೈತ್ರಿಯ ನಡುವೆ ಇದು ಬಿರುಕು ಉಂಟುಮಾಡಿದೆ ಎಂಬ ಆತಂಕ ವ್ಯಕ್ತವಾಗಿದೆ.ಮಿತ್ರ ಪಕ್ಷ ಬಿಜೆಪಿ​ ವಿರೋಧದ ನಡುವೆಯೂ ಹೂಡಿ ವಿಜಯ್ ಕುಮಾರ್ ಅವರನ್ನು ಜೆಡಿಎಸ್​​​ಗೆ ಸೇರಿಸಿಕೊಂಡಿದ್ದು, ಮುಂದಿನ ದಿನಗಳಲ್ಲಿ ಕೋಲಾರ ಜಿಲ್ಲೆಯಲ್ಲಿ ಮಿತ್ರ ಪಕ್ಷಗಳ ನಡುವೆ ಸಂಬಂಧ ಹೇಗಿರುತ್ತೆ ಎನ್ನುವುದನ್ನು ಕಾದುನೋಡಬೇಕಿದೆ.

ಕರ್ನಾಟಕ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
Follow Us