AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿಟಿ ಆ್ಯಂಬುಲೆನ್ಸ್​ ಹೆಸರಲ್ಲಿ ಲೂಟಿಯಾಗ್ತಿದೆ ಲಕ್ಷ ಲಕ್ಷ ಹಣ, ಡ್ರೈವರ್​ಗಳೇ ಹೇಳಿದ ಕರ್ಮಕಾಂಡ!

ಬೆಂಗಳೂರು: ಮಹಾಮಾರಿ ಕೊರೊನಾ ರಾಜಧಾನಿಯಲ್ಲಿ ತನ್ನ ಪ್ರತಾಪ ಮುಂದುವರೆಸಿದೆ. ಈ ನಡುವೆ ಆರೋಗ್ಯ ಇಲಾಖೆ ಕೂಡ ಅಂದ ದರ್ಬಾರ್ ನಡೆಸುತ್ತಿದೆ. ಕೊರೊನಾ ಹೆಸರಲ್ಲಿ ಸಿಕ್ಕಿದ ಕಡೆಯಲೆಲ್ಲ ಕಾಸು ಮಾಡೋಕೆ ನಿಂತಿದೆ ಎಂಬ ಆರೋಪ ಕೇಳಿ ಬಂದಿದೆ. ಹೌದು ಟಿಟಿ ಆ್ಯಂಬುಲೆನ್ಸ್​ ನಿಂತಲ್ಲೇ ನಿಂತರು ತಿಂಗಳು ತಿಂಗಳು ಲಕ್ಷ ಲಕ್ಷ ಬಾಡಿಗೆಯನ್ನು ಸುಳಿಗೆ ಮಾಡಲಾಗುತ್ತಿದೆಯಂತೆ. ನಿಂತಿರುವ ಜಾಗದಲ್ಲೇ ವಾಹನವನ್ನ ಆನ್ ಮಾಡಿ ಬಿಡೋದ್ಯಾಕೆ? ಇನ್ನು ನಿಂತಿರುವ ಜಾಗದಲ್ಲೇ ವಾಹನವನ್ನು ಆನ್ ಮಾಡಿ ಬಿಡಲಾಗುತ್ತೆ. ರೋಗಿಗಳನ್ನ ಆಸ್ಪತ್ರೆಗೆ ಶಿಫ್ಟ್ ಮಾಡದಿದ್ರು […]

ಟಿಟಿ ಆ್ಯಂಬುಲೆನ್ಸ್​ ಹೆಸರಲ್ಲಿ ಲೂಟಿಯಾಗ್ತಿದೆ ಲಕ್ಷ ಲಕ್ಷ ಹಣ, ಡ್ರೈವರ್​ಗಳೇ ಹೇಳಿದ ಕರ್ಮಕಾಂಡ!
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Oct 02, 2020 | 11:11 AM

Share

ಬೆಂಗಳೂರು: ಮಹಾಮಾರಿ ಕೊರೊನಾ ರಾಜಧಾನಿಯಲ್ಲಿ ತನ್ನ ಪ್ರತಾಪ ಮುಂದುವರೆಸಿದೆ. ಈ ನಡುವೆ ಆರೋಗ್ಯ ಇಲಾಖೆ ಕೂಡ ಅಂದ ದರ್ಬಾರ್ ನಡೆಸುತ್ತಿದೆ. ಕೊರೊನಾ ಹೆಸರಲ್ಲಿ ಸಿಕ್ಕಿದ ಕಡೆಯಲೆಲ್ಲ ಕಾಸು ಮಾಡೋಕೆ ನಿಂತಿದೆ ಎಂಬ ಆರೋಪ ಕೇಳಿ ಬಂದಿದೆ. ಹೌದು ಟಿಟಿ ಆ್ಯಂಬುಲೆನ್ಸ್​ ನಿಂತಲ್ಲೇ ನಿಂತರು ತಿಂಗಳು ತಿಂಗಳು ಲಕ್ಷ ಲಕ್ಷ ಬಾಡಿಗೆಯನ್ನು ಸುಳಿಗೆ ಮಾಡಲಾಗುತ್ತಿದೆಯಂತೆ.

ನಿಂತಿರುವ ಜಾಗದಲ್ಲೇ ವಾಹನವನ್ನ ಆನ್ ಮಾಡಿ ಬಿಡೋದ್ಯಾಕೆ? ಇನ್ನು ನಿಂತಿರುವ ಜಾಗದಲ್ಲೇ ವಾಹನವನ್ನು ಆನ್ ಮಾಡಿ ಬಿಡಲಾಗುತ್ತೆ. ರೋಗಿಗಳನ್ನ ಆಸ್ಪತ್ರೆಗೆ ಶಿಫ್ಟ್ ಮಾಡದಿದ್ರು ನಿಂತಲ್ಲೇ ಓಡಿಸಿ ಲೆಕ್ಕ ತೋರಿಸಲಾಗುತ್ತಂತೆ.

ಅನಾವಶ್ಯಕವಾಗಿ ಟಿಟಿ ಆ್ಯಂಬುಲೆನ್ಸ್​ನಿಂದ ಸಾರ್ವಜನಿಕರ ಹಣ ಪೋಲು ಮಾಡಲಾಗುತ್ತಿದೆ. ಟಿಟಿ ಆ್ಯಂಬುಲೆನ್ಸ್​ ಹೆಸರಲ್ಲಿ ಫುಲ್ ಗೋಲ್ ಮಾಲ್ ನಡೀತಿದೆ. ಅವಶ್ಯಕತೆಗೂ ಮೀರಿ ಬಾಡಿಗೆ ಪಡೆದು ಆಫೀಸರ್ಸ್ ಹಣ ನುಂಗುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಒಂದು ಟಿಟಿ ಆ್ಯಂಬುಲೆನ್ಸ್​ಗೆ ತಿಂಗಳಿಗೆ 1 ಲಕ್ಷ 30 ಸಾವಿರ ರೂಪಾಯಿ ಬಾಡಿಗೆ ಇದೆಯಂತೆ. 2 ಸಾವಿರ ಕಿಲೋ ಮೀಟರ್ ಬಳಿಕ 1 ಕಿಲೋಮೀಟರ್ ಗೆ 16 ರೂಪಾಯಿ ಹೆಚ್ಚುವರಿ ಹಣ ನೀಡಲಾಗುತ್ತಿದೆ. ಇನೋವಾ ಕಾರ್​ಗಳಿಗೆ ದಿನಕ್ಕೆ 4300 ಪ್ಲಸ್ ಜಿಎಸ್​ಟಿ ನೀಡಲಾಗುತ್ತೆ.

ಆದ್ರೆ ಟಿಟಿ ಆ್ಯಂಬುಲೆನ್ಸ್ ಮಾಲೀಕರಿಗೆ ನೀಡುವುದು 90 ಸಾವಿರ ರೂಪಾಯಿ. ಉಳಿದಿಲ್ಲಾ ಹಣವನ್ನು ಅಧಿಕಾರಿಗಳು ಜೇಬಿಗಿಳಿಸಿಕೊಳ್ಳುತ್ತಿದ್ದಾರಂತೆ. ಟಿಟಿ ಆ್ಯಂಬುಲೆನ್ಸ್​ಗಳು ಕೂಡ ನಿಂತಲ್ಲಿ ನಿಂತ್ರು ಬಾಡಿಗೆ ನೀಡಲಾಗುತ್ತಿದೆ. ಆ್ಯಂಬುಲೆನ್ಸ್ ಡ್ರೈವರ್​ಗಳೇ ಆರೋಗ್ಯ ಇಲಾಖೆಯ ಕರ್ಮಕಾಂಡ ಬಾಯಿಬಿಟ್ಟಿದ್ದಾರೆ.

ಟಿಟಿ ಆ್ಯಂಬುಲೆನ್ಸ್​ಗಳ ಬದಲು 108 ಆ್ಯಂಬುಲೆನ್ಸ್​ಗಳನ್ನೇ ಸರಿಯಾಗಿ ಬಳಸಬಹುದಿತ್ತು. ಹಣ ಲೂಟಿ ಹೊಡೆಯಲು ಟಿಟಿ ಆ್ಯಂಬುಲೆನ್ಸ್​ಗಳನ್ನ ಮುಂದಿಟ್ಟುಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.

Follow Us
ಒಮೈದಿಯಾ ಏರ್​ಪೋರ್ಟ್​ ಮೇಲೆ ಅಮೆರಿಕ ಬಾಂಬ್ ದಾಳಿ
ಒಮೈದಿಯಾ ಏರ್​ಪೋರ್ಟ್​ ಮೇಲೆ ಅಮೆರಿಕ ಬಾಂಬ್ ದಾಳಿ
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್