AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂತಾರಾಷ್ಟ್ರೀಯ ಆಟಗಾರರಿಗೆ ನಿವೇಶನ ಹಂಚಿಕೆಗೆ ಸಬೂಬು ಹೇಳುವುದು ಸರಿಯಲ್ಲ, ಮೊದಲು ಸೈಟ್​ ನೀಡಿ: ಹೈಕೋರ್ಟ್

ನಿವೇಶನ ಮಂಜೂರಾತಿ ಮಾಡಲು ಸ್ಮಿತಾ ಅವರು ಅಕ್ಷರಶಃ ಭಿಕ್ಷೆ ಬೇಡುವಂತೆ ಮಾಡಿದೆ. 2008 ರಲ್ಲಿಯೇ ನಿವೇಶನ ಮಂಜೂರಾತಿಗೆ ನಿರ್ಣಯ ಕೈಗೊಂಡಿದ್ದರೂ, 2020 ರಲ್ಲಿ ಅದರ ಜಾರಿಗೆ ಮುಂದಾಗಿದೆ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿತು. ಬಿಡಿಎ ನಂತಹ ಸಾಂವಿಧಾನಿಕ ಸಂಸ್ಥೆಯು ಕಡತ ಕಾಣೆಯಾಗಿತ್ತು ಎಂಬ ಕುಂಟು ನೆಪ ಹೇಳುತ್ತಿರುವುದು ನಿಜಕ್ಕೂ ಆಘಾತಕಾರಿ ವಿಷಯ.

ಅಂತಾರಾಷ್ಟ್ರೀಯ ಆಟಗಾರರಿಗೆ ನಿವೇಶನ ಹಂಚಿಕೆಗೆ ಸಬೂಬು ಹೇಳುವುದು ಸರಿಯಲ್ಲ, ಮೊದಲು ಸೈಟ್​ ನೀಡಿ: ಹೈಕೋರ್ಟ್
ಅಂತಾರಾಷ್ಟ್ರೀಯ ಆಟಗಾರರಿಗೆ ನಿವೇಶನ ಹಂಚಿಕೆಗೆ ಸಬೂಬು ಹೇಳುವುದು ಸರಿಯಲ್ಲ, ಮೊದಲು ಸೈಟ್​ ನೀಡಿ: ಹೈಕೋರ್ಟ್
TV9 Web
| Updated By: ಸಾಧು ಶ್ರೀನಾಥ್​|

Updated on: Aug 25, 2021 | 7:59 AM

Share

ಮಾಜಿ ಅಂತರಾಷ್ಟ್ರೀಯ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ಮಿತಾ ಹರಿಕೃಷ್ಣ ಅವರಿಗೆ ನಿವೇಶನ ಮಂಜೂರು ಮಾಡುವಂತೆ ನಿರ್ದೇಶಿಸಿ ಹೈಕೋರ್ಟ್ ಏಕ ಸದಸ್ಯ ನ್ಯಾಯಪೀಠ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಸಲ್ಲಿಸಿದ್ದ ಮೇಲ್ಮನವಿಯನ್ನು ವಿಭಾಗೀಯ ನ್ಯಾಯಪೀಠ ವಜಾಗೊಳಿಸಿದೆ. ಅಂತರರಾಷ್ಟ್ರೀಯ ಮಟ್ಟದ ಆಟದಲ್ಲಿ ಪಾಲ್ಗೊಂಡವರಿಗೆ ನಿವೇಶನ ಹಂಚಿಕೆಗೆ ಸಬೂಬು ಹೇಳುವುದು ಸರಿಯಲ್ಲವೆಂದು ಹೈಕೋರ್ಟ್ ಅಭಿಪ್ರಾಯ ಪಟ್ಟಿದೆ. ಸ್ಮಿತಾ ಹರಿಕೃಷ್ಣ ಅವರು ಎರಡು ಬಾರಿ ವಿಶ್ವಕಪ್ ಟೂರ್ನಿಯಲ್ಲಿ ಭಾರತದ ಪರ ಆಡಿದ್ದರು.

ಕ್ರಿಕೆಟ್ ಕ್ಷೇತ್ರದಲ್ಲಿ ಅವರು ಸಲ್ಲಿಸಿರುವ ಸೇವೆ ಪರಿಗಣಿಸಿ ನಿವೇಶನ ಮಂಜೂರು ಮಾಡಲು ಬಿಡಿಎ 2008 ರಲ್ಲಿ ನಿರ್ಣಯ ಕೈಗೊಂಡಿತ್ತು. ಅದರಂತೆ 2014ರ ಜು.18 ಮತ್ತು 2018ರ ಫೆ.18 ಮತ್ತು 2019ರ ಡಿ.19ರಂದು ಬಿಡಿಎಗೆ ಮನವಿ ಸಲ್ಲಿಸಿದ್ದ ಸ್ಮಿತಾ ಹರಿಕೃಷ್ಣ, ತನಗೆ ನಿವೇಶನ ಮಂಜೂರು ಮಾಡುವಂತೆ ಕೋರಿದ್ದರು. ಇದರಿಂದ 2020 ರ ಜು. 3 ರಂದು ಮಂಜೂರಾತಿ ಪತ್ರವನ್ನು ವಿತರಿಸಿದ್ದ ಬಿಡಿಎ, ಒಟ್ಟು 77.22 ಲಕ್ಷ ರೂ. ಪಾವತಿಸಲು ಸೂಚಿಸಿತ್ತು.

ಅದನ್ನು ಪ್ರಶ್ನಿಸಿ ಸ್ಮಿತಾ ಹರಿಕೃಷ್ಣ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಅದರ ವಿಚಾರಣೆ ನಡೆಸಿದ್ದ ಏಕ ಸದಸ್ಯ ನ್ಯಾಯಪೀಠ, 2008 ರಲ್ಲಿ ಇದ್ದ ಮಾರುಕಟ್ಟೆ ದರ ದಂತೆ ಸ್ಮಿತಾ ಹರಿಕೃಷ್ಣಗೆ ನಿವೇಶನ ಮಂಜೂರು ಮಾಡುವಂತೆ ನಿರ್ದೇಶಿಸಿತ್ತು. ಅದನ್ನು ಪ್ರಶ್ನಿಸಿ ವಿಭಾಗೀಯ ನ್ಯಾಯಪೀಠಕ್ಕೆ ಬಿಡಿಎ ಮೇಲ್ಮನವಿ ಸಲ್ಲಿಸಿತ್ತು. ಈ ಅರ್ಜಿ ವಿಚಾರಣೆ ನಡೆಸಿದ ವಿಭಾಗೀಯ ನ್ಯಾಯಪೀಠ, ಸ್ಮಿತಾ ಹರಿಕೃಷ್ಣರಿಗೆ ನಿವೇಶನ ಮಂಜೂರು ಮಾಡಲು ಬಿಡಿಎ ನಿರ್ಣಯ ಕೈಗೊಂಡಿದೆ.

ಆದರೆ, ನಿವೇಶನ ಮಂಜೂರಾತಿ ಮಾಡಲು ಸ್ಮಿತಾ ಅವರು ಅಕ್ಷರಶಃ ಭಿಕ್ಷೆ ಬೇಡುವಂತೆ ಮಾಡಿದೆ. 2008 ರಲ್ಲಿಯೇ ನಿವೇಶನ ಮಂಜೂರಾತಿಗೆ ನಿರ್ಣಯ ಕೈಗೊಂಡಿದ್ದರೂ, 2020 ರಲ್ಲಿ ಅದರ ಜಾರಿಗೆ ಮುಂದಾಗಿದೆ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿತು. ಬಿಡಿಎ ನಂತಹ ಸಾಂವಿಧಾನಿಕ ಸಂಸ್ಥೆಯು ಕಡತ ಕಾಣೆಯಾಗಿತ್ತು ಎಂಬ ಕುಂಟು ನೆಪ ಹೇಳುತ್ತಿರುವುದು ನಿಜಕ್ಕೂ ಆಘಾತಕಾರಿ ವಿಷಯ. ಕಡತವನ್ನು ಕಳೆದುಕೊಳ್ಳುವ ಮೂಲಕ ಬಿಡಿಎ ಅಧಿಕಾರಿಗಳು ಮಾಡಿದ ತಪ್ಪಿಗೆ, ಅಂತರರಾಷ್ಟ್ರೀಯ ಮಟ್ಟದ ಆಟಗಾರ್ತಿಯೊಬ್ಬರಿಗೆ ಮಂಜೂರು ಮಾಡಬೇಕಾದ ನಿವೇಶನಕ್ಕೆ ಭಾರಿ ಮೊತ್ತ ವಿಧಿಸಿರುವುದು ಸರಿಯಲ್ಲ ಎಂದು ಚಾಟಿ ಬೀಸಿತು.

ಅಲ್ಲದೆ, ಪ್ರಕರಣ ಸಂಬಂಧ ಏಕ ಸದಸ್ಯ ನ್ಯಾಯಪೀಠದ ಆದೇಶವು ಸೂಕ್ತವಾಗಿದ್ದು, ಅದರಲ್ಲಿ ಮಧ್ಯ ಪ್ರವೇಶ ಮಾಡುವ ಅಗತ್ಯವಿಲ್ಲ ಎಂದು ಅಭಿಪ್ರಾಯಪಟ್ಟ ವಿಭಾಗೀಯ ನ್ಯಾಯಪೀಠ, ಬಿಡಿಎ ಮೇಲ್ಮನವಿಯನ್ನು ವಜಾಗೊಳಿಸಿದೆ.

– ರಮೇಶ್

Also Read:

ಕೇಸ್ ಗೆಲ್ಲುವ ಬದಲು ತಾಯಿಯ ಹೃದಯ ಗೆಲ್ಲುವಂತೆ ಹೈಕೋರ್ಟ್​ನಿಂದ ಮಗಳಿಗೆ ಬುದ್ದಿಮಾತು

(allot site for international cricketer smitha harikrishna high court order to BDA)

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ