AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಬಿಎಂಪಿಯ ಬೆಡ್​ ಬುಕ್ಕಿಂಗ್ ಹಗರಣದ ತನಿಖೆ ಸಿಸಿಬಿಗೆ ವರ್ಗಾವಣೆ; ಪೊಲೀಸ್ ಆಯುಕ್ತ ಕಮಲ್​ ಪಂತ್​ ಟ್ವೀಟ್​

ಬಿಬಿಎಂಪಿ ಬೆಡ್​ ಬ್ಲಾಕಿಂಗ್​ ಹಗರಣವನ್ನು ಸಂಸದ ತೇಜಸ್ವಿ ಸೂರ್ಯ ಮತ್ತಿತರರು ಸೇರಿ ಬಯಲಿಗೆಳೆದಿದ್ದು, ಇಂದಿನ ಸಭೆಯಲ್ಲಿ ಯಡಿಯೂರಪ್ಪನವರಿಗೂ ವರದಿ ನೀಡಿದ್ದಾರೆ.

ಬಿಬಿಎಂಪಿಯ ಬೆಡ್​ ಬುಕ್ಕಿಂಗ್ ಹಗರಣದ ತನಿಖೆ ಸಿಸಿಬಿಗೆ ವರ್ಗಾವಣೆ; ಪೊಲೀಸ್ ಆಯುಕ್ತ ಕಮಲ್​ ಪಂತ್​ ಟ್ವೀಟ್​
ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್​
Lakshmi Hegde
|

Updated on: May 04, 2021 | 10:41 PM

Share

ಬೆಂಗಳೂರು: ಬಿಬಿಎಂಪಿ ಬೆಡ್​ ಬ್ಲಾಕಿಂಗ್ ಹಗರಣಕ್ಕೆ ಸಂಬಂಧಪಟ್ಟಂತೆ ಪ್ರಕರಣದ ತನಿಖೆಯನ್ನು ಸಿಸಿಬಿಗೆ ವಹಿಸಿ ಬೆಂಗಳೂರು ಪೊಲೀಸ್​ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿ ತಿಳಿಸಿರುವ ಕಮಲ್​ ಪಂತ್​, ಬಿಬಿಎಂಪಿ ಪೋರ್ಟಲ್​ ಮೂಲಕ ಕೊವಿಡ್ ಸೋಂಕಿತರ ಚಿಕಿತ್ಸೆಗಾಗಿ ಆಸ್ಪತ್ರೆಯಲ್ಲಿ ಬೆಡ್ ಕಾಯ್ದಿರಿಸುವ ವಿಧಾನದಲ್ಲಿ ಅಕ್ರಮ ಎಸಗಿದವರ ವಿರುದ್ಧ ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇಬ್ಬರನ್ನು ಬಂಧಿಸಲಾಗಿದೆ. ಹಾಗೇ, ಅಕ್ರಮದಲ್ಲಿ ಭಾಗಿಯಾದವರ ಬಗೆಗಿನ ಹೆಚ್ಚಿನ ತನಿಖೆಗಾಗಿ ಪ್ರಕರಣವನ್ನು ಸಿಸಿಬಿಗೆ ವರ್ಗಾಯಿಸಲಾಗಿದೆ ಎಂದಿದ್ದಾರೆ.

ಬಿಬಿಎಂಪಿ ಬೆಡ್​ ಬ್ಲಾಕಿಂಗ್​ ಹಗರಣವನ್ನು ಸಂಸದ ತೇಜಸ್ವಿ ಸೂರ್ಯ ಮತ್ತಿತರರು ಸೇರಿ ಬಯಲಿಗೆಳೆದಿದ್ದು, ಇಂದಿನ ಸಭೆಯಲ್ಲಿ ಯಡಿಯೂರಪ್ಪನವರಿಗೂ ವರದಿ ನೀಡಿದ್ದಾರೆ. ಹಣಕೊಟ್ಟವರಿಗೆ ಹಾಸಿಗೆ ಮೀಸಲಿಡುವ ಈ ದಂಧೆಯ ಬಗ್ಗೆ ಹೆಚ್ಚಿನ ತನಿಖೆ ನಡೆಸುವುದಾಗಿಯೂ ಯಡಿಯೂರಪ್ಪ ಹೇಳಿದ್ದಾರೆ. ಈ ಸಂಬಂಧ ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಂಧಿತರಾದ ಇಬ್ಬರನ್ನು ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

ಕೊರೊನಾ ತೀವ್ರವಾಗಿರುವ ಹೊತ್ತಲ್ಲಿ ರೋಗಿಗಳು ಬೆಡ್​ ಇಲ್ಲದೆ ಪರದಾಡುತ್ತಿರುವಾಗ ಬಿಬಿಎಂಪಿ ಅಧಿಕಾರಿಗಳು ಹಣ ಮಾಡುತ್ತಿದ್ದಾರೆ ಎಂದು ಸಂಸದ ತೇಜಸ್ವಿ ಸೂರ್ಯ ಆರೋಪಿಸಿದ್ದಾರೆ.

ಇದನ್ನೂ ಓದಿ:ಆಕ್ಸಿಜನ್ ಖಾಲಿಯಾದ ವಿಷಯ ತಿಳಿದು ಗಂಟೆಯೊಳಗೆ 10 ಸಿಲಿಂಡರ್ ವ್ಯವಸ್ಥೆ ಮಾಡಿದ ಸಂಸದ ಪ್ರತಾಪ್ ಸಿಂಹ

Follow Us
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!