AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಸಾರ್ವಜನಿಕ-ಖಾಸಗಿ ಸ್ಥಳದಲ್ಲಿ ಜಾಹೀರಾತು ಅಳವಡಿಕೆಗೆ ಅವಕಾಶ: ಷರತ್ತಗಳು ಅನ್ವಯ

ಸಾರ್ವಜನಿಕ, ಖಾಸಗಿ ಸ್ಥಳದಲ್ಲಿ ಜಾಹೀರಾತು ಅಳವಡಿಕೆಗೆ ಅವಕಾಶ ಕೊಡುತ್ತೇವೆ. ಬಿಬಿಎಂಪಿಗೆ ತೆರಿಗೆ ಕಟ್ಟಬೇಕಾಗುತ್ತೆ. ಜಾಹೀರಾತಿನ ಅಳತೆ, ಉದ್ದ ಎಲ್ಲಾ ಯುನಿಫರ್ಮಿಟಿ ಫಿಕ್ಸ್ ಮಾಡುತ್ತೇವೆ. ಒಂದು ರೋಡ್ ಅಂದ್ರೆ ಸುಂದರವಾಗಿ ಕಾಣುವ ತರಹ ಯುನಿಫಾರ್ಮಿಟಿ ಇರುತ್ತೆ. ಕೆಲವು ಪಿಪಿಪಿ ಮಾಡೆಲ್ ಇದೆ. ಅದರ ಲಿಗಾಲಿಟಿ ಚೆಕ್ ಮಾಡುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸಾರ್ವಜನಿಕ-ಖಾಸಗಿ ಸ್ಥಳದಲ್ಲಿ ಜಾಹೀರಾತು ಅಳವಡಿಕೆಗೆ ಅವಕಾಶ: ಷರತ್ತಗಳು ಅನ್ವಯ
ಬೆಂಗಳೂರಿನಲ್ಲಿ ಸಾರ್ವಜನಿಕ-ಖಾಸಗಿ ಸ್ಥಳದಲ್ಲಿ ಜಾಹೀರಾತು ಅಳವಡಿಕೆಗೆ ಅವಕಾಶ: ಷರತ್ತಗಳು ಅನ್ವಯ
ಶಾಂತಮೂರ್ತಿ
| Updated By: ಗಂಗಾಧರ​ ಬ. ಸಾಬೋಜಿ|

Updated on: Jun 21, 2024 | 7:44 PM

Share

ಬೆಂಗಳೂರು, ಜೂನ್​ 21: ಬೆಂಗಳೂರು ನಗರ ಸಂಬಂಧ ಬಹಳ ವರ್ಷದಿಂದ ಅನೇಕ ಅಡೆತಡೆ ಹಿನ್ನಲೆ ಜಾಹೀರಾತು (Advertisement) ನಿಯಮದ ಬಗ್ಗೆ ಚರ್ಚೆ ಮಾಡಲಾಗಿದೆ. ಒಂದು ವಾರದಲ್ಲಿ ಜಾಹೀರಾತು ನಿಮಯ ಅಂತಿಮಗೊಳಿಸುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಹೇಳಿದ್ದಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತ ಜಾಹೀರಾತು ಫಲಕದ ಹಾವಳಿ, ಜಾಹೀರಾತು ನಿಯಮದ ಬಗ್ಗೆ ಡಿಕೆ ಶಿವಕುಮಾರ್​ ನೇತೃತ್ವದಲ್ಲಿ ಇಂದು ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಅಧಿಕಾರಿಗಳೊಂದಿ ಸಭೆ ಮಾಡಿದ್ದಾರೆ.

ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅನೇಕ ಸಂಸ್ಥೆ ಖಾಸಗಿ ಭೇಟಿ ಮಾಡ್ತಾ ಇದ್ದವು. ಎಲ್ಲರನ್ನೂ ಕರೆದು ಅವರ ಅಭಿಪ್ರಾಯ ಕೇಳಿದ್ದೇವೆ. ಹಾಗಾಗಿ ಒಂದು ವಾರದಲ್ಲಿ ಅನೌನ್ಸ್ ಮಾಡುತ್ತೇವೆ. ಅಕ್ಷೇಪಣೆಗೆ 15 ದಿನ ಕಾಲಾವಕಾಶ ನೀಡಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: BBMP Budget: ಹೊಸ ಜಾಹೀರಾತು ನೀತಿಯಿಂದ 500 ಕೋಟಿ ಆದಾಯ ಹೆಚ್ಚಿಸಲು ಚಿಂತನೆ; ಆನ್​ಲೈನ್​ ಮೂಲಕ ಜಾಹೀರಾತು ಪರವಾನಗಿ ನೀಡಲು ಪ್ಲ್ಯಾನ್​

ಸಾರ್ವಜನಿಕ, ಖಾಸಗಿ ಸ್ಥಳದಲ್ಲಿ ಜಾಹೀರಾತು ಅಳವಡಿಕೆಗೆ ಅವಕಾಶ ಕೊಡುತ್ತೇವೆ. ಬಿಬಿಎಂಪಿಗೆ ತೆರಿಗೆ ಕಟ್ಟಬೇಕಾಗುತ್ತೆ. ಜಾಹೀರಾತಿನ ಅಳತೆ, ಉದ್ದ ಎಲ್ಲಾ ಯುನಿಫರ್ಮಿಟಿ ಫಿಕ್ಸ್ ಮಾಡುತ್ತೇವೆ. ಒಂದು ರೋಡ್ ಅಂದ್ರೆ ಸುಂದರವಾಗಿ ಕಾಣುವ ತರಹ ಯುನಿಫಾರ್ಮಿಟಿ ಇರುತ್ತೆ. ಕೆಲವು ಪಿಪಿಪಿ ಮಾಡೆಲ್ ಇದೆ. ಅದರ ಲಿಗಾಲಿಟಿ ಚೆಕ್ ಮಾಡುತ್ತೇವೆ ಎಂದು ಹೇಳಿದರು.

60 ಅಡಿ ರಸ್ತೆಗಳಲ್ಲಿ ಮಾತ್ರ ಜಾಹಿರಾತಿಗೆ ಅನುಮತಿ

60 ಅಡಿ ರಸ್ತೆಗಳಲ್ಲಿ ಮಾತ್ರ ಜಾಹಿರಾತಿಗೆ ಅನುಮತಿ. ಉಳಿದ ಕೆಲ ಭಾಗಗಳಲ್ಲಿ ಕಮರ್ಷಿಯಲ್ ಇರೋದರಿಂದ ಅಲ್ಲಿ ಕೂಡ ಪರ್ಮಿಷನ್ ಕೊಡುತ್ತೇವೆ. ಇವತ್ತು ಎಲ್ಲಾ ಸ್ಟೇಕ್ ಹೋಲ್ಡರ್ಸ್ ಅಭಿಪ್ರಾಯ ತಿಳಿಸೋಕೆ ಸಮಯ ಕೊಡುತ್ತೇವೆ ಎಂದರು.

ಇದನ್ನೂ ಓದಿ: ಮುಂಬೈ ದುರ್ಘಟನೆ ಬಳಿಕ ಎಚ್ಚೆತ್ತುಕೊಳ್ಳದ ಬಿಬಿಎಂಪಿ; ಬೆಂಗಳೂರಿನಲ್ಲೂ ಬಲಿಗಾಗಿ ಕಾದು ಕುಂತಿವೆ ಬೃಹತ್ ಹೋರ್ಡಿಂಗ್ಸ್‌

ಸರ್ಕಾರಕ್ಕೆ ಈ ಹಿಂದೆ ಹಣ ಕಟ್ಟಬೇಕು ಅಂತವರು ಕಟ್ಟಲೇಬೇಕು. ಹಳೆಯ ಬಾಕಿ ಹಣ ಕಟ್ಟಿಯೇ ಮುಂದೆ ಬರಬೇಕು. ಇಲ್ಲದಿದ್ದರೆ ಅಂತಹವರಿಗೆ ಟೆಂಡರ್‌ನಲ್ಲಿ ಅವಕಾಶ ಇಲ್ಲ. ಮೆಟ್ರೋ ಹೊರಗೆ ಬಿಬಿಎಂಪಿ ಮತ್ತು ನಮ್ಮ ಮೆಟ್ರೋ ಸಹಭಾಗಿತ್ವದಲ್ಲಿ ಜಾಹೀರಾತು ಅಳವಡಿಕೆಗೆ ಪ್ರತ್ಯೇಕ ಪ್ಯಾಕೇಜ್ ನಿಗದಿ ಮಾಡಲಾಗುವುದು​ ಎಂದು ಹೇಳಿದ್ದಾರೆ.

ಮತ್ತಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ