AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಸಾರ್ವಜನಿಕ-ಖಾಸಗಿ ಸ್ಥಳದಲ್ಲಿ ಜಾಹೀರಾತು ಅಳವಡಿಕೆಗೆ ಅವಕಾಶ: ಷರತ್ತಗಳು ಅನ್ವಯ

ಸಾರ್ವಜನಿಕ, ಖಾಸಗಿ ಸ್ಥಳದಲ್ಲಿ ಜಾಹೀರಾತು ಅಳವಡಿಕೆಗೆ ಅವಕಾಶ ಕೊಡುತ್ತೇವೆ. ಬಿಬಿಎಂಪಿಗೆ ತೆರಿಗೆ ಕಟ್ಟಬೇಕಾಗುತ್ತೆ. ಜಾಹೀರಾತಿನ ಅಳತೆ, ಉದ್ದ ಎಲ್ಲಾ ಯುನಿಫರ್ಮಿಟಿ ಫಿಕ್ಸ್ ಮಾಡುತ್ತೇವೆ. ಒಂದು ರೋಡ್ ಅಂದ್ರೆ ಸುಂದರವಾಗಿ ಕಾಣುವ ತರಹ ಯುನಿಫಾರ್ಮಿಟಿ ಇರುತ್ತೆ. ಕೆಲವು ಪಿಪಿಪಿ ಮಾಡೆಲ್ ಇದೆ. ಅದರ ಲಿಗಾಲಿಟಿ ಚೆಕ್ ಮಾಡುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸಾರ್ವಜನಿಕ-ಖಾಸಗಿ ಸ್ಥಳದಲ್ಲಿ ಜಾಹೀರಾತು ಅಳವಡಿಕೆಗೆ ಅವಕಾಶ: ಷರತ್ತಗಳು ಅನ್ವಯ
ಬೆಂಗಳೂರಿನಲ್ಲಿ ಸಾರ್ವಜನಿಕ-ಖಾಸಗಿ ಸ್ಥಳದಲ್ಲಿ ಜಾಹೀರಾತು ಅಳವಡಿಕೆಗೆ ಅವಕಾಶ: ಷರತ್ತಗಳು ಅನ್ವಯ
ಶಾಂತಮೂರ್ತಿ
| Edited By: |

Updated on: Jun 21, 2024 | 7:44 PM

Share

ಬೆಂಗಳೂರು, ಜೂನ್​ 21: ಬೆಂಗಳೂರು ನಗರ ಸಂಬಂಧ ಬಹಳ ವರ್ಷದಿಂದ ಅನೇಕ ಅಡೆತಡೆ ಹಿನ್ನಲೆ ಜಾಹೀರಾತು (Advertisement) ನಿಯಮದ ಬಗ್ಗೆ ಚರ್ಚೆ ಮಾಡಲಾಗಿದೆ. ಒಂದು ವಾರದಲ್ಲಿ ಜಾಹೀರಾತು ನಿಮಯ ಅಂತಿಮಗೊಳಿಸುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಹೇಳಿದ್ದಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತ ಜಾಹೀರಾತು ಫಲಕದ ಹಾವಳಿ, ಜಾಹೀರಾತು ನಿಯಮದ ಬಗ್ಗೆ ಡಿಕೆ ಶಿವಕುಮಾರ್​ ನೇತೃತ್ವದಲ್ಲಿ ಇಂದು ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಅಧಿಕಾರಿಗಳೊಂದಿ ಸಭೆ ಮಾಡಿದ್ದಾರೆ.

ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅನೇಕ ಸಂಸ್ಥೆ ಖಾಸಗಿ ಭೇಟಿ ಮಾಡ್ತಾ ಇದ್ದವು. ಎಲ್ಲರನ್ನೂ ಕರೆದು ಅವರ ಅಭಿಪ್ರಾಯ ಕೇಳಿದ್ದೇವೆ. ಹಾಗಾಗಿ ಒಂದು ವಾರದಲ್ಲಿ ಅನೌನ್ಸ್ ಮಾಡುತ್ತೇವೆ. ಅಕ್ಷೇಪಣೆಗೆ 15 ದಿನ ಕಾಲಾವಕಾಶ ನೀಡಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: BBMP Budget: ಹೊಸ ಜಾಹೀರಾತು ನೀತಿಯಿಂದ 500 ಕೋಟಿ ಆದಾಯ ಹೆಚ್ಚಿಸಲು ಚಿಂತನೆ; ಆನ್​ಲೈನ್​ ಮೂಲಕ ಜಾಹೀರಾತು ಪರವಾನಗಿ ನೀಡಲು ಪ್ಲ್ಯಾನ್​

ಸಾರ್ವಜನಿಕ, ಖಾಸಗಿ ಸ್ಥಳದಲ್ಲಿ ಜಾಹೀರಾತು ಅಳವಡಿಕೆಗೆ ಅವಕಾಶ ಕೊಡುತ್ತೇವೆ. ಬಿಬಿಎಂಪಿಗೆ ತೆರಿಗೆ ಕಟ್ಟಬೇಕಾಗುತ್ತೆ. ಜಾಹೀರಾತಿನ ಅಳತೆ, ಉದ್ದ ಎಲ್ಲಾ ಯುನಿಫರ್ಮಿಟಿ ಫಿಕ್ಸ್ ಮಾಡುತ್ತೇವೆ. ಒಂದು ರೋಡ್ ಅಂದ್ರೆ ಸುಂದರವಾಗಿ ಕಾಣುವ ತರಹ ಯುನಿಫಾರ್ಮಿಟಿ ಇರುತ್ತೆ. ಕೆಲವು ಪಿಪಿಪಿ ಮಾಡೆಲ್ ಇದೆ. ಅದರ ಲಿಗಾಲಿಟಿ ಚೆಕ್ ಮಾಡುತ್ತೇವೆ ಎಂದು ಹೇಳಿದರು.

60 ಅಡಿ ರಸ್ತೆಗಳಲ್ಲಿ ಮಾತ್ರ ಜಾಹಿರಾತಿಗೆ ಅನುಮತಿ

60 ಅಡಿ ರಸ್ತೆಗಳಲ್ಲಿ ಮಾತ್ರ ಜಾಹಿರಾತಿಗೆ ಅನುಮತಿ. ಉಳಿದ ಕೆಲ ಭಾಗಗಳಲ್ಲಿ ಕಮರ್ಷಿಯಲ್ ಇರೋದರಿಂದ ಅಲ್ಲಿ ಕೂಡ ಪರ್ಮಿಷನ್ ಕೊಡುತ್ತೇವೆ. ಇವತ್ತು ಎಲ್ಲಾ ಸ್ಟೇಕ್ ಹೋಲ್ಡರ್ಸ್ ಅಭಿಪ್ರಾಯ ತಿಳಿಸೋಕೆ ಸಮಯ ಕೊಡುತ್ತೇವೆ ಎಂದರು.

ಇದನ್ನೂ ಓದಿ: ಮುಂಬೈ ದುರ್ಘಟನೆ ಬಳಿಕ ಎಚ್ಚೆತ್ತುಕೊಳ್ಳದ ಬಿಬಿಎಂಪಿ; ಬೆಂಗಳೂರಿನಲ್ಲೂ ಬಲಿಗಾಗಿ ಕಾದು ಕುಂತಿವೆ ಬೃಹತ್ ಹೋರ್ಡಿಂಗ್ಸ್‌

ಸರ್ಕಾರಕ್ಕೆ ಈ ಹಿಂದೆ ಹಣ ಕಟ್ಟಬೇಕು ಅಂತವರು ಕಟ್ಟಲೇಬೇಕು. ಹಳೆಯ ಬಾಕಿ ಹಣ ಕಟ್ಟಿಯೇ ಮುಂದೆ ಬರಬೇಕು. ಇಲ್ಲದಿದ್ದರೆ ಅಂತಹವರಿಗೆ ಟೆಂಡರ್‌ನಲ್ಲಿ ಅವಕಾಶ ಇಲ್ಲ. ಮೆಟ್ರೋ ಹೊರಗೆ ಬಿಬಿಎಂಪಿ ಮತ್ತು ನಮ್ಮ ಮೆಟ್ರೋ ಸಹಭಾಗಿತ್ವದಲ್ಲಿ ಜಾಹೀರಾತು ಅಳವಡಿಕೆಗೆ ಪ್ರತ್ಯೇಕ ಪ್ಯಾಕೇಜ್ ನಿಗದಿ ಮಾಡಲಾಗುವುದು​ ಎಂದು ಹೇಳಿದ್ದಾರೆ.

ಮತ್ತಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ