Karnataka Dam Water Level: ಆಲಮಟ್ಟಿ ಡ್ಯಾಂನಿಂದ 3 ಲಕ್ಷ ಕ್ಯೂಸೆಕ್ ನೀರು ನದಿಗೆ, ರಾಜ್ಯದ 14 ಜಲಾಶಯಗಳ ನೀರಿನ ಮಟ್ಟ ವಿವರ ಹೀಗಿದೆ
ಮಹಾರಾಷ್ಟ್ರ ಹಾಗೂ ಬೆಳಗಾವಿ ಭಾಗದ ಕೃಷ್ಣ ಅಚ್ಚುಕಟ್ಟು ಪ್ರದೇಶದಲ್ಲಿ ಮಳೆ ಮುಂದುವರೆದಿದೆ. ಆಲಮಟ್ಟಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗುತ್ತಿದೆ. ಮುಂಜಾಗ್ರತೆ ಕ್ರಮವಾಗಿ ಒಳಹರಿವಿಗಿಂತಲೂ ಹೆಚ್ಚಿನ ಪ್ರಮಾಣದಲ್ಲಿ ನೀರನ್ನು ನದಿಗೆ ಹರಿಸಲಾಗುತ್ತಿದೆ. ಹಾಗಾದರೆ ಜಲಾಶಯಗಕ್ಕೆ ಒಳಹರಿವು ಮತ್ತು ಹೊರಹರಿವು ಎಷ್ಟಿದೆ ಎಂಬ ಮಾಹಿತಿ ಇಲ್ಲಿದೆ.
ಗರಿಷ್ಠ 519.60 ಮೀಟರ್ ಎತ್ತರವಿರುವ ಆಲಮಟ್ಟಿ ಜಲಾಶಯ 123.081 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿದೆ. ಮಂಗಳವಾರ 67.86 ನೀರು ಸಂಗ್ರಹವಾಗಿದೆ. 3 ಲಕ್ಷ ಕ್ಯೂಸೆಕ್ ನೀರು ನದಿಗೆ ಬಿಡಲಾಗುತ್ತಿದೆ. 2 ಲಕ್ಷ ಕ್ಯುಸೆಕ್ ಒಳಹರಿವು ಇದೆ. ಕರ್ನಾಟಕದ ಪ್ರಮುಖ 14 ಜಲಾಶಯಗಳಲ್ಲಿ ಇಂದಿನ ನೀರಿನ ಮಟ್ಟ (Karnataka Dam Water Level) ವಿವರ ಇಲ್ಲಿದೆ.
ಜಲಾಶಯಗಳ ನೀರಿನ ಮಟ್ಟ | ||||||
ಕರ್ನಾಟಕದ ಪ್ರಮುಖ ಜಲಾಶಯಗಳು (Dam) | ಗರಿಷ್ಠ ನೀರಿನ ಮಟ್ಟ (ಮೀ) | ಒಟ್ಟು ಸಾಮರ್ಥ್ಯ (ಟಿಎಂಸಿ) | ಇಂದಿನ ನೀರಿನ ಮಟ್ಟ (ಟಿಎಂಸಿ) | ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) | ಒಳಹರಿವು (ಕ್ಯೂಸೆಕ್ಸ್) | ಹೊರಹರಿವು (ಕ್ಯೂಸೆಕ್ಸ್) |
ಆಲಮಟ್ಟಿ ಜಲಾಶಯ (Almatti Dam) | 519.60 | 123.08 | 67.86 | 90.33 | 2,71,385 | 3,15,933 |
ತುಂಗಭದ್ರಾ ಜಲಾಶಯ (Tungabhadra Dam) | 497.71 | 105.79 | 97.41 | 66.52 | 1,47,122 | 1,56,482 |
ಮಲಪ್ರಭಾ ಜಲಾಶಯ (Malaprabha Dam) | 633.80 | 37.73 | 30.27 | 18.83 | 14,277 | 5261 |
ಕೆ.ಆರ್.ಎಸ್ (KRS Dam) | 38.04 | 49.45 | 49.45 | 33.78 | 57,012 | 33462 |
ಲಿಂಗನಮಕ್ಕಿ ಜಲಾಶಯ (Linganamakki Dam) | 554.44 | 151.75 | 120.52 | 65.95 | 40,382 | 0 |
ಕಬಿನಿ ಜಲಾಶಯ (Kabini Dam) | 696.13 | 19.52 | 19.00 | 18.75 | 20,346 | 11,833 |
ಭದ್ರಾ ಜಲಾಶಯ (Bhadra Dam) | 657.73 | 71.54 | 66.38 | 43.62 | 18,381 | 962 |
ಘಟಪ್ರಭಾ ಜಲಾಶಯ (Ghataprabha Dam) | 662.91 | 51.00 | 46.96 | 33.51 | 47,420 | 44,353 |
ಹೇಮಾವತಿ ಜಲಾಶಯ (Hemavathi Dam) | 890.58 | 37.10 | 35.29 | 28.62 | 32,622 | 31,795 |
ವರಾಹಿ ಜಲಾಶಯ (Varahi Dam) | 594.36 | 31.10 | 16.18 | 10.05 | 5,035 | 0 |
ಹಾರಂಗಿ ಜಲಾಶಯ (Harangi Dam) | 871.38 | 8.50 | 7.43 | 7.66 | 7,613 | 4,447 |
ಸೂಫಾ (Supa Dam) | 564.00 | 145.33 | 96.97 | 72.62 | 25,995 | 0 |
ನಾರಾಯಣಪುರ ಜಲಾಶಯ (Narayanpura Dam) | 492.25 | 33.31 | 24.01 | 28.82 | 3,10,771 | 3,21,538 |
ವಾಣಿವಿಲಾಸ ಸಾಗರ (VaniVilas Sagar Dam) | 652.24 | 30.42 | 17.94 | 24.76 | 974 | 147 |
ಆಲಮಟ್ಟಿ ಜಲಾಶಯದ ಮುಂಭಾಗ ಹಾಗೂ ನಾರಾಯಣಪುರ ಜಲಾಶಯದ ಹಿನ್ನೇರು ಪ್ರದೇಶವಾದ ಮುದ್ದೇಬಿಹಾಳ ಹಾಗೂ ನಿಡಗುಂದಿ ತಾಲೂಕಿನ ನದಿ ತೀರದ ಕೆಲ ಜಮೀನುಗಳು ಜಲಾವೃತಗೊಂಡಿವೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ