AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಕರ್ನಾಟಕ ರೈತರಿಗೆ ಸಿಹಿ ಸುದ್ದಿ; ಮಳೆ ಕೊರತೆಯ ನಡುವೆಯೂ ಭರ್ತಿಯಾಯ್ತು ಆಲಮಟ್ಟಿ ಜಲಾಶಯ

Almatti Dam water level; ಜಲಾಶಯದಲ್ಲಿ ಪ್ರಸ್ತುತ ಸಂಗ್ರಹಣೆಯು 123.081 ಟಿಎಂಸಿಯಷ್ಟಿದ್ದು, ಇದು ಜಲಾನಯನ ಜಿಲ್ಲೆಗಳ ನೀರಿನ ಅಗತ್ಯಗಳನ್ನು ಪೂರೈಸಲು ಸಾಕಾಗುತ್ತದೆ. ಜುಲೈ 27 ರಂದು ಕಾಲುವೆಗಳಿಗೆ ನೀರು ಬಿಡುವುದು ಆರಂಭವಾಗಿದ್ದು ಇದು ನವೆಂಬರ್ 23 ರವರೆಗೆ ಮುಂದುವರಿಯಲಿದೆ.

ಉತ್ತರ ಕರ್ನಾಟಕ ರೈತರಿಗೆ ಸಿಹಿ ಸುದ್ದಿ; ಮಳೆ ಕೊರತೆಯ ನಡುವೆಯೂ ಭರ್ತಿಯಾಯ್ತು ಆಲಮಟ್ಟಿ ಜಲಾಶಯ
ಆಲಮಟ್ಟಿ ಜಲಾಶಯ
ಗಣಪತಿ ಶರ್ಮಾ
|

Updated on: Aug 17, 2023 | 3:54 PM

Share

ಬೆಂಗಳೂರು, ಆಗಸ್ಟ್ 17: ರಾಜ್ಯದಲ್ಲಿ ಮಳೆ ಕೊರತೆಯ ಹೊರತಾಗಿಯೂ, ಒಳಹರಿವು ಕಡಿಮೆಯಿದ್ದರೂ ಆಲಮಟ್ಟಿ ಜಲಾಶಯದಲ್ಲಿ (Almatti Dam) ನೀರಿನ ಪ್ರಮಾಣ ಈ ವರ್ಷ ಇದೇ ಮೊದಲ ಬಾರಿಗೆ ಗರಿಷ್ಠ ಮಟ್ಟ ತಲುಪಿದೆ ಎಂದು ವರದಿಯಾಗಿದೆ. ವಿಜಯಪುರ, ಕಲಬುರಗಿ ಮತ್ತು ರಾಯಚೂರು ಸೇರಿದಂತೆ ಉತ್ತರ ಕರ್ನಾಟಕದ (North Karnataka) ಹಲವಾರು ಜಿಲ್ಲೆಗಳ ಜೀವನಾಡಿಯಾಗಿರುವ ಲಾಲ್ ಬಹದ್ದೂರ್ ಶಾಸ್ತ್ರಿ ಸಾಗರ ಅಥವಾ ಆಲಮಟ್ಟಿ ಅಣೆಕಟ್ಟೆ ಮೊದಲ ಬಾರಿಗೆ ತನ್ನ ಗರಿಷ್ಠ ಮಟ್ಟ (519.60 ಮೀಟರ್) ತಲುಪಿದೆ.

ಜುಲೈ 12ರಂದು ಮೊದಲ ಒಳಹರಿವು ಕಂಡಿದ್ದ ಜಲಾಶಯ ಬುಧವಾರ (ಆಗಸ್ಟ್ 16) ಗರಿಷ್ಠ ಮಟ್ಟ ತಲುಪಿದೆ. ಜುಲೈನಲ್ಲಿ ಜಲಾಶಯಕ್ಕೆ ಒಂದೆರಡು ದಿನ 1.50 ಲಕ್ಷ ಕ್ಯೂಸೆಕ್ ಒಳಹರಿವು ಇತ್ತು. ಆಗ ಅಣೆಕಟ್ಟೆ ಬಹುತೇಕ ತುಂಬಿತ್ತು. ಆದರೆ ಆಗಸ್ಟ್‌ನಲ್ಲಿ ಮಳೆ ಕೊರತೆಯಾಗಿರುವುದು ಗರಿಷ್ಠ ಮಟ್ಟದ ನೀರು ಸಂಗ್ರಹ ವಿಳಂಬವಾಗಲು ಕಾರಣವಾಯಿತು ಎಂದು ‘ಡೆಕ್ಕನ್ ಹೆರಾಲ್ಡ್’ ವರದಿ ಮಾಡಿದೆ.

ಜಲಾಶಯದಲ್ಲಿ ಪ್ರಸ್ತುತ ಸಂಗ್ರಹಣೆಯು 123.081 ಟಿಎಂಸಿಯಷ್ಟಿದ್ದು, ಇದು ಜಲಾನಯನ ಜಿಲ್ಲೆಗಳ ನೀರಿನ ಅಗತ್ಯಗಳನ್ನು ಪೂರೈಸಲು ಸಾಕಾಗುತ್ತದೆ. ಜುಲೈ 27 ರಂದು ಕಾಲುವೆಗಳಿಗೆ ನೀರು ಬಿಡುವುದು ಆರಂಭವಾಗಿದ್ದು ಇದು ನವೆಂಬರ್ 23 ರವರೆಗೆ ಮುಂದುವರಿಯಲಿದೆ. ನವೆಂಬರ್ ಮೊದಲ ವಾರದವರೆಗೆ ಒಳಹರಿವು ಚೆನ್ನಾಗಿದ್ದರೆ, ರಾಬಿ ಬೆಳೆಗಳಿಗೂ ನೀರು ಬಿಡಲಾಗುತ್ತದೆ ಎಂದು ವರದಿ ಉಲ್ಲೇಖಿಸಿದ್ದು, ಮಳೆ ಕೊರತೆ ಹೀಗೆಯೇ ಮುಂದುವರಿದರೆ ನೀರು ಬಿಡುವುದು ಕಷ್ಟವಾಗಬಹುದು ಎಂದೂ ಉಲ್ಲೇಖಿಸಿದೆ.

ಇದನ್ನೂ ಓದಿ: ತಮಿಳುನಾಡಿನ ಒತ್ತಡಕ್ಕೆ ಮಣಿಯಿತೇ ಕರ್ನಾಟಕ? 10 ಟಿಎಂಸಿ ನೀರು ಬಿಡಲಾಗುವುದು ಎಂದ ಡಿಸಿಎಂ ಡಿಕೆ ಶಿವಕುಮಾರ್

ಏತನ್ಮಧ್ಯೆ, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ಕೃಷ್ಣಾ ಮೇಲ್ದಂಡೆ ಯೋಜನೆಯ ನೀರಾವರಿ ಸಲಹಾ ಸಮಿತಿಯನ್ನು (ಐಸಿಸಿ) ಪುನರ್ ರಚಿಸಿದೆ. ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಆರ್​​ಬಿ ತಿಮ್ಮಾಪುರ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಎಲ್ಲಾ ಚುನಾಯಿತ ಪ್ರತಿನಿಧಿಗಳು, ಸಚಿವರು, ಸಂಸದರು, ಶಾಸಕರು ಮತ್ತು ಎಂಎಲ್‌ಸಿಗಳು ಮತ್ತು ಜಲಾನಯನ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಕೃಷಿ ಇಲಾಖೆ ಅಧಿಕಾರಿಗಳು ಇದರ ಸದಸ್ಯರಾಗಿದ್ದಾರೆ.

ಅಲ್ಲದೆ, ವಲಯ ಮುಖ್ಯ ಎಂಜಿನಿಯರ್‌ಗಳು, ಕಾಡಾ ಅಧಿಕಾರಿಗಳು ಸೇರಿದಂತೆ ಏಳು ಅಧಿಕಾರಿಗಳನ್ನು ಅಧಿಕಾರಿ-ಸದಸ್ಯರನ್ನಾಗಿ ನೇಮಿಸಲಾಗಿದೆ ಎಂದು ಜಲಸಂಪನ್ಮೂಲ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಎಸ್.ವಿಜಯಲಕ್ಷ್ಮಿ ಅವರು ಆದೇಶ ಹೊರಡಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು