AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರೋಬ್ಬರಿ 22 ಲಕ್ಷ ಅನರ್ಹ ಬಿಪಿಎಲ್ ಕಾರ್ಡ್: ಶಾಕಿಂಗ್ ಅಂಕಿಅಂಶ ಬಿಚ್ಚಿಟ್ಟ ಇ ಗವರ್ನೆನ್ಸ್ ಇಲಾಖೆ!

ಬಿಪಿಎಲ್ ಕಾರ್ಡ್, ಬಡವರ ಪಾಲಿನ ಆಶಾಕಿರಣ. ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ಅನುಕೂಲ. ಆದರೆ, ನಿಯಮಾವಳಿಗಳನ್ನೇ ಮೀರಿ ಬಿಪಿಎಲ್​ ಕಾರ್ಡ್​ ಸೌಲಭ್ಯ ಪಡೆಯುತ್ತಿರುವ ಜನರಿಗೆ ಇದೀಗ ಶಾಕ್​ ಎದುರಾಗಿದೆ. ಫಲಾನುಭವಿಗಳು ಅಲ್ಲದವರು ಬಿಪಿಎಲ್ ಕಾರ್ಡ್ ಬಳಸಿಕೊಂಡು ಸರ್ಕಾರದ ನಾನಾ ಯೋಜನೆಗಳನ್ನ ಪಡೆಯುತ್ತಿದ್ದಾರೆ. ಹೀಗಾಗಿ ಬಿಪಿಎಲ್ ಕಾರ್ಡ್​ನಲ್ಲಿ ಆಪರೇಷನ್ ಆಗ್ತಿದೆ. ಈಗಾಗಲೇ ಸುಮಾರು 10 ಸಾವಿರ ಬಿಪಿಎಲ್ ಕಾರ್ಡ್​ಗಳನ್ನು ರದ್ದು ಮಾಡಲಾಗಿದ್ದು, ಮತ್ತೆ ಮೆಗಾ ಆಪರೇಷನ್​ ನಡೆಯುವ ಸುಳಿವು ಸಿಕ್ಕಿದೆ.

ಬರೋಬ್ಬರಿ 22 ಲಕ್ಷ ಅನರ್ಹ ಬಿಪಿಎಲ್ ಕಾರ್ಡ್: ಶಾಕಿಂಗ್ ಅಂಕಿಅಂಶ ಬಿಚ್ಚಿಟ್ಟ ಇ ಗವರ್ನೆನ್ಸ್ ಇಲಾಖೆ!
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Nov 20, 2024 | 2:39 PM

Share

ಬೆಂಗಳೂರು, ನವೆಂಬರ್ 20: ರಾಜ್ಯ ಸರ್ಕಾರದಿಂದ ಅನರ್ಹ ಬಿಪಿಎಲ್ ಕಾರ್ಡ್​ದಾರರ ಮೆಗಾ ಆಪರೇಷನ್​ ನಡೆಯುತ್ತಿದೆ. ಅನರ್ಹ ಬಿಪಿಎಲ್ ಕಾರ್ಡ್​ ಫಲಾನುಭವಿಗಳೇ ಹೆಚ್ಚು ಇರುವ ಶಾಕಿಂಗ್ ಮಾಹಿತಿ ಬಯಲಾಗಿದೆ. ರಾಜ್ಯದಲ್ಲಿ ಬರೋಬ್ಬರಿ 22 ಲಕ್ಷ ಅನರ್ಹ ಬಿಪಿಎಲ್ ಕಾರ್ಡ್​ದಾರರು ಇದ್ದಾರೆ ಎಂಬ ಸತ್ಯಸಂಗತಿ ಬಯಲಾಗಿದೆ. ಕಳೆದ ಆಗಸ್ಟ್​ ತಿಂಗಳಿನಲ್ಲೇ ಆಹಾರ ಇಲಾಖೆಗೆ ಇ ಗವರ್ನೆನ್ಸ್​ ಇಲಾಖೆ ಮಾಹಿತಿ ಕೊಟ್ಟಿದೆ. ಇದೇ ಮಾಹಿತಿ ಇಟ್ಟುಕೊಂಡೇ 22 ಲಕ್ಷ ಅನರ್ಹ ಬಿಪಿಎಲ್​ ಕಾರ್ಡ್​​ಗಳ ರದ್ದಾಗಲಿದೆಯೇ ಎಂಬ ಅನುಮಾನ ಈಗ ಮೂಡಿದೆ.

ಕಲಬುರಗಿಯಲ್ಲೇ ಅತಿಹೆಚ್ಚು ಅನರ್ಹರಿಗೆ ಬಿಪಿಎಲ್ ಕಾರ್ಡ್

ಕಲಬುರಗಿ ಜಿಲ್ಲೆಯಲ್ಲೇ ಅತಿಗಹೆಚ್ಚು ಅನರ್ಹರಿಗೆ ಬಿಪಿಎಲ್​ ಕಾರ್ಡ್​ ಕೊಟ್ಟಿರುವ ಮಾಹಿತಿ ಸಿಕ್ಕಿದೆ. ಕಲಬುರಗಿಯಲ್ಲಿ 78,058 ಮಂದಿ ಅನರ್ಹರಿಗೆ ಬಿಪಿಎಲ್ ಕಾರ್ಡ್​ ನೀಡಲಾಗಿದೆ. ಬೆಂಗಳೂರಿನಲ್ಲಿ ಒಟ್ಟು 65,563 ಅನರ್ಹರ ಬಳಿ ಬಿಪಿಎಲ್ ಕಾರ್ಡ್​ ಇದೆ. ಬೆಂಗಳೂರು ಪೂರ್ವದಲ್ಲಿ 9,129 ಅನರ್ಹರಿಗೆ ಬಿಪಿಎಲ್ ಕಾರ್ಡ್ ನೀಡಲಾಗಿದೆ. ಬೆಂಗಳೂರು ಉತ್ತರದಲ್ಲಿ 17,382 ಅನರ್ಹರಿಗೆ ಬಿಪಿಎಲ್ ಕಾರ್ಡ್ ನೀಡಲಾಗಿದೆ. ಬೆಂಗಳೂರು ದಕ್ಷಿಣದಲ್ಲಿ 11,447 ಅನರ್ಹರಿಗೆ ಬಿಪಿಎಲ್ ಕಾರ್ಡ್ ನೀಡಲಾಗಿದೆ.

ಬಿಪಿಎಲ್ ಕಾರ್ಡ್ ರದ್ದು; ಪಡಿತರ ಸಿಗದೇ ವೃದ್ಧೆ ಕಣ್ಣೀರು

ಬಾಗಲಕೋಟೆಯಲ್ಲಿ ಬಿಪಿಎಲ್​ ಕಾರ್ಡ್​ ರದ್ದಿನಿಂದಾಗಿ ಪಡಿತರ ಸಿಗದೇ ವೃದ್ಧೆಯೊಬ್ಬರು ಕಣ್ಣೀರು ಹಾಕಿದ್ದಾರೆ.

ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ನ ವೃಷಭಾವತಿ ನಗರದಲ್ಲಿ ಹಲವು ಬಿಪಿಎಲ್ ಕಾರ್ಡ್ ಗಳು ರದ್ದುಗೊಂಡಿವೆ. ಮನೆಗೆಲಸ, ಹಪ್ಪಳ ಮಾರಾಟ ಮಾಡಿ ಬದುಕು ಸಾಗಿಸುತ್ತಿದ್ದ ಜನರು ಕಾರ್ಡ್ ರದ್ದತಿಯಿಂದ ಸಮಸ್ಯೆ ಎದುರಿಸುತ್ತಿದ್ದೇವೆ ಎಂದು ಅಳಲು ತೋಡಿಕೊಂಡಿದ್ದಾರೆ.

ಇನ್ನು ಬಿಪಿಎಲ್​ ಕಾರ್ಡ್​ ಪರಿಷ್ಕರಣೆಯನ್ನೇ ಅಸ್ತ್ರ ಮಾಡ್ಕೊಂಡಿರುವ ಬಿಜೆಪಿ, ಸತ್ಯಶೋಧನೆ ನಡೆಸುತ್ತಿದೆ. ಬಿಪಿಎಲ್ ಕಾರ್ಡ್​ ರದ್ದಾದವರ ಮನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ್​ ಭೇಟಿ ನೀಡಿದ್ದಾರೆ. ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ಕ್ಷೇತ್ರದ ಜೈ ಮಾರುತಿ ನಗರದಲ್ಲಿ ಬಿಪಿಎಲ್ ಕಾರ್ಡ್ ರದ್ದಾದವರ ನಿವಾಶಕ್ಕೆ ಭೇಟಿ ನೀಡಿದ್ದಾರೆ. ಆರ್. ಅಶೋಕ್​ಗೆ ಅಶ್ವಥ್ ನಾರಾಯಣ, ಕೆ.ಗೋಪಾಲಯ್ಯ ಸಾಥ್ ನೀಡಿದ್ದಾರೆ.

ಇದನ್ನೂ ಓದಿ: ಬಡ ಚಾಲಕನ ಕುಟುಂಬದ ಬಿಪಿಎಲ್ ಕಾರ್ಡ್ ರದ್ದು: ಪತ್ನಿಗೆ ಬ್ರೈನ್ ಟ್ಯೂಮರ್, ದುಡ್ಡಿಲ್ಲದೆ ಪರದಾಡುತ್ತಿರುವವರ ಮೇಲೆ ಪ್ರಹಾರ

ಏತನ್ಮಧ್ಯೆ, ಯಾರಿಗೂ ಅನ್ಯಾಯ ಆಗಲು ಬಿಡುವುದಿಲ್ಲ ಎಂದು ಆಹಾರ ಸಚಿವ ಕೆ.ಹೆಚ್​.ಮುನಿಯಪ್ಪ ಭರವಸೆ ನೀಡಿದ್ದಾರೆ. ಅರ್ಹ ಬಿಪಿಎಲ್ ಕಾರ್ಡ್​ದಾರರು ಆತಂಕ ಆತಂಕಕ್ಕೊಳಗಾಗುವುದು ಬೇಡ ಎಂದಿದ್ದಾರೆ.

ಯಾರು ಬಡವರಿದ್ದಾರೆ, ಅವರಿಗೆ ಬಿಪಿಎಲ್ ಕಾರ್ಡ್​ ಸಿಗಲಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಸಚಿವ ಎಂಬಿ ಪಾಟೀಲ್ ಮಾತನಾಡಿ, ಬಡವರ ರೇಷನ್ ಕಾರ್ಡ್​ ರದ್ದು ಮಾಡಲ್ಲ ಎಂದಿದ್ದಾರೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್