AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IT Raid on BY Vijayendra classmate: ಯಡಿಯೂರಪ್ಪ ಆಪ್ತನ ಬಳಿಕ ವಿಜಯೇಂದ್ರ ಆಪ್ತ ಗೆಳೆಯನ ಮನೆ ಮೇಲೆ ಐಟಿ ದಾಳಿ

ಬಿ ವೈ ವಿಜಯೇಂದ್ರ ಆಪ್ತ ಹಾಗೂ ಗೆಳೆಯ ಅರವಿಂದ ಮನೆ ಮೇಲೆ ಐಟಿ ದಾಳಿ ನಿನ್ನೆ ದಾಳಿ ನಡೆದಿದೆ. ಅರವಿಂದ್ ಮತ್ತು ವಿಜಯೇಂದ್ರ ಕ್ಲಾಸ್ ಮೇಟ್ಸ್​​. ವಸಂತ ನಗರದಲ್ಲಿ ವಾಸವಿರುವ ಅರವಿಂದ ಮನೆ ಮೇಲೆ ಐಟಿ ರೇಡ್​ ನಡೆದಿತ್ತು. ಅರವಿಂದ್​ ಜಯನಗರದಲ್ಲಿ ಸ್ವಂತ ಮನೆ ಹೊಂದಿದ್ದಾರೆ.

IT Raid on BY Vijayendra classmate: ಯಡಿಯೂರಪ್ಪ ಆಪ್ತನ ಬಳಿಕ ವಿಜಯೇಂದ್ರ ಆಪ್ತ ಗೆಳೆಯನ ಮನೆ ಮೇಲೆ ಐಟಿ ದಾಳಿ
ಯಡಿಯೂರಪ್ಪ ಆಪ್ತನ ಬಳಿಕ ವಿಜಯೇಂದ್ರ ಆಪ್ತ ಗೆಳೆಯನ ಮನೆ ಮೇಲೆ ಐಟಿ ದಾಳಿ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Oct 08, 2021 | 12:28 PM

ಬೆಂಗಳೂರು: ನಿನ್ನೆ ಗುರುವಾರ ಮಾಜಿ ಮುಖ್ಯಮಂತ್ರಿ ಬಿ ಎಸ್​​ ಯಡಿಯೂರಪ್ಪ ಆಪ್ತ ಎಂಆರ್ ಉಮೇಶ್​ ನಿವಾಸದ ಮೇಲೆ ಕರ್ನಾಟಕ-ಗೋವಾ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಐಟಿ ರೇಡ್​ ಮಾಡಿದ ಸಂದರ್ಭದಲ್ಲಿಯೇ ಯಡಿಯೂರಪ್ಪ ಅವರ ಪುತ್ರ ಬಿ ವೈ ವಿಜಯೇಂದ್ರ ಅವರ ಆಪ್ತ ಗೆಳೆಯನ ಮನೆಯ ಮೇಲೆಯೂ ಐಟಿ ದಾಳಿ ನಡೆದಿತ್ತು.

ಬಿ ವೈ ವಿಜಯೇಂದ್ರ ಆಪ್ತ ಹಾಗೂ ಗೆಳೆಯ ಅರವಿಂದ ಮನೆ ಮೇಲೆ ಐಟಿ ದಾಳಿ ನಿನ್ನೆ ದಾಳಿ ನಡೆದಿದೆ. ಅರವಿಂದ್ ಮತ್ತು ವಿಜಯೇಂದ್ರ ಕ್ಲಾಸ್ ಮೇಟ್ಸ್​​. ವಸಂತ ನಗರದಲ್ಲಿ ವಾಸವಿರುವ ಅರವಿಂದ ಮನೆ ಮೇಲೆ ಐಟಿ ರೇಡ್​ ನಡೆದಿತ್ತು. ಅರವಿಂದ್​ ಜಯನಗರದಲ್ಲಿ ಸ್ವಂತ ಮನೆ ಹೊಂದಿದ್ದಾರೆ.

ಹೊಸ ಮನೆ ಕಟ್ಟುವ ಕಾರಣಕ್ಕೆ ಅರವಿಂದ್​ ವಸಂತ ನಗರ ಮನೆಗೆ ಶಿಫ್ಟ್​ ಆಗಿದ್ದರು. ಪ್ರಸ್ತುತ ಅರವಿಂದ್ ದುಬೈಗೆ ತೆರಳಿದ್ದರು. ಆದರೆ ಇಂದು ದುಬೈನಿಂದ ಬೆಂಗಳೂರಿಗೆ ವಾಪಸಾಗಿದ್ದಾರೆ. ವಸಂತ ನಗರದ ಅರವಿಂದ್ ಫ್ಲಾಟ್ ನಲ್ಲಿ ಅವರ ತಂದೆ ಮತ್ತು ತಾಯಿ ಇದ್ದರು. ಇಂದು ಅರವಿಂದ ಸಮ್ಮಖದಲ್ಲಿ ಐಟಿ ಅಧಿಕಾರಿಗಳ ತಂಡ ಮನೆಯನ್ನು ಸರ್ಚ್ ಮಾಡಲಿದೆ.

ಕೇಂದ್ರದ ಮಿನಿಸ್ಟಿರಿ ಆಫ್ ಫಿನಾನ್ಸ್ ದಾಳಿಯನ್ನು ನೇರವಾಗಿ ಮಾನಿಟರ್ ಮಾಡ್ತಿದೆ:

ಇನ್ನು, ರಾಜ್ಯದಲ್ಲಿ ನಡೆಯುತ್ತಿರೊ ಐಟಿ ದಾಳಿ ಈ ಹಿಂದೆ ನಡೆದಿರೊ ದಾಳಿಗಳಿಗಿಂತ ಭಿನ್ನವಾಗಿದೆ ಎನ್ನಲಾಗಿದೆ. ಇದು ಸಂಪೂರ್ಣವಾಗಿ ಸೆಂಟ್ರಲೈಜಡ್ ( centralised) ದಾಳಿಯಾಗಿ ನಡೆಯುತ್ತಿದೆ. ಹೆಸರಿಗೆ ಬೆಂಗಳೂರು ಗೋವಾ ವಲಯದ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಆದರೆ ದಾಳಿ ನಡೆಯುತ್ತಿರೊ ಪ್ರತಿಯೊಂದು ತಂಡವನ್ನೂ ಲೀಡ್ ಮಾಡ್ತಿರೋದು ದೆಹಲಿ ಅಫೀಸರ್ಸ್.

ಇಲ್ಲಿಂದ ದಾಳಿ ವಿವರಗಳು ಸಂಪೂರ್ಣ ನೇರವಾಗಿ ದೆಹಲಿಗೆ ರವಾನೆಯಾಗುತ್ತಿದೆ. ಮಿನಿಸ್ಟರಿ ಆಫ್ ಫಿನಾನ್ಸ್ ಗೆ ಐಟಿ ಅಧಿಕಾರಿಗಳು ವರದಿ ನೀಡ್ತಿದಾರೆ. ಅಂದರೆ ಮಿನಿಸ್ಟಿರಿ ಆಫ್ ಫಿನಾನ್ಸ್ ಈ ದಾಳಿಯನ್ನು ನೇರವಾಗಿ ಮಾನಿಟರ್ ಮಾಡ್ತಿದೆ. ದಾಳಿ ಅಂತ್ಯದ ಬಳಿಕ ಮಿನಿಸ್ಟರಿ ಆಫ್ ಫಿನಾನ್ಸ್ ದೆಹಲಿ ಕೇಂದ್ರ ಕಚೇರಿಯಿಂದಲೇ ಪತ್ರಿಕ ಪ್ರಕಟಣೆ ಹೊರಬೀಳುವ ಸಾಧ್ಯತೆ ಇದೆ.

ಇದನ್ನೂ ಓದಿ: ಯಡಿಯೂರಪ್ಪ ಆಪ್ತನ ಮೇಲೆ ಐಟಿ ದಾಳಿ ಬೆನ್ನಲ್ಲೇ ಮುಖ್ಯಮಂತ್ರಿ ಬೊಮ್ಮಾಯಿ ಇಂದು ದೆಹಲಿ ಪ್ರಯಾಣ

ಇದನ್ನೂ ಓದಿ: ಐಟಿ ದಾಳಿ ಹಿನ್ನೆಲೆ ಸಿಎಂ ಕಚೇರಿ ಡ್ಯೂಟಿಯಿಂದ ಬಿಎಸ್‌ವೈ ಆಪ್ತ ಉಮೇಶ್​ಗೆ ಗೇಟ್​ ಪಾಸ್​ ನೀಡಿದ ಸಿಎಂ ಬೊಮ್ಮಾಯಿ

Vijayendra ಆಪ್ತ, ಗೆಳೆಯ Aravind ಮನೆ ಮೇಲೆ IT ದಾಳಿ! Bengaluruನ Vasanthanagarದಲ್ಲಿ ವಾಸವಿರುವ Aravind

Published On - 11:03 am, Fri, 8 October 21

ತೆಲಂಗಾಣ: ರೈಲ್ವೆ ಹಳಿ ಮೇಲೆ ಕಾರು ಚಲಾಯಿಸಿದ ಯುವತಿ
ತೆಲಂಗಾಣ: ರೈಲ್ವೆ ಹಳಿ ಮೇಲೆ ಕಾರು ಚಲಾಯಿಸಿದ ಯುವತಿ
ಕೇವಲ ಬೆಳಗಾವಿ ಮತ್ತು ಖಾನಾಪುರ ತಾಲೂಕುಗಳಲ್ಲಿ ಮಳೆಯಾಗುತ್ತಿದೆ: ಜಾರಕಿಹೊಳಿ
ಕೇವಲ ಬೆಳಗಾವಿ ಮತ್ತು ಖಾನಾಪುರ ತಾಲೂಕುಗಳಲ್ಲಿ ಮಳೆಯಾಗುತ್ತಿದೆ: ಜಾರಕಿಹೊಳಿ
ದೈವ ನುಡಿದಂತೆ ಮನೆಗೆ ಬಂದ ಅಣ್ಣ: ತಮ್ಮ ಹೇಳಿದ್ದಿಷ್ಟು
ದೈವ ನುಡಿದಂತೆ ಮನೆಗೆ ಬಂದ ಅಣ್ಣ: ತಮ್ಮ ಹೇಳಿದ್ದಿಷ್ಟು
ಚಿಕ್ಕಮಗಳೂರು: ಹಾಲಿನ ಟ್ಯಾಂಕರ್ ಪಲ್ಟಿ, ಹರಿಯಿತು ಹಾಲಿನ ಹೊಳೆ
ಚಿಕ್ಕಮಗಳೂರು: ಹಾಲಿನ ಟ್ಯಾಂಕರ್ ಪಲ್ಟಿ, ಹರಿಯಿತು ಹಾಲಿನ ಹೊಳೆ
ಕಬಿನಿ ಜಲಾಶಯಕ್ಕೆ ಶಿವಣ್ಣ-ಗೀತಕ್ಕ ಭೇಟಿ, ಮಕ್ಕಳೊಂದಿಗೆ ಬೆರೆತ ದಂಪತಿ
ಕಬಿನಿ ಜಲಾಶಯಕ್ಕೆ ಶಿವಣ್ಣ-ಗೀತಕ್ಕ ಭೇಟಿ, ಮಕ್ಕಳೊಂದಿಗೆ ಬೆರೆತ ದಂಪತಿ
ಮಗನಿಗಾಗಿ ಶಬರಿಯಂತೆ ಕಾಯ್ದ ತಾಯಿ, ದೈವದ ಮೊರೆ ಹೊಕ್ಕಿದ್ದ ಕುಟುಂಬ
ಮಗನಿಗಾಗಿ ಶಬರಿಯಂತೆ ಕಾಯ್ದ ತಾಯಿ, ದೈವದ ಮೊರೆ ಹೊಕ್ಕಿದ್ದ ಕುಟುಂಬ
ರಮೋಲಾಗೆ ಆಗಸದಲ್ಲಿ ಪ್ರಪೋಸ್ ಮಾಡಿ ಹಣೆಗೆ ಮುತ್ತಿಟ್ಟ ರಕ್ಷಕ್ ಬುಲೆಟ್
ರಮೋಲಾಗೆ ಆಗಸದಲ್ಲಿ ಪ್ರಪೋಸ್ ಮಾಡಿ ಹಣೆಗೆ ಮುತ್ತಿಟ್ಟ ರಕ್ಷಕ್ ಬುಲೆಟ್
ಸೇತುವೆಗಳ ಎತ್ತರ ಹೆಚ್ಚಿಸಿ ಮರುನಿರ್ಮಾಣ ಮಾಡುವ ಅವಶ್ಯಕತೆ ಇದೆ
ಸೇತುವೆಗಳ ಎತ್ತರ ಹೆಚ್ಚಿಸಿ ಮರುನಿರ್ಮಾಣ ಮಾಡುವ ಅವಶ್ಯಕತೆ ಇದೆ
ಚೀನಾಗೆ ಹೋಗಿ ಭಯೋತ್ಪಾದನೆ ವಿರುದ್ಧ ಗುಡುಗಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಚೀನಾಗೆ ಹೋಗಿ ಭಯೋತ್ಪಾದನೆ ವಿರುದ್ಧ ಗುಡುಗಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಆಗ್ರಾ-ಲಕ್ನೋ ಎಕ್ಸ್​​ಪ್ರೆಸ್​ವೇನಿಂದ ಕೆಳಗೆ ಉರುಳಿದ ಡಬಲ್ ಡೆಕ್ಕರ್ ಬಸ್
ಆಗ್ರಾ-ಲಕ್ನೋ ಎಕ್ಸ್​​ಪ್ರೆಸ್​ವೇನಿಂದ ಕೆಳಗೆ ಉರುಳಿದ ಡಬಲ್ ಡೆಕ್ಕರ್ ಬಸ್