AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಟ್ಟೂ ಬಿಡದೆ ರೇಡ್ ನಡೆಸ್ತಿರೊ ಐಟಿ ಅಧಿಕಾರಿಗಳು: ಬಿಎಸ್​​ವೈ ಆಪ್ತನ ಆಪ್ತ ಈಗ ದಾಳಿಗೆ ಗುರಿ! ಹೆಚ್ ​ಡಿ ಕುಮಾರಸ್ವಾಮಿಗೂ ಆಪ್ತ

ಕರ್ನಾಟಕದಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬಿಟ್ಟೂ ಬಿಡದೆ 32 ಗಂಟೆಗಳಿಂದ ನಿರಂತರವಾಗಿ ರೇಡ್ ನಡೆಸ್ತಿದ್ದಾರೆ. ಮತ್ತೊಬ್ಬ ಕ್ಲಾಸ್ 1 ಕಾಂಟ್ರ್ಯಾಕ್ಟರ್ ಮನೆ ಮೇಲೆ ದಾಳಿ ಮುಂದುವರೆದಿದೆ. ಬಸವೇಶ್ವರ ನಗರದಲ್ಲಿರುವ ಕ್ಲಾಸ್ 1 ಕಂಟ್ರ್ಯಾಕ್ಟರ್ ಸೋಮಶೇಖರ್ ಮನೆ ಮೇಲೆ ಐಟಿ ದಾಳಿ ನಡೆದಿದೆ.

ಬಿಟ್ಟೂ ಬಿಡದೆ ರೇಡ್ ನಡೆಸ್ತಿರೊ ಐಟಿ ಅಧಿಕಾರಿಗಳು: ಬಿಎಸ್​​ವೈ ಆಪ್ತನ ಆಪ್ತ ಈಗ ದಾಳಿಗೆ ಗುರಿ! ಹೆಚ್ ​ಡಿ ಕುಮಾರಸ್ವಾಮಿಗೂ ಆಪ್ತ
ಬಿಟ್ಟೂ ಬಿಡದೆ ರೇಡ್ ನಡೆಸ್ತಿರೊ ಐಟಿ ಅಧಿಕಾರಿಗಳು: ಯಡಿಯೂರಪ್ಪ ಆಪ್ತನ ಆಪ್ತ ಈಗ ದಾಳಿಗೆ ಗುರಿ!
TV9 Web
| Edited By: |

Updated on:Oct 08, 2021 | 1:33 PM

Share

ಬೆಂಗಳೂರು: ಕರ್ನಾಟಕದಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬಿಟ್ಟೂ ಬಿಡದೆ 32 ಗಂಟೆಗಳಿಂದ ನಿರಂತರವಾಗಿ ರೇಡ್ ನಡೆಸ್ತಿದ್ದಾರೆ. ಮತ್ತೊಬ್ಬ ಕ್ಲಾಸ್ 1 ಕಾಂಟ್ರ್ಯಾಕ್ಟರ್ ಮನೆ ಮೇಲೆ ದಾಳಿ ಮುಂದುವರೆದಿದೆ. ಬಸವೇಶ್ವರ ನಗರದಲ್ಲಿರುವ ಕ್ಲಾಸ್ 1 ಕಂಟ್ರ್ಯಾಕ್ಟರ್ ಸೋಮಶೇಖರ್ ಮನೆ ಮೇಲೆ ಐಟಿ ದಾಳಿ ನಡೆದಿದೆ.

ಎಚ್.ಡಿ. ಕುಮಾರಸ್ವಾಮಿಗೂ ಆಪ್ತನಾದ ಸೋಮಶೇಖರ್ ಮನೆ ಮೇಲೆ ದಾಳಿ: ಸೋಮಶೇಖರ್ ಮನೆಯ ಮೇಲೆ ನಿನ್ನೆಯೇ ದಾಳಿ ನಡೆಸಿದ್ದ ಐಟಿ ತಂಡದಿಂದ ಇಂದೂ ಶೋಧ ಕಾರ್ಯ ಮುಂದುವರಿದಿದೆ. ದಾಖಲಾತಿಗಳು, ಕಡತಗಳಿಗಾಗಿ ಹುಡುಕಾಟ ನಡೆಸ್ತಿದಾರೆ ಐಟಿ ಅಧಿಕಾರಿಗಳು. ಕುತೂಹಲಕಾರಿ ಸಂಗತಿಯೆಂದರೆ ಬಿಎಸ್​ ಯಡಿಯೂರಪ್ಪಅವರ ಆಪ್ತ, ಬಿಎಂಟಿಸಿ ಕಂಡಕ್ಟರ್​ ಎಂಆರ್​ ಉಮೇಶ್ ಗೆ ಆಪ್ತರಾಗಿರುವ ಸೋಮಶೇಖರ್ ಎಂಬುವವರ ಮನೆ ಇದಾಗಿದೆ. ಸೋಮಶೇಖರ್ ಅರಕಲಗೂಡು ಮೂಲದವರು. ಬಿಎಸ್​ ಯಡಿಯೂರಪ್ಪ ಮತ್ತು ಎಚ್.ಡಿ. ಕುಮಾರಸ್ವಾಮಿ ಅವರಿಗೂ ಸೋಮಶೇಖರ್ ಆಪ್ತನಾಗಿದ್ದ ಎಂಬುದು ಗಮನಾರ್ಹ.

ಬೆಳಗಾವಿ ಜಿಲ್ಲೆಯಲ್ಲೂ ಐಟಿ ಇಲಾಖೆ ಅಧಿಕಾರಿಗಳ ರೇಡ್

ಬೆಳಗಾವಿ ಜಿಲ್ಲೆಯಲ್ಲೂ ಐಟಿ ಇಲಾಖೆ ಅಧಿಕಾರಿಗಳ ರೇಡ್ ನಡೆದಿದೆ. ಉದ್ಯಮಿ, ಗುತ್ತಿಗೆದಾರ ಜಯಶೀಲ ಶೆಟ್ಟಿ ಮನೆ ಮೇಲೆ ರೇಡ್ ಆಗಿದೆ. ಬೆಳಗಾವಿ ಜಿಲ್ಲೆ ಗೋಕಾಕ್​​ ತಾಲೂಕಿನ ಘಟಪ್ರಭಾ ಗ್ರಾಮದ ಜಯಶೀಲ ಶೆಟ್ಟಿ ಮನೆಯಲ್ಲಿ ಶೋಧ ಆರಂಭವಾಗಿದೆ. ಗೋವಾ, ಬೆಳಗಾವಿಯ 16 ಅಧಿಕಾರಿಗಳ ತಂಡ ಬೆಳಗ್ಗೆಯಿಂದ ದಾಖಲಾತಿ ಪರಿಶೀಲನೆ ನಡೆಸುತ್ತಿದೆ.

ಕೇಂದ್ರದ ಮಿನಿಸ್ಟಿರಿ ಆಫ್ ಫಿನಾನ್ಸ್ ದಾಳಿಯನ್ನು ನೇರವಾಗಿ ಮಾನಿಟರ್ ಮಾಡ್ತಿದೆ:

ಇನ್ನು, ರಾಜ್ಯದಲ್ಲಿ ನಡೆಯುತ್ತಿರೊ ಐಟಿ ದಾಳಿ ಈ ಹಿಂದೆ ನಡೆದಿರೊ ದಾಳಿಗಳಿಗಿಂತ ಭಿನ್ನವಾಗಿದೆ ಎನ್ನಲಾಗಿದೆ. ಇದು ಸಂಪೂರ್ಣವಾಗಿ ಸೆಂಟ್ರಲೈಜಡ್ ( centralised) ದಾಳಿಯಾಗಿ ನಡೆಯುತ್ತಿದೆ. ಹೆಸರಿಗೆ ಬೆಂಗಳೂರು ಗೋವಾ ವಲಯದ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಆದರೆ ದಾಳಿ ನಡೆಯುತ್ತಿರೊ ಪ್ರತಿಯೊಂದು ತಂಡವನ್ನೂ ಲೀಡ್ ಮಾಡ್ತಿರೋದು ದೆಹಲಿ ಅಫೀಸರ್ಸ್.

ಇಲ್ಲಿಂದ ದಾಳಿ ವಿವರಗಳು ಸಂಪೂರ್ಣ ನೇರವಾಗಿ ದೆಹಲಿಗೆ ರವಾನೆಯಾಗುತ್ತಿದೆ. ಮಿನಿಸ್ಟರಿ ಆಫ್ ಫಿನಾನ್ಸ್ ಗೆ ಐಟಿ ಅಧಿಕಾರಿಗಳು ವರದಿ ನೀಡ್ತಿದಾರೆ. ಅಂದರೆ ಮಿನಿಸ್ಟಿರಿ ಆಫ್ ಫಿನಾನ್ಸ್ ಈ ದಾಳಿಯನ್ನು ನೇರವಾಗಿ ಮಾನಿಟರ್ ಮಾಡ್ತಿದೆ. ದಾಳಿ ಅಂತ್ಯದ ಬಳಿಕ ಮಿನಿಸ್ಟರಿ ಆಫ್ ಫಿನಾನ್ಸ್ ದೆಹಲಿ ಕೇಂದ್ರ ಕಚೇರಿಯಿಂದಲೇ ಪತ್ರಿಕ ಪ್ರಕಟಣೆ ಹೊರಬೀಳುವ ಸಾಧ್ಯತೆ ಇದೆ.

ಇದನ್ನೂ ಓದಿ: ಯಡಿಯೂರಪ್ಪ ಆಪ್ತನ ಮೇಲೆ ಐಟಿ ದಾಳಿ ಬೆನ್ನಲ್ಲೇ ಮುಖ್ಯಮಂತ್ರಿ ಬೊಮ್ಮಾಯಿ ಇಂದು ದೆಹಲಿ ಪ್ರಯಾಣ

ಇದನ್ನೂ ಓದಿ: ಐಟಿ ದಾಳಿ ಹಿನ್ನೆಲೆ ಸಿಎಂ ಕಚೇರಿ ಡ್ಯೂಟಿಯಿಂದ ಬಿಎಸ್‌ವೈ ಆಪ್ತ ಉಮೇಶ್​ಗೆ ಗೇಟ್​ ಪಾಸ್​ ನೀಡಿದ ಸಿಎಂ ಬೊಮ್ಮಾಯಿ

Vijayendra ಆಪ್ತ, ಗೆಳೆಯ Aravind ಮನೆ ಮೇಲೆ IT ದಾಳಿ! Bengaluruನ Vasanthanagarದಲ್ಲಿ ವಾಸವಿರುವ Aravind

Published On - 1:25 pm, Fri, 8 October 21

AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ