ಶುಲ್ಕ ಪಾವತಿಸಿಲ್ಲವೆಂದು SSLC ಪರೀಕ್ಷೆಗೆ ಅವಕಾಶ ನಿರಾಕರಣೆ; ಆತ್ಮಹತ್ಯೆಗೆ ಯತ್ನಿಸಿದ ಆಳ್ವಾಸ್​ ಸಂಸ್ಥೆ ವಿದ್ಯಾರ್ಥಿನಿ

ಪರೀಕ್ಷೆ ಬರೆಯಲೇಬೇಕು ಎಂದು ನಿರ್ಧರಿಸಿದ ವಿದ್ಯಾರ್ಥಿನಿ ನಿನ್ನೆಯಷ್ಟೇ ನ್ಯಾಯಕ್ಕಾಗಿ ಮಕ್ಕಳ ಹಕ್ಕುಗಳ ಆಯೋಗದ ಮೊರೆ ಹೋಗುವುದಾಗಿ ತಿಳಿಸಿದ್ದು, ಇದೀಗ ಆತ್ಮಹತ್ಯೆ ಯತ್ನ ಮಾಡಿರುವುದು ಬೆಳಕಿಗೆ ಬಂದಿದೆ.

ಶುಲ್ಕ ಪಾವತಿಸಿಲ್ಲವೆಂದು SSLC ಪರೀಕ್ಷೆಗೆ ಅವಕಾಶ ನಿರಾಕರಣೆ; ಆತ್ಮಹತ್ಯೆಗೆ ಯತ್ನಿಸಿದ ಆಳ್ವಾಸ್​ ಸಂಸ್ಥೆ ವಿದ್ಯಾರ್ಥಿನಿ
ಸಾಂಕೇತಿಕ ಚಿತ್ರ
Follow us
| Updated By: Skanda

Updated on:Jul 17, 2021 | 9:13 AM

ಬೆಂಗಳೂರು: ಶುಲ್ಕ ಪಾವತಿಸದ ಹಿನ್ನೆಲೆ ಎಸ್​ಎಸ್​ಎಲ್​ಸಿ ಪರೀಕ್ಷೆಗೆ (SSLC Exam 2021) ಅವಕಾಶ ಸಿಗದೇ ಇರುವುದರಿಂದ ಮನನೊಂದ ಮೂಡಬಿದರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿ (Alva’s College student) ಆತ್ಮಹತ್ಯೆಗೆ (Suicide attempt) ಪ್ರಯತ್ನಿಸಿದ್ದಾರೆ ಎನ್ನುವುದು ಬೆಳಕಿಗೆ ಬಂದಿದೆ. ಕೊರಟಗೆರೆ ಮೂಲದ ವಿದ್ಯಾರ್ಥಿನಿ ಪ್ರತಿಷ್ಠಿತ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ 2020-21ನೇ ಶೈಕ್ಷಣಿಕ ಸಾಲಿನ ಎಸ್​ಎಸ್​ಎಲ್​ಸಿ ವಿದ್ಯಾರ್ಥಿನಿಯಾಗಿದ್ದು, ಕಳೆದ ವರ್ಷದ ಶಾಲಾ ಶುಲ್ಕ, ವಸತಿ ಮತ್ತು ಊಟದ ಶುಲ್ಕ ಬಾಕಿಯಿರುವ ಕಾರಣಕ್ಕೆ ಪರೀಕ್ಷೆಯಿಂದ ವಂಚಿತರಾಗಿದ್ದಾರೆ. 9ನೇ ತರಗತಿಯಲ್ಲಿ ಶೇ.96 ಅಂಕ ಗಳಿಸಿರುವ ವಿದ್ಯಾರ್ಥಿನಿ ಈ ಬಾರಿ ಹಣವಿಲ್ಲದ ಕಾರಣಕ್ಕೆ ಎಸ್​ಎಸ್​ಎಲ್​ಸಿ ಪರೀಕ್ಷೆಗೆ ಹೆಸರು ನೋಂದಾಯಿಸಿಕೊಳ್ಳುವುದು (Registration) ಸಾಧ್ಯವಾಗಿಲ್ಲ.

ಶುಲ್ಕ ಪಾವತಿಸಲು ಹಣವಿಲ್ಲ, ಪರೀಕ್ಷೆಗೆ ಅವಕಾಶ ಮಾಡಿಕೊಡಿ ಎಂದರೂ ಶಿಕ್ಷಣ ಸಂಸ್ಥೆ ಪ್ರತಿಭಾನ್ವಿತ ವಿದ್ಯಾರ್ಥಿನಿಗೆ ಪರೀಕ್ಷೆಗೆ ಕೂರಲು ಅನುಮತಿ ನೀಡಿಲ್ಲ ಎನ್ನುವ ಆರೋಪ ಕೇಳಿಬಂದಿದ್ದು, ಈ ಬಗ್ಗೆ ವಿದ್ಯಾರ್ಥಿನಿ ಡಿಸೆಂಬರ್ ತಿಂಗಳಲ್ಲೇ ಶಿಕ್ಷಣ ಸಚಿವ ಸುರೇಶ್ ಕುಮಾರ್​ ಅವರ ಬಳಿ ತನ್ನ ಸಮಸ್ಯೆಯನ್ನು ಹೇಳಿಕೊಂಡರೂ ಯಾವುದೇ ಪ್ರಯೋಜನ ಆಗಿಲ್ಲ ಎನ್ನಲಾಗಿದೆ. ಪರೀಕ್ಷೆ ಬರೆಯಲೇಬೇಕು ಎಂದು ನಿರ್ಧರಿಸಿದ ವಿದ್ಯಾರ್ಥಿನಿ ನಿನ್ನೆಯಷ್ಟೇ ನ್ಯಾಯಕ್ಕಾಗಿ ಮಕ್ಕಳ ಹಕ್ಕುಗಳ ಆಯೋಗದ ಮೊರೆ ಹೋಗುವುದಾಗಿ ತಿಳಿಸಿದ್ದು, ಇದೀಗ ಆತ್ಮಹತ್ಯೆ ಯತ್ನ ಮಾಡಿರುವುದು ಬೆಳಕಿಗೆ ಬಂದಿದೆ.

ಕೊರಟಗೆರೆಯ ಹನುಮಂತಪುರ ನಿವಾಸಿಯಾದ ವಿದ್ಯಾರ್ಥಿನಿ ಮೂಡಬಿದರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ 2020-21 ನೇ ಸಾಲಿನ 10 ನೇ ತರಗತಿ ಅಭ್ಯಾಸ ಮಾಡುತ್ತಿದ್ದಾರೆ. ಕಳೆದ ವರ್ಷದ ಶಾಲಾ ಶುಲ್ಕ ಮತ್ತು ವಸತಿ ಮತ್ತು ಊಟದ ಶುಲ್ಕ ಬಾಕಿಯಿರುವುದಕ್ಕೆ, ಶಾಲಾ ಸಂಸ್ಥೆ ಎಸ್ಎಸ್ಎಲ್​ಸಿ ಪರೀಕ್ಷೆಗೆ ನೋಂದಾಯಿಸಿಲ್ಲ. 9ನೇ ತರಗತಿಯಲ್ಲಿ ಶೇ.96 ಅಂಕ ಗಳಿಸಿದ್ದೇನೆ, ಹೀಗಾಗಿ 10 ನೇ ತರಗತಿ ಪರೀಕ್ಷೆ ಬರೆಯಲು ಅವಕಾಶ ಕೊಡಿಸಿ ಎಂದು ವಿದ್ಯಾರ್ಥಿನಿ ಮನವಿ ಮಾಡಿಕೊಂಡರೂ ಸ್ಪಂದಿಸಿಲ್ಲ ಎನ್ನಲಾಗಿದೆ.

ಈ ಸಮಸ್ಯೆ ಗಮನಕ್ಕೆ ತಂದ ಮೇಲೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ವಿದ್ಯಾರ್ಥಿನಿಗೆ ಬರುವ ಆಗಸ್ಟ್​ನಲ್ಲಿ ಪರೀಕ್ಷೆ ತೆಗೆದುಕೊಳ್ಳಲು ತಿಳಿಸಿದ್ದರು. ಆದರೆ, ನೊಂದ ವಿದ್ಯಾರ್ಥಿನಿ ಪ್ರಸಕ್ತ ಸಾಲಿನಲ್ಲಿಯೇ ಪರೀಕ್ಷೆ ಬರೆಯಲು ಅವಕಾಶ ನೀಡುವಂತೆ ಮನವಿ ಮಾಡಿದ್ದರು. ಅಲ್ಲದೇ ಕೊರೊನಾ ಸೋಂಕಿತ ಮಕ್ಕಳಿಗೂ ಎಕ್ಸಾಂ ಬರೆಯಲು ಅವಕಾಶ ನೀಡಿದ್ದೀರಾ, ಅವರಿಗೆ ಪ್ರತ್ಯೇಕ ಕೊಠಡಿ ಅಥವಾ ಕೊವಿಡ್ ಕೇರ್ ಸೆಂಟರ್​ನಲ್ಲಿ ಪರೀಕ್ಷೆ ವ್ಯವಸ್ಥೆ ಮಾಡಿದ್ದೀರಾ, ಪರೀಕ್ಷೆ ಬರೆಯುವ ಉತ್ಸಾಹ ಇರುವ ನನಗೆ ಮಾತ್ರ ಅವಕಾಶ ಏಕಿಲ್ಲ ಎಂದು ಅಳಲು ತೋಡಿಕೊಂಡಿದ್ದರು.

ನೀವು ನಿಗದಿಪಡಿಸಿದ ಎಕ್ಸಾಂ ಸೆಂಟರ್​ಗೆ ಬಂದು ಪರೀಕ್ಷೆ ಎದುರಿಸಲು ವಿದ್ಯಾರ್ಥಿನಿ ಸಿದ್ಧವಾಗಿದ್ದಾಳೆ ಎಂದು ಪೋಷಕರು ತಿಳಿಸಿದ್ದು, ಇದೇ 19 ಮತ್ತು 22 ರಂದು ಪರೀಕ್ಷೆಗೆ ಅವಕಾಶ ನೀಡಿ ಎಂದು ಮನವಿ ಮಾಡಿದ್ದರು. ಆದರೆ ಶಿಕ್ಷಣ ಇಲಾಖೆಯಿಂದ ನ್ಯಾಯ ಸಿಗದ ಕಾರಣ ಮಕ್ಕಳ ಹಕ್ಕುಗಳ ಮೊರೆ ಹೋದ ವಿದ್ಯಾರ್ಥಿನಿ ಮತ್ತು ಆಕೆಯ ಪೋಷಕರು ನ್ಯಾಯಕ್ಕಾಗಿ ಕಾಯುತ್ತಿದ್ದ ವೇಳೆಯಲ್ಲೇ ಆಕೆ ಆತ್ಮಹತ್ಯೆಗೆ ಪ್ರಯತ್ನಿಸಿರುವುದು ಆತಂಕ ಮೂಡಿಸಿದೆ.

ಇದನ್ನೂ ಓದಿ: ಶುಲ್ಕ ಸಮರಕ್ಕೆ ಎಸ್​ಎಸ್​ಎಲ್​ಸಿ ಪರೀಕ್ಷೆಯಿಂದ ವಂಚಿತಳಾದ ಪ್ರತಿಭಾನ್ವಿತ ವಿದ್ಯಾರ್ಥಿನಿ

Published On - 9:12 am, Sat, 17 July 21

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ