‘ಪ್ರಾಣ ಹೋದ್ರೂ ಮೆಡಿಕಲ್ ಕಾಲೇಜು ಸ್ಥಳಾಂತರಕ್ಕೆ ಬಿಡಲ್ಲ, ಅದು ಕನಕಪುರದಲ್ಲೇ ಆಗ್ಬೇಕು’

ಬೆಂಗಳೂರು: ಯಾವುದೇ ಕಾರಣಕ್ಕೂ ನಾನು ಮೆಡಿಕಲ್ ಕಾಲೇಜನ್ನು ಸ್ಥಳಾಂತರಿಸಲು ಬಿಡುವುದಿಲ್ಲ. ನನ್ನ ಪ್ರಾಣ ಹೋದರೂ ಪರವಾಗಿಲ್ಲ. ಮೆಡಿಕಲ್ ಕಾಲೇಜು ಮಾತ್ರ ಚಿಕ್ಕಬಳ್ಳಾಪುರಕ್ಕೆ ಬಿಟ್ಟುಕೊಡುವುದಿಲ್ಲ ಎಂದು ಮೆಡಿಕಲ್ ಕಾಲೇಜು ಸ್ಥಳಾಂತರದ ಬಗ್ಗೆ ಡಿ.ಕೆ.ಶಿವಕುಮಾರ್ ಗುಡುಗಿದ್ದಾರೆ. ಕನಕಪುರದಲ್ಲೇ ಮೆಡಿಕಲ್ ಕಾಲೇಜು ಆಗಬೇಕು. ಈ ಕುರಿತು ನಮ್ಮ ಸರ್ಕಾರದಲ್ಲಿ ಈಗಾಗಲೇ ತೀರ್ಮಾನವಾಗಿದೆ. ಆದರೆ ಬಿಜೆಪಿ ಸರ್ಕಾರ ಅದನ್ನು ಚಿಕ್ಕಬಳ್ಳಾಪುರಕ್ಕೆ ಸ್ಥಳಾಂತರಿಸಿದೆ. ಈ ವಿಷಯದಲ್ಲಿ ಬಿ.ಎಸ್.ಯಡಿಯೂರಪ್ಪ ಧೋರಣೆ ಸರಿಯಲ್ಲ. ಇದರ ವಿರುದ್ಧ ನಾನು ಹೋರಾಟ ಮಾಡುತ್ತೇನೆ. ವಿಧಾನಸೌಧದಲ್ಲಿ ನನ್ನ ಪ್ರಾಣ ಬೇಕಾದ್ರೂ ಹೋಗಲಿ […]

ಪ್ರಾಣ ಹೋದ್ರೂ ಮೆಡಿಕಲ್ ಕಾಲೇಜು ಸ್ಥಳಾಂತರಕ್ಕೆ ಬಿಡಲ್ಲ, ಅದು ಕನಕಪುರದಲ್ಲೇ ಆಗ್ಬೇಕು
ಸಾಧು ಶ್ರೀನಾಥ್​

Updated on: Oct 29, 2019 | 5:10 PM

ಬೆಂಗಳೂರು: ಯಾವುದೇ ಕಾರಣಕ್ಕೂ ನಾನು ಮೆಡಿಕಲ್ ಕಾಲೇಜನ್ನು ಸ್ಥಳಾಂತರಿಸಲು ಬಿಡುವುದಿಲ್ಲ. ನನ್ನ ಪ್ರಾಣ ಹೋದರೂ ಪರವಾಗಿಲ್ಲ. ಮೆಡಿಕಲ್ ಕಾಲೇಜು ಮಾತ್ರ ಚಿಕ್ಕಬಳ್ಳಾಪುರಕ್ಕೆ ಬಿಟ್ಟುಕೊಡುವುದಿಲ್ಲ ಎಂದು ಮೆಡಿಕಲ್ ಕಾಲೇಜು ಸ್ಥಳಾಂತರದ ಬಗ್ಗೆ ಡಿ.ಕೆ.ಶಿವಕುಮಾರ್ ಗುಡುಗಿದ್ದಾರೆ.

ಕನಕಪುರದಲ್ಲೇ ಮೆಡಿಕಲ್ ಕಾಲೇಜು ಆಗಬೇಕು. ಈ ಕುರಿತು ನಮ್ಮ ಸರ್ಕಾರದಲ್ಲಿ ಈಗಾಗಲೇ ತೀರ್ಮಾನವಾಗಿದೆ. ಆದರೆ ಬಿಜೆಪಿ ಸರ್ಕಾರ ಅದನ್ನು ಚಿಕ್ಕಬಳ್ಳಾಪುರಕ್ಕೆ ಸ್ಥಳಾಂತರಿಸಿದೆ. ಈ ವಿಷಯದಲ್ಲಿ ಬಿ.ಎಸ್.ಯಡಿಯೂರಪ್ಪ ಧೋರಣೆ ಸರಿಯಲ್ಲ. ಇದರ ವಿರುದ್ಧ ನಾನು ಹೋರಾಟ ಮಾಡುತ್ತೇನೆ. ವಿಧಾನಸೌಧದಲ್ಲಿ ನನ್ನ ಪ್ರಾಣ ಬೇಕಾದ್ರೂ ಹೋಗಲಿ ಆದರೆ ಮೆಡಿಕಲ್ ಕಾಲೇಜು ಮಾತ್ರ ಬಿಟ್ಟುಕೊಡುವುದಿಲ್ಲ ಎಂದು ಡಿ.ಕೆ.ಶಿವಕುಮಾರ್ ಬಿಜೆಪಿ ಸರ್ಕಾರಕ್ಕೆ ಕಡಕ್ ಎಚ್ಚರಿಕೆ ನೀಡಿದ್ದಾರೆ.

Published On - 5:02 pm, Tue, 29 October 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us