AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ಸೋಂಕಿತೆ ಮೇಲೆ ಅತ್ಯಾಚಾರಕ್ಕೆ ಯತ್ನ ಆರೋಪ, ವ್ಯಕ್ತಿ ಅರೆಸ್ಟ್

ಕೊರೊನಾ ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ 25 ವರ್ಷದ ಸೋಂಕಿತೆ ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಕಳೆದ ರಾತ್ರಿ ಆಂಬ್ಯುಲೆನ್ಸ್ ಚಾಲಕ ಪಿಂಟು ಸೋಂಕಿತೆಯ ಬಳಿ ಬಂದು ಅತ್ಯಾಚಾರಕ್ಕೆ ಯತ್ನಿಸಿದ್ದನಂತೆ. ಮಲಗಿದ್ದಾಗ ಆಕೆಯ ಡೈಪರ್ ಮತ್ತು ಯೂರಿನ್ ಪೈಪ್ ತೆಗೆದಿದ್ದನಂತೆ. ಹೀಗಾಗಿ ತಕ್ಷಣ ನಿದ್ದೆಯಿಂದ ಎಚ್ಚರಗೊಂಡ ಸೋಂಕಿತೆ ಚೀರಾಡಿದ್ದಾಳೆ.

ಕೊವಿಡ್ ಸೋಂಕಿತೆ ಮೇಲೆ ಅತ್ಯಾಚಾರಕ್ಕೆ ಯತ್ನ ಆರೋಪ, ವ್ಯಕ್ತಿ ಅರೆಸ್ಟ್
ಘಟನಾ ಸ್ಥಳ ಮತ್ತು ಆರೋಪಿ ಪಿಂಟು
TV9 Web
| Edited By: ಆಯೇಷಾ ಬಾನು|

Updated on:Jun 22, 2021 | 9:36 AM

Share

ಕಲಬುರಗಿ: ಕೊರೊನಾ ಸೋಂಕು ಮಾನವನ ದೇಹ ಸೇರುತ್ತಿದ್ದಂತೆ ಅವನ ಹತ್ತಿರ ಯಾರು ಸುಳಿಯದಂತಾದ್ರು. ಸೋಂಕು ಅಂಟಿದೆ ಎಂದು ತಿಳಿಯುತ್ತಿದ್ದಂತೆ ಅವರನ್ನು ದೂರ ತಳ್ಳಲಾಗುತ್ತಿದೆ. ಕೊರೊನಾಗೆ ಸತ್ತವರನ್ನು ಕುಟುಂಬದವರೂ ಸಹ ನೋಡಲು ಬರುತ್ತಿಲ್ಲ. ಇಂತಹ ಪರಿಸ್ಥಿತಿ ನಡುವೆ ಕಲಬುರಗಿಯಲ್ಲಿ ಆರೋಪವೊಂದು ಹೇಳಿ ಬರುತ್ತಿದೆ. ಕೊವಿಡ್ ಸೋಂಕಿತೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.

ಕಲಬುರಗಿ ನಗರದ ಜಿಮ್ಸ್ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಇಂತಹದೊಂದು ಘಟನೆ ನಡೆದಿದೆ. ಖಾಸಗಿ ಆಂಬ್ಯುಲೆನ್ಸ್ ಚಾಲಕ ಪಿಂಟು ಎಂಬ ವ್ಯಕ್ತಿ ಕಳೆದ ರಾತ್ರಿ ಮಲಗಿದ್ದ ಕೊವಿಡ್ ಸೋಂಕಿತೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎಂದು ಹೇಳಲಾಗುತ್ತಿದೆ. ಸೋಂಕಿತೆ ಚೀರಾಟ ಹಿನ್ನೆಲೆಯಲ್ಲಿ ಆರೋಪಿ ಪರಾರಿಯಾಗಿದ್ದು ಪಿಂಟುನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕೊರೊನಾ ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ 25 ವರ್ಷದ ಸೋಂಕಿತೆ ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಕಳೆದ ರಾತ್ರಿ ಆಂಬ್ಯುಲೆನ್ಸ್ ಚಾಲಕ ಪಿಂಟು ಸೋಂಕಿತೆಯ ಬಳಿ ಬಂದು ಅತ್ಯಾಚಾರಕ್ಕೆ ಯತ್ನಿಸಿದ್ದನಂತೆ. ಮಲಗಿದ್ದಾಗ ಆಕೆಯ ಡೈಪರ್ ಮತ್ತು ಯೂರಿನ್ ಪೈಪ್ ತೆಗೆದಿದ್ದನಂತೆ. ಹೀಗಾಗಿ ತಕ್ಷಣ ನಿದ್ದೆಯಿಂದ ಎಚ್ಚರಗೊಂಡ ಸೋಂಕಿತೆ ಚೀರಾಡಿದ್ದಾಳೆ. ಈ ವೇಳೆ ಅಕ್ಕ-ಪಕ್ಕದ ರೋಗಿಗಳು ಕೂಡ ಎಚ್ಚರಗೊಂಡಿದ್ದರಿಂದ ಆರೋಪಿ ಓಡಿಹೋಗಿದ್ದಾನೆ. ಸದ್ಯ ಆರೋಪಿ ಪಿಂಟುನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಕಲಬುರಗಿಯ ಬ್ರಹ್ಮಪುರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ಕೊರೊನಾದಿಂದ ಗುಣಮುಖರಾದವರಲ್ಲಿ ಮತ್ತೊಂದು ಸಮಸ್ಯೆ.. ಕಾಲುಗಳು ಕಟ್

Published On - 8:10 am, Wed, 9 June 21

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ