AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ, ಹರ್ಯಾಣದಲ್ಲಿ ಆಂಬುಲೆನ್ಸ್ ಸುಲಿಗೆಗೆ ಬ್ರೇಕ್, ದರ ನಿಗದಿ: ಕರ್ನಾಟಕದಲ್ಲಿ ಯಾವಾಗ ಇದು ಜಾರಿಗೆ ಬರುವುದು?

ಕರ್ನಾಟಕದಲ್ಲಿ ಇಂತಹ ದುಬಾರಿ,ಹಗಲುದರೋಡೆಗೆ ಯಾವಾಗಪ್ಪ ಕಡಿವಾಣ ಬೀಳುತ್ತದೆ ಎಂದು ಜನ ನಿಡುಸುಯ್ಯುತ್ತಲೇ ಇದ್ದಾರೆ. ಕರ್ನಾಟಕ ಸರ್ಕಾರವು ದೆಹಲಿ ಮತ್ತು ಹರಿಯಾಣ ಸರ್ಕಾರಗಳ ನಿರ್ಧಾರದಿಂದ ಎಚ್ಚೆತ್ತುಕೊಳ್ಳುತ್ತದಾ?

ದೆಹಲಿ, ಹರ್ಯಾಣದಲ್ಲಿ ಆಂಬುಲೆನ್ಸ್ ಸುಲಿಗೆಗೆ ಬ್ರೇಕ್, ದರ ನಿಗದಿ: ಕರ್ನಾಟಕದಲ್ಲಿ ಯಾವಾಗ ಇದು ಜಾರಿಗೆ ಬರುವುದು?
ದೆಹಲಿ, ಹರ್ಯಾಣದಲ್ಲಿ ಆಂಬುಲೆನ್ಸ್ ಸುಲಿಗೆಗೆ ಬ್ರೇಕ್, ದರ ನಿಗದಿ: ಕರ್ನಾಟಕದಲ್ಲಿ ಯಾವಾಗ ಇದು ಜಾರಿಗೆ ಬರುವುದು?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: May 07, 2021 | 10:39 AM

Share

ಬೆಂಗಳೂರು: ರಾಕ್ಷಸ ಮುಖದ ಕೊರೊನಾ ಮಹಾಮಾರಿಯನ್ನು ನಿಯಂತ್ರಿಸಲು, ಸೋಂಕಿತರಿಗೆ ನೆರವಾಗಲು ದೆಹಲಿ ಮತ್ತು ಹರಿಯಾಣ ಸರ್ಕಾರಗಳು ಖಡಕ್ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿವೆ. ಅದರಲ್ಲೂ ಸೋಂಕಿತರನ್ನು ರವಾನಿಸುವ ಆಂಬುಲೆನ್ಸ್ ವಾಹನಗಳ ಉಪಟಳಕ್ಕೆ ಬ್ರೇಕ್ ಹಾಕಿವೆ. ಸೋಂಕಿತರನ್ನು ಯಾವುದೇ ಎಗ್ಗುಸಿಗ್ಗು ಇಲ್ಲದೆ ಸುಲಿಗೆ ಮಾಡುತ್ತಿದ್ದ ಆಂಬುಲೆನ್ಸ್ ಚಾಲಕರಿಗೆ ಕಡಿವಾಣ ಹಾಕಿದೆ.

ಈ ಎರಡು ರಾಜ್ಯಗಳಲ್ಲಿ ಆಂಬುಲೆನ್ಸ್ ಸೇವೆ ಗಗನಕುಸುಮವಾಗಿ, ಸೇವಾ ದರ ಗಗನಕ್ಕೆ ತಲುಪಿತ್ತು. ಅದರ ವಿರುದ್ಧ ವ್ಯಾಪಕ ಟೀಕೆಗಳು ಕೇಳಿಬಂದಿದ್ದವು. ಕೊನೆಗೆ ಎಚ್ಚೆತ್ತ ರಾಜ್ಯ ಸರ್ಕಾರಗಳು ಈ ಉಚಿತ ನಿರ್ಧಾರ ತೆಗೆದುಕೊಂಡಿವೆ. ಆದರೆ ಎಂದಿನಂತೆ ಆಂಬುಲೆನ್ಸ್ ಚಾಲಕರು ಈ ದರ ನಿಗದಿ ವಿರುದ್ಧ ಸೆಟೆದು ನಿಂತಿದ್ದಾರೆ. ಅಲ್ಲಲ್ಲಿ ಪ್ರತಿರೋಧವೊಡ್ಡುತ್ತಿದ್ದಾರೆ.

ಹರಿಯಾಣದಲ್ಲಿ ಆಂಬುಲೆನ್ಸ್ ಸುಲಿಗೆಗೆ ಬ್ರೇಕ್ ಹಾಕಿರುವ ಅಲ್ಲಿನ ರಾಜ್ಯ ಸರ್ಕಾರ ಆಂಬುಲೆನ್ಸ್​ಗೆ ಪ್ರತಿ ಕಿ.ಮೀ.ಗೆ 13 ರೂ. ನಿಗದಿ ಮಾಡಿದೆ. ದೆಹಲಿಯಲ್ಲಿಯೂ ಇಂತಹುದೇ ಜನಪರ ನಿರ್ಧಾರ ತೆಗೆದುಕೊಂಡಿರುವ ಅಲ್ಲಿನ ರಾಜ್ಯ ಸರ್ಕಾರ, ಆಂಬುಲೆನ್ಸ್ ಸೌಲಭ್ಯದ ಆಧಾರದಲ್ಲಿ ದರ ನೀಡಲು ಬಳಕೆದಾರರಿಗೆ ಸೂಚಿಸಿದೆ.

3 ರೀತಿಯ ಆಂಬುಲೆನ್ಸ್​ಗೆ ಮೂರು ಪ್ರತ್ಯೇಕ ದರ ನಿಗದಿ ಮಾಡಲಾಗಿದ್ದು, ರೋಗಿ ಸಾಗಿಸುವ ಸಾಮಾನ್ಯ ಆಂಬುಲೆನ್ಸ್​ಗೆ 1,500 ರೂಪಾಯಿ, 10 ಕಿಲೋಮೀಟರ್​ವರೆಗೆ 1,500 ರೂಪಾಯಿ ದರ ಮತ್ತು ನಂತರದ ಪ್ರತಿ ಕಿ.ಮೀ.ಗೆ ನೂರು ರೂಪಾಯಿ ದರ ನಿಗದಿ ಮಾಡಿವೆ. ಆಂಬುಲೆನ್ಸ್ ಚಾಲಕರ ಹಗಲು ದರೋಡೆಯಿಂದ ಬೇಸತ್ತಿದ್ದ ಸೋಂಕಿತರು ಇದನ್ನು ಕೇಳಿ ನಿಟ್ಟುಸಿರುಬಿಟ್ಟಿದ್ದಾರೆ.

ಅದೇ ಕರ್ನಾಟಕದಲ್ಲಿ ಇಂತಹ ದುಬಾರಿ,ಹಗಲುದರೋಡೆಗೆ ಯಾವಾಗಪ್ಪ ಕಡಿವಾಣ ಬೀಳುತ್ತದೆ ಎಂದು ಜನ ನಿಡುಸುಯ್ಯುತ್ತಲೇ ಇದ್ದಾರೆ. ಕರ್ನಾಟಕ ಸರ್ಕಾರವು ದೆಹಲಿ ಮತ್ತು ಹರಿಯಾಣ ಸರ್ಕಾರಗಳ ನಿರ್ಧಾರದಿಂದ ಎಚ್ಚೆತ್ತುಕೊಳ್ಳುತ್ತದಾ?

(Ambulance usage rates fixed in delhi and haryana but when it will be in karnataka)

ಹಾವೇರಿ: ಆಂಬುಲೆನ್ಸ್‌ ನೋಡ್ತಿದ್ದಂತೆ ಮನೆಯಿಂದ ಪರಾರಿಯಾಗಿ ಗದ್ದೆಯಲ್ಲಿ ಅಡಗಿಕೊಂಡ ಸೋಂಕಿತ

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು