AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿ ಸಿಲುಕಿರುವ ಕನ್ನಡಿಗರ ನೆರವಿಗೆ ನಿಂತ ಒಕ್ಕಲಿಗರ ಸಂಘ

ಇರಾನ್​-ಇಸ್ರೇಲ್​ ಯುದ್ಧದ ಎಫೆಕ್ಟ್​ ಭಾರತೀಯರಿಗೂ ತಟ್ಟಿದೆ. ವಿಮಾನಗಳ ಹಾರಾಟ ರದ್ದು ಹಿನ್ನೆಲೆ ವಿದೇಶಗಳಲ್ಲಿ ಕನ್ನಡಿಗರು ಸಿಲುಕಿಕೊಂಡಿದ್ದಾರೆ. ಸದ್ಯ ಸಹಾಯಕ್ಕಾಗಿ ಅಂಗಲಾಚುತ್ತಿರುವ ದುಬೈನಲ್ಲಿ ಸಿಲುಕಿರುವ ಕನ್ನಡಿಗರಿಗಾಗಿ ದುಬೈ ಒಕ್ಕಲಿಗರ ಸಂಘವು ಸಂತ್ರಸ್ತರಿಗೆ ತುರ್ತು ನೆರವು ನೀಡಲು ಮುಂದಾಗಿದೆ. ಸಂಘದ ಅಧ್ಯಕ್ಷ ತಮ್ಮನ್ನು ಸಂಪರ್ಕಿಸುವಂತೆ ಮನವಿ ಮಾಡಿದ್ದಾರೆ.

ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿ ಸಿಲುಕಿರುವ ಕನ್ನಡಿಗರ ನೆರವಿಗೆ ನಿಂತ ಒಕ್ಕಲಿಗರ ಸಂಘ
Israel–Iran conflictImage Credit source: aljazeera
ಮಂಜುನಾಥ ಕೆಬಿ
| Edited By: |

Updated on:Mar 01, 2026 | 5:27 PM

Share

ಹಾಸನ, ಮಾರ್ಚ್​​​ 01: ಇರಾನ್​ನಾದ್ಯಂತ ಅಮೆರಿಕ ಮತ್ತು ಇಸ್ರೇಲ್​​ ದಾಳಿ ಮುಂದುವರಿಸಿದೆ. ಯುದ್ಧದ (Middle East Conflict) ಎಫೆಕ್ಟ್​​ ಭಾರತೀಯರಿಗೂ ತಟ್ಟಿದೆ. ಫ್ಲೈಟ್ ಇಲ್ಲದೇ ಪರದಾಟ ನಡೆಸಿದ್ದಾರೆ. ಬೇರೆ ಬೇರೆ ದೇಶಗಳಲ್ಲಿ ನೂರಾರು ಕನ್ನಡಿಗರು ಸಿಲುಕಿದ್ದಾರೆ. ಸಹಾಯಕ್ಕಾಗಿ ಅಂಗಲಾಚುತ್ತಿದ್ದಾರೆ. ಹೀಗಾಗಿ ದುಬೈನಲ್ಲಿ ಸಿಲುಕಿದ ಕನ್ನಡಿಗರಿಗೆ ದುಬೈ ಒಕ್ಕಲಿಗರ ಸಂಘ ನೆರವಿಗೆ ಮುಂದಾಗಿದೆ. ತುರ್ತು ಪರಿಸ್ಥಿತಿ ಉಂಟಾದರೆ ಸಂಪರ್ಕ‌ ಮಾಡುವಂತೆ ಮನವಿ ಮಾಡಲಾಗಿದೆ.

ಕನ್ನಡಿಗರ ಸಹಾಯಕ್ಕೆ ಮುಂದಾದ ದುಬೈ ಒಕ್ಕಲಿಗರ ಸಂಘ

ದುಬೈ, ಅಬುಧಾಬಿ ಮೇಲೆ ಇರಾನ್​ ದಾಳಿ ಹಿನ್ನೆಲೆ ವಿಮಾನಗಳು ರದ್ದಾಗಿವೆ. ಫ್ಲೈಟ್ ಇಲ್ಲದೇ ಭಾರತೀಯರು ಪರದಾಟ ನಡೆಸಿದ್ದಾರೆ. ಇದಲ್ದೇ 50ಕ್ಕೂ ಹೆಚ್ಚು ಕನ್ನಡಿಗರು ದುಬೈನಲ್ಲೇ ಸಿಲುಕಿದ್ದು, ಸಹಾಸ ಹಸ್ತ ಚಾಚಿದ್ದಾರೆ. ದುಬೈನಲ್ಲಿ ಸಿಲುಕಿದ ಕನ್ನಡಿಗರ ಸಹಾಯಕ್ಕೆ ದುಬೈ ಒಕ್ಕಲಿಗರ ಸಂಘ ಮುಂದಾಗಿದೆ. ತುರ್ತು ಪರಿಸ್ಥಿತಿ ಉಂಟಾದರೆ ಸಂಪರ್ಕ‌ ಮಾಡುವಂತೆ ಟಿವಿ9 ಮೂಲಕ ದುಬೈ ಒಕ್ಕಲಿಗರ ಸಂಘದ ಅಧ್ಯಕ್ಷ ಮನವಿ ಮಾಡಿದ್ದಾರೆ. ದುಬೈನಲ್ಲಿರುವ ಕನ್ನಡಿಗರು​ +971555114205 ಸಂಖ್ಯೆಗೆ ಕರೆ ಮಾಡುವಂತೆ ತಿಳಿಸಿದ್ದಾರೆ.

ದುಬೈನಲ್ಲಿ ಸಿಲುಕಿದ ದಾವಣಗೆರೆ, ಬಳ್ಳಾರಿ ಜನ 

ದಾವಣಗೆರೆ ಹಾಗೂ ಬಳ್ಳಾರಿ ಜಿಲ್ಲೆಯ ಜನ ಪ್ರವಾಸಕ್ಕೆ ತೆರಳಿದ್ದರು. ನಿನ್ನೆ ಅವರೆಲ್ಲರೂ ಭಾರತಕ್ಕೆ ವಾಪಸ್ಸಾಗಬೇಕಿತ್ತು. ಆದರೆ ಯುದ್ಧ ಆರಂಭವಾದ ಹಿನ್ನೆಲೆ ಸಂಕಷ್ಟದಲ್ಲಿ ಸಿಲುಕಿದ್ದಾರೆ. ಪ್ರವಾಸಕ್ಕೆ ತೆರಳಿದ್ದ 20 ಜನ ಮಹಿಳೆ 30 ಜನ ಪುರುಷರು ಫೆಬ್ರವರಿ 28ಕ್ಕೆ ಹಿಂದಿರುಗಬೇಕಿತ್ತು. ಆದರೆ ಇದೀಗ ಯುದ್ಧದ ಕಾರಣ ಸಂಕಷ್ಟಕ್ಕೆ ಸಿಲುಕಿದ್ದಾರೆ.

ದುಬೈನಲ್ಲಿ ಸಿಲುಕಿದ ರಾಜ್ಯದ ಟೆಕ್ಕಿ 

ದುಬೈ ಮಾರ್ಗವಾಗಿ ಪ್ಯಾರಿಸ್​ಗೆ ತೆರಳುತ್ತಿದ್ದ ಬಾಗಲಕೋಟೆಯ ಬೀಳಗಿ ಪಟ್ಟಣದ ಗಿರೀಶ್ ಕೆರೂರು ಯುದ್ಧದ ಸಂಕಷ್ಟಕ್ಕೆ ಸಿಲುಕಿದ್ದಾರೆ. ಪ್ಯಾರಿಸ್​ಗೆ ಹೋಗಲು ವಿಮಾನವಿಲ್ಲದೇ ದುಬೈನ ಅಬುಧಾಬಿಯಲ್ಲೇ ಗಿರೀಶ್ ಸಿಲುಕಿಕೊಂಡಿದ್ದಾರೆ. ಸೆಲ್ಪಿ ವಿಡಿಯೋ ಮೂಲಕ ಗಿರೀಶ್ ಮಾಹಿತಿ ನೀಡಿದ್ದಾರೆ.

ಸಿಎಂ ಕಾರ್ಯದರ್ಶಿಗೆ ದುಬೈ ಕನ್ನಡಿಗರ ಮಾಹಿತಿ 

ಬಳ್ಳಾರಿ ಗ್ರಾಮೀಣ ಶಾಸಕ ಬಿ.ನಾಗೇಂದ್ರ, ಸಿಎಂ ಕಾರ್ಯದರ್ಶಿ ಅಂಜುಂ ಪರ್ವೇಜ್​ ಜತೆ ಮಾತಾಡಿ, ದುಬೈನಲ್ಲಿ ಸಿಲುಕಿರುವವರ ಬಗ್ಗೆ ಮಾಹಿತಿ ನೀಡಿದ್ದಾರೆ. ಏರ್ ಸ್ಟ್ರೈಕ್ ಕಾರಣ, ಎಲ್ಲಾ ವಿಮಾನಗಳ ಹಾರಾಟ ರದ್ದಾಗಿದೆ. ಮಾರ್ಚ್ 2ರವರೆಗೆ ಯಾವುದೇ ವಿಮಾನ‌ ಹಾರಾಟವಿಲ್ಲ ಅಂತಾ ಹೇಳುತ್ತಿದ್ದಾರೆ. ಅಲ್ಲದೇ ಬಳ್ಳಾರಿ ನಗರ ಶಾಸಕ ನಾರಾ.ಭರತ್ ರೆಡ್ಡಿ ದುಬೈನಲ್ಲಿ ಸಿಲುಕಿಕೊಂಡಿರುವ ಬಗ್ಗೆಯೂ ಮಾಹಿತಿ ನೀಡಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:19 pm, Sun, 1 March 26

Follow Us