ರಾಜ್ಯದಲ್ಲಿ ಜಲಕ್ಷಾಮದ ಸೂತಕ, ಕಾಂಗ್ರೆಸ್ ಸರ್ಕಾರಕ್ಕೆ ಗ್ಯಾರಂಟಿ ಉತ್ಸವ: ಆರ್ ಅಶೋಕ ವಾಗ್ದಾಳಿ

ಕರ್ನಾಟಕದಲ್ಲಿ ನೀರಿನ ಸಮಸ್ಯೆ ಹೆಚ್ಚಾಗುತ್ತಿದ್ದು, ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಜಲಕ್ಷಾಮ ಉಂಟಾಗಿದೆ. ನೀರಿನ ಸಮಸ್ಯೆಯಿಂದಾಗಿ ಜನರು ಪರದಾಟ ನಡೆಸುತ್ತಿದ್ದಾರೆ. ಆದರೆ, ಕಾಂಗ್ರೆಸ್ ಸರ್ಕಾರ ಅಲ್ಲಲ್ಲಿ ಗ್ಯಾರಂಟಿ ಸಮಾವೇಶಗಳನ್ನು ನಡೆಸುತ್ತಿದೆ. ಜಲಕ್ಷಾಮದ ನಡುವೆ ಸಮಾವೇಶಗಳನ್ನು ಆಯೋಜಿಸುತ್ತಿರುವ ರಾಜ್ಯ ಸರ್ಕಾರವನ್ನು ವಿಪಕ್ಷ ನಾಯಕ ಆರ್.ಅಶೋಕ ಅವರು ಟೀಕಿಸಿದ್ದಾರೆ.

ರಾಜ್ಯದಲ್ಲಿ ಜಲಕ್ಷಾಮದ ಸೂತಕ, ಕಾಂಗ್ರೆಸ್ ಸರ್ಕಾರಕ್ಕೆ ಗ್ಯಾರಂಟಿ ಉತ್ಸವ: ಆರ್ ಅಶೋಕ ವಾಗ್ದಾಳಿ
ರಾಜ್ಯದಲ್ಲಿ ಜಲಕ್ಷಾಮದ ಸೂತಕ, ಕಾಂಗ್ರೆಸ್ ಸರ್ಕಾರಕ್ಕೆ ಗ್ಯಾರಂಟಿ ಉತ್ಸವ: ಆರ್ ಅಶೋಕ ವಾಗ್ದಾಳಿ
Rakesh Nayak Manchi

Updated on: Mar 11, 2024 | 2:27 PM

ಬೆಂಗಳೂರು, ಮಾ.11: ಕರ್ನಾಟಕದಲ್ಲಿ (Karnataka) ನೀರಿನ ಸಮಸ್ಯೆ ಹೆಚ್ಚಾಗುತ್ತಿದ್ದು, ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಜಲಕ್ಷಾಮ ಉಂಟಾಗಿದೆ. ನೀರಿನ ಸಮಸ್ಯೆಯಿಂದಾಗಿ ಜನರು ಪರದಾಟ ನಡೆಸುತ್ತಿದ್ದಾರೆ. ಆದರೆ, ಲೋಕಸಭೆ ಚುನಾವಣೆಗೆ ಗ್ಯಾರಂಟಿಗಳನ್ನು ಮುಂದಿಟ್ಟುಕೊಂಡು ಪ್ರಚಾರ ಆರಂಭಿಸಿರುವ ಕಾಂಗ್ರೆಸ್ ಸರ್ಕಾರ ಅಲ್ಲಲ್ಲಿ ಸಮಾವೇಶಗಳನ್ನು (Guarantee Conventions) ನಡೆಸುತ್ತಿದೆ. ನೀರಿನ ಬಿಕ್ಕಟ್ಟಿನ (Water Crisis) ನಡುವೆ ಸಮಾವೇಶಗಳನ್ನು ಆಯೋಜಿಸುತ್ತಿರುವ ರಾಜ್ಯ ಸರ್ಕಾರವನ್ನು ವಿಪಕ್ಷ ನಾಯಕ ಆರ್.ಅಶೋಕ (R Ashoka) ಅವರು ಟೀಕಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ (ಟ್ವಿಟರ್) ಖಾತೆಯಲ್ಲಿ ಪೋಸ್ಟ್ ಮಾಡಿದ ಅಶೋಕ, “ರಾಜ್ಯದಲ್ಲಿ ಜಲಕ್ಷಾಮದ ಸೂತಕ, ಕಾಂಗ್ರೆಸ್ ಸರ್ಕಾರಕ್ಕೆ ಗ್ಯಾರೆಂಟಿ ಉತ್ಸವ” ಎಂದು ಜರಿದಿದ್ದಾರೆ. ಅಲ್ಲದೆ, ” ಅಜ್ಜಿಗೆ ಅರಿವೆ ಚಿಂತೆಯಾದರೆ ಮೊಮ್ಮಗಳಿಗೆ ಇನ್ನೇನೋ ಚಿಂತೆ ಎಂಬಂತೆ ಇಲ್ಲಿ ಜನ ಜಲಕ್ಷಾಮದಿಂದ ಹನಿ ನೀರಿಗೂ ಹಾಹಾಕಾರ ಪಡುತ್ತಿದ್ದರೆ, ಅತ್ತ ಸಿಎಂ ಸಿದ್ದರಾಮಯ್ಯ ಅವರು ಗ್ಯಾರೆಂಟಿ ಸಮಾವೇಶದ ಹೆಸರಿನಲ್ಲಿ ಜನರ ದುಡ್ಡಿನಲ್ಲಿ ಜಾತ್ರೆ ಮಾಡುತ್ತಿದ್ದಾರೆ” ಎಂದರು.

ಇದನ್ನೂ ಓದಿ: Bengaluru Water Crisis: ಬೆಂಗಳೂರು ನೀರಿನ ಬಿಕ್ಕಟ್ಟು; ವರ್ಕ್ ಫ್ರಂ ಹೋಮ್, ಆನ್​ಲೈನ್ ತರಗತಿಗಳಿಗೆ ಹೆಚ್ಚಿದ ಬೇಡಿಕೆ

“ರಾಜ್ಯದಲ್ಲಿ 900 ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ಲಕ್ಷಾಂತರ ಕೃಷಿ ಕಾರ್ಮಿಕರು ಹೊಟ್ಟೆಪಾಡಿಗಾಗಿ ಊರು ಬಿಟ್ಟು ಗುಳೇ ಹೋಗಿದ್ದಾರೆ, 40ಕ್ಕೂ ಹೆಚ್ಚು ನೇಕಾರರು ದಿಕ್ಕು ಕಾಣದೆ ಜೀವ ಬಿಟ್ಟಿದ್ದಾರೆ. ಬೆಂಗಳೂರಿನಲ್ಲಿ ಜನ ತೊಟ್ಟು ನೀರಿಗೂ ಪರದಾಡುತ್ತಿದ್ದಾರೆ” ಎಂದರು.

ಆರ್ ಅಶೋಕ ಎಕ್ಸ್ ಪೋಸ್ಟ್

“ರಾಜ್ಯದಲ್ಲಿ ಇಂತಹ ಸೂತಕದ ವಾತಾವರಣ ಇರುವಾಗ ಗ್ಯಾರೆಂಟಿ ಸಮಾವೇಶದ ಹೆಸರಿನಲ್ಲಿ ಪ್ರತಿ ತಾಲೂಕಿಗೆ 50 ಲಕ್ಷ, ಪ್ರತಿ ಜಿಲ್ಲೆಗೆ ಒಂದು ಕೋಟಿ, ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಭಾಗವಹಿಸುವ ಕಾರ್ಯಕ್ರಮಗಳಿಗೆ ಎರಡು ಕೋಟಿ ಖರ್ಚು ಮಾಡಿ ಉತ್ಸವ ಮಾಡುತ್ತಿದೀರಲ್ಲ ಸಿಎಂ ಸಿದ್ದರಾಮಯ್ಯ ನವರೇ, ನಿಮಗೆ ಕಿಂಚಿತ್ತಾದರೂ ಮಾನವೀಯತೆ, ಕರ್ತವ್ಯ ಪ್ರಜ್ಞೆ ಇದೆಯೇ?” ಎಂದು ಪ್ರಶ್ನಿಸಿದರು.

“ಗ್ಯಾರೆಂಟಿ ಸಮಾವೇಶಕ್ಕಾಗಿ ನೂರಾರು ಕೋಟಿ ಪೋಲು ಮಾಡುವ ಬದಲು ಜನರಿಗೆ ನೀರಿನ ವ್ಯವಸ್ಥೆ ಮಾಡಬಹುದಿತ್ತಲ್ಲ? ಅದೇ ದುಡ್ಡಿನಲ್ಲಿ ರೈತರಿಗೆ ಬರ ಪರಿಹಾರ ಕೂಡಬಹುದಿತ್ತಲ್ಲವೆ? ರಾಜ್ಯದ ಜನತೆ ಇಲ್ಲಿ ಅವಸ್ಥೆ ಪಡುತ್ತಿದ್ದರೆ ನಿಮಗೆ ಚುನಾವಣಾ ಪ್ರಚಾರವೇ ಹೆಚ್ಚಾಗಿ ಹೋಯಿತೇ?” ಎಂದು ವಾಗ್ದಾಳಿ ನಡೆಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Rakesh Nayak Manchi

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.

Follow Us