AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Prajwal Revanna: ಪ್ರಜ್ವಲ್ ವಿಡಿಯೋ ಕೇಸ್: ಕಠೋರ ಶಿಕ್ಷೆ ನೀಡಿ, ಅದಕ್ಕೆ ಬೆಂಬಲ ಕೊಡ್ತೇವೆ ಎಂದ ಅಮಿತ್ ಶಾ

ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಕೋಲಾಹಲವನ್ನೇ ಸೃಷ್ಟಿಸಿದೆ. ಸದ್ಯ ಈ ವಿಚಾರವಾಗಿ ಹುಬ್ಬಳ್ಳಿಯ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಕೇಂದ್ರ ಗೃಹಸಚಿವ ಅಮಿತ್​ ಶಾ, ರಾಜ್ಯ ಸರ್ಕಾರಕ್ಕೆ ವಿರುದ್ಧ ವಾಗ್ದಾಳಿ ಮಾಡಿದ್ದಾರೆ. ಪ್ರಜ್ವಲ್ ರೇವಣ್ಣನನ್ನು ವಿದೇಶಕ್ಕೆ ಹಾರಿಹೋಗಲು ಏಕೆ ಬಿಟ್ಟಿದ್ದೀರಿ? ಆತನಿಗೆ ಕಠೋರ ಶಿಕ್ಷೆ ನೀಡಿ, ನಾವು ಬೆಂಬಲಿಸುತ್ತೇವೆ ಎಂದು ಹೇಳಿದ್ದಾರೆ.

Prajwal Revanna: ಪ್ರಜ್ವಲ್ ವಿಡಿಯೋ ಕೇಸ್: ಕಠೋರ ಶಿಕ್ಷೆ ನೀಡಿ, ಅದಕ್ಕೆ ಬೆಂಬಲ ಕೊಡ್ತೇವೆ ಎಂದ ಅಮಿತ್ ಶಾ
ಅಮಿತ್​ ಶಾ, ಪ್ರಜ್ವಲ್ ರೇವಣ್ಣ
ಶಿವಕುಮಾರ್ ಪತ್ತಾರ್
| Updated By: ಗಂಗಾಧರ​ ಬ. ಸಾಬೋಜಿ|

Updated on:May 01, 2024 | 8:29 PM

Share

ಹುಬ್ಬಳ್ಳಿ, ಮೇ 1: ಹಾಸನ ಸಂಸದ ಪ್ರಜ್ವಲ್‌ ರೇವಣ್ಣ (Prajwal Revanna) ಅಶ್ಲೀಲ ವಿಡಿಯೋ ಪ್ರಕರಣ ಕೋಲಾಹಲವನ್ನೇ ಸೃಷ್ಟಿಸಿದೆ. ರಾಜ್ಯವನ್ನೇ ತಲ್ಲಣಗೊಳಿಸುವ ಮೂಲಕ ದೇಶದೆಲ್ಲೆಡೆ ಸದ್ದು ಮಾಡುತ್ತಿದೆ. ವಿಚಾರಣೆಗೆ ಹಾಜರಾಗಿ ಎಂದು ತಂದೆ- ಮಗನಿಗೆ ಎಸ್‌ಐಟಿ ನೊಟೀಸ್​ ನೀಡಿದೆ. ಆದರೆ ಫೇಸ್‌ಬುಕ್‌ ಮೂಲಕವೇ ಆರೋಪಿ ಪ್ರಜ್ವಲ್‌ ಪ್ರತ್ಯಕ್ಷವಾಗಿದ್ದು, ವಿಚಾರಣೆಗೆ ಸಮಯ ಕೇಳಿದ್ದಾರೆ. ಸದ್ಯ ಈ ವಿಚಾರವಾಗಿ ಕೇಂದ್ರ ಗೃಹಸಚಿವ ಅಮಿತ್​ ಶಾ (Amit Shah) ಮಾತನಾಡಿದ್ದು, ಮಹಿಳೆಯರ ಮೇಲೆ ದೌರ್ಜನ್ಯವೆಸಗಿದವರ ನಾವು ಇರುವುದಿಲ್ಲ. ಪ್ರಜ್ವಲ್ ರೇವಣ್ಣನಿಗೆ ಕಠೋರ ಶಿಕ್ಷೆ ನೀಡಿ, ನಾವು ಬೆಂಬಲಿಸುತ್ತೇವೆ ಎಂದು ಹೇಳಿದ್ದಾರೆ.

ಪ್ರಜ್ವಲ್ ರೇವಣ್ಣನನ್ನು ವಿದೇಶಕ್ಕೆ ಹಾರಿಹೋಗಲು ಏಕೆ ಬಿಟ್ಟಿದ್ದೀರಿ? ರಾಜ್ಯ ಸರ್ಕಾರಕ್ಕೆ ಶಾ ಪ್ರಶ್ನೆ

ನಗರದಲ್ಲಿ ಆಯೋಜಿಸಲಾಗಿದ್ದ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಅವರು, ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್​ ಜೊತೆ ಮೈತ್ರಿ ಮಾಡಿಕೊಳ್ಳುತ್ತಿದ್ದಂತೆ ಪ್ರಜ್ವಲ್ ರೇವಣ್ಣನ ಪೆನ್​ಡ್ರೈವ್ ಬಂತು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವಿದೆ, ಯಾಕೆ ಕ್ರಮಕೈಗೊಳ್ಳಲಿಲ್ಲ. ಪ್ರಜ್ವಲ್ ರೇವಣ್ಣನನ್ನು ವಿದೇಶಕ್ಕೆ ಹಾರಿಹೋಗಲು ಏಕೆ ಬಿಟ್ಟಿದ್ದೀರಿ ಎಂದು ಪ್ರಶ್ನಿಸಿದ್ದು, ಇಂತಹ ಪ್ರಕರಣದಲ್ಲೂ ಕಾಂಗ್ರೆಸ್ ರಾಜಕಾರಣ ಮಾಡುತ್ತಿದೆ ಎಂದು ವಾಗ್ದಾಳಿ ಮಾಡಿದ್ದಾರೆ.

ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ರಾಸಲೀಲೆಗಳು ನಡೆದಿದ್ದೆಲ್ಲಿ? ಸ್ಫೋಟಕ ಮಾಹಿತಿ ಬಹಿರಂಗ

ರಾಜ್ಯದಲ್ಲಿ ಮಹಿಳೆಯರಿಗೆ ರಕ್ಷಣೆ ನೀಡಲು ನಿಮಗೆ ಆಗದಿದ್ದಲ್ಲಿ ಹೇಳಿ ಕರ್ನಾಟಕವನ್ನು ನಾವು ಸುರಕ್ಷಿತವಾಗಿ ಇಡುತ್ತೇವೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ನೇಹಾ ಹಿರೇಮಠ ಕೊಲೆ ಪ್ರಕರಣ ಪ್ರಸ್ತಾಪಿಸಿದ ಅಮಿತ್ ಶಾ, ಏ.18ರಂದು ನೇಹಾಗೆ ಚಾಕುವಿನಿಂದ ಇರಿದು ಕೊಂದಿದ್ದ ಫಯಾಜ್. ನೇಹಾ ಹಿರೇಮಠ ಹಂತಕನಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಕೇಸ್‌: ಮೋದಿಗೆ ಪತ್ರ ಬರೆದ ಸಿದ್ದರಾಮಯ್ಯ, ಪತ್ರದಲ್ಲೇನಿದೆ?

ಆತಂಕವಾದಕ್ಕೆ ಅಂತ್ಯ ಹಾಡಬೇಕೆಂದರೆ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿ ಮಾಡಬೇಕು. ಮೋದಿ ಮತ್ತೊಮ್ಮೆ ಪ್ರಧಾನಿ ಆಗಿದ್ದರಿಂದ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಯಿತು. ಮತ ಬ್ಯಾಂಕ್ ದೂರವಾಗುತ್ತೆ ಅಂತ ಸೋನಿಯಾ, ರಾಹುಲ್, ಖರ್ಗೆ ರಾಮ ಪ್ರಾಣ ಪ್ರತಿಷ್ಠಾಪನೆಯಿಂದ ದೂರ ಉಳಿದರು ಭ್ರಷ್ಟಾಚಾರ, ಪರಿವಾರವಾದದಲ್ಲಿ ಕಾಂಗ್ರೆಸ್ ಮುಳುಗಿತು. ಪ್ರಲ್ಹಾದ್​ ಜೋಶಿಯನ್ನು ಮತ್ತೊಮ್ಮೆ ದೆಹಲಿಗೆ ಕಳಿಸಿ ಅವರಿಗೆ ಏನೂ ಮಾಡಬೇಕು ನಾವು ಮಾಡುತ್ತೇವೆ ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:28 pm, Wed, 1 May 24

ಮೋದಿ ತೆರಳುತ್ತಿದ್ದ ವೇಳೆ ಬ್ಯಾರಿಕೇಡ್​ ಜಂಪ್ ಮಾಡಲು ಯತ್ನಿಸಿದ ಯುವಕ
ಮೋದಿ ತೆರಳುತ್ತಿದ್ದ ವೇಳೆ ಬ್ಯಾರಿಕೇಡ್​ ಜಂಪ್ ಮಾಡಲು ಯತ್ನಿಸಿದ ಯುವಕ
8 ಸಿಕ್ಸರ್, 83 ರನ್; ಟಿಮ್ ಡೇವಿಡ್ ಸಿಡಿಲಬ್ಬರದ ಬ್ಯಾಟಿಂಗ್‌
8 ಸಿಕ್ಸರ್, 83 ರನ್; ಟಿಮ್ ಡೇವಿಡ್ ಸಿಡಿಲಬ್ಬರದ ಬ್ಯಾಟಿಂಗ್‌
‘ಸನ್ ಆಫ್ ಮುತ್ತಣ್ಣ’ ಸಿನಿಮಾದ ಬಗ್ಗೆ ನಟ ರಂಗಾಯಣ ರಘು ಮಾತು
‘ಸನ್ ಆಫ್ ಮುತ್ತಣ್ಣ’ ಸಿನಿಮಾದ ಬಗ್ಗೆ ನಟ ರಂಗಾಯಣ ರಘು ಮಾತು
ಮನೋರಂಜನ್ ರವಿಚಂದ್ರನ್ ಹೊಸ ಸಿನಿಮಾಗೆ ಮುಹೂರ್ತ; ಜೋಡಿಯಾದ ಬೃಂದಾ ಆಚಾರ್ಯ
ಮನೋರಂಜನ್ ರವಿಚಂದ್ರನ್ ಹೊಸ ಸಿನಿಮಾಗೆ ಮುಹೂರ್ತ; ಜೋಡಿಯಾದ ಬೃಂದಾ ಆಚಾರ್ಯ
ಮೋದಿ-ಸಿದ್ದರಾಮಯ್ಯ ಮಟ್ರೋನಲ್ಲಿ ಸಂಚಾರ: ಪ್ರಯಾಣದುದ್ದಕ್ಕೂ ನಗೆಯಲ್ಲಿ ತೇಲಾಟ
ಮೋದಿ-ಸಿದ್ದರಾಮಯ್ಯ ಮಟ್ರೋನಲ್ಲಿ ಸಂಚಾರ: ಪ್ರಯಾಣದುದ್ದಕ್ಕೂ ನಗೆಯಲ್ಲಿ ತೇಲಾಟ
2014ರಿಂದ ಕರ್ನಾಟಕ ರೈಲ್ವೆ ಬಜೆಟ್​ನಲ್ಲಿ 9 ಪಟ್ಟು ಹೆಚ್ಚಳ: ಅಶ್ವಿನಿ
2014ರಿಂದ ಕರ್ನಾಟಕ ರೈಲ್ವೆ ಬಜೆಟ್​ನಲ್ಲಿ 9 ಪಟ್ಟು ಹೆಚ್ಚಳ: ಅಶ್ವಿನಿ
ಹಳದಿ ಮಾರ್ಗಕ್ಕೆ ಚಾಲನೆ ನೀಡಿ ಮೆಟ್ರೋದಲ್ಲಿ ಮೋದಿ ಪ್ರಯಾಣ: ವಿಡಿಯೋ ನೋಡಿ
ಹಳದಿ ಮಾರ್ಗಕ್ಕೆ ಚಾಲನೆ ನೀಡಿ ಮೆಟ್ರೋದಲ್ಲಿ ಮೋದಿ ಪ್ರಯಾಣ: ವಿಡಿಯೋ ನೋಡಿ
ಈ ಭಾಗದ ಕನಸು ಸಾಕಾರಗೊಳಿಸಿದ ಮೋದಿ: ಮೆಟ್ರೋ ಹಳದಿ ಮಾರ್ಗಕ್ಕೆ ಚಾಲನೆ
ಈ ಭಾಗದ ಕನಸು ಸಾಕಾರಗೊಳಿಸಿದ ಮೋದಿ: ಮೆಟ್ರೋ ಹಳದಿ ಮಾರ್ಗಕ್ಕೆ ಚಾಲನೆ
ವಿಲ್ ಜ್ಯಾಕ್ಸ್ ಬಿರುಗಾಳಿ ಬ್ಯಾಟಿಂಗ್: 57 ಎಸೆತಗಳಲ್ಲಿ ಮುಗಿದ ಪಂದ್ಯ
ವಿಲ್ ಜ್ಯಾಕ್ಸ್ ಬಿರುಗಾಳಿ ಬ್ಯಾಟಿಂಗ್: 57 ಎಸೆತಗಳಲ್ಲಿ ಮುಗಿದ ಪಂದ್ಯ
ಕಾಲೇಜಿನಲ್ಲಿ ರ‍್ಯಾಗಿಂಗ್, ವಿದ್ಯುತ್ ಶಾಕ್ ನೀಡಿ ಚಿತ್ರಹಿಂಸೆ ಕೊಟ್ರು
ಕಾಲೇಜಿನಲ್ಲಿ ರ‍್ಯಾಗಿಂಗ್, ವಿದ್ಯುತ್ ಶಾಕ್ ನೀಡಿ ಚಿತ್ರಹಿಂಸೆ ಕೊಟ್ರು