ಕಾಮಾಲೆ ಕಣ್ಣಿಂದ ನೋಡೋದನ್ನ ಸಿದ್ದರಾಮಯ್ಯ ಬಿಡಬೇಕು: ಗೃಹ ಸಚಿವ ಬಸವರಾಜ ಬೊಮ್ಮಾಯಿ ಕಿವಿಮಾತು

ಅಮಿತ್ ಶಾ ಅವರು ಸತ್ಯವನ್ನೇ ನುಡಿದಿದ್ದಾರೆ. ಸಿದ್ದರಾಮಯ್ಯ ರಾಜಕಾರಣ ಮಾಡುವುದನ್ನು ಬಿಡಬೇಕು. ಎಲ್ಲವನ್ನೂ ಕಾಮಾಲೆ ಕಣ್ಣಿನಿಂದ ನೋಡುವುದು ಸರಿಯಲ್ಲ ಎಂದು ತಿರುಗೇಟು ನೀಡಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ.

ಕಾಮಾಲೆ ಕಣ್ಣಿಂದ ನೋಡೋದನ್ನ  ಸಿದ್ದರಾಮಯ್ಯ ಬಿಡಬೇಕು: ಗೃಹ ಸಚಿವ ಬಸವರಾಜ ಬೊಮ್ಮಾಯಿ ಕಿವಿಮಾತು
ಬಸವರಾಜ ಬೊಮ್ಮಾಯಿ
ರಶ್ಮಿ ಕಲ್ಲಕಟ್ಟ

Updated on: Jan 19, 2021 | 12:40 PM

ಬೆಂಗಳೂರು: ಸಿದ್ದರಾಮಯ್ಯ ಅವರದ್ದು ಕಾಮಾಲೆ ಕಣ್ಣು. ಅವರು ಇನ್ನೂ ಭೂತ ಕಾಲದಲ್ಲೇ ಇದ್ದಾರೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.

ಅಮಿತ್ ಶಾ ಸುಳ್ಳಿನ ಮೂಟೆ ಉರುಳಿಸಿ ಹೋಗಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆರೋಪಕ್ಕೆ ಪ್ರತಿಕ್ರಿಯಿಸಿದ ಬೊಮ್ಮಾಯಿ, 13ನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ ಎಷ್ಟು ಬಂತು? 14 ನೇ ಹಣಕಾಸು ಆಯೋಗದಲ್ಲಿ ಬಿಜೆಪಿ ಅವಧಿಯಲ್ಲಿ ಎಷ್ಟು ಬಂತು ಅನ್ನೋದು ಸ್ಪಷ್ಟ ಇದೆ.

ನಮ್ಮ ಅಧಿಕಾರವಧಿಯಲ್ಲಿ 9 ಸಾವಿರ ಕೋಟಿ ರೂ.ಗೂ ಹೆಚ್ಚು ಹಣ ರಾಜ್ಯಕ್ಕೆ ಸಿಕ್ಕಿದೆ. ಅಮಿತ್ ಶಾ ಅವರು ಸತ್ಯವನ್ನೇ ನುಡಿದಿದ್ದಾರೆ. ಸಿದ್ದರಾಮಯ್ಯ ರಾಜಕಾರಣ ಮಾಡುವುದನ್ನು ಬಿಡಬೇಕು. ಎಲ್ಲವನ್ನೂ ಕಾಮಾಲೆ ಕಣ್ಣಿನಿಂದ ನೋಡುವುದು ಸರಿಯಲ್ಲ ಎಂದಿದ್ದಾರೆ.

GST ಲೆಕ್ಕದಲ್ಲಿ ನಮಗೆ ದೊಡ್ಡ ಅನ್ಯಾಯವಾಗಿದೆ; ಈ ನಷ್ಟಕ್ಕೆ ಯಾರು ಹೊಣೆ? ಸಿದ್ದರಾಮಯ್ಯರಿಂದ ‘ಅಮಿತ’ ಪ್ರಶ್ನೆ!

 

Published On - 12:37 pm, Tue, 19 January 21

Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

Follow Us