AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದ ಪ್ರಮುಖ ವ್ಯಕ್ತಿಯೊಬ್ಬರು ದಸರಾ ಅತಿಥಿಯಾಗಿ ಬರುತ್ತಾರೆ: ಸಚಿವ ಹೆಚ್​ಕೆ ಪಾಟೀಲ್

ಅಕ್ಟೋಬರ್ 3ರಂದು ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೊಳ್ಳಲಿದ್ದು, ಅ. 12ರಂದು ಜಂಬೂಸವಾರಿ ನಡೆಯಲಿದೆ. ಆದರೆ ದಸರಾ ಉದ್ಘಾಟನೆ ಯಾರು ಮಾಡುತ್ತಾರೆ ಎಂಬುವುದು ತಿರ್ಮಾನಿಸಲಾಗಿತ್ತು. ಇದೀಗ ಗದಗಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿರವ ಸಚಿವ ಹೆಚ್​ಕೆ ಪಾಟೀಲ್​, ದೇಶದ ಒಬ್ಬ ಪ್ರಮುಖ ವ್ಯಕ್ತಿ ದಸರಾ ಅತಿಥಿಯಾಗಿ ಬರುತ್ತಾರೆ ಎಂದು ಹೇಳಿದ್ದಾರೆ.

ದೇಶದ ಪ್ರಮುಖ ವ್ಯಕ್ತಿಯೊಬ್ಬರು ದಸರಾ ಅತಿಥಿಯಾಗಿ ಬರುತ್ತಾರೆ: ಸಚಿವ ಹೆಚ್​ಕೆ ಪಾಟೀಲ್
ದೇಶದ ಪ್ರಮುಖ ವ್ಯಕ್ತಿಯೊಬ್ಬರು ದಸರಾ ಅತಿಥಿಯಾಗಿ ಬರುತ್ತಾರೆ: ಸಚಿವ ಹೆಚ್​ಕೆ ಪಾಟೀಲ್
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: |

Updated on:Aug 15, 2024 | 4:28 PM

Share

ಗದಗ, ಆಗಸ್ಟ್​ 15: ಈ ಬಾರಿ ವಿಜೃಂಭಣೆ, ಅರ್ಥಪೂರ್ಣವಾಗಿ ದಸರಾ (Mysuru Dasara) ಆಚರಣೆ ಮಾಡುತ್ತೇವೆ. ದೇಶದ ಒಬ್ಬ ಪ್ರಮುಖ ವ್ಯಕ್ತಿ ದಸರಾ ಅತಿಥಿಯಾಗಿ ಬರುತ್ತಾರೆ ಎಂದು ಪ್ರವಾಸೋದ್ಯಮ ಸಚಿವ ಹೆಚ್​.ಕೆ.ಪಾಟೀಲ್ (HK Patil) ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೈಸೂರು ದಸರಾ ಉದ್ಘಾಟನೆಗೆ ಎರಡು-ಮೂರು ಹೆಸರು ಪ್ರಸ್ತಾಪವಾಗಿದೆ. ಉದ್ಘಾಟಕರ ಹೆಸರನ್ನು ಮುಖ್ಯಮಂತ್ರಿಗಳೇ ತಿಳಿಸುತ್ತಾರೆ. ಪ್ರವಾಸಿಗರು ಮೈಸೂರಿನ ಗತವೈಭವ ಅನುಭವಿಸುವಂತೆ ಮಾಡುತ್ತೇವೆ ಎಂದಿದ್ದಾರೆ.

ದಸರಾ ಉದ್ಘಾಟನೆ ಯಾರಿಂದ ಎಂಬ ಪ್ರಶ್ನೆ ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿ, ಮೈಸೂರು ಉದ್ಘಾಟನೆ ಯಾರಿಂದ ಮಾಡಿಸಬೇಕು ಎಂಬುದುನ್ನು ನನಗೆ ಸಭೆಯಲ್ಲಿ ಸರ್ವಾನುಮತದಿಂದ ಅಧಿಕಾರ ನೀಡಿದ್ದಾರೆ. ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ‌ ಮಹದೇವಪ್ಪ ಅವರು ಕೆಲವು ತೀರ್ಮಾನವನ್ನು ಕೈಗೊಳ್ಳುತ್ತಾರೆ ಎಂದು ಹೇಳಿದ್ದರು. ಇದೀಗ ಹೆಚ್​.ಕೆ.ಪಾಟೀಲ್​ ದೇಶದ ಪ್ರಮುಖ ವ್ಯಕ್ತಿಯೊಬ್ಬರಿಂದ ದಸರಾ ಉದ್ಘಾಟನೆಗೊಳ್ಳಿದೆ ಎಂದಿರುವುದು ಸದ್ಯ ಕುತೂಹಲಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ಮೈಸೂರು ದಸರಾ ಜಂಬೂಸವಾರಿಯಲ್ಲಿ ಪಾಲ್ಗೊಳ್ಳಲಿರುವ 18 ಆನೆಗಳ‌ ಪಟ್ಟಿ ಬಿಡುಗಡೆ

ಗ್ಯಾರಂಟಿ ಯೋಜನೆ ವಿಚಾರವಾಗಿ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ಬಂದ್​ ಆಗುವುದಿಲ್ಲ. ತೆರಿಗೆ ಕಟ್ಟುವವರಿಗೆ ಗ್ಯಾರಂಟಿ ಕೊಡಬಾರದು ಅಂತಾ ಮಾಡಿದ್ದೇವೆ. ನುಸುಳಿ ಬಂದವರನ್ನ ತೆಗೆಯುವ ವ್ಯವಸ್ಥೆ ನಿಯಮಗಳಲ್ಲಿ ಇದೆ. ಕೆಲವರು ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ. ಗ್ಯಾರಂಟಿ ಯೋಜನೆ ನಿಲ್ಲಿಸುವ ಪ್ರಸ್ತಾಪ ಇಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಈ ಬಾರಿ ಅದ್ಧೂರಿ ದಸರಾ ಆಚರಣೆ: ಅ 3 ರಂದು ಉದ್ಘಾಟನೆ, ಅ 12 ಕ್ಕೆ ಜಂಬೂಸವಾರಿ

ಬಿಜೆಪಿ ಪಾದಯಾತ್ರೆ ಬಗ್ಗೆ ನಿರ್ಧಾರ ಆದ ಮೇಲೆ ಪ್ರತಿಕ್ರಿಯೆ ನೀಡುತ್ತೇನೆ. ಜಿಲ್ಲಾ ಪಂಚಾಯಿತಿ ತಾಲೂಕು ಪಂಚಾಯಿತಿ ಚುನಾವಣೆ ವಿಚಾರವಾಗಿ ಮಾತನಾಡಿದ ಅವರು, ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಕಾನೂನಾತ್ಮಕವಾಗಿ ಚುನಾವಣೆ ಮಾಡಬೇಕು. ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆ ಮಾಡೋದಕ್ಕೆ ಹೆಜ್ಜೆ ಇಡುತ್ತೇವೆ. ಮೀಸಲಾತಿ ಕುರಿತು ಸಾಕಷ್ಟು ಚರ್ಚೆಯಾಗಿದೆ. ಆದಷ್ಟು ಬೇಗ ಘೋಷಣೆ ಮಾಡುತ್ತೇವೆ. ಈ ಬಗ್ಗೆ ಸರ್ಕಾರ ಚಿಂತನೆ ಮಾಡುತ್ತಿದೆ ಎಂದು ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:11 pm, Thu, 15 August 24

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ