AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿಯ ಲೈಫ್​ಲೈನ್​ ಆಸ್ಪತ್ರೆಯಲ್ಲಿ ಐದು ಜನರ ನಿಗೂಢ ಸಾವು ಪ್ರಕರಣ; ತನಿಖೆಗೆ ಆದೇಶ

ಮೊನ್ನೆ ರಾತ್ರಿ ಮೇ 4ನೇ ತಾರೀಕಿನಂದು ಹುಬ್ಬಳ್ಳಿಯ ಲೈಫ್​ಲೈನ್​ ಆಸ್ಪತ್ರೆಯಲ್ಲಿ ಐದು ಜನ ನಿಗೂಢ ಸಾವು ಸಂಭವಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಆರೋಗ್ಯಾಧಿಕಾರಿಯಿಂದ ತನಿಖೆಗೆ ಆದೇಶ ಹೊರಡಿಸಲಾಗಿದೆ.

ಹುಬ್ಬಳ್ಳಿಯ ಲೈಫ್​ಲೈನ್​ ಆಸ್ಪತ್ರೆಯಲ್ಲಿ ಐದು ಜನರ ನಿಗೂಢ ಸಾವು ಪ್ರಕರಣ; ತನಿಖೆಗೆ ಆದೇಶ
ಪ್ರಾತಿನಿಧಿಕ ಚಿತ್ರ
shruti hegde
|

Updated on: May 06, 2021 | 11:41 AM

Share

ಹುಬ್ಬಳ್ಳಿ: ಜಿಲ್ಲೆಯಲ್ಲಿ ದಿನೇ ದಿನೇ ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಸೋಂಕಿಗೆ ಬಲಿಯಾಗುತ್ತಿರುವವರ ಸಂಖ್ಯೆಯೂ ಉಲ್ಬಣಗೊಳ್ಳುತ್ತಿದೆ. ಮೊನ್ನೆ ರಾತ್ರಿ ಮೇ 4ನೇ ತಾರೀಕಿನಂದು ಲೈಫ್​ಲೈನ್​ ಆಸ್ಪತ್ರೆಯಲ್ಲಿ ಐದು ಜನ ನಿಗೂಢ ಸಾವು ಸಂಭವಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಆರೋಗ್ಯಾಧಿಕಾರಿಯಿಂದ ತನಿಖೆಗೆ ಆದೇಶ ಹೊರಡಿಸಲಾಗಿದೆ. ಆಕ್ಸಿಜನ್​ ಕೊರತೆಯಿಂದಾಗಿ ಸಾವಿಗೀಡಾಗಿದ್ದಾರೆ ಎಂದು ಮೃತರ ಕುಟುಂಬಸ್ಥರು ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ತನಿಖೆ ನಡೆಸುವಂತೆ ಆದೇಶಿಸಲಾಗಿದೆ.

ಜಿಲ್ಲಾ ಆರ್​ಸಿಹೆಚ್ ಡಾ.ಎಸ್​.ಎಂ ಹೊನಕೇರಿ ನೈತೃತ್ವದಲ್ಲಿ ತನಿಖೆ ನಡೆಸುವಂತೆ ಡಿಹೆಚ್​ಓ ಯಶವಂತ ಮದೀನಕರ್ ಅವರು ಆದೇಶ ಹೊರಡಿಸಿದ್ದು, ಮೂರು ದಿನಗಳೊಳಗೆ ವಿಚಾರಣೆ ಮುಗಿಸಿ ವರದಿ ನೀಡಿವಂತೆ ಸೂಚನೆ ನೀಡಲಾಗಿದೆ.

ವಿಜಯಪುರ ಇಂಡಿ ತಾಲೂಕು ಆಸ್ಪತ್ರೆ ವೈದ್ಯರ ನಿರ್ಲಕ್ಷ; ರೋಗಿ ಸಾವು ಎಂದು ಆರೋಪ ಆಸ್ಪತ್ರೆಯ ವೈದ್ಯರು ಕುಟುಂಬಸ್ಥರನ್ನು ಹೆದರಿಸುತ್ತಿದ್ದಾರೆ. ರೋಗಿ ತುಂಬಾ ಗಂಭೀರ ಸ್ಥಿತಿಯಲ್ಲಿದ್ದಾರೆ. ಇನ್ನು, ಅವರು ಬದುಕುವುದಿಲ್ಲ ಎಂದು ವೈದ್ಯರು ಕುಡುಂಬಸ್ಥರನ್ನು ಹೆದರಿಸುತ್ತಿದ್ದಾರೆ.  ಸಂಬಂಧಿಕರಲ್ಲಿ ಅಧೈರ್ಯ ತುಂಬುತ್ತಿದ್ದಾರೆ ಎಂದು ಆರೋಪದ ಮಾತು ಕೇಳಿ ಬರುತ್ತಿದೆ. ಆಸ್ಪತ್ರೆಗೆ ಬರುವ ರೋಗಿಗಳಿಗೆ ಧೈರ್ಯ ತುಂಬುವ ಮಾತನ್ನಾಡುವುದನ್ನು ಬಿಟ್ಟು, ಧೈರ್ಯಗೆಡಿಸುತ್ತಿದ್ದಾರೆ. ಇಂಡಿ ತಾಲೂಕು ಆಸ್ಪತ್ರೆಯ ವೈದ್ಯರ ನಿರ್ಲಕ್ಷಕ್ಕೆ ರೋಗಿಗಳು ಬಲಿಯಾಗುತ್ತಿದ್ದಾರೆ ಎಂದು ಆರೋಪ‌ ಮಾಡಲಾಗುತ್ತಿದೆ.

ಕಳೆದ ಮೂರ್ನಾಲ್ಕು ದಿನಗಳಿಂದ ದಾಖಲಾಗಿದ್ದರೂ ಇಂಡಿ ಆಸ್ಪತ್ರೆಯಲ್ಲಿ ಸರಿಯಾಗಿ ಚಿಕಿತ್ಸೆ ನೀಡದ ಕಾರಣ ಕಳೆದ ರಾತ್ರಿ ರೋಗಿ ಸಾವಿಗೀಡಾಗಿದ್ದರು. ಹೀಗಾಗಿ ವೈದ್ಯರು ಹಾಗೂ ಸಿಬ್ಬಂದಿ ಮೇಲೆ ಕ್ರಮ ಕೈಗೊಳ್ಳುವಂತೆ ರೋಗಿ ಸಂಬಂಧಿಕರು ಆಗ್ರಹಿಸುತ್ತಿದ್ದಾರೆ.

ಇದನ್ನೂ ಓದಿ: ಕೊವಿಡ್ ಭಯ; ದಾವಣಗೆರೆಯಲ್ಲಿ ರೈಲಿಗೆ ತಲೆಕೊಟ್ಟ ಪತ್ರಕರ್ತ

Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು