AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ayodhya Ram Mandir: ಮುಂಡರಗಿಯ ಶಿಲ್ಪಿಗೆ ರಾಮಮಂದಿರ ನಿರ್ಮಾಣ ಕಾರ್ಯಕ್ಕೆ ಆಹ್ವಾನ! ಅಯೋಧ್ಯೆಯತ್ತ ತೆರಳಿದ ಯುವ ಶಿಲ್ಪಿ ನಾಗಮೂರ್ತಿ

ಅಯೋಧ್ಯೆಗೆ ತೆರಳಿ ಶ್ರೀರಾಮನ ದರ್ಶನ ಪಡೆದು ಜನ್ಮ ಪಾವನ ಮಾಡಿಕೊಳ್ಳುತ್ತೇನೆ. ನನಗೆ ಈ ಸೌಭಾಗ್ಯ ಒದಗಿ ಬಂದಿರುವುದು ತುಂಬಾನೆ ಖುಷಿಯಾಗಿದೆ. ಶ್ರೀರಾಮ ಮಂದಿರ ನಿರ್ಮಾಣ ಕಾರ್ಯಕ್ಕೆ ನನಗೆ ಆಹ್ವಾನ ಬಂದಿರುವುದು ನನ್ನ ಪೂರ್ವ ಜನ್ಮದ ಪುಣ್ಯ ಎಂದು ನಾಗಮೂರ್ತಿ ಸಂತಸಪಟ್ಟಿದ್ದಾರೆ.

Ayodhya Ram Mandir: ಮುಂಡರಗಿಯ  ಶಿಲ್ಪಿಗೆ ರಾಮಮಂದಿರ ನಿರ್ಮಾಣ ಕಾರ್ಯಕ್ಕೆ ಆಹ್ವಾನ! ಅಯೋಧ್ಯೆಯತ್ತ ತೆರಳಿದ ಯುವ ಶಿಲ್ಪಿ ನಾಗಮೂರ್ತಿ
ಮುಂಡರಗಿ ಶಿಲ್ಪಿಗೆ ರಾಮ ಮಂದಿರ ನಿರ್ಮಾಣ ಕಾರ್ಯಕ್ಕೆ ಆಹ್ವಾನ!
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: |

Updated on:Dec 28, 2023 | 11:12 AM

Share

ಗದಗ ಜಿಲ್ಲೆಯ ಮುಂಡರಗಿ  (Mundaragi) ಪಟ್ಟಣದಲ್ಲಿ ಕೆಲಸ ಮಾಡುತ್ತಿದ್ದ ಶಿಲ್ಪಿ (Artist) ನಾಗಮೂರ್ತಿ ಅವರಿಗೆ ರಾಮಮಂದಿರ ನಿರ್ಮಾಣದಲ್ಲಿ (Ayodhya Ram Mandir) ತೊಡಗಿಸಿಕೊಳ್ಳಲು ಸದವಕಾಶ ದೊರೆತಿದೆ. ಮುಂಡರಗಿ ಶಿಲ್ಪಿಗೆ ರಾಮ ಮಂದಿರ ನಿರ್ಮಾಣ ಕಾರ್ಯಕ್ಕೆ ಆಹ್ವಾನ ಬಂದಿದೆ. ನಾಗಮೂರ್ತಿ ಅವರು ಮೂಲತಃ ಕೊಪ್ಪಳ ಜಿಲ್ಲೆ ಕಾತರಕಿ ಗ್ರಾಮದ ನಿವಾಸಿ. ಪ್ರಸ್ತುತ ಮುಂಡರಗಿಯಲ್ಲಿ ಶಿಲ್ಪ ಕಲೆ ಮಾಡುತ್ತಿದ್ದಾರೆ. ನಾಗಮೂರ್ತಿ ಮೈಸೂರು ಜಿಲ್ಲೆ ಎಚ್.ಡಿ ಕೋಟೆಯಲ್ಲಿ ದೊರೆಯುವ ಕರಿಕಲ್ಲುಗಳನ್ನ (ಕೃಷ್ಣ ಶಿಲೆ) ಬಳಸಿ ಮೂರ್ತಿ ತಯಾರಿ ಮಾಡ್ತಾರೆ.

ನಾಗಮೂರ್ತಿ ಶಿವಮೊಗ್ಗ ಜಿಲ್ಲೆಯ ಸಾಗರದ ಶ್ರೀಗಂಧ ಕಲಾ ಸಂಕಿರಣ ಕಲಾ ವಿದ್ಯಾಲಯದಲ್ಲಿ ವ್ಯಾಸಂಗ ಮಾಡಿದ್ದಾರೆ. ಹಲವು ವರ್ಷ ಶಿಲ್ಪ ಕಲೆಯ ಬಗ್ಗೆ ಮುಂಡರಗಿ ವೆಂಕಟೇಶ ಸುತಾರ ಎಂಬವರ ಹತ್ತಿರ ತರಬೇತಿ ಪಡೆದು, ತಾನೇ ಸ್ವತಂತ್ರವಾಗಿ ಮೂರ್ತಿ ಕೆತ್ತನೆ ಆರಂಭಿಸಿದ್ದಾರೆ.

ಈ ವಾಗ ಅಯೋಧ್ಯೆ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ವತಿಯಿಂದ ನಾಗಮೂರ್ತಿ ಅವರಿಗೆ ಆಮಂತ್ರಣ ಬಂದಿದೆ. ಅಯೋಧ್ಯೆಗೆ ಆಹ್ವಾನ ಬಂದಿರುವ ಹಿನ್ನೆಲೆ ನಾಗಮೂರ್ತಿ ಅವರನ್ನು ಸ್ಥಳೀಯರು ಅಭಿಮಾನದಿಂದ ಸನ್ಮಾನಿಸಿದ್ದಾರೆ. ಗೌರವಿಸಿ ಅವರನ್ನು ಅಯೋಧ್ಯೆಗೆ ಕಳುಹಿಸಿಕೊಟ್ಟಿದ್ದಾರೆ.

Also Read: ಜನವರಿ 22ರಂದು ಅಯೋಧ್ಯೆಯಲ್ಲಿ ರಾಮಲಲ್ಲಾನ ಪ್ರತಿಷ್ಠಾಪನೆ; 6,000 ಮಂದಿಗೆ ಆಮಂತ್ರಣ

ಅಯೋಧ್ಯೆಗೆ ತೆರಳಿ ಶ್ರೀರಾಮನ ದರ್ಶನ ಪಡೆದು ಜನ್ಮ ಪಾವನ ಮಾಡಿಕೊಳ್ಳುತ್ತೇನೆ. ನನಗೆ ಈ ಸೌಭಾಗ್ಯ ಒದಗಿ ಬಂದಿರುವುದು ತುಂಬಾನೆ ಖುಷಿಯಾಗಿದೆ. ಶ್ರೀರಾಮ ಮಂದಿರ ನಿರ್ಮಾಣ ಕಾರ್ಯಕ್ಕೆ ನನಗೆ ಆಹ್ವಾನ ಬಂದಿರುವುದು ನನ್ನ ಪೂರ್ವ ಜನ್ಮದ ಪುಣ್ಯ ಎಂದು ನಾಗಮೂರ್ತಿ ಸಂತಸಪಟ್ಟಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:54 am, Tue, 12 December 23

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ