Ayodhya Ram Mandir: ಮುಂಡರಗಿಯ ಶಿಲ್ಪಿಗೆ ರಾಮಮಂದಿರ ನಿರ್ಮಾಣ ಕಾರ್ಯಕ್ಕೆ ಆಹ್ವಾನ! ಅಯೋಧ್ಯೆಯತ್ತ ತೆರಳಿದ ಯುವ ಶಿಲ್ಪಿ ನಾಗಮೂರ್ತಿ

ಅಯೋಧ್ಯೆಗೆ ತೆರಳಿ ಶ್ರೀರಾಮನ ದರ್ಶನ ಪಡೆದು ಜನ್ಮ ಪಾವನ ಮಾಡಿಕೊಳ್ಳುತ್ತೇನೆ. ನನಗೆ ಈ ಸೌಭಾಗ್ಯ ಒದಗಿ ಬಂದಿರುವುದು ತುಂಬಾನೆ ಖುಷಿಯಾಗಿದೆ. ಶ್ರೀರಾಮ ಮಂದಿರ ನಿರ್ಮಾಣ ಕಾರ್ಯಕ್ಕೆ ನನಗೆ ಆಹ್ವಾನ ಬಂದಿರುವುದು ನನ್ನ ಪೂರ್ವ ಜನ್ಮದ ಪುಣ್ಯ ಎಂದು ನಾಗಮೂರ್ತಿ ಸಂತಸಪಟ್ಟಿದ್ದಾರೆ.

Ayodhya Ram Mandir: ಮುಂಡರಗಿಯ  ಶಿಲ್ಪಿಗೆ ರಾಮಮಂದಿರ ನಿರ್ಮಾಣ ಕಾರ್ಯಕ್ಕೆ ಆಹ್ವಾನ! ಅಯೋಧ್ಯೆಯತ್ತ ತೆರಳಿದ ಯುವ ಶಿಲ್ಪಿ ನಾಗಮೂರ್ತಿ
ಮುಂಡರಗಿ ಶಿಲ್ಪಿಗೆ ರಾಮ ಮಂದಿರ ನಿರ್ಮಾಣ ಕಾರ್ಯಕ್ಕೆ ಆಹ್ವಾನ!
Edited By:

Updated on: Dec 28, 2023 | 11:12 AM

ಗದಗ ಜಿಲ್ಲೆಯ ಮುಂಡರಗಿ  (Mundaragi) ಪಟ್ಟಣದಲ್ಲಿ ಕೆಲಸ ಮಾಡುತ್ತಿದ್ದ ಶಿಲ್ಪಿ (Artist) ನಾಗಮೂರ್ತಿ ಅವರಿಗೆ ರಾಮಮಂದಿರ ನಿರ್ಮಾಣದಲ್ಲಿ (Ayodhya Ram Mandir) ತೊಡಗಿಸಿಕೊಳ್ಳಲು ಸದವಕಾಶ ದೊರೆತಿದೆ. ಮುಂಡರಗಿ ಶಿಲ್ಪಿಗೆ ರಾಮ ಮಂದಿರ ನಿರ್ಮಾಣ ಕಾರ್ಯಕ್ಕೆ ಆಹ್ವಾನ ಬಂದಿದೆ. ನಾಗಮೂರ್ತಿ ಅವರು ಮೂಲತಃ ಕೊಪ್ಪಳ ಜಿಲ್ಲೆ ಕಾತರಕಿ ಗ್ರಾಮದ ನಿವಾಸಿ. ಪ್ರಸ್ತುತ ಮುಂಡರಗಿಯಲ್ಲಿ ಶಿಲ್ಪ ಕಲೆ ಮಾಡುತ್ತಿದ್ದಾರೆ. ನಾಗಮೂರ್ತಿ ಮೈಸೂರು ಜಿಲ್ಲೆ ಎಚ್.ಡಿ ಕೋಟೆಯಲ್ಲಿ ದೊರೆಯುವ ಕರಿಕಲ್ಲುಗಳನ್ನ (ಕೃಷ್ಣ ಶಿಲೆ) ಬಳಸಿ ಮೂರ್ತಿ ತಯಾರಿ ಮಾಡ್ತಾರೆ.

ನಾಗಮೂರ್ತಿ ಶಿವಮೊಗ್ಗ ಜಿಲ್ಲೆಯ ಸಾಗರದ ಶ್ರೀಗಂಧ ಕಲಾ ಸಂಕಿರಣ ಕಲಾ ವಿದ್ಯಾಲಯದಲ್ಲಿ ವ್ಯಾಸಂಗ ಮಾಡಿದ್ದಾರೆ. ಹಲವು ವರ್ಷ ಶಿಲ್ಪ ಕಲೆಯ ಬಗ್ಗೆ ಮುಂಡರಗಿ ವೆಂಕಟೇಶ ಸುತಾರ ಎಂಬವರ ಹತ್ತಿರ ತರಬೇತಿ ಪಡೆದು, ತಾನೇ ಸ್ವತಂತ್ರವಾಗಿ ಮೂರ್ತಿ ಕೆತ್ತನೆ ಆರಂಭಿಸಿದ್ದಾರೆ.

ಈ ವಾಗ ಅಯೋಧ್ಯೆ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ವತಿಯಿಂದ ನಾಗಮೂರ್ತಿ ಅವರಿಗೆ ಆಮಂತ್ರಣ ಬಂದಿದೆ. ಅಯೋಧ್ಯೆಗೆ ಆಹ್ವಾನ ಬಂದಿರುವ ಹಿನ್ನೆಲೆ ನಾಗಮೂರ್ತಿ ಅವರನ್ನು ಸ್ಥಳೀಯರು ಅಭಿಮಾನದಿಂದ ಸನ್ಮಾನಿಸಿದ್ದಾರೆ. ಗೌರವಿಸಿ ಅವರನ್ನು ಅಯೋಧ್ಯೆಗೆ ಕಳುಹಿಸಿಕೊಟ್ಟಿದ್ದಾರೆ.

Also Read: ಜನವರಿ 22ರಂದು ಅಯೋಧ್ಯೆಯಲ್ಲಿ ರಾಮಲಲ್ಲಾನ ಪ್ರತಿಷ್ಠಾಪನೆ; 6,000 ಮಂದಿಗೆ ಆಮಂತ್ರಣ

ಅಯೋಧ್ಯೆಗೆ ತೆರಳಿ ಶ್ರೀರಾಮನ ದರ್ಶನ ಪಡೆದು ಜನ್ಮ ಪಾವನ ಮಾಡಿಕೊಳ್ಳುತ್ತೇನೆ. ನನಗೆ ಈ ಸೌಭಾಗ್ಯ ಒದಗಿ ಬಂದಿರುವುದು ತುಂಬಾನೆ ಖುಷಿಯಾಗಿದೆ. ಶ್ರೀರಾಮ ಮಂದಿರ ನಿರ್ಮಾಣ ಕಾರ್ಯಕ್ಕೆ ನನಗೆ ಆಹ್ವಾನ ಬಂದಿರುವುದು ನನ್ನ ಪೂರ್ವ ಜನ್ಮದ ಪುಣ್ಯ ಎಂದು ನಾಗಮೂರ್ತಿ ಸಂತಸಪಟ್ಟಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:54 am, Tue, 12 December 23

Sanjeev Pandre

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More
Follow Us