AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರವಾದಿ ಮೊಹಮ್ಮದ್ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ್ದಕ್ಕೆ ಮೈಸೂರಲ್ಲಿ ಗಲಾಟೆ ನಡೆದಿದೆ: ತನ್ವೀರ್ ಸೇಠ್

ಪ್ರವಾದಿ ಮೊಹಮ್ಮದ್ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ್ದಕ್ಕೆ ಮೈಸೂರಲ್ಲಿ ಗಲಾಟೆ ನಡೆದಿದೆ: ತನ್ವೀರ್ ಸೇಠ್

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Feb 13, 2025 | 1:37 PM

Share

ಗಲಭೆಗೆ ಯಾರೇ ಪ್ರಚೋದನೆ ನೀಡಿದ್ದರು ಅವರು ತಪ್ಪಿತಸ್ಥರು, ಸದ್ಯಕ್ಕೆ ಪೊಲೀಸರ ಮುಂದಿರುವ ಪ್ರಶ್ನೆಯೆಂದರೆ ತಪ್ಪಿತಸ್ಥರು ತಪ್ಪಿಸಿಕೊಳ್ಳದಂತೆ ಎಚ್ಚರ ವಹಿಸೋದು, ಯಾವ ಮಂತ್ರಿ ಏನು ಹೇಳುತ್ತಾರೆ, ಸರ್ಕಾರದ ಪ್ರತಿಕ್ರಿಯೆ ಏನು ತನಗೆ ಮುಖ್ಯವಲ್ಲ, ತನ್ನ ಮೇಲಿರುವ ಜವಾಬ್ದಾರಿಯನ್ನು ನಿಭಾಯಿಸುತ್ತೇನೆ, ಅಮಾಯಕರಿಗೆ ಶಿಕ್ಷೆಯಾಗಬಾರದು ಮತ್ತು ತಪ್ಪು ಮಾಡಿದವರು ಬಚಾವಾಗಬಾರದು ಎಂದು ಸೇಠ್ ಹೇಳಿದರು.

ಮೈಸೂರು: ನಗರದಲ್ಲಿ ಮೊನ್ನೆ ರಾತ್ರಿ ನಡೆದ ಘಟನೆಯ ಬಗ್ಗೆ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಮತ್ತೊಮ್ಮೆ ಪ್ರತಿಕ್ರಿಯೆ ನೀಡಿದ್ದು ದೊಂಬಿ ನಡೆದಿದ್ದು ರಾಹುಲ್ ಗಾಂಧಿ ಮತ್ತು ಅಖಿಲೇಶ್ ಯಾದವ್ ಅವರ ಫೋಟೋಗಳನ್ನು ಪೋಸ್ಟ್ ಮಾಡಿದ್ದಕ್ಕೆ ಅಲ್ಲ, ಪ್ರವಾದಿ ಮೊಹಮ್ಮದ್ ಪೈಗಂಬರ್ ಅವರ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ್ದಕ್ಕೆ ಎಂದು ಹೇಳಿದರು. ಅದರೆ ಅವರು ಪ್ರತಿಭಟನೆ ನಡೆಸಿದ ರೀತಿ ತಪ್ಪು, ಧರ್ಮ ಏನನ್ನು ಬೋಧಿಸುತ್ತದೆ ಅನ್ನೋದನ್ನು ಅವರು ಮನಗಾಣಬೇಕಿತ್ತು, ಶಾಂತಿಯುತವಾಗಿ ಪ್ರತಿಭಟನೆ ನಡೆಸಿದ್ದರೆ ಇದಕ್ಕೆಲ್ಲ ಅವಕಾಶವಿರುತ್ತಿರಲಿಲ್ಲ, ತಪ್ಪಿತಸ್ಥರು ಯಾರು ಅನ್ನೋದನ್ನು ಪತ್ತೆ ಮಾಡುವ ಕೆಲಸ ಮಾಡುತ್ತೇನೆ ಅಂತ ತನ್ವೀರ್ ಸೇಠ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ಮೈಸೂರು ಉದಯಗಿರಿ ಗಲಾಟೆ: ಅಸಲಿಗೆ ಅಲ್ಲಿ ನಡೆದಿದ್ದೇನು? ಎಡಿಜಿಪಿ ಆರ್ ಹಿತೇಂದ್ರ ಹೇಳಿದ್ದಿಷ್ಟು

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.