ಬೆಂಗಳೂರು, ಫೆಬ್ರವರಿ 18: ಅಟ್ಲಾಂಟಿಕ್ ಮಹಾಸಾಗರವನ್ನ (Atlantic Ocean) ಸತತ 52 ದಿನಗಳ ಕಾಲ ಏಕಾಂಗಿಯಾಗಿ ರೋವಿಂಗ್ ಮಾಡುತ್ತಾ ದಾಟಿ ದಾಖಲೆಗೈದ ಬೆಂಗಳೂರು ಮೂಲದ ಅನನ್ಯ ಪ್ರಸಾದ್ (Ananya Prasad) ಅವರ ಸಾಧನೆ ಇಡೀ ದೇಶ ಹೆಮ್ಮೆಪಡುವಂತದ್ದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹೆಮ್ಮೆ ವ್ಯಕ್ತಪಡಿಸಿದ್ದಾರೆ.
ಅಟ್ಲಾಂಟಿಕ್ ಮಹಾಸಾಗರವನ್ನ ಸತತ 52 ದಿನಗಳ ಕಾಲ ಏಕಾಂಗಿಯಾಗಿ ರೋವಿಂಗ್ ಮಾಡುತ್ತಾ ದಾಟಿ ದಾಖಲೆಗೈದ ನಮ್ಮ ಬೆಂಗಳೂರು ಮೂಲದ ಅನನ್ಯ ಪ್ರಸಾದ್ ಅವರ ಸಾಧನೆ ಇಡೀ ದೇಶ ಹೆಮ್ಮೆಪಡುವಂತದ್ದು. ಈ ಸಾಧನೆಯ ಶಿಖರವನ್ನೇರಿದ ಯುವತಿ ಕನ್ನಡದ ರಾಷ್ಟ್ರಕವಿ ಡಾ.ಜಿ.ಎಸ್ ಶಿವರುದ್ರಪ್ಪ ಅವರ ಮೊಮ್ಮಗಳು ಎನ್ನುವುದು ಇನ್ನಷ್ಟು ಖುಷಿಯ ವಿಷಯ.
ಅನಾಥ ಮಕ್ಕಳಿಗೆ… pic.twitter.com/vr6pGAsJYW
— Siddaramaiah (@siddaramaiah) February 18, 2025
ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಮಾಡಿದ ಅವರು, ಈ ಸಾಧನೆಯ ಶಿಖರವನ್ನೇರಿದ ಯುವತಿ ಕನ್ನಡದ ರಾಷ್ಟ್ರಕವಿ ಡಾ.ಜಿ.ಎಸ್ ಶಿವರುದ್ರಪ್ಪ ಅವರ ಮೊಮ್ಮಗಳು ಎನ್ನುವುದು ಇನ್ನಷ್ಟು ಖುಷಿಯ ವಿಷಯ. ಅನಾಥ ಮಕ್ಕಳಿಗೆ ಶಿಕ್ಷಣ ನೀಡುವ ಚಾಮರಾಜನಗರ – ರಾಮಸಮುದ್ರದ ದೀನಬಂಧು ಶಾಲೆಯ ಮಕ್ಕಳ ಭವಿಷ್ಯಕ್ಕಾಗಿ ಇಂಥದ್ದೊಂದು ಸಾಹಸಕ್ಕೆ ಕೈಹಾಕಿ ಯಶಸ್ವಿಯಾಗಿರುವ ಅನನ್ಯ ಪ್ರಸಾದ್ಗೆ ಅಭಿನಂದನೆಗಳು. ಇಂತಹ ನಿಸ್ವಾರ್ಥ ಆಲೋಚನೆಗಳು ನಿಮ್ಮನ್ನು ಜೀವನದಲ್ಲಿ ಮತ್ತಷ್ಟು ಎತ್ತರೆತ್ತರಕ್ಕೆ ಕೊಂಡೊಯ್ಯಲಿ ಎಂದು ಹಾರೈಸುತ್ತೇನೆ ಎಂದು ಅಭಿನಂದಿಸಿದ್ದಾರೆ.
ಬೆಂಗಳೂರಿನ ಮೂಲದವರಾದ ಅನನ್ಯ ಪ್ರಸಾದ್ ಇಂಗ್ಲೆಂಡ್ನ ಶೆಫಿಲ್ಡ್ನಲ್ಲಿ ನೆಲೆಸಿದ್ದಾರೆ. ಇವರು ಕವಿ ಜಿಎಸ್ ಶಿವರುದ್ರಪ್ಪ ಅವರ ಪುತ್ರ ಶಿವಪ್ರಸಾದರ ಪುತ್ರಿ. ಅನನ್ಯ ಪ್ರಸಾದ್ ಅವರು ಅಟ್ಲಾಂಟಿಕ್ ಮಹಾಸಾಗರದಲ್ಲಿ ಏಕಾಂಗಿಯಾಗಿ ಐದು ಸಾವಿರ ಕಿಮೀ ದೂರುವನ್ನು ಹಾಯಿದೋಣಿ ಮೂಲಕ ಕ್ರಮಿಸಿ ವಿಶ್ವಮಟ್ಟದಲ್ಲಿ ದಾಖಲೆ ನಿರ್ಮಿಸಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ