AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾನು Drugs ತಗೊಂಡಿಲ್ಲ ಸರ್.. ದಯವಿಟ್ಟು ನನ್ನನ್ನು ಆರೋಪಿಯನ್ನಾಗಿ ಮಾಡಬೇಡಿ’

ದಕ್ಷಿಣ ಕನ್ನಡ: ಮಂಗಳೂರಿನಲ್ಲಿ CCB ವಿಚಾರಣೆಗೆ ಇಂದು ಹಾಜರಾಗಿದ್ದ ಌಂಕರ್​ ಅನುಶ್ರೀ ಮಂಗಳೂರು ಪೊಲೀಸ್ ಆಯುಕ್ತರ ಕಚೇರಿಯಲ್ಲಿ ವಿಚಾರಣೆ ಮುಗಿಸಿ ಬೆಂಗಳೂರಿನತ್ತ ಪ್ರಯಾಣ ಬೆಳೆಸಿದರು ಎಂದು ತಿಳಿದುಬಂದಿದೆ. ಈ ಮೊದಲು ನಗರದ ಹೊರವಲಯದ ಪಣಂಬೂರಿನಲ್ಲಿರುವ ಮಂಗಳೂರು ಉತ್ತರ ವಿಭಾಗದ ಪೊಲೀಸ್​ ಕಚೇರಿಯಲ್ಲಿ ಌಂಕರ್​ ಅನುಶ್ರೀಗೆ ತನಿಖಾಧಿಕಾರಿಗಳು‌ ತೀವ್ರ ವಿಚಾರಣೆಗೆ ಒಳಪಡಿಸಿದರು. ಬೆಳಗ್ಗೆ 9.30ರಿಂದ ಸತತ ಮೂರು ಗಂಟೆಗಳ ಕಾಲ DCP ವಿನಯ್ ಗಾಂವ್ಕರ್​ ನೇತೃತ್ವದಲ್ಲಿ ವಿಚಾರಣೆ ನಡೆಯಿತು. ಬಳಿಕ ಌಂಕರ್​ ಅನುಶ್ರೀರನ್ನು CCB ಪೊಲೀಸರು ಮಂಗಳೂರು ಪೊಲೀಸ್ […]

‘ನಾನು Drugs ತಗೊಂಡಿಲ್ಲ ಸರ್.. ದಯವಿಟ್ಟು ನನ್ನನ್ನು ಆರೋಪಿಯನ್ನಾಗಿ ಮಾಡಬೇಡಿ’
KUSHAL V
|

Updated on:Sep 26, 2020 | 4:27 PM

Share

ದಕ್ಷಿಣ ಕನ್ನಡ: ಮಂಗಳೂರಿನಲ್ಲಿ CCB ವಿಚಾರಣೆಗೆ ಇಂದು ಹಾಜರಾಗಿದ್ದ ಌಂಕರ್​ ಅನುಶ್ರೀ ಮಂಗಳೂರು ಪೊಲೀಸ್ ಆಯುಕ್ತರ ಕಚೇರಿಯಲ್ಲಿ ವಿಚಾರಣೆ ಮುಗಿಸಿ ಬೆಂಗಳೂರಿನತ್ತ ಪ್ರಯಾಣ ಬೆಳೆಸಿದರು ಎಂದು ತಿಳಿದುಬಂದಿದೆ. ಈ ಮೊದಲು ನಗರದ ಹೊರವಲಯದ ಪಣಂಬೂರಿನಲ್ಲಿರುವ ಮಂಗಳೂರು ಉತ್ತರ ವಿಭಾಗದ ಪೊಲೀಸ್​ ಕಚೇರಿಯಲ್ಲಿ ಌಂಕರ್​ ಅನುಶ್ರೀಗೆ ತನಿಖಾಧಿಕಾರಿಗಳು‌ ತೀವ್ರ ವಿಚಾರಣೆಗೆ ಒಳಪಡಿಸಿದರು. ಬೆಳಗ್ಗೆ 9.30ರಿಂದ ಸತತ ಮೂರು ಗಂಟೆಗಳ ಕಾಲ DCP ವಿನಯ್ ಗಾಂವ್ಕರ್​ ನೇತೃತ್ವದಲ್ಲಿ ವಿಚಾರಣೆ ನಡೆಯಿತು.

ಬಳಿಕ ಌಂಕರ್​ ಅನುಶ್ರೀರನ್ನು CCB ಪೊಲೀಸರು ಮಂಗಳೂರು ಪೊಲೀಸ್ ಆಯುಕ್ತರ ಕಚೇರಿಗೆ ಸಹ ಕರೆದೊಯ್ದರು. ಜೊತೆಗೆ, ಅಲ್ಲಿಯೂ ಸಹ ಆಕೆಯನ್ನು ವಿಚಾರಣೆಗೆ ಒಳಪಡಿಸಲಾಯಿತು ಎಂಬ ಮಾಹಿತಿ ಸಿಕ್ಕಿದೆ. ಌಂಕರ್​ ಅನುಶ್ರೀ ವಿಚಾರಣೆಯ ಇನ್​ಸೈಡ್ ಡಿಟೇಲ್ಸ್ ಟಿವಿ 9ಗೆ ಲಭ್ಯವಾಗಿದೆ. ವಿಚಾರಣೆ ವೇಳೆ ಌಂಕರ್​ ಅನುಶ್ರೀ ಕೆಲ ಸತ್ಯ ಬಾಯಿಬಿಟ್ಟಿದ್ದಾರೆ ಎಂದು ಹೇಳಲಾಗಿದೆ. ನಿನ್ನೆ ಮೊನ್ನೆ ಮಾಧ್ಯಮಗಳಲ್ಲಿ ತರುಣ್ ಸಿಕ್ಕಿ ಮೂರು ವರ್ಷಗಳೇ ಆಗಿದೆ ಅಂತಾ ಹೇಳಿದ್ದ ಅನುಶ್ರೀ ಪೊಲೀಸ್​ ವಿಚಾರಣೆ ವೇಳೆ ಲಾಕ್​ಡೌನ್​ಗೂ ಮೊದಲು ಆತನನ್ನು ಭೇಟಿಯಾಗಿರುವುದಾಗಿ ಒಪ್ಪಿಕೊಂಡಿದ್ದಾರಂತೆ. ಲಾಕ್​ಡೌನ್ ಆಗಲು ಮೂರು ತಿಂಗಳ ಮುಂಚೆ ತರುಣ್ ಸಿಕ್ಕಿದ್ದ. ಆಗ ಇಬ್ಬರು ಬೆಂಗಳೂರಿನಲ್ಲಿ‌ ಮೀಟ್ ಆಗಿದ್ದೆವು ಎಂದು ಹೇಳಿದ್ದಾರಂತೆ. ಌಂಕರ್​ ಅನುಶ್ರೀನ ಕಾಲ್ ಡಿಟೇಲ್ಸ್​ನಿಂದ ಈ ಮಾಹಿತಿ ಬಯಲಾಗುವುದು ಅನ್ನೋ ಕಾರಣದಿಂದ ಆಕೆ ಇದನ್ನು ಒಪ್ಪಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

‘ದಯವಿಟ್ಟು ನನ್ನ ಆರೋಪಿಯನ್ನಾಗಿ ಮಾಡಬೇಡಿ’ ನಾನು ಡ್ರಗ್ಸ್ ತಗೊಂಡಿಲ್ಲ ಸರ್. ಈ ಇಬ್ಬರು ಇಂಥವರು ಅಂತಾ ಗೊತ್ತಿರಲಿಲ್ಲ ಸರ್. ದಯವಿಟ್ಟು ನನನ್ನು ಆರೋಪಿಯನ್ನಾಗಿ ಮಾಡಬೇಡಿ ಅಂತಾ ಌಂಕರ್​ ಅನುಶ್ರೀ ಮನವಿ ಮಾಡಿದರು ಎಂದು ತಿಳಿದುಬಂದಿದೆ. ಜೊತೆಗೆ, ನಾನು ಡ್ರಗ್ಸ್ ಸೇವಿಸಿಲ್ಲ ಅಂತಾ DCP ವಿನಯ್ ಗಾಂವ್ಕರ್​ಗೆ ಌಂಕರ್​ ಅನುಶ್ರೀ ಹೇಳಿದ್ದಾರಂತೆ.

ಇದನ್ನೂ ಓದಿ: ನಿನ್ನೆ ಚಕ್ಕರ್, ಇಂದು ಹಾಜರ್: ಪಣಂಬೂರು ಠಾಣೆಗೆ ಬಂದ ಅನುಶ್ರೀ

Published On - 4:22 pm, Sat, 26 September 20

ಕಹಿ ಬೇವಿನ ಮರದಲ್ಲಿ ಬರುತ್ತಿದೆ ಸಿಹಿಯಾದ ನೀರು! ಏನಿದು ವಿಸ್ಮಯ?
ಕಹಿ ಬೇವಿನ ಮರದಲ್ಲಿ ಬರುತ್ತಿದೆ ಸಿಹಿಯಾದ ನೀರು! ಏನಿದು ವಿಸ್ಮಯ?
ಬೆಂಚ್​​ ಮೇಲೆ ಕಾಲಿಟ್ಟು ರಾಜ್ಯಸಭೆಯಲ್ಲಿ ಮಾತಾಡಿದ ಸದಸ್ಯ!:  ವಿಡಿಯೋ ನೋಡಿ
ಬೆಂಚ್​​ ಮೇಲೆ ಕಾಲಿಟ್ಟು ರಾಜ್ಯಸಭೆಯಲ್ಲಿ ಮಾತಾಡಿದ ಸದಸ್ಯ!:  ವಿಡಿಯೋ ನೋಡಿ
ಉಡುಪಿಯ ಹಿರಿಯಡ್ಕದಲ್ಲಿ ಭೀಕರ ಅಪಘಾತ: ಎದೆ ಝಲ್​​ ಎನಿಸುತ್ತೆ ಈ ದೃಶ್ಯ
ಉಡುಪಿಯ ಹಿರಿಯಡ್ಕದಲ್ಲಿ ಭೀಕರ ಅಪಘಾತ: ಎದೆ ಝಲ್​​ ಎನಿಸುತ್ತೆ ಈ ದೃಶ್ಯ
ಶ್ರೀಲಂಕಾ ಸ್ಕೋರ್ 189: 173 ರನ್ ಬಾರಿಸಿ ಗೆದ್ದ ಇಂಗ್ಲೆಂಡ್
ಶ್ರೀಲಂಕಾ ಸ್ಕೋರ್ 189: 173 ರನ್ ಬಾರಿಸಿ ಗೆದ್ದ ಇಂಗ್ಲೆಂಡ್
ಅಂಜನಾಪುರದ ಬಳಿ ಕಾಣಿಸಿಕೊಂಡ ಚಿರತೆ, ಸಿಸಿಟಿವಿ ವಿಡಿಯೋ ವೈರಲ್
ಅಂಜನಾಪುರದ ಬಳಿ ಕಾಣಿಸಿಕೊಂಡ ಚಿರತೆ, ಸಿಸಿಟಿವಿ ವಿಡಿಯೋ ವೈರಲ್
ಕೆಂಪೇಗೌಡ ಏರ್​ಪೋರ್ಟಲ್ಲಿ ಭದ್ರತಾ ಲೋಪ: ರನ್‌ವೇಗೆ ನುಗ್ಗಿದ ಬೀದಿ ನಾಯಿಗಳು
ಕೆಂಪೇಗೌಡ ಏರ್​ಪೋರ್ಟಲ್ಲಿ ಭದ್ರತಾ ಲೋಪ: ರನ್‌ವೇಗೆ ನುಗ್ಗಿದ ಬೀದಿ ನಾಯಿಗಳು
ಚೆಂಡಿಲ್ಲದೆ ಸ್ಟಂಪ್ ಔಟ್: ಪಾಕ್ ವಿಕೆಟ್ ಕೀಪರ್​ನ ಮೋಸದಾಟ ಬಯಲು!
ಚೆಂಡಿಲ್ಲದೆ ಸ್ಟಂಪ್ ಔಟ್: ಪಾಕ್ ವಿಕೆಟ್ ಕೀಪರ್​ನ ಮೋಸದಾಟ ಬಯಲು!
ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಮಂಜು
ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಮಂಜು
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?