AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಳುನಾಡಿನ ವಿಶಿಷ್ಟ ಸಂಪ್ರದಾಯ; ಆಷಾಢದಲ್ಲಿ ಊರಿನ ಮಾರಿ ಕಳೆಯಲು ಬರುವನು ಆಟಿ ಕಳಂಜ

ದಕ್ಷಿಣ ಕನ್ನಡ ಜಿಲ್ಲೆ ಮತ್ತು ಕೇರಳದ ಕಾಸರಗೋಡಿನ ತುಳುವರು (ತುಳು ಭಾಷಿಗರು) ಹೆಚ್ಚಾಗಿ ವಾಸಿಸುವ ಪ್ರದೇಶದಲ್ಲಿ ಈಗಲೂ ಆಟಿ ತಿಂಗಳಲ್ಲಿ ಆಟಿ ಕಳಂಜ ಬರುತ್ತಾನೆ. ಈತ ಊರಿಗೆ ಅಂಟಿದ ರೋಗ ರುಜಿನಗಳನ್ನು ನಿವಾರಿಸುವ ಮಾಂತ್ರಿಕ ಎಂಬ ನಂಬಿಕೆ ತುಳುನಾಡಿನಲ್ಲಿದೆ. ಆಷಾಢ ಮಾಸದಲ್ಲಿ ಮಾತ್ರ ಬರುವ ಈ ಆಟಿ ಕಳಂಜನ ಬಗ್ಗೆ, ತುಳುನಾಡಿನ ನಂಬಿಕೆ ಸಂಪ್ರದಾಯಗಳ ಬಗ್ಗೆ ಇಲ್ಲಿದೆ ಮಾಹಿತಿ.

ತುಳುನಾಡಿನ ವಿಶಿಷ್ಟ ಸಂಪ್ರದಾಯ; ಆಷಾಢದಲ್ಲಿ ಊರಿನ ಮಾರಿ ಕಳೆಯಲು ಬರುವನು ಆಟಿ ಕಳಂಜ
ಆಟಿ ಕಳಂಜImage Credit source: Wiki
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Jun 24, 2024 | 2:20 PM

Share

ತುಳುನಾಡಿನಲ್ಲಿರುವ (Tulunadu) ವಿಶಿಷ್ಟ ಆಚರಣೆಗಳಲ್ಲೊಂದು ಆಟಿ ಕಳಂಜ (Aati Kalenja). ತುಳುವಿನಲ್ಲಿ ಆಟಿ ತಿಂಗಳು ಅಂದರೆ ಆಷಾಢ ಮಾಸ. ಜೋರು ಮಳೆ ಬರುವ ಈ ಹೊತ್ತಲ್ಲಿ ಕೃಷಿ ಕೆಲಸಗಳು, ಹಬ್ಬವಾಗಲೀ ಶುಭ ಕಾರ್ಯವಾಗಲೀ ನಡೆಯುವುದಿಲ್ಲ. ಮಳೆಯಿಂದಾಗಿ ರೋಗ ರುಜಿನಗಳೂ ಬರುವ ಕಾಲ. ಹೀಗೆ ಊರಿಗೇ ಊರೇ ತಾಪತ್ರಯ ಎದುರಿಸುವಾಗ ಊರಿನ ಮಾರಿ ಕಳೆಯಲು ಮನೆಗೆ ಮನೆಗೆ ಬರುತ್ತಾನೆ ಆಟಿ ಕಳಂಜ. ಆಟಿ ಅಂದರೆ ಆಷಾಢ, ಕಳಂಜ/ಕಳೆಂಜ ಅಂದ್ರೆ ಕಳೆಯುವವನು ಎಂದರ್ಥ. ಆಷಾಢ ಮಾಸದ ಕಷ್ಟಗಳನ್ನು ಕಳೆಯಲು ಬರುವ ಆಟಿ ಕಳಂಜ ಈಗೀಗ ಅಪರೂಪ. ದಕ್ಷಿಣ ಕನ್ನಡ ಜಿಲ್ಲೆ ಮತ್ತು ಕೇರಳದ ಕಾಸರಗೋಡಿನ ತುಳುವರು (ತುಳು ಭಾಷಿಗರು) ಹೆಚ್ಚಾಗಿ ವಾಸಿಸುವ ಪ್ರದೇಶದಲ್ಲಿ ಈಗಲೂ ಆಟಿ ತಿಂಗಳಲ್ಲಿ ಆಟಿ ಕಳಂಜ ಬರುತ್ತಾನೆ. ಆಟಿ ಕಳಂಜೆ ಬತ್ತುಂಡ್ ( ಆಟಿ ಕಳಂಜ ಬಂದ) ಎಂದು ಆಟಿ ಕಳಂಜನಿಗೆ ಬೇಕಾದ ವಸ್ತುಗಳನ್ನು ಮನೆಮಂದಿ ದಾನ ಮಾಡುವುದನ್ನು ಗ್ರಾಮೀಣ ಪ್ರದೇಶದಲ್ಲಿ ಈಗಲೂ ಕಾಣಬಹುದು. ಈ ಜಾನಪದ ಸಂಪ್ರದಾಯದ ಬಗ್ಗೆ  ಮತ್ತಷ್ಟು ತಿಳಿಯೋಣ… ಆಟಿ ಕಳಂಜನೆಂಬ ನಂಬಿಕೆ ಆಷಾಢ ತಿಂಗಳು ಅಂದರೆ ಜೋರು ಮಳೆಗಾಲ ಬೇರೆ ಹೀಗಾಗಿ ಊರಿನಲ್ಲಿ ಮನುಷ್ಯರಿಗೆ ಪ್ರಾಣಿಗಳಿಗೆ ಕಾಯಿಲೆ ಹರಡುವುದು ಸರ್ವೇ ಸಾಮಾನ್ಯ. ಇಂಥಾ ಸಾಂಕ್ರಾಮಿಕ ಸೋಂಕುಗಳನ್ನು ಜನರು ಊರಿಗೆ ಮಾರಿ ಬಂತು ಎಂದೇ ಭಾವಿಸುತ್ತಾರೆ. ಈ ಮಾರಿಯನ್ನು ಕಳೆಯಲು ಬರುವವನೇ ಆಟಿ ಕಳಂಜ. ತುಳುನಾಡಿನಲ್ಲಿ ಭೂತಕಟ್ಟುವ ಸಮುದಾಯ (ನಲಿಕೆಯವರು) ಆಟಿ ಕಳಂಜ ವೇಷ ಹಾಕಿ ಮನೆ ಮನೆಗೆ ಬರುತ್ತಾರೆ. ಬೆಳ್ತಂಗಡಿ ಭಾಗದಲ್ಲಿ ಮೇರ ಜನಾಂಗದವರು ಈ ವೇಷ ತೊಡುತ್ತಾರೆ....

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ಪೂರ್ಣ ಸುದ್ದಿಯನ್ನು ಓದಲು Tv9 ಆ್ಯಪ್ ಡೌನ್​ಲೋಡ್ ಮಾಡಿ

ಎಕ್ಸ್​ಕ್ಲೂಸಿವ್ ಸುದ್ದಿಗಳ ಅನ್​ಲಿಮಿಟೆಡ್ ಆಕ್ಸೆಸ್ Tv9 ಆ್ಯಪ್​ನಲ್ಲಿ ಮುಂದುವರೆಯಿರಿ
ಗಿಡ ನೆಟ್ಟು ವಿಶ್ವ ಪರಿಸರ ದಿನ ಆಚರಿಸಿದ ಪ್ರಧಾನಿ ಮೋದಿ
ಗಿಡ ನೆಟ್ಟು ವಿಶ್ವ ಪರಿಸರ ದಿನ ಆಚರಿಸಿದ ಪ್ರಧಾನಿ ಮೋದಿ
ಮತ್ತೆ ಬರುತ್ತಿದೆ ‘ಅಗ್ನಿಸಾಕ್ಷಿ’ ಧಾರಾವಾಹಿ: ಶಮಂತ್ ಗೌಡ ಹೇಳಿದ್ದೇನು?
ಮತ್ತೆ ಬರುತ್ತಿದೆ ‘ಅಗ್ನಿಸಾಕ್ಷಿ’ ಧಾರಾವಾಹಿ: ಶಮಂತ್ ಗೌಡ ಹೇಳಿದ್ದೇನು?
ಬಿಜೆಪಿಗೆ ರಾಜೀನಾಮೆ ನೀಡಿ ಬಂದ ಅಣ್ಣಾಮಲೈಗೆ ಭರ್ಜರಿ ಸ್ವಾಗತ
ಬಿಜೆಪಿಗೆ ರಾಜೀನಾಮೆ ನೀಡಿ ಬಂದ ಅಣ್ಣಾಮಲೈಗೆ ಭರ್ಜರಿ ಸ್ವಾಗತ
ಅಧಿಕಾರ ಕಳೆದುಕೊಂಡ ನಂತರ ಒಬ್ಬಂಟಿಯಾದ ಸಿದ್ದರಾಮಯ್ಯ
ಅಧಿಕಾರ ಕಳೆದುಕೊಂಡ ನಂತರ ಒಬ್ಬಂಟಿಯಾದ ಸಿದ್ದರಾಮಯ್ಯ
ಪ್ರತಿಷ್ಠಿತ ಅರ್ಥ್ ಪ್ರಶಸ್ತಿ ಗೆದ್ದ ಭಾರತೀಯ ವಿದ್ಯಾರ್ಥಿಗಳು
ಪ್ರತಿಷ್ಠಿತ ಅರ್ಥ್ ಪ್ರಶಸ್ತಿ ಗೆದ್ದ ಭಾರತೀಯ ವಿದ್ಯಾರ್ಥಿಗಳು
ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹುಟ್ಟುಹಬ್ಬ
ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹುಟ್ಟುಹಬ್ಬ
ಮಹರಾಜ ಲೀಗ್​​ನಲ್ಲಿ ಅನ್​​ಸೋಲ್ಡ್ ಆದ ಕೆಎಲ್ ರಾಹುಲ್; ಕಾರಣ ಇಲ್ಲಿದೆ
ಮಹರಾಜ ಲೀಗ್​​ನಲ್ಲಿ ಅನ್​​ಸೋಲ್ಡ್ ಆದ ಕೆಎಲ್ ರಾಹುಲ್; ಕಾರಣ ಇಲ್ಲಿದೆ
ನಾನು ಸಚಿವನಾಗಿ ಚಾರ್ಜ್ ತಗೊಳ್ಳಲ್ಲ: ಕಾಂಗ್ರೆಸ್‌ಗೆ ಸಚಿವ ಮುನಿಯಪ್ಪ ಶಾಕ್
ನಾನು ಸಚಿವನಾಗಿ ಚಾರ್ಜ್ ತಗೊಳ್ಳಲ್ಲ: ಕಾಂಗ್ರೆಸ್‌ಗೆ ಸಚಿವ ಮುನಿಯಪ್ಪ ಶಾಕ್
ಬೆಂಗಳೂರಿನಲ್ಲಿ ರಾಮಲಿಂಗಾ ರೆಡ್ಡಿ ಬೆಂಬಲಿಗರಿಂದ ಭಾರಿ ಪ್ರತಿಭಟನೆ
ಬೆಂಗಳೂರಿನಲ್ಲಿ ರಾಮಲಿಂಗಾ ರೆಡ್ಡಿ ಬೆಂಬಲಿಗರಿಂದ ಭಾರಿ ಪ್ರತಿಭಟನೆ
ರಾಮಲಿಂಗಾರೆಡ್ಡಿ ನನಗೆ ತುಂಬಾ ಆತ್ಮೀಯರು, ಸಮಸ್ಯೆ ಬಗೆಹರಿಸುತ್ತೇನೆ: ಸಿಎಂ
ರಾಮಲಿಂಗಾರೆಡ್ಡಿ ನನಗೆ ತುಂಬಾ ಆತ್ಮೀಯರು, ಸಮಸ್ಯೆ ಬಗೆಹರಿಸುತ್ತೇನೆ: ಸಿಎಂ