AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಂಧ್ರ ಬಸ್ ದುರಂತದಲ್ಲಿ ಕೂದಲೆಳೆ ಅಂತರದಲ್ಲಿ ಪಾರಾದ ಬೆಂಗಳೂರಿನ ಟೆಕ್ಕಿ; ಜೀವ ಉಳಿಸಿಕೊಂಡಿದ್ದು ಹೇಗೆ ಗೊತ್ತಾ?

ಹೈದರಾಬಾದ್​ನಿಂದ ಬೆಂಗಳೂರಿಗೆ ಹೊರಟಿದ್ದ ಕಾವೇರಿ ಟ್ರಾವೆಲ್ಸ್​ನ ವೋಲ್ವೊ ಬಸ್ ಅಪಘಾತದ ಬಳಿಕ ಬೆಂಕಿಗಾಹುತಿಯಾಗಿದೆ. ಅದರಲ್ಲಿದ್ದ 10ಕ್ಕೂ ಹೆಚ್ಚು ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಅದೇ ಬಸ್​ನಲ್ಲಿ ಪ್ರಯಾಣ ಮಾಡಿದ್ದ ಬೆಂಗಳೂರಿನ ಸಾಫ್ಟ್‌ವೇರ್ ಉದ್ಯೋಗಿ ವೇಣು ಗೊಂಡ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಈ ಕುರಿತು ಟಿವಿ9 ಜೊತೆ ಮಾತನಾಡಿರುವ ಅವರು, 'ನಾನು ಮತ್ತು ನನ್ನ ಸಹ ಪ್ರಯಾಣಿಕರು ಎಮರ್ಜೆನ್ಸಿ ಎಕ್ಸಿಟ್ ಕಿಟಕಿ ಗ್ಲಾಸ್ ಒಡೆದು ಪಾರಾಗಿದ್ದೇವೆ' ಎಂದು ಹೇಳಿದ್ದಾರೆ.

ಆಂಧ್ರ ಬಸ್ ದುರಂತದಲ್ಲಿ ಕೂದಲೆಳೆ ಅಂತರದಲ್ಲಿ ಪಾರಾದ ಬೆಂಗಳೂರಿನ ಟೆಕ್ಕಿ; ಜೀವ ಉಳಿಸಿಕೊಂಡಿದ್ದು ಹೇಗೆ ಗೊತ್ತಾ?
ವಿ ಕಾವೇರಿ ಬಸ್ ದುರಂತದಲ್ಲಿ ಕೂದಲೆಳೆ ಅಂತರದಲ್ಲಿ ಪಾರಾದ ಬೆಂಗಳೂರಿನ ಟೆಕ್ಕಿ ವೇಣು ಗೊಂಡ
ಶಿವಪ್ರಸಾದ್​ ಬಿ.
| Edited By: |

Updated on: Oct 24, 2025 | 12:40 PM

Share

ಬೆಂಗಳೂರು, ಅಕ್ಟೋಬರ್ 24: ಆಂಧ್ರಪ್ರದೇಶದಿಂದ ಬೆಂಗಳೂರಿಗೆ ಹೊರಟಿದ್ದ ಕಾವೇರಿ ಟ್ರಾವೆಲ್ಸ್​​ನ ವೋಲ್ವೊ ಬಸ್ (Volvo Bus)  ಬೆಂಕಿಗಾಹುತಿಯಾಗಿದ್ದು, 10ಕ್ಕೂ ಹೆಚ್ಚು ಪ್ರಯಾಣಿಕರು ಸಾವನ್ನಪ್ಪಿದ್ದಾರೆ.  ಅದೇ ಬಸ್​ನಲ್ಲಿ ಪ್ರಯಾಣ ಮಾಡಿದ್ದ ಬೆಂಗಳೂರಿನ ಸಾಫ್ಟ್‌ವೇರ್ ಉದ್ಯೋಗಿ ವೇಣು ಗೊಂಡ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಈ ಕುರಿತು ಟಿವಿ9 ಜೊತೆ ಮಾತನಾಡಿರುವ ಅವರು, ‘ನಾನು ಮತ್ತು ನನ್ನ ಸಹ ಪ್ರಯಾಣಿಕರು ಎಮರ್ಜೆನ್ಸಿ ಎಕ್ಸಿಟ್ ಕಿಟಕಿ ಗ್ಲಾಸ್ ಒಡೆದು ಪಾರಾಗಿದ್ದೇವೆ. ಆದರೆ ನಮ್ಮ ಕಣ್ಣ ಮುಂದೆಯೇ ಬಸ್ ನಲ್ಲಿದ್ದ ಸಹ ಪ್ರಯಾಣಿಕರು ಹೊತ್ತಿ ಉರಿದರರೂ ನಾವು ಏನೂ ಮಾಡಲಾಗಲಿಲ್ಲ ‘ಎಂದು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.

ಎಮರ್ಜೆನ್ಸಿ ಎಕ್ಸಿಟ್ ಕಿಟಕಿಯ ಗ್ಲಾಸ್ ಒಡೆದು 15 ಜನರು ದುರಂತದಿಮದ ಪಾರು

ಸಹೋದರಿಯ ಮನೆಗೆ ತೆರಳಿ ಬೆಂಗಳೂರಿಗೆ ಮರಳುತ್ತಿದ್ದ ವೇಳೆ ಈ ಭೀಕರ ಘಟನೆ ನಡೆದಿದೆ. ವೇಣು ಗೊಂಡ ಟಿವಿ9 ಜೊತೆ ಮಾತನಾಡಿ, “ನಾನು L-13 ಸೀಟ್‌ನಲ್ಲಿ ಪ್ರಯಾಣಿಸುತ್ತಿದ್ದೆ. ಬೆಳಗಿನ 3 ಗಂಟೆ ವೇಳೆಗೆ ಬಸ್ ನಿಂತಿತ್ತು. ಮತ್ತೆ ಚಲಿಸಲು ಆರಂಭಿಸಿದಾಗ ಏಕಾಏಕಿ ಬಸ್‌ನಲ್ಲಿ ಬೆಂಕಿ ಹೊತ್ತಿಕೊಂಡಿತು. ದಟ್ಟವಾದ ಹೊಗೆಯಿಂದ ಉಸಿರಾಡಲು ಕಷ್ಟವಾಯಿತು. ಸಹ ಪ್ರಯಾಣಿಕನೊಬ್ಬ ಎಮರ್ಜೆನ್ಸಿ ಎಕ್ಸಿಟ್ ಕಿಟಕಿಯ ಗ್ಲಾಸ್ ಒಡೆದು 15 ಜನರನ್ನು ಹೊರಗೆ ತರಲು ನೆರವಾದರು. ಆತನ ಕೈಗೆ ತೀವ್ರ ಗಾಯವಾಯಿತು,” ಎಂದಿದ್ದಾರೆ.

ಇದನ್ನೂ ಓದಿ ಹೈದರಾಬಾದ್ ವೋಲ್ವೊ ಬಸ್ ದುರಂತ, ಮೃತರ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

 ಉಳಿದ ಪ್ರಯಾಣಕರನ್ನು ಉಳಿಸಲಾಗದ ವಿಷಾದ ವ್ಯಕ್ತಪಡಿಸಿದ ವೇಣು

ವೇಣು ಗೊಂಡ ಹೇಳಿಕೆಯ ಪ್ರಕಾರ, ಬಸ್ ಮೊದಲು ಟೂ-ವ್ಹೀಲರ್‌ಗೆ ಡಿಕ್ಕಿ ಹೊಡೆದು ಬಳಿಕ ಬಾಂಬ್ ಸ್ಫೋಟದಂತ ಶಬ್ದದೊಂದಿಗೆ ಬೆಂಕಿ ಹೊತ್ತಿಕೊಂಡಿದೆ. “ನಮ್ಮ ಕಣ್ಣ ಮುಂದೆ ಪ್ರಯಾಣಿಕರು ಹೊತ್ತಿ ಉರಿಯುವುದನ್ನು ನೋಡಬೇಕಾಯಿತು, ಏನುಮಾಡಲಾಗದೆ ಅಸಹಾಯಕರಾಗಿ ಬಸ್ನಿಂದ 5 ಮೀಟರ್ ಅಂತರದಲ್ಲಿ ನಿಂತಿದ್ದೆವು” ಎಂದು ಅವರು ವಿಷಾದಿಸಿದ್ದಾರೆ. ಘಟನೆಯ ಒಂದು ಗಂಟೆ ಬಳಿಕ ಅವರು ಶಾಮೋಲಿ ಟ್ರಾವೆಲ್ ಬಸ್ ಹತ್ತಿ ಬೆಂಗಳೂರಿಗೆ ಬಂದಿದ್ದಾಗಿ ಹೇಳಿದ್ದಾರೆ. ಸುಮಾರು 45 ನಿಮಿಷಗಳ ಬಳಿಕ ಪೈರ್‌ಫೋರ್ಸ್ ಸ್ಥಳಕ್ಕೆ ತಲುಪಿದ್ದು, ಈ ದುರಂತ ಹಲವರ ಜೀವ ಕಸಿದುಕೊಂಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಅಮಿತ್ ಶಾ ಅವರನ್ನು ಸದನಕ್ಕೆ ಕರೆಸಿ; ಸರ್ಕಾರಕ್ಕೆ ರಾಜ್ಯಸಭಾ ಸಭಾಪತಿ ಸೂಚನೆ
ಅಮಿತ್ ಶಾ ಅವರನ್ನು ಸದನಕ್ಕೆ ಕರೆಸಿ; ಸರ್ಕಾರಕ್ಕೆ ರಾಜ್ಯಸಭಾ ಸಭಾಪತಿ ಸೂಚನೆ
ಮೀಸಲಾತಿ ವ್ಯವಸ್ಥೆ ಬಗ್ಗೆ RSS​ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?
ಮೀಸಲಾತಿ ವ್ಯವಸ್ಥೆ ಬಗ್ಗೆ RSS​ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?
‘ಸಿಟಿ ಲೈಟ್ಸ್’ ಸಿನಿಮಾದಲ್ಲಿ ಅನಾವರಣ ಆಗಲಿದೆ ಬೆಂಗಳೂರಿನ ಮೆಜೆಸ್ಟಿಕ್ ಲೋಕ
‘ಸಿಟಿ ಲೈಟ್ಸ್’ ಸಿನಿಮಾದಲ್ಲಿ ಅನಾವರಣ ಆಗಲಿದೆ ಬೆಂಗಳೂರಿನ ಮೆಜೆಸ್ಟಿಕ್ ಲೋಕ
‘ಸಿಟಿ ಲೈಟ್ಸ್’ ಸಿನಿಮಾ ಚಿತ್ರೀಕರಣದ ಅನುಭವ ಹಂಚಿಕೊಂಡ ಮೋನಿಷಾ: ವಿಡಿಯೋ
‘ಸಿಟಿ ಲೈಟ್ಸ್’ ಸಿನಿಮಾ ಚಿತ್ರೀಕರಣದ ಅನುಭವ ಹಂಚಿಕೊಂಡ ಮೋನಿಷಾ: ವಿಡಿಯೋ
ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಭೀಮಾ: ನದಿ ತೀರಕ್ಕೆ ತೆರಳದಂತೆ ಕಟ್ಟೆಚ್ಚರ
ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಭೀಮಾ: ನದಿ ತೀರಕ್ಕೆ ತೆರಳದಂತೆ ಕಟ್ಟೆಚ್ಚರ
ಭೈರತಿ ಸುರೇಶ್ ವಿರುದ್ಧ ಅವಹೇಳನಕಾರಿ ಕಮೆಂಟ್: ಸಿದ್ದರಾಮಯ್ಯ ಅಭಿಮಾನಿ ಬಂಧನ
ಭೈರತಿ ಸುರೇಶ್ ವಿರುದ್ಧ ಅವಹೇಳನಕಾರಿ ಕಮೆಂಟ್: ಸಿದ್ದರಾಮಯ್ಯ ಅಭಿಮಾನಿ ಬಂಧನ
ಕಂಚಿನ ಪದಕ ವಿಜೇತೆ ಕನ್ನಡತಿ ಶಿಲ್ಪಾಗೆ ಅದ್ಧೂರಿ ಸ್ವಾಗತ
ಕಂಚಿನ ಪದಕ ವಿಜೇತೆ ಕನ್ನಡತಿ ಶಿಲ್ಪಾಗೆ ಅದ್ಧೂರಿ ಸ್ವಾಗತ
‘ಬಾಸ್’ ಸಿನಿಮಾ ನೋಡಿದ ದರ್ಶನ್ ವಕೀಲರು ಹೇಳಿದ್ದೇನು? ವಿಡಿಯೋ
‘ಬಾಸ್’ ಸಿನಿಮಾ ನೋಡಿದ ದರ್ಶನ್ ವಕೀಲರು ಹೇಳಿದ್ದೇನು? ವಿಡಿಯೋ
ನೂತನ 19 ಸಚಿವರಿಗೆ ಇಂದೇ ಖಾತೆ ಹಂಚಿಕೆ?
ನೂತನ 19 ಸಚಿವರಿಗೆ ಇಂದೇ ಖಾತೆ ಹಂಚಿಕೆ?
ಸಿದ್ದರಾಮಯ್ಯ ಮೇಲೆ ಅಹಿಂದ ಶಾಸಕರ ಅಸಮಾಧಾನ
ಸಿದ್ದರಾಮಯ್ಯ ಮೇಲೆ ಅಹಿಂದ ಶಾಸಕರ ಅಸಮಾಧಾನ