AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಂಧ್ರ ಬಸ್ ದುರಂತದಲ್ಲಿ ಕೂದಲೆಳೆ ಅಂತರದಲ್ಲಿ ಪಾರಾದ ಬೆಂಗಳೂರಿನ ಟೆಕ್ಕಿ; ಜೀವ ಉಳಿಸಿಕೊಂಡಿದ್ದು ಹೇಗೆ ಗೊತ್ತಾ?

ಹೈದರಾಬಾದ್​ನಿಂದ ಬೆಂಗಳೂರಿಗೆ ಹೊರಟಿದ್ದ ಕಾವೇರಿ ಟ್ರಾವೆಲ್ಸ್​ನ ವೋಲ್ವೊ ಬಸ್ ಅಪಘಾತದ ಬಳಿಕ ಬೆಂಕಿಗಾಹುತಿಯಾಗಿದೆ. ಅದರಲ್ಲಿದ್ದ 10ಕ್ಕೂ ಹೆಚ್ಚು ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಅದೇ ಬಸ್​ನಲ್ಲಿ ಪ್ರಯಾಣ ಮಾಡಿದ್ದ ಬೆಂಗಳೂರಿನ ಸಾಫ್ಟ್‌ವೇರ್ ಉದ್ಯೋಗಿ ವೇಣು ಗೊಂಡ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಈ ಕುರಿತು ಟಿವಿ9 ಜೊತೆ ಮಾತನಾಡಿರುವ ಅವರು, 'ನಾನು ಮತ್ತು ನನ್ನ ಸಹ ಪ್ರಯಾಣಿಕರು ಎಮರ್ಜೆನ್ಸಿ ಎಕ್ಸಿಟ್ ಕಿಟಕಿ ಗ್ಲಾಸ್ ಒಡೆದು ಪಾರಾಗಿದ್ದೇವೆ' ಎಂದು ಹೇಳಿದ್ದಾರೆ.

ಆಂಧ್ರ ಬಸ್ ದುರಂತದಲ್ಲಿ ಕೂದಲೆಳೆ ಅಂತರದಲ್ಲಿ ಪಾರಾದ ಬೆಂಗಳೂರಿನ ಟೆಕ್ಕಿ; ಜೀವ ಉಳಿಸಿಕೊಂಡಿದ್ದು ಹೇಗೆ ಗೊತ್ತಾ?
ವಿ ಕಾವೇರಿ ಬಸ್ ದುರಂತದಲ್ಲಿ ಕೂದಲೆಳೆ ಅಂತರದಲ್ಲಿ ಪಾರಾದ ಬೆಂಗಳೂರಿನ ಟೆಕ್ಕಿ ವೇಣು ಗೊಂಡ
Shivaprasad B
| Edited By: |

Updated on: Oct 24, 2025 | 12:40 PM

Share

ಬೆಂಗಳೂರು, ಅಕ್ಟೋಬರ್ 24: ಆಂಧ್ರಪ್ರದೇಶದಿಂದ ಬೆಂಗಳೂರಿಗೆ ಹೊರಟಿದ್ದ ಕಾವೇರಿ ಟ್ರಾವೆಲ್ಸ್​​ನ ವೋಲ್ವೊ ಬಸ್ (Volvo Bus)  ಬೆಂಕಿಗಾಹುತಿಯಾಗಿದ್ದು, 10ಕ್ಕೂ ಹೆಚ್ಚು ಪ್ರಯಾಣಿಕರು ಸಾವನ್ನಪ್ಪಿದ್ದಾರೆ.  ಅದೇ ಬಸ್​ನಲ್ಲಿ ಪ್ರಯಾಣ ಮಾಡಿದ್ದ ಬೆಂಗಳೂರಿನ ಸಾಫ್ಟ್‌ವೇರ್ ಉದ್ಯೋಗಿ ವೇಣು ಗೊಂಡ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಈ ಕುರಿತು ಟಿವಿ9 ಜೊತೆ ಮಾತನಾಡಿರುವ ಅವರು, ‘ನಾನು ಮತ್ತು ನನ್ನ ಸಹ ಪ್ರಯಾಣಿಕರು ಎಮರ್ಜೆನ್ಸಿ ಎಕ್ಸಿಟ್ ಕಿಟಕಿ ಗ್ಲಾಸ್ ಒಡೆದು ಪಾರಾಗಿದ್ದೇವೆ. ಆದರೆ ನಮ್ಮ ಕಣ್ಣ ಮುಂದೆಯೇ ಬಸ್ ನಲ್ಲಿದ್ದ ಸಹ ಪ್ರಯಾಣಿಕರು ಹೊತ್ತಿ ಉರಿದರರೂ ನಾವು ಏನೂ ಮಾಡಲಾಗಲಿಲ್ಲ ‘ಎಂದು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.

ಎಮರ್ಜೆನ್ಸಿ ಎಕ್ಸಿಟ್ ಕಿಟಕಿಯ ಗ್ಲಾಸ್ ಒಡೆದು 15 ಜನರು ದುರಂತದಿಮದ ಪಾರು

ಸಹೋದರಿಯ ಮನೆಗೆ ತೆರಳಿ ಬೆಂಗಳೂರಿಗೆ ಮರಳುತ್ತಿದ್ದ ವೇಳೆ ಈ ಭೀಕರ ಘಟನೆ ನಡೆದಿದೆ. ವೇಣು ಗೊಂಡ ಟಿವಿ9 ಜೊತೆ ಮಾತನಾಡಿ, “ನಾನು L-13 ಸೀಟ್‌ನಲ್ಲಿ ಪ್ರಯಾಣಿಸುತ್ತಿದ್ದೆ. ಬೆಳಗಿನ 3 ಗಂಟೆ ವೇಳೆಗೆ ಬಸ್ ನಿಂತಿತ್ತು. ಮತ್ತೆ ಚಲಿಸಲು ಆರಂಭಿಸಿದಾಗ ಏಕಾಏಕಿ ಬಸ್‌ನಲ್ಲಿ ಬೆಂಕಿ ಹೊತ್ತಿಕೊಂಡಿತು. ದಟ್ಟವಾದ ಹೊಗೆಯಿಂದ ಉಸಿರಾಡಲು ಕಷ್ಟವಾಯಿತು. ಸಹ ಪ್ರಯಾಣಿಕನೊಬ್ಬ ಎಮರ್ಜೆನ್ಸಿ ಎಕ್ಸಿಟ್ ಕಿಟಕಿಯ ಗ್ಲಾಸ್ ಒಡೆದು 15 ಜನರನ್ನು ಹೊರಗೆ ತರಲು ನೆರವಾದರು. ಆತನ ಕೈಗೆ ತೀವ್ರ ಗಾಯವಾಯಿತು,” ಎಂದಿದ್ದಾರೆ.

ಇದನ್ನೂ ಓದಿ ಹೈದರಾಬಾದ್ ವೋಲ್ವೊ ಬಸ್ ದುರಂತ, ಮೃತರ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

 ಉಳಿದ ಪ್ರಯಾಣಕರನ್ನು ಉಳಿಸಲಾಗದ ವಿಷಾದ ವ್ಯಕ್ತಪಡಿಸಿದ ವೇಣು

ವೇಣು ಗೊಂಡ ಹೇಳಿಕೆಯ ಪ್ರಕಾರ, ಬಸ್ ಮೊದಲು ಟೂ-ವ್ಹೀಲರ್‌ಗೆ ಡಿಕ್ಕಿ ಹೊಡೆದು ಬಳಿಕ ಬಾಂಬ್ ಸ್ಫೋಟದಂತ ಶಬ್ದದೊಂದಿಗೆ ಬೆಂಕಿ ಹೊತ್ತಿಕೊಂಡಿದೆ. “ನಮ್ಮ ಕಣ್ಣ ಮುಂದೆ ಪ್ರಯಾಣಿಕರು ಹೊತ್ತಿ ಉರಿಯುವುದನ್ನು ನೋಡಬೇಕಾಯಿತು, ಏನುಮಾಡಲಾಗದೆ ಅಸಹಾಯಕರಾಗಿ ಬಸ್ನಿಂದ 5 ಮೀಟರ್ ಅಂತರದಲ್ಲಿ ನಿಂತಿದ್ದೆವು” ಎಂದು ಅವರು ವಿಷಾದಿಸಿದ್ದಾರೆ. ಘಟನೆಯ ಒಂದು ಗಂಟೆ ಬಳಿಕ ಅವರು ಶಾಮೋಲಿ ಟ್ರಾವೆಲ್ ಬಸ್ ಹತ್ತಿ ಬೆಂಗಳೂರಿಗೆ ಬಂದಿದ್ದಾಗಿ ಹೇಳಿದ್ದಾರೆ. ಸುಮಾರು 45 ನಿಮಿಷಗಳ ಬಳಿಕ ಪೈರ್‌ಫೋರ್ಸ್ ಸ್ಥಳಕ್ಕೆ ತಲುಪಿದ್ದು, ಈ ದುರಂತ ಹಲವರ ಜೀವ ಕಸಿದುಕೊಂಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Shivaprasad B
Shivaprasad B
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ