AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಂಧ್ರ ಪ್ರವಾಹ: ಬೆಂಗಳೂರು, ಮೈಸೂರಿನಿಂದ ತೆರಳುವ ಹಲವು ರೈಲುಗಳು ರದ್ದು, ಕೆಲವು ರೈಲುಗಳ ಮಾರ್ಗ ಬದಲಾವಣೆ

ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಸುರಿಯುತ್ತಿರುವ ಭಾರಿ ಮಳೆ ಮತ್ತು ಪ್ರವಾಹ ಕರ್ನಾಟಕದ ರೈಲು ಸಂಚಾರದ ಮೇಲೂ ಪರಿಣಾಮ ಬೀರಿದೆ. ಆಂಧ್ರ ಪ್ರದೇಶದ ರಾಯನಪಾಡು ರೈಲು ನಿಲ್ದಾಣ ಜಲಾವೃತಗೊಂಡಿದ್ದು, ಬೆಂಗಳೂರು, ಮೈಸೂರಿನಿಂದ ತೆರಳುವ ಹಲವು ರೈಲುಗಳ ಸಂಚಾರ ರದ್ದಾಗಿದೆ. ಕೆಲವು ರೈಲುಗಳ ಮಾರ್ಗ ಬದಲಾವಣೆ ಮಾಡಲಾಗಿದೆ. ವಿವರ ಇಲ್ಲಿದೆ.

ಆಂಧ್ರ ಪ್ರವಾಹ: ಬೆಂಗಳೂರು, ಮೈಸೂರಿನಿಂದ ತೆರಳುವ ಹಲವು ರೈಲುಗಳು ರದ್ದು, ಕೆಲವು ರೈಲುಗಳ ಮಾರ್ಗ ಬದಲಾವಣೆ
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
|

Updated on:Sep 02, 2024 | 9:14 AM

Share

ಬೆಂಗಳೂರು, ಸೆಪ್ಟೆಂಬರ್ 2: ನೆರೆಯ ಆಂಧ್ರ ಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಲ್ಲಿ ಭಾರಿ ಮಳೆ ಮತ್ತು ಪ್ರವಾಹ ಪರಿಸ್ಥಿತಿ ಉಂಟಾಗಿರುವುದು ಕರ್ನಾಟಕದಿಂದ ಸಂಚರಿಸುವ ರೈಲುಗಳ ಮೇಲೆಯೂ ಪರಿಣಾಮ ಬೀರಿದೆ. ರಾಜ್ಯದ ಬೆಂಗಳೂರು, ಮೈಸೂರುಗಳಿಂದ ಆಂಧ್ರ ಪ್ರದೇಶದ ಮೂಲಕ ತೆರಳುವ ಹಲವು ರೈಲುಗಳ ಸಂಚಾರ ರದ್ದಾಗಿದ್ದು, ಇನ್ನು ಕೆಲವು ರೈಲುಗಳ ಮಾರ್ಗ ಬದಲಾವಣೆ ಮಾಡಲಾಗಿದೆ.

ರೈಲುಗಳ ಸಂಚಾರ ರದ್ದು, ಮಾರ್ಗ ಬದಲಾವಣೆ ಬಗ್ಗೆ ನೈಋತ್ಯ ರೈಲ್ವೆ ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಸಂದೇಶ ಪ್ರಕಟಿಸಿ ಮಾಹಿತಿ ನೀಡಿದೆ.

ರೈಲು ಮಾರ್ಗ ಬದಲಾವಣೆ ವಿವರ

ಆಂದ್ರ ಪ್ರದೇಶದ ರಾಯನಪಾಡು ರೈಲು ನಿಲ್ದಾಣ ಜಲಾವೃತಗೊಂಡಿರುವುದರಿಂದ ಎಸ್​ಎಂವಿಟಿ ಬೆಂಗಳೂರು ಹಾಗೂ ದನಾಪುರ್ ರೈಲಿನ ಮಾರ್ಗ ಬದಲಾವಣೆ ಮಾಡಲಾಗಿದೆ ಎಂದು ನೈಋತ್ಯ ರೈಲ್ವೆ ತಿಳಿಸಿದೆ. ಎಸ್​ಎಂವಿಟಿ ಬೆಂಗಳೂರಿನಿಂದ ಮಹಾರಾಷ್ಟ್ರದ ಬಲ್ಹಾರ್ಷ ವರೆಗಿನ ಮಾರ್ಗ ಬದಲಾವಣೆಯಾಗಿದೆ.

ಯಾವೆಲ್ಲ ರೈಲುಗಳ ಸಂಚಾರ ರದ್ದು?

ರಾಯನಪಾಡು ರೈಲು ನಿಲ್ದಾಣ ಜಲಾವೃತಗೊಂಡಿರುವುದರಿಂದ ಮೈಸೂರಿನಿಂದ ಹೌರಾ ತೆರಳುವ ರೈಲು ಸಂಖ್ಯೆ 22818, ಹೌರಾದಿಂದ ಮೈಸೂರಿಗೆ ಬರುವ ರೈಲು ಸಂಖ್ಯೆ 22818 ಸಂಚಾರ ರದ್ದುಪಡಿಸಲಾಗಿದೆ ಎಂದು ನೈಋತ್ಯ ರೈಲ್ವೆ ತಿಳಿಸಿದೆ.

ರೈಲು ಸಂಖ್ಯೆ 17210 ಕಾಕಿನಾಡ ಟೌನ್ – ಎಸ್​ಎಂವಿಟಿ ಬೆಂಗಳೂರು, ರೈಲು ಸಂಖ್ಯೆ 17235 ಎಸ್​ಎಂವಿಟಿ ಬೆಂಗಳೂರು – ನಾಗರಕೊಯಿಲ್, ರೈಲು ಸಂಖ್ಯೆ 17236 ನಾಗರಕೊಯಿಲ್ ಎಸ್​ಎಂವಿಟಿ ಬೆಂಗಳೂರು, ರೈಲು ಸಂಖ್ಯೆ 17209 ಎಸ್​ಎಂವಿಟಿ ಬೆಂಗಳೂರು – ಕಾಕಿನಾಡ ಟೌನ್ ಸಂಚಾರ ರದ್ದುಗೊಳಿಸಲಾಗಿದೆ.

ನೈಋತ್ಯ ರೈಲ್ವೆ ಎಕ್ಸ್ ಸಂದೇಶ

ತೆಲಂಗಾಣ ಮತ್ತು ಆಂಧ್ರಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು ಕನಿಷ್ಠ 10 ಜನರು ಸಾವನ್ನಪ್ಪಿದ್ದಾರೆ. ಹಲವಾರು ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಅನೇಕ ಪ್ರದೇಶಗಳು ಜಲಾವೃತವಾಗೊಂಡಿವೆ ರಸ್ತೆ ಮತ್ತು ರೈಲು ಸಂಚಾರ ಅಸ್ತವ್ಯಸ್ತಗೊಂಡಿದೆ.

ಇದನ್ನೂ ಓದಿ: ರೈಲ್ವೆಗೂ ಬಂತು ಮೆಟ್ರೋ ಮಾದರಿ ಕ್ಯೂಆರ್ ಕೋಡ್ ಟಿಕೆಟ್ ವ್ಯವಸ್ಥೆ: ಬೆಂಗಳೂರಿನ 108 ಸ್ಟೇಷನ್​ಗಳಲ್ಲೂ ಲಭ್ಯ

ಈವರೆಗೆ 100 ಕ್ಕೂ ಹೆಚ್ಚು ರೈಲುಗಳನ್ನು ರದ್ದುಗೊಳಿಸಲಾಗಿದೆ. ತೆಲಂಗಾಣ ಮತ್ತು ಆಂಧ್ರಪ್ರದೇಶದ ಮೂಲಕ ಇತರ ರಾಜ್ಯಗಳಿಗೆ ಸಂಪರ್ಕ ಕಲ್ಪಿಸುವ ದಕ್ಷಿಣ ಮಧ್ಯ ರೈಲ್ವೆ ಜಾಲದ ಅನೇಕ ಸ್ಥಳಗಳಲ್ಲಿ ಭಾರೀ ಮಳೆ ಮತ್ತು ಹಳಿಗಳ ಮೇಲೆ ನೀರು ಹರಿಯುತ್ತಿರುವ ಕಾರಣದಿಂದ ಹಲವಾರು ರೈಲುಗಳ ಮಾರ್ಗ ಬದಲಾವಣೆ ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:08 am, Mon, 2 September 24

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ