AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಂಧ್ರ ಪ್ರವಾಹ: ಬೆಂಗಳೂರು, ಮೈಸೂರಿನಿಂದ ತೆರಳುವ ಹಲವು ರೈಲುಗಳು ರದ್ದು, ಕೆಲವು ರೈಲುಗಳ ಮಾರ್ಗ ಬದಲಾವಣೆ

ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಸುರಿಯುತ್ತಿರುವ ಭಾರಿ ಮಳೆ ಮತ್ತು ಪ್ರವಾಹ ಕರ್ನಾಟಕದ ರೈಲು ಸಂಚಾರದ ಮೇಲೂ ಪರಿಣಾಮ ಬೀರಿದೆ. ಆಂಧ್ರ ಪ್ರದೇಶದ ರಾಯನಪಾಡು ರೈಲು ನಿಲ್ದಾಣ ಜಲಾವೃತಗೊಂಡಿದ್ದು, ಬೆಂಗಳೂರು, ಮೈಸೂರಿನಿಂದ ತೆರಳುವ ಹಲವು ರೈಲುಗಳ ಸಂಚಾರ ರದ್ದಾಗಿದೆ. ಕೆಲವು ರೈಲುಗಳ ಮಾರ್ಗ ಬದಲಾವಣೆ ಮಾಡಲಾಗಿದೆ. ವಿವರ ಇಲ್ಲಿದೆ.

ಆಂಧ್ರ ಪ್ರವಾಹ: ಬೆಂಗಳೂರು, ಮೈಸೂರಿನಿಂದ ತೆರಳುವ ಹಲವು ರೈಲುಗಳು ರದ್ದು, ಕೆಲವು ರೈಲುಗಳ ಮಾರ್ಗ ಬದಲಾವಣೆ
ಸಾಂದರ್ಭಿಕ ಚಿತ್ರ
Ganapathi Sharma
|

Updated on:Sep 02, 2024 | 9:14 AM

Share

ಬೆಂಗಳೂರು, ಸೆಪ್ಟೆಂಬರ್ 2: ನೆರೆಯ ಆಂಧ್ರ ಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಲ್ಲಿ ಭಾರಿ ಮಳೆ ಮತ್ತು ಪ್ರವಾಹ ಪರಿಸ್ಥಿತಿ ಉಂಟಾಗಿರುವುದು ಕರ್ನಾಟಕದಿಂದ ಸಂಚರಿಸುವ ರೈಲುಗಳ ಮೇಲೆಯೂ ಪರಿಣಾಮ ಬೀರಿದೆ. ರಾಜ್ಯದ ಬೆಂಗಳೂರು, ಮೈಸೂರುಗಳಿಂದ ಆಂಧ್ರ ಪ್ರದೇಶದ ಮೂಲಕ ತೆರಳುವ ಹಲವು ರೈಲುಗಳ ಸಂಚಾರ ರದ್ದಾಗಿದ್ದು, ಇನ್ನು ಕೆಲವು ರೈಲುಗಳ ಮಾರ್ಗ ಬದಲಾವಣೆ ಮಾಡಲಾಗಿದೆ.

ರೈಲುಗಳ ಸಂಚಾರ ರದ್ದು, ಮಾರ್ಗ ಬದಲಾವಣೆ ಬಗ್ಗೆ ನೈಋತ್ಯ ರೈಲ್ವೆ ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಸಂದೇಶ ಪ್ರಕಟಿಸಿ ಮಾಹಿತಿ ನೀಡಿದೆ.

ರೈಲು ಮಾರ್ಗ ಬದಲಾವಣೆ ವಿವರ

ಆಂದ್ರ ಪ್ರದೇಶದ ರಾಯನಪಾಡು ರೈಲು ನಿಲ್ದಾಣ ಜಲಾವೃತಗೊಂಡಿರುವುದರಿಂದ ಎಸ್​ಎಂವಿಟಿ ಬೆಂಗಳೂರು ಹಾಗೂ ದನಾಪುರ್ ರೈಲಿನ ಮಾರ್ಗ ಬದಲಾವಣೆ ಮಾಡಲಾಗಿದೆ ಎಂದು ನೈಋತ್ಯ ರೈಲ್ವೆ ತಿಳಿಸಿದೆ. ಎಸ್​ಎಂವಿಟಿ ಬೆಂಗಳೂರಿನಿಂದ ಮಹಾರಾಷ್ಟ್ರದ ಬಲ್ಹಾರ್ಷ ವರೆಗಿನ ಮಾರ್ಗ ಬದಲಾವಣೆಯಾಗಿದೆ.

ಯಾವೆಲ್ಲ ರೈಲುಗಳ ಸಂಚಾರ ರದ್ದು?

ರಾಯನಪಾಡು ರೈಲು ನಿಲ್ದಾಣ ಜಲಾವೃತಗೊಂಡಿರುವುದರಿಂದ ಮೈಸೂರಿನಿಂದ ಹೌರಾ ತೆರಳುವ ರೈಲು ಸಂಖ್ಯೆ 22818, ಹೌರಾದಿಂದ ಮೈಸೂರಿಗೆ ಬರುವ ರೈಲು ಸಂಖ್ಯೆ 22818 ಸಂಚಾರ ರದ್ದುಪಡಿಸಲಾಗಿದೆ ಎಂದು ನೈಋತ್ಯ ರೈಲ್ವೆ ತಿಳಿಸಿದೆ.

ರೈಲು ಸಂಖ್ಯೆ 17210 ಕಾಕಿನಾಡ ಟೌನ್ – ಎಸ್​ಎಂವಿಟಿ ಬೆಂಗಳೂರು, ರೈಲು ಸಂಖ್ಯೆ 17235 ಎಸ್​ಎಂವಿಟಿ ಬೆಂಗಳೂರು – ನಾಗರಕೊಯಿಲ್, ರೈಲು ಸಂಖ್ಯೆ 17236 ನಾಗರಕೊಯಿಲ್ ಎಸ್​ಎಂವಿಟಿ ಬೆಂಗಳೂರು, ರೈಲು ಸಂಖ್ಯೆ 17209 ಎಸ್​ಎಂವಿಟಿ ಬೆಂಗಳೂರು – ಕಾಕಿನಾಡ ಟೌನ್ ಸಂಚಾರ ರದ್ದುಗೊಳಿಸಲಾಗಿದೆ.

ನೈಋತ್ಯ ರೈಲ್ವೆ ಎಕ್ಸ್ ಸಂದೇಶ

ತೆಲಂಗಾಣ ಮತ್ತು ಆಂಧ್ರಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು ಕನಿಷ್ಠ 10 ಜನರು ಸಾವನ್ನಪ್ಪಿದ್ದಾರೆ. ಹಲವಾರು ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಅನೇಕ ಪ್ರದೇಶಗಳು ಜಲಾವೃತವಾಗೊಂಡಿವೆ ರಸ್ತೆ ಮತ್ತು ರೈಲು ಸಂಚಾರ ಅಸ್ತವ್ಯಸ್ತಗೊಂಡಿದೆ.

ಇದನ್ನೂ ಓದಿ: ರೈಲ್ವೆಗೂ ಬಂತು ಮೆಟ್ರೋ ಮಾದರಿ ಕ್ಯೂಆರ್ ಕೋಡ್ ಟಿಕೆಟ್ ವ್ಯವಸ್ಥೆ: ಬೆಂಗಳೂರಿನ 108 ಸ್ಟೇಷನ್​ಗಳಲ್ಲೂ ಲಭ್ಯ

ಈವರೆಗೆ 100 ಕ್ಕೂ ಹೆಚ್ಚು ರೈಲುಗಳನ್ನು ರದ್ದುಗೊಳಿಸಲಾಗಿದೆ. ತೆಲಂಗಾಣ ಮತ್ತು ಆಂಧ್ರಪ್ರದೇಶದ ಮೂಲಕ ಇತರ ರಾಜ್ಯಗಳಿಗೆ ಸಂಪರ್ಕ ಕಲ್ಪಿಸುವ ದಕ್ಷಿಣ ಮಧ್ಯ ರೈಲ್ವೆ ಜಾಲದ ಅನೇಕ ಸ್ಥಳಗಳಲ್ಲಿ ಭಾರೀ ಮಳೆ ಮತ್ತು ಹಳಿಗಳ ಮೇಲೆ ನೀರು ಹರಿಯುತ್ತಿರುವ ಕಾರಣದಿಂದ ಹಲವಾರು ರೈಲುಗಳ ಮಾರ್ಗ ಬದಲಾವಣೆ ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:08 am, Mon, 2 September 24

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ